Homeಮುಖಪುಟಕೇರಳದ ಸಮಾಧಿ ಪ್ರಕರಣ | ಗೋಪನ್ ಸ್ವಾಮಿ ಶವ ಹೊರ ತೆಗೆದ ಪೊಲೀಸರು

ಕೇರಳದ ಸಮಾಧಿ ಪ್ರಕರಣ | ಗೋಪನ್ ಸ್ವಾಮಿ ಶವ ಹೊರ ತೆಗೆದ ಪೊಲೀಸರು

- Advertisement -
- Advertisement -

ಕೇರಳದಲ್ಲಿ ಭಾರೀ ಸದ್ದು ಮಾಡಿರುವ ನಿವೃತ್ತ ಹೆಡ್‌ಲೋಡ್‌ ಕಾರ್ಮಿಕ ಗೋಪನ್‌ ಸ್ವಾಮಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ.

ಹೈಕೋರ್ಟ್ ಆದೇಶದ ಹಿನ್ನೆಲೆ, ಕುಟುಂಬಸ್ಥರ ವಿರೋಧದ ನಡುವೆಯೂ ಗುರುವಾರ (ಜ.15) ಪೊಲೀಸರು ಗೋಪನ್‌ ಸ್ವಾಮಿಯವರ ಶವವನ್ನು ಸಮಾಧಿಯಿಂದ ಹೊರ ತೆಗೆದಿದ್ದಾರೆ.

ತಿರುವನಂತಪುರಂ ಜಿಲ್ಲೆಯ ನೆಯ್ಯತ್ತಿಂಕರ ಬಳಿಯ ಅರಳುಮೂಡುವಿನ ಮನೆ ಬಳಿ 72 ವರ್ಷದ ಗೋಪನ್ ಸ್ವಾಮಿಯವರ ಶವ ಹೂತಿದ್ದ ಕುಟುಂಬಸ್ಥರು ಸಮಾಧಿ ನಿರ್ಮಿಸಿದ್ದರು.

ಸ್ವಯಂ ಗೋಷಿತ ಗುರು ಎನ್ನಲಾದ ನಿವೃತ್ತ ಹೆಡ್‌ಲೋಡ್ ಕಾರ್ಮಿಕ ಗೋಪನ್ ಸ್ವಾಮಿ ಜನವರಿ 9ರಿಂದ ನಾಪತ್ತೆಯಾಗಿದ್ದರು. ಆ ಬಳಿಕ ಸ್ಥಳೀಯ ದೇವಸ್ಥಾನದ ಬಳಿ ಅವರ ಸಮಾಧಿ ಕಂಡು ಬಂದಿತ್ತು. ಗೋಪನ್ ಸ್ವಾಮಿ ಆಧ್ಯಾತ್ಮಿಕತೆಯ ಪರಾಕಾಷ್ಠೆಯನ್ನು ತಲುಪಿ ಸ್ವಇಚ್ಛೆಯಿಂದ ಸಮಾಧಿಯಾಗಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದರು.

ಈ ಪ್ರಕರಣದ ಹಿಂದೆ ಅನುಮಾನ ವ್ಯಕ್ತಪಡಿಸಿದ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು. ಜನವರಿ 13ರಂದು ಸಮಾಧಿ ಬಳಿಗೆ ಬಂದ ಪೊಲೀಸರು ಮತ್ತು ಇತರ ಅಧಿಕಾರಿಗಳು ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಮುಂದಾಗಿದ್ದರು. ಆದರೆ, ಇದಕ್ಕೆ ಗೋಪನ್ ಸ್ವಾಮಿ ಕುಟುಂಬಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಗೋಪನ್ ಸ್ವಾಮಿ ಪತ್ನಿ ಸುಲೋಚನಾ, ಮಕ್ಕಳಾದ ಸನಂದನ್, ರಾಜಸೇನನ್ ಸಮಾಧಿ ಬಳಿ ಅಡ್ಡಲಾಗಿ ನಿಂತು ಪೊಲೀಸರನ್ನು ತಡೆದಿದ್ದರು.

“ಗೋಪನ್ ಸ್ವಾಮಿ ಸಾವಿಗೂ ಮುನ್ನ ಆಧ್ಯಾತ್ಮಿಕತೆಯ ಬಗ್ಗೆ ಮಾತನಾಡಿದ್ದಾರೆ. ಅವರ ಸಾವನ್ನು ವೈದ್ಯರಲ್ಲ, ಶಿವನೇ ನಿರ್ಧರಿಸಿದ್ದಾನೆ. ಹಾಗಾಗಿ, ವೈದ್ಯಕೀಯ ದೃಢೀಕರಣದ ಅಗತ್ಯವಿಲ್ಲ ಎಂದು ಗೋಪನ್‌ ಸ್ವಾಮಿ ಪತ್ನಿ ಸುಲೋಚನಾ ಮಾಧ್ಯಮಗಳ ಮುಂದೆ ಹೇಳಿದ್ದರು.

ಆದರೆ, ಜಿಲ್ಲಾಧಿಕಾರಿ ಅನು ಕುಮಾರಿ ಅವರು ಗೋಪನ್‌ ಸ್ವಾಮಿ ನಾಪತ್ತೆ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದರು. ಜಿಲ್ಲಾಧಿಕಾರಿ ಆದೇಶದ ವಿರುದ್ದ ಗೋಪನ್ ಸ್ವಾಮಿ ಕುಟುಂಬ ಹೈಕೋರ್ಟ್ ಮೊರೆ ಹೋಗಿತ್ತು. ನಮ್ಮ ಇಚ್ಛೆಯಂತೆ ಸಮಾಧಿ ಮಾಡುವುದು ನಮ್ಮ ಹಕ್ಕು. ನಮ್ಮ ಧಾರ್ಮಿಕ ನಂಬಿಕೆ ಆಚರಿಸಲು ಸಂವಿಧಾನದಲ್ಲಿ ಅವಕಾಶವಿದೆ. ಗೋಪನ್‌ ಸ್ವಾಮಿ ತನ್ನ ಧಾರ್ಮಿಕ ನಂಬಿಕೆಯಂತೆ ಸಮಾಧಿಯಾಗಿದ್ದಾರೆ. ಹಾಗಾಗಿ, ಸಮಾಧಿಯಿಂದ ಶವ ಹೊರ ತೆಗೆಯುವುದು ಸರಿಯಲ್ಲ ಎಂದು ಕುಟುಂಬಸ್ಥರು ವಾದಿಸಿದ್ದರು.

ಆದರೆ, ಗೋಪನ್ ಸ್ವಾಮಿ ಕುಟುಂಬದ ವಾದವನ್ನು ಪುರಸ್ಕರಿಸಿದ ಹೈಕೋರ್ಟ್, ಜಿಲ್ಲಾಧಿಕಾರಿ ಆದೇಶದಂತೆ ಸಮಾಧಿಯಿಂದ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸುವಂತೆ ಸೂಚಿಸಿತ್ತು. ಗೋಪನ್ ಸ್ವಾಮಿ ಸಾವನ್ನಪ್ಪಿದರೆ ನೀವು ಮರಣ ಪ್ರಮಾಣ ಪತ್ರ ಏಕೆ ತೆಗೆದುಕೊಂಡಿಲ್ಲ ಎಂದು ಹೈಕೋರ್ಟ್ ಪ್ರಶ್ನಿಸಿತ್ತು.

ವರದಿಗಳ ಪ್ರಕಾರ, ಗುರುವಾರ ಪೊಲೀಸರು ಸಮಾಧಿ ತೆರೆದಾಗ ಅದರೊಳಗೆ ಗೋಪನ್ ಸ್ವಾಮಿಯವರ ಶವ ಬೂದಿ ಅಥವಾ ಭಸ್ಮ ಮತ್ತು ಸುಗಂಧ ದ್ರವ್ಯಗಳಿಂದ ಆವೃತ್ತವಾಗಿ ಕುಳಿತ ಸ್ಥಿತಿಯಲ್ಲಿ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೀಘ್ರದಲ್ಲೇ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಶವ ಹೊರ ತೆಗೆಯುವ ಹಿನ್ನೆಲೆ ಗುರುವಾರ ಬೆಳಿಗ್ಗೆಯೇ ಸಮಾಧಿ ಸ್ಥಳದಲ್ಲಿ ದೊಡ್ಡ ಮಟ್ಟದಲ್ಲಿ ಪೊಲೀಸ್  ಮತ್ತು ಮೂರು ವಿಧಿವಿಜ್ಞಾನ ತಜ್ಞರ ತಂಡಗಳನ್ನು ನಿಯೋಜಿಸಲಾಗಿತ್ತು. ಗಲಾಟೆಯಾಗುವ ಮುನ್ಸೂಚನೆಯಿದ್ದ ಕಾರಣ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು.

ವರದಿಗಳ ಪ್ರಕಾರ ಪೊಲೀಸರು ಶವದ ಮರಣೋತ್ತರ ಪರೀಕ್ಷೆ ನಡೆಸಿ ತನಿಖೆ ಮುಂದುವರಿಸಲಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಗೋಪನ್ ಸ್ವಾಮಿಯದ್ದು ಕೊಲೆಯೂ, ಇಲ್ಲಾ ಅವರೇ ಸಮಾಧಿಯಾದರೋ ಎಂಬುವುದು ಖಚಿತವಾಗಬೇಕಿದೆ.

ಕೋಮು ಬಣ್ಣ ಬಳಿದ ಹಿಂದುತ್ವ ಸಂಘಟನೆಗಳು :

ಗೋಪನ್ ಸ್ವಾಮಿ ಸಮಾಧಿ ಪ್ರಕರಣ ಅವರ ಕುಟುಂಬ ಮತ್ತು ಪೊಲೀಸರ ನಡುವಿನ ಸಂಘರ್ಷ. ಆದರೆ, ‘ಹಿಂದೂ ಐಕ್ಯ ವೇದಿ’ ಮತ್ತು ‘ವಿಎಸ್‌ಡಿಪಿ’ಯಂತಹ ಕೆಲ ಹಿಂದುತ್ವ ಸಂಘಟನೆಗಳು ಪ್ರಕರಣಕ್ಕೆ ಕೋಮು ಬಣ್ಣ ಬಳಿಯಲು ಯತ್ನಿಸಿದೆ.

ಮುಸ್ಲಿಮರು ಗೋಪನ್ ಸ್ವಾಮಿಯವರ ಸಮಾಧಿಯನ್ನು ಬಲವಂತವಾಗಿ ತೆರೆಯುವಂತೆ ಮಾಡಿ, ಹಿಂದೂಗಳ ಧಾರ್ಮಿಕ ನಂಬಿಕೆಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದೆ. ಆದರೆ, ಪೊಲೀಸರು ಗೋಪನ್ ಸ್ವಾಮಿ ಸಮಾಧಿ ತೆರೆದಿರುವುದು ಹೈಕೋರ್ಟ್ ಆದೇಶದ ಹಿನ್ನಲೆಯಾಗಿದೆ.

ಸೈಫ್ ಅಲಿ ಖಾನ್ ಇರಿತ ಪ್ರಕರಣ; ದಾಳಿಕೋರನಿಗಾಗಿ 7 ಪೊಲೀಸ್ ತಂಡಗಳಿಂದ ಹುಡುಕಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...