Homeಮುಖಪುಟ‘ಕೇರಳ ಸವಾರಿ’ - ದೇಶದ ಮೊದಲ ಸರ್ಕಾರಿ ಸ್ವಾಮ್ಯದ ಆನ್‌ಲೈನ್ ಟ್ಯಾಕ್ಸಿ ಸೇವೆ ಉದ್ಘಾಟಿಸಿದ ಸಿಎಂ...

‘ಕೇರಳ ಸವಾರಿ’ – ದೇಶದ ಮೊದಲ ಸರ್ಕಾರಿ ಸ್ವಾಮ್ಯದ ಆನ್‌ಲೈನ್ ಟ್ಯಾಕ್ಸಿ ಸೇವೆ ಉದ್ಘಾಟಿಸಿದ ಸಿಎಂ ಪಿಣರಾಯಿ ವಿಜಯನ್

- Advertisement -
- Advertisement -

ರಾಜ್ಯ ಸರ್ಕಾರದ ಒಡೆತನದ ದೇಶದ ಮೊದಲ ಆನ್‌ಲೈನ್ ಟ್ಯಾಕ್ಸಿ ಸೇವೆ ‘ಕೇರಳ ಸವಾರಿ’ಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಉದ್ಘಾಟಿಸಿದ್ದಾರೆ. ‘ಕೇರಳ ಸವಾರಿ’ ಪ್ರಯಾಣಿಕರಿಗೆ ನ್ಯಾಯಯುತ ಮತ್ತು ಯೋಗ್ಯ ಸೇವೆಯನ್ನು ಮತ್ತು ಆಟೋ ಟ್ಯಾಕ್ಸಿ ಕಾರ್ಮಿಕರಿಗೆ ನ್ಯಾಯಯುತ ಸಂಭಾವನೆಯನ್ನು ಖಾತ್ರಿಗೊಳಿಸುತ್ತದೆ ಎಂದು ಸರ್ಕಾರ ಹೇಳಿದೆ. ರಾಜ್ಯದ ಕಾರ್ಮಿಕ ಇಲಾಖೆಯ ನೇತೃತ್ವದಲ್ಲಿ ಮೋಟಾರು ಕಾರ್ಮಿಕರ ಕಲ್ಯಾಣ ಮಂಡಳಿಯು ಈ ಸೇವೆಯನ್ನು ಪ್ರಾರಂಭಿಸಿದೆ. ಕೇರಳ ಸವಾರಿ ಸಾರ್ವಜನಿಕರಿಗೆ ಸರ್ಕಾರಿ ಅನುಮೋದಿತ ದರದಲ್ಲಿ ಸುರಕ್ಷಿತ ಪ್ರಯಾಣವನ್ನು ಖಚಿತಪಡಿಸುತ್ತದೆ ಸರ್ಕಾರ ಹೇಳಿದೆ.

ಇತರ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಂತೆ ಕೇರಳ ಸವಾರಿ ದರಗಳಲ್ಲಿ ಯಾವುದೇ ಏರಿಳಿತ ಇರುವುದಿಲ್ಲ. ಇತರ ಆನ್‌ಲೈನ್ ಟ್ಯಾಕ್ಸಿ ಕಂಪೆನಿಗಳು ಜನರು ಹೆಚ್ಚಾಗಿ ಓಡಾಡುವ (ಪೀಕ್ ಅವರ್‌ನಲ್ಲಿ) ಸಮಯದಲ್ಲಿ ಸೇವೆಗಳ ಶುಲ್ಕವನ್ನು ಒಂದೂವರೆ ಪಟ್ಟು ಹೆಚ್ಚಿಸುತ್ತವೆ. ಆದರೆ ಇದರಿಂದ ಪ್ರಯಾಣಿಕರಿಗಾಗಲಿ, ಡ್ರೈವರ್‌ಗಳಿಗೆ ಯಾವುದೆ ಪ್ರಯೋಜನವಾಗುವುದಿಲ್ಲ. ಕೇರಳ ಸವಾರಿಯು ಸರ್ಕಾರ ನಿಗದಿಪಡಿಸಿದ ದರಕ್ಕಿಂತ 8% ಸೇವಾ ಶುಲ್ಕವನ್ನು ಮಾತ್ರ ವಿಧಿಸುತ್ತದೆ. ಇತರೆ ಆನ್‌ಲೈನ್ ಟ್ಯಾಕ್ಸಿ ಕಂಪೆನಿಗಳ ಸೇವೆಗಳಲ್ಲಿ ಇದು 20%ದಿಂದ 30ರಷ್ಟಿರುತ್ತದೆ. ಈ ಯೋಜನೆಯ ಅನುಷ್ಠಾನಕ್ಕೆ ಮತ್ತು ಪ್ರಯಾಣಿಕರಿಗೆ ಮತ್ತು ಚಾಲಕರಿಗೆ ಪ್ರಚಾರದ ಪ್ರೋತ್ಸಾಹಕ್ಕಾಗಿ ಸೇವಾ ಶುಲ್ಕವಾಗಿ ಸ್ವೀಕರಿಸಿದ ಮೊತ್ತವನ್ನು ಬಳಸಲು ನಿರ್ಧರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇರಳ ಸವಾರಿಯು ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರಿಗೆ ಸುರಕ್ಷಿತ ಮತ್ತು ವಿಶ್ವಾಸಾರ್ಹ ಆನ್‌ಲೈನ್ ಸೇವೆಯಾಗಲಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಅಪ್ಲಿಕೇಶನ್ ವಿನ್ಯಾಸ ಮತ್ತು ಚಾಲಕ ನೋಂದಣಿಯಲ್ಲಿ ಈ ಪರಿಗಣನೆಗೆ ಪ್ರಾಮುಖ್ಯತೆ ನೀಡಲಾಗಿದೆ. ಯೋಜನೆಗೆ ಸೇರುವ ಚಾಲಕರಿಗೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ಕಡ್ಡಾಯವಾಗಿದ್ದು, ಸೂಕ್ತ ತರಬೇತಿಯನ್ನೂ ನೀಡಲಾಗುತ್ತದೆ.

ಅಪ್ಲಿಕೇಶನ್‌ನಲ್ಲಿ ‘ಪ್ಯಾನಿಕ್ ಬಟನ್’ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಕಾರು ಅಪಘಾತದ ಸಂದರ್ಭದಲ್ಲಿ ಅಥವಾ ಯಾವುದೇ ಅಪಾಯದ ಸಂದರ್ಭದಲ್ಲಿ ಈ ಗುಂಡಿಯನ್ನು ಒತ್ತಬಹುದು. ಇದು ಸಂಪೂರ್ಣವಾಗಿ ಖಾಸಗಿಯಾಗಿ ಇರಲಿದ್ದು, ಚಾಲಕ ಪ್ಯಾನಿಕ್ ಬಟನ್ ಒತ್ತಿದರೆ ಪ್ರಯಾಣಿಕರಿಗೆ ತಿಳಿಯುವುದಿಲ್ಲ ಅಥವಾ ಪ್ರಯಾಣಿಕರು ಪ್ಯಾನಿಕ್ ಬಟನ್ ಒತ್ತಿದರೆ ಚಾಲಕನಿಗೆ ತಿಳಿಯುವುದಿಲ್ಲ. ಈ ಗುಂಡಿಯನ್ನು ಒತ್ತಿದಾಗ, ಪೊಲೀಸ್, ಅಗ್ನಿಶಾಮಕ ದಳ ಮತ್ತು ಮೋಟಾರು ವಾಹನ ಇಲಾಖೆಗಳನ್ನು ಆಯ್ಕೆ ಮಾಡಬಹುದಾಗಿದೆ. ಒಂದು ವೇಳೆ ಯಾವುದನ್ನೂ ಆಯ್ಕೆ ಮಾಡಲು ಸಾಧ್ಯವಾಗದಂತಹ ಅಪಾಯಕಾರಿ ಪರಿಸ್ಥಿತಿಯಲ್ಲಿದ್ದರೆ, ಬಟನ್ ಒತ್ತಿದರೆ ನೇರವಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಸಂಪರ್ಕ ಪಡೆಯುವಂತೆ ಅಪ್ಲಿಕೇಷನ್ ಅನ್ನು ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಕೇರಳದ ಎಡರಂಗ ಸರ್ಕಾರ ಉರುಳಿಸಲು ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಬಳಸುತ್ತಿದೆ: ಕೊಡಿಯೇರಿ ಬಾಲಕೃಷ್ಣನ್ ಆರೋಪ

ಸಬ್ಸಿಡಿ ದರದಲ್ಲಿ ವಾಹನಗಳಿಗೂ ಜಿಪಿಎಸ್ ಅಳವಡಿಸಲು ನಿರ್ಧರಿಸಲಾಗಿದೆ. ಇದನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು ಎಂದು ಸರ್ಕಾರ ಹೇಳಿದೆ. ಸೇವೆಗಾಗಿ 24 ಗಂಟೆಗಳ ಕಾಲ್ ಸೆಂಟರ್ ಸಿದ್ಧಪಡಿಸಲಾಗಿದ್ದು, ಮೋಟಾರು ಕಾರ್ಮಿಕರ ಕಲ್ಯಾಣ ಮಂಡಳಿಯ ಜಿಲ್ಲಾ ಕಚೇರಿಯಲ್ಲಿ ಅತ್ಯಾಧುನಿಕ ಕಾಲ್ ಸೆಂಟರ್ ಕಾರ್ಯನಿರ್ವಹಿಸುತ್ತಿದೆ.

ಕಾಲ್ ಸೆಂಟರ್ ಸೇವೆಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸುವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಮೊದಲ ಹಂತದ ಯೋಜನೆಯನ್ನು ತಿರುವನಂತಪುರಂ ನಗರದಲ್ಲಿ ಜಾರಿಗೊಳಿಸಲಾಗಿದೆ. ಮೊದಲ ಹಂತದ ಮೌಲ್ಯಮಾಪನದ ನಂತರ ಯೋಜನೆಯನ್ನು ಸಂಪೂರ್ಣ ರಾಜ್ಯದಲ್ಲಿ ದೋಷರಹಿತ ರೀತಿಯಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಸರ್ಕಾರ ಹೇಳಿದೆ. ಮುಂದಿನ ಒಂದು ತಿಂಗಳೊಳಗೆ ಕೊಲ್ಲಂ, ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್ ಮತ್ತು ಕಣ್ಣೂರು ಪುರಸಭೆಯ ವ್ಯಾಪ್ತಿಯನ್ನು ತಲುಪಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...