Homeಮುಖಪುಟ‘ಕೇರಳ ಸವಾರಿ’ - ದೇಶದ ಮೊದಲ ಸರ್ಕಾರಿ ಸ್ವಾಮ್ಯದ ಆನ್‌ಲೈನ್ ಟ್ಯಾಕ್ಸಿ ಸೇವೆ ಉದ್ಘಾಟಿಸಿದ ಸಿಎಂ...

‘ಕೇರಳ ಸವಾರಿ’ – ದೇಶದ ಮೊದಲ ಸರ್ಕಾರಿ ಸ್ವಾಮ್ಯದ ಆನ್‌ಲೈನ್ ಟ್ಯಾಕ್ಸಿ ಸೇವೆ ಉದ್ಘಾಟಿಸಿದ ಸಿಎಂ ಪಿಣರಾಯಿ ವಿಜಯನ್

- Advertisement -
- Advertisement -

ರಾಜ್ಯ ಸರ್ಕಾರದ ಒಡೆತನದ ದೇಶದ ಮೊದಲ ಆನ್‌ಲೈನ್ ಟ್ಯಾಕ್ಸಿ ಸೇವೆ ‘ಕೇರಳ ಸವಾರಿ’ಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಉದ್ಘಾಟಿಸಿದ್ದಾರೆ. ‘ಕೇರಳ ಸವಾರಿ’ ಪ್ರಯಾಣಿಕರಿಗೆ ನ್ಯಾಯಯುತ ಮತ್ತು ಯೋಗ್ಯ ಸೇವೆಯನ್ನು ಮತ್ತು ಆಟೋ ಟ್ಯಾಕ್ಸಿ ಕಾರ್ಮಿಕರಿಗೆ ನ್ಯಾಯಯುತ ಸಂಭಾವನೆಯನ್ನು ಖಾತ್ರಿಗೊಳಿಸುತ್ತದೆ ಎಂದು ಸರ್ಕಾರ ಹೇಳಿದೆ. ರಾಜ್ಯದ ಕಾರ್ಮಿಕ ಇಲಾಖೆಯ ನೇತೃತ್ವದಲ್ಲಿ ಮೋಟಾರು ಕಾರ್ಮಿಕರ ಕಲ್ಯಾಣ ಮಂಡಳಿಯು ಈ ಸೇವೆಯನ್ನು ಪ್ರಾರಂಭಿಸಿದೆ. ಕೇರಳ ಸವಾರಿ ಸಾರ್ವಜನಿಕರಿಗೆ ಸರ್ಕಾರಿ ಅನುಮೋದಿತ ದರದಲ್ಲಿ ಸುರಕ್ಷಿತ ಪ್ರಯಾಣವನ್ನು ಖಚಿತಪಡಿಸುತ್ತದೆ ಸರ್ಕಾರ ಹೇಳಿದೆ.

ಇತರ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಂತೆ ಕೇರಳ ಸವಾರಿ ದರಗಳಲ್ಲಿ ಯಾವುದೇ ಏರಿಳಿತ ಇರುವುದಿಲ್ಲ. ಇತರ ಆನ್‌ಲೈನ್ ಟ್ಯಾಕ್ಸಿ ಕಂಪೆನಿಗಳು ಜನರು ಹೆಚ್ಚಾಗಿ ಓಡಾಡುವ (ಪೀಕ್ ಅವರ್‌ನಲ್ಲಿ) ಸಮಯದಲ್ಲಿ ಸೇವೆಗಳ ಶುಲ್ಕವನ್ನು ಒಂದೂವರೆ ಪಟ್ಟು ಹೆಚ್ಚಿಸುತ್ತವೆ. ಆದರೆ ಇದರಿಂದ ಪ್ರಯಾಣಿಕರಿಗಾಗಲಿ, ಡ್ರೈವರ್‌ಗಳಿಗೆ ಯಾವುದೆ ಪ್ರಯೋಜನವಾಗುವುದಿಲ್ಲ. ಕೇರಳ ಸವಾರಿಯು ಸರ್ಕಾರ ನಿಗದಿಪಡಿಸಿದ ದರಕ್ಕಿಂತ 8% ಸೇವಾ ಶುಲ್ಕವನ್ನು ಮಾತ್ರ ವಿಧಿಸುತ್ತದೆ. ಇತರೆ ಆನ್‌ಲೈನ್ ಟ್ಯಾಕ್ಸಿ ಕಂಪೆನಿಗಳ ಸೇವೆಗಳಲ್ಲಿ ಇದು 20%ದಿಂದ 30ರಷ್ಟಿರುತ್ತದೆ. ಈ ಯೋಜನೆಯ ಅನುಷ್ಠಾನಕ್ಕೆ ಮತ್ತು ಪ್ರಯಾಣಿಕರಿಗೆ ಮತ್ತು ಚಾಲಕರಿಗೆ ಪ್ರಚಾರದ ಪ್ರೋತ್ಸಾಹಕ್ಕಾಗಿ ಸೇವಾ ಶುಲ್ಕವಾಗಿ ಸ್ವೀಕರಿಸಿದ ಮೊತ್ತವನ್ನು ಬಳಸಲು ನಿರ್ಧರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇರಳ ಸವಾರಿಯು ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರಿಗೆ ಸುರಕ್ಷಿತ ಮತ್ತು ವಿಶ್ವಾಸಾರ್ಹ ಆನ್‌ಲೈನ್ ಸೇವೆಯಾಗಲಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಅಪ್ಲಿಕೇಶನ್ ವಿನ್ಯಾಸ ಮತ್ತು ಚಾಲಕ ನೋಂದಣಿಯಲ್ಲಿ ಈ ಪರಿಗಣನೆಗೆ ಪ್ರಾಮುಖ್ಯತೆ ನೀಡಲಾಗಿದೆ. ಯೋಜನೆಗೆ ಸೇರುವ ಚಾಲಕರಿಗೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ಕಡ್ಡಾಯವಾಗಿದ್ದು, ಸೂಕ್ತ ತರಬೇತಿಯನ್ನೂ ನೀಡಲಾಗುತ್ತದೆ.

ಅಪ್ಲಿಕೇಶನ್‌ನಲ್ಲಿ ‘ಪ್ಯಾನಿಕ್ ಬಟನ್’ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಕಾರು ಅಪಘಾತದ ಸಂದರ್ಭದಲ್ಲಿ ಅಥವಾ ಯಾವುದೇ ಅಪಾಯದ ಸಂದರ್ಭದಲ್ಲಿ ಈ ಗುಂಡಿಯನ್ನು ಒತ್ತಬಹುದು. ಇದು ಸಂಪೂರ್ಣವಾಗಿ ಖಾಸಗಿಯಾಗಿ ಇರಲಿದ್ದು, ಚಾಲಕ ಪ್ಯಾನಿಕ್ ಬಟನ್ ಒತ್ತಿದರೆ ಪ್ರಯಾಣಿಕರಿಗೆ ತಿಳಿಯುವುದಿಲ್ಲ ಅಥವಾ ಪ್ರಯಾಣಿಕರು ಪ್ಯಾನಿಕ್ ಬಟನ್ ಒತ್ತಿದರೆ ಚಾಲಕನಿಗೆ ತಿಳಿಯುವುದಿಲ್ಲ. ಈ ಗುಂಡಿಯನ್ನು ಒತ್ತಿದಾಗ, ಪೊಲೀಸ್, ಅಗ್ನಿಶಾಮಕ ದಳ ಮತ್ತು ಮೋಟಾರು ವಾಹನ ಇಲಾಖೆಗಳನ್ನು ಆಯ್ಕೆ ಮಾಡಬಹುದಾಗಿದೆ. ಒಂದು ವೇಳೆ ಯಾವುದನ್ನೂ ಆಯ್ಕೆ ಮಾಡಲು ಸಾಧ್ಯವಾಗದಂತಹ ಅಪಾಯಕಾರಿ ಪರಿಸ್ಥಿತಿಯಲ್ಲಿದ್ದರೆ, ಬಟನ್ ಒತ್ತಿದರೆ ನೇರವಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಸಂಪರ್ಕ ಪಡೆಯುವಂತೆ ಅಪ್ಲಿಕೇಷನ್ ಅನ್ನು ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಕೇರಳದ ಎಡರಂಗ ಸರ್ಕಾರ ಉರುಳಿಸಲು ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಬಳಸುತ್ತಿದೆ: ಕೊಡಿಯೇರಿ ಬಾಲಕೃಷ್ಣನ್ ಆರೋಪ

ಸಬ್ಸಿಡಿ ದರದಲ್ಲಿ ವಾಹನಗಳಿಗೂ ಜಿಪಿಎಸ್ ಅಳವಡಿಸಲು ನಿರ್ಧರಿಸಲಾಗಿದೆ. ಇದನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು ಎಂದು ಸರ್ಕಾರ ಹೇಳಿದೆ. ಸೇವೆಗಾಗಿ 24 ಗಂಟೆಗಳ ಕಾಲ್ ಸೆಂಟರ್ ಸಿದ್ಧಪಡಿಸಲಾಗಿದ್ದು, ಮೋಟಾರು ಕಾರ್ಮಿಕರ ಕಲ್ಯಾಣ ಮಂಡಳಿಯ ಜಿಲ್ಲಾ ಕಚೇರಿಯಲ್ಲಿ ಅತ್ಯಾಧುನಿಕ ಕಾಲ್ ಸೆಂಟರ್ ಕಾರ್ಯನಿರ್ವಹಿಸುತ್ತಿದೆ.

ಕಾಲ್ ಸೆಂಟರ್ ಸೇವೆಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸುವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಮೊದಲ ಹಂತದ ಯೋಜನೆಯನ್ನು ತಿರುವನಂತಪುರಂ ನಗರದಲ್ಲಿ ಜಾರಿಗೊಳಿಸಲಾಗಿದೆ. ಮೊದಲ ಹಂತದ ಮೌಲ್ಯಮಾಪನದ ನಂತರ ಯೋಜನೆಯನ್ನು ಸಂಪೂರ್ಣ ರಾಜ್ಯದಲ್ಲಿ ದೋಷರಹಿತ ರೀತಿಯಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಸರ್ಕಾರ ಹೇಳಿದೆ. ಮುಂದಿನ ಒಂದು ತಿಂಗಳೊಳಗೆ ಕೊಲ್ಲಂ, ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್ ಮತ್ತು ಕಣ್ಣೂರು ಪುರಸಭೆಯ ವ್ಯಾಪ್ತಿಯನ್ನು ತಲುಪಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...