Homeಮುಖಪುಟಕೇರಳದ ಸಮಾಧಿ ಪ್ರಕರಣ | ಗೋಪನ್ ಸ್ವಾಮಿ ಶವ ಹೊರ ತೆಗೆದ ಪೊಲೀಸರು

ಕೇರಳದ ಸಮಾಧಿ ಪ್ರಕರಣ | ಗೋಪನ್ ಸ್ವಾಮಿ ಶವ ಹೊರ ತೆಗೆದ ಪೊಲೀಸರು

- Advertisement -
- Advertisement -

ಕೇರಳದಲ್ಲಿ ಭಾರೀ ಸದ್ದು ಮಾಡಿರುವ ನಿವೃತ್ತ ಹೆಡ್‌ಲೋಡ್‌ ಕಾರ್ಮಿಕ ಗೋಪನ್‌ ಸ್ವಾಮಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ.

ಹೈಕೋರ್ಟ್ ಆದೇಶದ ಹಿನ್ನೆಲೆ, ಕುಟುಂಬಸ್ಥರ ವಿರೋಧದ ನಡುವೆಯೂ ಗುರುವಾರ (ಜ.15) ಪೊಲೀಸರು ಗೋಪನ್‌ ಸ್ವಾಮಿಯವರ ಶವವನ್ನು ಸಮಾಧಿಯಿಂದ ಹೊರ ತೆಗೆದಿದ್ದಾರೆ.

ತಿರುವನಂತಪುರಂ ಜಿಲ್ಲೆಯ ನೆಯ್ಯತ್ತಿಂಕರ ಬಳಿಯ ಅರಳುಮೂಡುವಿನ ಮನೆ ಬಳಿ 72 ವರ್ಷದ ಗೋಪನ್ ಸ್ವಾಮಿಯವರ ಶವ ಹೂತಿದ್ದ ಕುಟುಂಬಸ್ಥರು ಸಮಾಧಿ ನಿರ್ಮಿಸಿದ್ದರು.

ಸ್ವಯಂ ಗೋಷಿತ ಗುರು ಎನ್ನಲಾದ ನಿವೃತ್ತ ಹೆಡ್‌ಲೋಡ್ ಕಾರ್ಮಿಕ ಗೋಪನ್ ಸ್ವಾಮಿ ಜನವರಿ 9ರಿಂದ ನಾಪತ್ತೆಯಾಗಿದ್ದರು. ಆ ಬಳಿಕ ಸ್ಥಳೀಯ ದೇವಸ್ಥಾನದ ಬಳಿ ಅವರ ಸಮಾಧಿ ಕಂಡು ಬಂದಿತ್ತು. ಗೋಪನ್ ಸ್ವಾಮಿ ಆಧ್ಯಾತ್ಮಿಕತೆಯ ಪರಾಕಾಷ್ಠೆಯನ್ನು ತಲುಪಿ ಸ್ವಇಚ್ಛೆಯಿಂದ ಸಮಾಧಿಯಾಗಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದರು.

ಈ ಪ್ರಕರಣದ ಹಿಂದೆ ಅನುಮಾನ ವ್ಯಕ್ತಪಡಿಸಿದ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು. ಜನವರಿ 13ರಂದು ಸಮಾಧಿ ಬಳಿಗೆ ಬಂದ ಪೊಲೀಸರು ಮತ್ತು ಇತರ ಅಧಿಕಾರಿಗಳು ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಮುಂದಾಗಿದ್ದರು. ಆದರೆ, ಇದಕ್ಕೆ ಗೋಪನ್ ಸ್ವಾಮಿ ಕುಟುಂಬಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಗೋಪನ್ ಸ್ವಾಮಿ ಪತ್ನಿ ಸುಲೋಚನಾ, ಮಕ್ಕಳಾದ ಸನಂದನ್, ರಾಜಸೇನನ್ ಸಮಾಧಿ ಬಳಿ ಅಡ್ಡಲಾಗಿ ನಿಂತು ಪೊಲೀಸರನ್ನು ತಡೆದಿದ್ದರು.

“ಗೋಪನ್ ಸ್ವಾಮಿ ಸಾವಿಗೂ ಮುನ್ನ ಆಧ್ಯಾತ್ಮಿಕತೆಯ ಬಗ್ಗೆ ಮಾತನಾಡಿದ್ದಾರೆ. ಅವರ ಸಾವನ್ನು ವೈದ್ಯರಲ್ಲ, ಶಿವನೇ ನಿರ್ಧರಿಸಿದ್ದಾನೆ. ಹಾಗಾಗಿ, ವೈದ್ಯಕೀಯ ದೃಢೀಕರಣದ ಅಗತ್ಯವಿಲ್ಲ ಎಂದು ಗೋಪನ್‌ ಸ್ವಾಮಿ ಪತ್ನಿ ಸುಲೋಚನಾ ಮಾಧ್ಯಮಗಳ ಮುಂದೆ ಹೇಳಿದ್ದರು.

ಆದರೆ, ಜಿಲ್ಲಾಧಿಕಾರಿ ಅನು ಕುಮಾರಿ ಅವರು ಗೋಪನ್‌ ಸ್ವಾಮಿ ನಾಪತ್ತೆ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದರು. ಜಿಲ್ಲಾಧಿಕಾರಿ ಆದೇಶದ ವಿರುದ್ದ ಗೋಪನ್ ಸ್ವಾಮಿ ಕುಟುಂಬ ಹೈಕೋರ್ಟ್ ಮೊರೆ ಹೋಗಿತ್ತು. ನಮ್ಮ ಇಚ್ಛೆಯಂತೆ ಸಮಾಧಿ ಮಾಡುವುದು ನಮ್ಮ ಹಕ್ಕು. ನಮ್ಮ ಧಾರ್ಮಿಕ ನಂಬಿಕೆ ಆಚರಿಸಲು ಸಂವಿಧಾನದಲ್ಲಿ ಅವಕಾಶವಿದೆ. ಗೋಪನ್‌ ಸ್ವಾಮಿ ತನ್ನ ಧಾರ್ಮಿಕ ನಂಬಿಕೆಯಂತೆ ಸಮಾಧಿಯಾಗಿದ್ದಾರೆ. ಹಾಗಾಗಿ, ಸಮಾಧಿಯಿಂದ ಶವ ಹೊರ ತೆಗೆಯುವುದು ಸರಿಯಲ್ಲ ಎಂದು ಕುಟುಂಬಸ್ಥರು ವಾದಿಸಿದ್ದರು.

ಆದರೆ, ಗೋಪನ್ ಸ್ವಾಮಿ ಕುಟುಂಬದ ವಾದವನ್ನು ಪುರಸ್ಕರಿಸಿದ ಹೈಕೋರ್ಟ್, ಜಿಲ್ಲಾಧಿಕಾರಿ ಆದೇಶದಂತೆ ಸಮಾಧಿಯಿಂದ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸುವಂತೆ ಸೂಚಿಸಿತ್ತು. ಗೋಪನ್ ಸ್ವಾಮಿ ಸಾವನ್ನಪ್ಪಿದರೆ ನೀವು ಮರಣ ಪ್ರಮಾಣ ಪತ್ರ ಏಕೆ ತೆಗೆದುಕೊಂಡಿಲ್ಲ ಎಂದು ಹೈಕೋರ್ಟ್ ಪ್ರಶ್ನಿಸಿತ್ತು.

ವರದಿಗಳ ಪ್ರಕಾರ, ಗುರುವಾರ ಪೊಲೀಸರು ಸಮಾಧಿ ತೆರೆದಾಗ ಅದರೊಳಗೆ ಗೋಪನ್ ಸ್ವಾಮಿಯವರ ಶವ ಬೂದಿ ಅಥವಾ ಭಸ್ಮ ಮತ್ತು ಸುಗಂಧ ದ್ರವ್ಯಗಳಿಂದ ಆವೃತ್ತವಾಗಿ ಕುಳಿತ ಸ್ಥಿತಿಯಲ್ಲಿ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೀಘ್ರದಲ್ಲೇ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಶವ ಹೊರ ತೆಗೆಯುವ ಹಿನ್ನೆಲೆ ಗುರುವಾರ ಬೆಳಿಗ್ಗೆಯೇ ಸಮಾಧಿ ಸ್ಥಳದಲ್ಲಿ ದೊಡ್ಡ ಮಟ್ಟದಲ್ಲಿ ಪೊಲೀಸ್  ಮತ್ತು ಮೂರು ವಿಧಿವಿಜ್ಞಾನ ತಜ್ಞರ ತಂಡಗಳನ್ನು ನಿಯೋಜಿಸಲಾಗಿತ್ತು. ಗಲಾಟೆಯಾಗುವ ಮುನ್ಸೂಚನೆಯಿದ್ದ ಕಾರಣ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು.

ವರದಿಗಳ ಪ್ರಕಾರ ಪೊಲೀಸರು ಶವದ ಮರಣೋತ್ತರ ಪರೀಕ್ಷೆ ನಡೆಸಿ ತನಿಖೆ ಮುಂದುವರಿಸಲಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಗೋಪನ್ ಸ್ವಾಮಿಯದ್ದು ಕೊಲೆಯೂ, ಇಲ್ಲಾ ಅವರೇ ಸಮಾಧಿಯಾದರೋ ಎಂಬುವುದು ಖಚಿತವಾಗಬೇಕಿದೆ.

ಕೋಮು ಬಣ್ಣ ಬಳಿದ ಹಿಂದುತ್ವ ಸಂಘಟನೆಗಳು :

ಗೋಪನ್ ಸ್ವಾಮಿ ಸಮಾಧಿ ಪ್ರಕರಣ ಅವರ ಕುಟುಂಬ ಮತ್ತು ಪೊಲೀಸರ ನಡುವಿನ ಸಂಘರ್ಷ. ಆದರೆ, ‘ಹಿಂದೂ ಐಕ್ಯ ವೇದಿ’ ಮತ್ತು ‘ವಿಎಸ್‌ಡಿಪಿ’ಯಂತಹ ಕೆಲ ಹಿಂದುತ್ವ ಸಂಘಟನೆಗಳು ಪ್ರಕರಣಕ್ಕೆ ಕೋಮು ಬಣ್ಣ ಬಳಿಯಲು ಯತ್ನಿಸಿದೆ.

ಮುಸ್ಲಿಮರು ಗೋಪನ್ ಸ್ವಾಮಿಯವರ ಸಮಾಧಿಯನ್ನು ಬಲವಂತವಾಗಿ ತೆರೆಯುವಂತೆ ಮಾಡಿ, ಹಿಂದೂಗಳ ಧಾರ್ಮಿಕ ನಂಬಿಕೆಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದೆ. ಆದರೆ, ಪೊಲೀಸರು ಗೋಪನ್ ಸ್ವಾಮಿ ಸಮಾಧಿ ತೆರೆದಿರುವುದು ಹೈಕೋರ್ಟ್ ಆದೇಶದ ಹಿನ್ನಲೆಯಾಗಿದೆ.

ಸೈಫ್ ಅಲಿ ಖಾನ್ ಇರಿತ ಪ್ರಕರಣ; ದಾಳಿಕೋರನಿಗಾಗಿ 7 ಪೊಲೀಸ್ ತಂಡಗಳಿಂದ ಹುಡುಕಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...