Homeಮುಖಪುಟಕೇರಳದ ಸಮಾಧಿ ಪ್ರಕರಣ | ಗೋಪನ್ ಸ್ವಾಮಿ ಶವ ಹೊರ ತೆಗೆದ ಪೊಲೀಸರು

ಕೇರಳದ ಸಮಾಧಿ ಪ್ರಕರಣ | ಗೋಪನ್ ಸ್ವಾಮಿ ಶವ ಹೊರ ತೆಗೆದ ಪೊಲೀಸರು

- Advertisement -
- Advertisement -

ಕೇರಳದಲ್ಲಿ ಭಾರೀ ಸದ್ದು ಮಾಡಿರುವ ನಿವೃತ್ತ ಹೆಡ್‌ಲೋಡ್‌ ಕಾರ್ಮಿಕ ಗೋಪನ್‌ ಸ್ವಾಮಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ.

ಹೈಕೋರ್ಟ್ ಆದೇಶದ ಹಿನ್ನೆಲೆ, ಕುಟುಂಬಸ್ಥರ ವಿರೋಧದ ನಡುವೆಯೂ ಗುರುವಾರ (ಜ.15) ಪೊಲೀಸರು ಗೋಪನ್‌ ಸ್ವಾಮಿಯವರ ಶವವನ್ನು ಸಮಾಧಿಯಿಂದ ಹೊರ ತೆಗೆದಿದ್ದಾರೆ.

ತಿರುವನಂತಪುರಂ ಜಿಲ್ಲೆಯ ನೆಯ್ಯತ್ತಿಂಕರ ಬಳಿಯ ಅರಳುಮೂಡುವಿನ ಮನೆ ಬಳಿ 72 ವರ್ಷದ ಗೋಪನ್ ಸ್ವಾಮಿಯವರ ಶವ ಹೂತಿದ್ದ ಕುಟುಂಬಸ್ಥರು ಸಮಾಧಿ ನಿರ್ಮಿಸಿದ್ದರು.

ಸ್ವಯಂ ಗೋಷಿತ ಗುರು ಎನ್ನಲಾದ ನಿವೃತ್ತ ಹೆಡ್‌ಲೋಡ್ ಕಾರ್ಮಿಕ ಗೋಪನ್ ಸ್ವಾಮಿ ಜನವರಿ 9ರಿಂದ ನಾಪತ್ತೆಯಾಗಿದ್ದರು. ಆ ಬಳಿಕ ಸ್ಥಳೀಯ ದೇವಸ್ಥಾನದ ಬಳಿ ಅವರ ಸಮಾಧಿ ಕಂಡು ಬಂದಿತ್ತು. ಗೋಪನ್ ಸ್ವಾಮಿ ಆಧ್ಯಾತ್ಮಿಕತೆಯ ಪರಾಕಾಷ್ಠೆಯನ್ನು ತಲುಪಿ ಸ್ವಇಚ್ಛೆಯಿಂದ ಸಮಾಧಿಯಾಗಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದರು.

ಈ ಪ್ರಕರಣದ ಹಿಂದೆ ಅನುಮಾನ ವ್ಯಕ್ತಪಡಿಸಿದ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು. ಜನವರಿ 13ರಂದು ಸಮಾಧಿ ಬಳಿಗೆ ಬಂದ ಪೊಲೀಸರು ಮತ್ತು ಇತರ ಅಧಿಕಾರಿಗಳು ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಮುಂದಾಗಿದ್ದರು. ಆದರೆ, ಇದಕ್ಕೆ ಗೋಪನ್ ಸ್ವಾಮಿ ಕುಟುಂಬಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಗೋಪನ್ ಸ್ವಾಮಿ ಪತ್ನಿ ಸುಲೋಚನಾ, ಮಕ್ಕಳಾದ ಸನಂದನ್, ರಾಜಸೇನನ್ ಸಮಾಧಿ ಬಳಿ ಅಡ್ಡಲಾಗಿ ನಿಂತು ಪೊಲೀಸರನ್ನು ತಡೆದಿದ್ದರು.

“ಗೋಪನ್ ಸ್ವಾಮಿ ಸಾವಿಗೂ ಮುನ್ನ ಆಧ್ಯಾತ್ಮಿಕತೆಯ ಬಗ್ಗೆ ಮಾತನಾಡಿದ್ದಾರೆ. ಅವರ ಸಾವನ್ನು ವೈದ್ಯರಲ್ಲ, ಶಿವನೇ ನಿರ್ಧರಿಸಿದ್ದಾನೆ. ಹಾಗಾಗಿ, ವೈದ್ಯಕೀಯ ದೃಢೀಕರಣದ ಅಗತ್ಯವಿಲ್ಲ ಎಂದು ಗೋಪನ್‌ ಸ್ವಾಮಿ ಪತ್ನಿ ಸುಲೋಚನಾ ಮಾಧ್ಯಮಗಳ ಮುಂದೆ ಹೇಳಿದ್ದರು.

ಆದರೆ, ಜಿಲ್ಲಾಧಿಕಾರಿ ಅನು ಕುಮಾರಿ ಅವರು ಗೋಪನ್‌ ಸ್ವಾಮಿ ನಾಪತ್ತೆ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದರು. ಜಿಲ್ಲಾಧಿಕಾರಿ ಆದೇಶದ ವಿರುದ್ದ ಗೋಪನ್ ಸ್ವಾಮಿ ಕುಟುಂಬ ಹೈಕೋರ್ಟ್ ಮೊರೆ ಹೋಗಿತ್ತು. ನಮ್ಮ ಇಚ್ಛೆಯಂತೆ ಸಮಾಧಿ ಮಾಡುವುದು ನಮ್ಮ ಹಕ್ಕು. ನಮ್ಮ ಧಾರ್ಮಿಕ ನಂಬಿಕೆ ಆಚರಿಸಲು ಸಂವಿಧಾನದಲ್ಲಿ ಅವಕಾಶವಿದೆ. ಗೋಪನ್‌ ಸ್ವಾಮಿ ತನ್ನ ಧಾರ್ಮಿಕ ನಂಬಿಕೆಯಂತೆ ಸಮಾಧಿಯಾಗಿದ್ದಾರೆ. ಹಾಗಾಗಿ, ಸಮಾಧಿಯಿಂದ ಶವ ಹೊರ ತೆಗೆಯುವುದು ಸರಿಯಲ್ಲ ಎಂದು ಕುಟುಂಬಸ್ಥರು ವಾದಿಸಿದ್ದರು.

ಆದರೆ, ಗೋಪನ್ ಸ್ವಾಮಿ ಕುಟುಂಬದ ವಾದವನ್ನು ಪುರಸ್ಕರಿಸಿದ ಹೈಕೋರ್ಟ್, ಜಿಲ್ಲಾಧಿಕಾರಿ ಆದೇಶದಂತೆ ಸಮಾಧಿಯಿಂದ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸುವಂತೆ ಸೂಚಿಸಿತ್ತು. ಗೋಪನ್ ಸ್ವಾಮಿ ಸಾವನ್ನಪ್ಪಿದರೆ ನೀವು ಮರಣ ಪ್ರಮಾಣ ಪತ್ರ ಏಕೆ ತೆಗೆದುಕೊಂಡಿಲ್ಲ ಎಂದು ಹೈಕೋರ್ಟ್ ಪ್ರಶ್ನಿಸಿತ್ತು.

ವರದಿಗಳ ಪ್ರಕಾರ, ಗುರುವಾರ ಪೊಲೀಸರು ಸಮಾಧಿ ತೆರೆದಾಗ ಅದರೊಳಗೆ ಗೋಪನ್ ಸ್ವಾಮಿಯವರ ಶವ ಬೂದಿ ಅಥವಾ ಭಸ್ಮ ಮತ್ತು ಸುಗಂಧ ದ್ರವ್ಯಗಳಿಂದ ಆವೃತ್ತವಾಗಿ ಕುಳಿತ ಸ್ಥಿತಿಯಲ್ಲಿ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೀಘ್ರದಲ್ಲೇ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಶವ ಹೊರ ತೆಗೆಯುವ ಹಿನ್ನೆಲೆ ಗುರುವಾರ ಬೆಳಿಗ್ಗೆಯೇ ಸಮಾಧಿ ಸ್ಥಳದಲ್ಲಿ ದೊಡ್ಡ ಮಟ್ಟದಲ್ಲಿ ಪೊಲೀಸ್  ಮತ್ತು ಮೂರು ವಿಧಿವಿಜ್ಞಾನ ತಜ್ಞರ ತಂಡಗಳನ್ನು ನಿಯೋಜಿಸಲಾಗಿತ್ತು. ಗಲಾಟೆಯಾಗುವ ಮುನ್ಸೂಚನೆಯಿದ್ದ ಕಾರಣ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು.

ವರದಿಗಳ ಪ್ರಕಾರ ಪೊಲೀಸರು ಶವದ ಮರಣೋತ್ತರ ಪರೀಕ್ಷೆ ನಡೆಸಿ ತನಿಖೆ ಮುಂದುವರಿಸಲಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಗೋಪನ್ ಸ್ವಾಮಿಯದ್ದು ಕೊಲೆಯೂ, ಇಲ್ಲಾ ಅವರೇ ಸಮಾಧಿಯಾದರೋ ಎಂಬುವುದು ಖಚಿತವಾಗಬೇಕಿದೆ.

ಕೋಮು ಬಣ್ಣ ಬಳಿದ ಹಿಂದುತ್ವ ಸಂಘಟನೆಗಳು :

ಗೋಪನ್ ಸ್ವಾಮಿ ಸಮಾಧಿ ಪ್ರಕರಣ ಅವರ ಕುಟುಂಬ ಮತ್ತು ಪೊಲೀಸರ ನಡುವಿನ ಸಂಘರ್ಷ. ಆದರೆ, ‘ಹಿಂದೂ ಐಕ್ಯ ವೇದಿ’ ಮತ್ತು ‘ವಿಎಸ್‌ಡಿಪಿ’ಯಂತಹ ಕೆಲ ಹಿಂದುತ್ವ ಸಂಘಟನೆಗಳು ಪ್ರಕರಣಕ್ಕೆ ಕೋಮು ಬಣ್ಣ ಬಳಿಯಲು ಯತ್ನಿಸಿದೆ.

ಮುಸ್ಲಿಮರು ಗೋಪನ್ ಸ್ವಾಮಿಯವರ ಸಮಾಧಿಯನ್ನು ಬಲವಂತವಾಗಿ ತೆರೆಯುವಂತೆ ಮಾಡಿ, ಹಿಂದೂಗಳ ಧಾರ್ಮಿಕ ನಂಬಿಕೆಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದೆ. ಆದರೆ, ಪೊಲೀಸರು ಗೋಪನ್ ಸ್ವಾಮಿ ಸಮಾಧಿ ತೆರೆದಿರುವುದು ಹೈಕೋರ್ಟ್ ಆದೇಶದ ಹಿನ್ನಲೆಯಾಗಿದೆ.

ಸೈಫ್ ಅಲಿ ಖಾನ್ ಇರಿತ ಪ್ರಕರಣ; ದಾಳಿಕೋರನಿಗಾಗಿ 7 ಪೊಲೀಸ್ ತಂಡಗಳಿಂದ ಹುಡುಕಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...