Homeಮುಖಪುಟಕೇರಳದ ಸಮಾಧಿ ಪ್ರಕರಣ | ಗೋಪನ್ ಸ್ವಾಮಿ ಶವ ಹೊರ ತೆಗೆದ ಪೊಲೀಸರು

ಕೇರಳದ ಸಮಾಧಿ ಪ್ರಕರಣ | ಗೋಪನ್ ಸ್ವಾಮಿ ಶವ ಹೊರ ತೆಗೆದ ಪೊಲೀಸರು

- Advertisement -
- Advertisement -

ಕೇರಳದಲ್ಲಿ ಭಾರೀ ಸದ್ದು ಮಾಡಿರುವ ನಿವೃತ್ತ ಹೆಡ್‌ಲೋಡ್‌ ಕಾರ್ಮಿಕ ಗೋಪನ್‌ ಸ್ವಾಮಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ.

ಹೈಕೋರ್ಟ್ ಆದೇಶದ ಹಿನ್ನೆಲೆ, ಕುಟುಂಬಸ್ಥರ ವಿರೋಧದ ನಡುವೆಯೂ ಗುರುವಾರ (ಜ.15) ಪೊಲೀಸರು ಗೋಪನ್‌ ಸ್ವಾಮಿಯವರ ಶವವನ್ನು ಸಮಾಧಿಯಿಂದ ಹೊರ ತೆಗೆದಿದ್ದಾರೆ.

ತಿರುವನಂತಪುರಂ ಜಿಲ್ಲೆಯ ನೆಯ್ಯತ್ತಿಂಕರ ಬಳಿಯ ಅರಳುಮೂಡುವಿನ ಮನೆ ಬಳಿ 72 ವರ್ಷದ ಗೋಪನ್ ಸ್ವಾಮಿಯವರ ಶವ ಹೂತಿದ್ದ ಕುಟುಂಬಸ್ಥರು ಸಮಾಧಿ ನಿರ್ಮಿಸಿದ್ದರು.

ಸ್ವಯಂ ಗೋಷಿತ ಗುರು ಎನ್ನಲಾದ ನಿವೃತ್ತ ಹೆಡ್‌ಲೋಡ್ ಕಾರ್ಮಿಕ ಗೋಪನ್ ಸ್ವಾಮಿ ಜನವರಿ 9ರಿಂದ ನಾಪತ್ತೆಯಾಗಿದ್ದರು. ಆ ಬಳಿಕ ಸ್ಥಳೀಯ ದೇವಸ್ಥಾನದ ಬಳಿ ಅವರ ಸಮಾಧಿ ಕಂಡು ಬಂದಿತ್ತು. ಗೋಪನ್ ಸ್ವಾಮಿ ಆಧ್ಯಾತ್ಮಿಕತೆಯ ಪರಾಕಾಷ್ಠೆಯನ್ನು ತಲುಪಿ ಸ್ವಇಚ್ಛೆಯಿಂದ ಸಮಾಧಿಯಾಗಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದರು.

ಈ ಪ್ರಕರಣದ ಹಿಂದೆ ಅನುಮಾನ ವ್ಯಕ್ತಪಡಿಸಿದ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು. ಜನವರಿ 13ರಂದು ಸಮಾಧಿ ಬಳಿಗೆ ಬಂದ ಪೊಲೀಸರು ಮತ್ತು ಇತರ ಅಧಿಕಾರಿಗಳು ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಮುಂದಾಗಿದ್ದರು. ಆದರೆ, ಇದಕ್ಕೆ ಗೋಪನ್ ಸ್ವಾಮಿ ಕುಟುಂಬಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಗೋಪನ್ ಸ್ವಾಮಿ ಪತ್ನಿ ಸುಲೋಚನಾ, ಮಕ್ಕಳಾದ ಸನಂದನ್, ರಾಜಸೇನನ್ ಸಮಾಧಿ ಬಳಿ ಅಡ್ಡಲಾಗಿ ನಿಂತು ಪೊಲೀಸರನ್ನು ತಡೆದಿದ್ದರು.

“ಗೋಪನ್ ಸ್ವಾಮಿ ಸಾವಿಗೂ ಮುನ್ನ ಆಧ್ಯಾತ್ಮಿಕತೆಯ ಬಗ್ಗೆ ಮಾತನಾಡಿದ್ದಾರೆ. ಅವರ ಸಾವನ್ನು ವೈದ್ಯರಲ್ಲ, ಶಿವನೇ ನಿರ್ಧರಿಸಿದ್ದಾನೆ. ಹಾಗಾಗಿ, ವೈದ್ಯಕೀಯ ದೃಢೀಕರಣದ ಅಗತ್ಯವಿಲ್ಲ ಎಂದು ಗೋಪನ್‌ ಸ್ವಾಮಿ ಪತ್ನಿ ಸುಲೋಚನಾ ಮಾಧ್ಯಮಗಳ ಮುಂದೆ ಹೇಳಿದ್ದರು.

ಆದರೆ, ಜಿಲ್ಲಾಧಿಕಾರಿ ಅನು ಕುಮಾರಿ ಅವರು ಗೋಪನ್‌ ಸ್ವಾಮಿ ನಾಪತ್ತೆ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದರು. ಜಿಲ್ಲಾಧಿಕಾರಿ ಆದೇಶದ ವಿರುದ್ದ ಗೋಪನ್ ಸ್ವಾಮಿ ಕುಟುಂಬ ಹೈಕೋರ್ಟ್ ಮೊರೆ ಹೋಗಿತ್ತು. ನಮ್ಮ ಇಚ್ಛೆಯಂತೆ ಸಮಾಧಿ ಮಾಡುವುದು ನಮ್ಮ ಹಕ್ಕು. ನಮ್ಮ ಧಾರ್ಮಿಕ ನಂಬಿಕೆ ಆಚರಿಸಲು ಸಂವಿಧಾನದಲ್ಲಿ ಅವಕಾಶವಿದೆ. ಗೋಪನ್‌ ಸ್ವಾಮಿ ತನ್ನ ಧಾರ್ಮಿಕ ನಂಬಿಕೆಯಂತೆ ಸಮಾಧಿಯಾಗಿದ್ದಾರೆ. ಹಾಗಾಗಿ, ಸಮಾಧಿಯಿಂದ ಶವ ಹೊರ ತೆಗೆಯುವುದು ಸರಿಯಲ್ಲ ಎಂದು ಕುಟುಂಬಸ್ಥರು ವಾದಿಸಿದ್ದರು.

ಆದರೆ, ಗೋಪನ್ ಸ್ವಾಮಿ ಕುಟುಂಬದ ವಾದವನ್ನು ಪುರಸ್ಕರಿಸಿದ ಹೈಕೋರ್ಟ್, ಜಿಲ್ಲಾಧಿಕಾರಿ ಆದೇಶದಂತೆ ಸಮಾಧಿಯಿಂದ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸುವಂತೆ ಸೂಚಿಸಿತ್ತು. ಗೋಪನ್ ಸ್ವಾಮಿ ಸಾವನ್ನಪ್ಪಿದರೆ ನೀವು ಮರಣ ಪ್ರಮಾಣ ಪತ್ರ ಏಕೆ ತೆಗೆದುಕೊಂಡಿಲ್ಲ ಎಂದು ಹೈಕೋರ್ಟ್ ಪ್ರಶ್ನಿಸಿತ್ತು.

ವರದಿಗಳ ಪ್ರಕಾರ, ಗುರುವಾರ ಪೊಲೀಸರು ಸಮಾಧಿ ತೆರೆದಾಗ ಅದರೊಳಗೆ ಗೋಪನ್ ಸ್ವಾಮಿಯವರ ಶವ ಬೂದಿ ಅಥವಾ ಭಸ್ಮ ಮತ್ತು ಸುಗಂಧ ದ್ರವ್ಯಗಳಿಂದ ಆವೃತ್ತವಾಗಿ ಕುಳಿತ ಸ್ಥಿತಿಯಲ್ಲಿ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೀಘ್ರದಲ್ಲೇ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಶವ ಹೊರ ತೆಗೆಯುವ ಹಿನ್ನೆಲೆ ಗುರುವಾರ ಬೆಳಿಗ್ಗೆಯೇ ಸಮಾಧಿ ಸ್ಥಳದಲ್ಲಿ ದೊಡ್ಡ ಮಟ್ಟದಲ್ಲಿ ಪೊಲೀಸ್  ಮತ್ತು ಮೂರು ವಿಧಿವಿಜ್ಞಾನ ತಜ್ಞರ ತಂಡಗಳನ್ನು ನಿಯೋಜಿಸಲಾಗಿತ್ತು. ಗಲಾಟೆಯಾಗುವ ಮುನ್ಸೂಚನೆಯಿದ್ದ ಕಾರಣ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು.

ವರದಿಗಳ ಪ್ರಕಾರ ಪೊಲೀಸರು ಶವದ ಮರಣೋತ್ತರ ಪರೀಕ್ಷೆ ನಡೆಸಿ ತನಿಖೆ ಮುಂದುವರಿಸಲಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಗೋಪನ್ ಸ್ವಾಮಿಯದ್ದು ಕೊಲೆಯೂ, ಇಲ್ಲಾ ಅವರೇ ಸಮಾಧಿಯಾದರೋ ಎಂಬುವುದು ಖಚಿತವಾಗಬೇಕಿದೆ.

ಕೋಮು ಬಣ್ಣ ಬಳಿದ ಹಿಂದುತ್ವ ಸಂಘಟನೆಗಳು :

ಗೋಪನ್ ಸ್ವಾಮಿ ಸಮಾಧಿ ಪ್ರಕರಣ ಅವರ ಕುಟುಂಬ ಮತ್ತು ಪೊಲೀಸರ ನಡುವಿನ ಸಂಘರ್ಷ. ಆದರೆ, ‘ಹಿಂದೂ ಐಕ್ಯ ವೇದಿ’ ಮತ್ತು ‘ವಿಎಸ್‌ಡಿಪಿ’ಯಂತಹ ಕೆಲ ಹಿಂದುತ್ವ ಸಂಘಟನೆಗಳು ಪ್ರಕರಣಕ್ಕೆ ಕೋಮು ಬಣ್ಣ ಬಳಿಯಲು ಯತ್ನಿಸಿದೆ.

ಮುಸ್ಲಿಮರು ಗೋಪನ್ ಸ್ವಾಮಿಯವರ ಸಮಾಧಿಯನ್ನು ಬಲವಂತವಾಗಿ ತೆರೆಯುವಂತೆ ಮಾಡಿ, ಹಿಂದೂಗಳ ಧಾರ್ಮಿಕ ನಂಬಿಕೆಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದೆ. ಆದರೆ, ಪೊಲೀಸರು ಗೋಪನ್ ಸ್ವಾಮಿ ಸಮಾಧಿ ತೆರೆದಿರುವುದು ಹೈಕೋರ್ಟ್ ಆದೇಶದ ಹಿನ್ನಲೆಯಾಗಿದೆ.

ಸೈಫ್ ಅಲಿ ಖಾನ್ ಇರಿತ ಪ್ರಕರಣ; ದಾಳಿಕೋರನಿಗಾಗಿ 7 ಪೊಲೀಸ್ ತಂಡಗಳಿಂದ ಹುಡುಕಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...