Homeಮುಖಪುಟಕೇರಳದ ಸಮಾಧಿ ಪ್ರಕರಣ | ಗೋಪನ್ ಸ್ವಾಮಿ ಶವ ಹೊರ ತೆಗೆದ ಪೊಲೀಸರು

ಕೇರಳದ ಸಮಾಧಿ ಪ್ರಕರಣ | ಗೋಪನ್ ಸ್ವಾಮಿ ಶವ ಹೊರ ತೆಗೆದ ಪೊಲೀಸರು

- Advertisement -
- Advertisement -

ಕೇರಳದಲ್ಲಿ ಭಾರೀ ಸದ್ದು ಮಾಡಿರುವ ನಿವೃತ್ತ ಹೆಡ್‌ಲೋಡ್‌ ಕಾರ್ಮಿಕ ಗೋಪನ್‌ ಸ್ವಾಮಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ.

ಹೈಕೋರ್ಟ್ ಆದೇಶದ ಹಿನ್ನೆಲೆ, ಕುಟುಂಬಸ್ಥರ ವಿರೋಧದ ನಡುವೆಯೂ ಗುರುವಾರ (ಜ.15) ಪೊಲೀಸರು ಗೋಪನ್‌ ಸ್ವಾಮಿಯವರ ಶವವನ್ನು ಸಮಾಧಿಯಿಂದ ಹೊರ ತೆಗೆದಿದ್ದಾರೆ.

ತಿರುವನಂತಪುರಂ ಜಿಲ್ಲೆಯ ನೆಯ್ಯತ್ತಿಂಕರ ಬಳಿಯ ಅರಳುಮೂಡುವಿನ ಮನೆ ಬಳಿ 72 ವರ್ಷದ ಗೋಪನ್ ಸ್ವಾಮಿಯವರ ಶವ ಹೂತಿದ್ದ ಕುಟುಂಬಸ್ಥರು ಸಮಾಧಿ ನಿರ್ಮಿಸಿದ್ದರು.

ಸ್ವಯಂ ಗೋಷಿತ ಗುರು ಎನ್ನಲಾದ ನಿವೃತ್ತ ಹೆಡ್‌ಲೋಡ್ ಕಾರ್ಮಿಕ ಗೋಪನ್ ಸ್ವಾಮಿ ಜನವರಿ 9ರಿಂದ ನಾಪತ್ತೆಯಾಗಿದ್ದರು. ಆ ಬಳಿಕ ಸ್ಥಳೀಯ ದೇವಸ್ಥಾನದ ಬಳಿ ಅವರ ಸಮಾಧಿ ಕಂಡು ಬಂದಿತ್ತು. ಗೋಪನ್ ಸ್ವಾಮಿ ಆಧ್ಯಾತ್ಮಿಕತೆಯ ಪರಾಕಾಷ್ಠೆಯನ್ನು ತಲುಪಿ ಸ್ವಇಚ್ಛೆಯಿಂದ ಸಮಾಧಿಯಾಗಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದರು.

ಈ ಪ್ರಕರಣದ ಹಿಂದೆ ಅನುಮಾನ ವ್ಯಕ್ತಪಡಿಸಿದ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು. ಜನವರಿ 13ರಂದು ಸಮಾಧಿ ಬಳಿಗೆ ಬಂದ ಪೊಲೀಸರು ಮತ್ತು ಇತರ ಅಧಿಕಾರಿಗಳು ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಮುಂದಾಗಿದ್ದರು. ಆದರೆ, ಇದಕ್ಕೆ ಗೋಪನ್ ಸ್ವಾಮಿ ಕುಟುಂಬಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಗೋಪನ್ ಸ್ವಾಮಿ ಪತ್ನಿ ಸುಲೋಚನಾ, ಮಕ್ಕಳಾದ ಸನಂದನ್, ರಾಜಸೇನನ್ ಸಮಾಧಿ ಬಳಿ ಅಡ್ಡಲಾಗಿ ನಿಂತು ಪೊಲೀಸರನ್ನು ತಡೆದಿದ್ದರು.

“ಗೋಪನ್ ಸ್ವಾಮಿ ಸಾವಿಗೂ ಮುನ್ನ ಆಧ್ಯಾತ್ಮಿಕತೆಯ ಬಗ್ಗೆ ಮಾತನಾಡಿದ್ದಾರೆ. ಅವರ ಸಾವನ್ನು ವೈದ್ಯರಲ್ಲ, ಶಿವನೇ ನಿರ್ಧರಿಸಿದ್ದಾನೆ. ಹಾಗಾಗಿ, ವೈದ್ಯಕೀಯ ದೃಢೀಕರಣದ ಅಗತ್ಯವಿಲ್ಲ ಎಂದು ಗೋಪನ್‌ ಸ್ವಾಮಿ ಪತ್ನಿ ಸುಲೋಚನಾ ಮಾಧ್ಯಮಗಳ ಮುಂದೆ ಹೇಳಿದ್ದರು.

ಆದರೆ, ಜಿಲ್ಲಾಧಿಕಾರಿ ಅನು ಕುಮಾರಿ ಅವರು ಗೋಪನ್‌ ಸ್ವಾಮಿ ನಾಪತ್ತೆ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದರು. ಜಿಲ್ಲಾಧಿಕಾರಿ ಆದೇಶದ ವಿರುದ್ದ ಗೋಪನ್ ಸ್ವಾಮಿ ಕುಟುಂಬ ಹೈಕೋರ್ಟ್ ಮೊರೆ ಹೋಗಿತ್ತು. ನಮ್ಮ ಇಚ್ಛೆಯಂತೆ ಸಮಾಧಿ ಮಾಡುವುದು ನಮ್ಮ ಹಕ್ಕು. ನಮ್ಮ ಧಾರ್ಮಿಕ ನಂಬಿಕೆ ಆಚರಿಸಲು ಸಂವಿಧಾನದಲ್ಲಿ ಅವಕಾಶವಿದೆ. ಗೋಪನ್‌ ಸ್ವಾಮಿ ತನ್ನ ಧಾರ್ಮಿಕ ನಂಬಿಕೆಯಂತೆ ಸಮಾಧಿಯಾಗಿದ್ದಾರೆ. ಹಾಗಾಗಿ, ಸಮಾಧಿಯಿಂದ ಶವ ಹೊರ ತೆಗೆಯುವುದು ಸರಿಯಲ್ಲ ಎಂದು ಕುಟುಂಬಸ್ಥರು ವಾದಿಸಿದ್ದರು.

ಆದರೆ, ಗೋಪನ್ ಸ್ವಾಮಿ ಕುಟುಂಬದ ವಾದವನ್ನು ಪುರಸ್ಕರಿಸಿದ ಹೈಕೋರ್ಟ್, ಜಿಲ್ಲಾಧಿಕಾರಿ ಆದೇಶದಂತೆ ಸಮಾಧಿಯಿಂದ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸುವಂತೆ ಸೂಚಿಸಿತ್ತು. ಗೋಪನ್ ಸ್ವಾಮಿ ಸಾವನ್ನಪ್ಪಿದರೆ ನೀವು ಮರಣ ಪ್ರಮಾಣ ಪತ್ರ ಏಕೆ ತೆಗೆದುಕೊಂಡಿಲ್ಲ ಎಂದು ಹೈಕೋರ್ಟ್ ಪ್ರಶ್ನಿಸಿತ್ತು.

ವರದಿಗಳ ಪ್ರಕಾರ, ಗುರುವಾರ ಪೊಲೀಸರು ಸಮಾಧಿ ತೆರೆದಾಗ ಅದರೊಳಗೆ ಗೋಪನ್ ಸ್ವಾಮಿಯವರ ಶವ ಬೂದಿ ಅಥವಾ ಭಸ್ಮ ಮತ್ತು ಸುಗಂಧ ದ್ರವ್ಯಗಳಿಂದ ಆವೃತ್ತವಾಗಿ ಕುಳಿತ ಸ್ಥಿತಿಯಲ್ಲಿ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೀಘ್ರದಲ್ಲೇ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಶವ ಹೊರ ತೆಗೆಯುವ ಹಿನ್ನೆಲೆ ಗುರುವಾರ ಬೆಳಿಗ್ಗೆಯೇ ಸಮಾಧಿ ಸ್ಥಳದಲ್ಲಿ ದೊಡ್ಡ ಮಟ್ಟದಲ್ಲಿ ಪೊಲೀಸ್  ಮತ್ತು ಮೂರು ವಿಧಿವಿಜ್ಞಾನ ತಜ್ಞರ ತಂಡಗಳನ್ನು ನಿಯೋಜಿಸಲಾಗಿತ್ತು. ಗಲಾಟೆಯಾಗುವ ಮುನ್ಸೂಚನೆಯಿದ್ದ ಕಾರಣ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು.

ವರದಿಗಳ ಪ್ರಕಾರ ಪೊಲೀಸರು ಶವದ ಮರಣೋತ್ತರ ಪರೀಕ್ಷೆ ನಡೆಸಿ ತನಿಖೆ ಮುಂದುವರಿಸಲಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಗೋಪನ್ ಸ್ವಾಮಿಯದ್ದು ಕೊಲೆಯೂ, ಇಲ್ಲಾ ಅವರೇ ಸಮಾಧಿಯಾದರೋ ಎಂಬುವುದು ಖಚಿತವಾಗಬೇಕಿದೆ.

ಕೋಮು ಬಣ್ಣ ಬಳಿದ ಹಿಂದುತ್ವ ಸಂಘಟನೆಗಳು :

ಗೋಪನ್ ಸ್ವಾಮಿ ಸಮಾಧಿ ಪ್ರಕರಣ ಅವರ ಕುಟುಂಬ ಮತ್ತು ಪೊಲೀಸರ ನಡುವಿನ ಸಂಘರ್ಷ. ಆದರೆ, ‘ಹಿಂದೂ ಐಕ್ಯ ವೇದಿ’ ಮತ್ತು ‘ವಿಎಸ್‌ಡಿಪಿ’ಯಂತಹ ಕೆಲ ಹಿಂದುತ್ವ ಸಂಘಟನೆಗಳು ಪ್ರಕರಣಕ್ಕೆ ಕೋಮು ಬಣ್ಣ ಬಳಿಯಲು ಯತ್ನಿಸಿದೆ.

ಮುಸ್ಲಿಮರು ಗೋಪನ್ ಸ್ವಾಮಿಯವರ ಸಮಾಧಿಯನ್ನು ಬಲವಂತವಾಗಿ ತೆರೆಯುವಂತೆ ಮಾಡಿ, ಹಿಂದೂಗಳ ಧಾರ್ಮಿಕ ನಂಬಿಕೆಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದೆ. ಆದರೆ, ಪೊಲೀಸರು ಗೋಪನ್ ಸ್ವಾಮಿ ಸಮಾಧಿ ತೆರೆದಿರುವುದು ಹೈಕೋರ್ಟ್ ಆದೇಶದ ಹಿನ್ನಲೆಯಾಗಿದೆ.

ಸೈಫ್ ಅಲಿ ಖಾನ್ ಇರಿತ ಪ್ರಕರಣ; ದಾಳಿಕೋರನಿಗಾಗಿ 7 ಪೊಲೀಸ್ ತಂಡಗಳಿಂದ ಹುಡುಕಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...