Homeಮುಖಪುಟಕೇರಳ | ಮತ್ತೊಬ್ಬ ಹಿರಿಯ ಸಿಪಿಐ(ಎಂ) ನಾಯಕ ನಿರ್ಗಮನ; ಬಿಜೆಪಿ ಸೇರುವ ಸಾಧ್ಯತೆ

ಕೇರಳ | ಮತ್ತೊಬ್ಬ ಹಿರಿಯ ಸಿಪಿಐ(ಎಂ) ನಾಯಕ ನಿರ್ಗಮನ; ಬಿಜೆಪಿ ಸೇರುವ ಸಾಧ್ಯತೆ

- Advertisement -
- Advertisement -

ಕೇರಳದ ಆಲಪ್ಪುಳದ ಸಿಪಿಐ(ಎಂ) ನಾಯಕರೊಬ್ಬರು ಪಕ್ಷ ತೊರೆದು ಬಿಜೆಪಿಗೆ ಸೇರಿದ ಕೆಲವೇ ದಿನಗಳಲ್ಲಿ, ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಮಂಗಳವಾರ ಪಕ್ಷ ತೊರೆಯಲಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಪಕ್ಷದ ನಾಯಕ ಮಧು ಮುಲ್ಲಶ್ಶೇರಿ ಅವರು ತಾನು ಪಕ್ಷದಿಂದ ನಿರ್ಗಮಿಸುವುದಾಗಿ ಬೆಳಿಗ್ಗೆ ಘೋಷಿಸುತ್ತಿದ್ದಂತೆ, ಸಿಪಿಐ(ಎಂ) ಅವರನ್ನು ತನ್ನ ಪ್ರಾಥಮಿಕ ಸದಸ್ಯತ್ವದಿಂದ ಕಿತ್ತುಹಾಕಿದೆ. ಕೇರಳ

ಪಕ್ಷದ ತತ್ವಗಳಿಗೆ ವ್ಯತಿರಿಕ್ತವಾಗಿ ವರ್ತಿಸಿ ಸಾರ್ವಜನಿಕ ವಲಯದಲ್ಲಿ ಮಾನಹಾನಿ ಮಾಡಿದ ಕಾರಣ ಅವರನ್ನು ತೆಗೆದುಹಾಕಲಾಗುತ್ತಿದೆ ಎಂದು ಸಿಪಿಐ(ಎಂ) ಹೇಳಿದೆ. ಸಿಪಿಐ(ಎಂ)ನ ಮಾಜಿ ಪ್ರದೇಶ ಕಾರ್ಯದರ್ಶಿಯಾಗಿರುವ ಮತ್ತು 42 ವರ್ಷಗಳಿಂದ ಪಕ್ಷದ ಸದಸ್ಯರಾಗಿರುವ ಮಧು ಅವರು, ತನ್ನ ನಿರ್ಗಮನಕ್ಕೆ ಸ್ಥಳೀಯ ಶಾಸಕ ಮತ್ತು ಜಿಲ್ಲಾ ಸಮಿತಿ ಕಾರ್ಯದರ್ಶಿ ಆಗಿರುವ ವಿ. ಜಾಯ್ ಅವರು ಕಾರಣ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜಿಲ್ಲಾ ಕಾರ್ಯದರ್ಶಿ ವಿ.ಜಾಯ್ ಅವರೊಂದಿಗೆ ಕೆಲಸ ಮಾಡುವುದು ಕಷ್ಟಕರವಾದ ಕಾರಣ ನಾನು 42 ವರ್ಷಗಳಿಂದ ಕೆಲಸ ಮಾಡಿದ ಪಕ್ಷವನ್ನು ತೊರೆಯಲು ನಿರ್ಧರಿಸಿದ್ದೇನೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿಯ ರಾಜ್ಯ ನಾಯಕತ್ವ ನನ್ನನ್ನು ಸಂಪರ್ಕಿಸಿದ್ದು, ಯಾವ ಪಕ್ಷಕ್ಕೆ ಸೇರುತ್ತೇನೆ ಎಂಬ ನಿರ್ಧಾರವನ್ನು ಬೆಳಗ್ಗೆ 11 ಗಂಟೆಗೆ ಪ್ರಕಟಿಸುವುದಾಗಿ ಮಧು ಮುಲ್ಲಸ್ಸೆರಿ ಟಿವಿ ಚಾನೆಲ್‌ಗೆ ತಿಳಿಸಿದ್ದಾರೆ. ಕೇರಳ

ಬಿಜೆಪಿಯ ತಿರುವನಂತಪುರಂ ಜಿಲ್ಲಾಧ್ಯಕ್ಷ ವಿ.ವಿ. ರಾಜೇಶ್ ಮತ್ತು ಪಕ್ಷದ ಇತರ ಮುಖಂಡರು ಮಧು ಅವರನ್ನು ಅವರ ನಿವಾಸದಲ್ಲಿ ಬೆಳಗ್ಗೆ ಭೇಟಿ ಮಾಡಿದ್ದಾಗಿ ವರದಿಯಾಗಿದೆ. ಪಕ್ಷದ ಜಿಲ್ಲಾ ಕಾರ್ಯದರ್ಶಿ ಜಾಯ್ ಅವರು, ತಮ್ಮ ಹಿತಾಸಕ್ತಿ ಮತ್ತು ಪಕ್ಷದೊಳಗಿನ ಸ್ಥಾನಗಳ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ ಮತ್ತು ಸಿಪಿಐ(ಎಂ)ನ ಜಿಲ್ಲಾ ಸಮಿತಿಯಲ್ಲಿ ಒಡಕು ಮೂಡಿಸುತ್ತಿದ್ದಾರೆ ಎಂದು ಮಧು ಆರೋಪಿಸಿದ್ದಾರೆ. ಜೊತೆಗೆ, ಅವರು ತನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ನವೆಂಬರ್ 30 ರಂದು, ಸಿಪಿಐ(ಎಂ) ಆಲಪ್ಪುಳ ಪ್ರದೇಶ ಸಮಿತಿಯ ಸದಸ್ಯ ಮತ್ತು ಕೃಷ್ಣಾಪುರಂ ವಿಭಾಗವನ್ನು ಪ್ರತಿನಿಧಿಸುವ ಜಿಲ್ಲಾ ಪಂಚಾಯತ್ ಸದಸ್ಯ ಬಿಪಿನ್ ಸಿ ಬಾಬು ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಬಿಜೆಪಿ ಸೇರಿದ ನಂತರ ಸಿಪಿಐ(ಎಂ) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಬಿಪಿನ್, ಪಕ್ಷವು ತನ್ನ ಜಾತ್ಯತೀತ ಗುಣವನ್ನು ಕಳೆದುಕೊಂಡಿದೆ ಎಂದು ಹೇಳಿದ್ದರು. “ಕೆಲವು ಕೋಮುವಾದಿ ಶಕ್ತಿಗಳು ಈಗ ಪಕ್ಷವನ್ನು ಮುನ್ನಡೆಸುತ್ತಿದ್ದು, ಪಕ್ಷವು ಈಗ ನಿರ್ದಿಷ್ಟ ವರ್ಗದ ಮುಖವಾಗಿದೆ” ಎಂದು ಅವರು ಹೇಳಿದ್ದರು.

ಹಿರಿಯ ಸಿಪಿಐ(ಎಂ) ನಾಯಕ ಜಿ. ಸುಧಾಕರನ್ ಅವರನ್ನು ಬದಿಗಿರಿಸಿರುವುದು ಪಕ್ಷದೊಳಗೆ ಟೀಕೆಗೆ ಗುರಿಯಾಗಿದೆ. ಜೊತೆಗೆ, ಕೊಲ್ಲಂ ಜಿಲ್ಲೆಯ ಕರುನಾಗಪಲ್ಲಿಯಂತಹ ಕೆಲವು ಸ್ಥಳಗಳಲ್ಲಿ ಪಕ್ಷದ ಸ್ಥಳೀಯ ಮತ್ತು ಪ್ರದೇಶ ಸಮ್ಮೇಳನಗಳಲ್ಲಿ ಬಹಿರಂಗ ಪ್ರತಿಭಟನೆಗಳು ನಡೆದಿದೆ ಎಂದು ಪಕ್ಷದ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...