Homeಮುಖಪುಟತೀವ್ರ ವಿರೋಧದ ನಡುವೆಯೂ ಕೇಂದ್ರದ 'ಪಿಎಂಶ್ರೀ' ಯೋಜನೆಗೆ ಸಹಿ ಹಾಕಿದ ಕೇರಳ ಸರ್ಕಾರ

ತೀವ್ರ ವಿರೋಧದ ನಡುವೆಯೂ ಕೇಂದ್ರದ ‘ಪಿಎಂಶ್ರೀ’ ಯೋಜನೆಗೆ ಸಹಿ ಹಾಕಿದ ಕೇರಳ ಸರ್ಕಾರ

- Advertisement -
- Advertisement -

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ರೂಪಿಸಲಾಗಿದೆ ಎನ್ನಲಾದ ರಾಷ್ಟ್ರೀಯ ಉಪಕ್ರಮ, ‘ಪಿಎಂಶ್ರೀ’ (Prime Minister’s Schools for Rising India scheme) ಯೋಜನೆಯ ತಿಳುವಳಿಕೆ ಪತ್ರಕ್ಕೆ (ಎಂಒಯು) ಕೇರಳ ಸರ್ಕಾರ ಗುರುವಾರ (ಅ.24) ಸಹಿ ಹಾಕಿದೆ.

ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ-ಸಿಪಿಐ(ಎಂ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಸರ್ಕಾರದ ಎರಡನೇ ಅತಿದೊಡ್ಡ ಮಿತ್ರಪಕ್ಷವಾದ ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ತೀವ್ರ ವಿರೋಧದ ನಡುವೆಯೂ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ಶಿಕ್ಷಣ ಸಚಿವಾಲಯದೊಂದಿಗಿನ ತಿಳುವಳಿಕೆ ಪತ್ರಕ್ಕೆ ಕೇರಳ ಸರ್ಕಾರದ ಪರವಾಗಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಸಹಿ ಹಾಕಿದ್ದಾರೆ.

ಕೇಂದ್ರ ಸರ್ಕಾರದ ವಿಶಾಲ ಶಿಕ್ಷಣ ಸುಧಾರಣಾ ಕಾರ್ಯಸೂಚಿಯ ಭಾಗವೆಂದು ಹೇಳಲಾಗುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರ ಹಲವಾರು ನಿಬಂಧನೆಗಳಿಗೆ ಆಕ್ಷೇಪಣೆಗಳನ್ನು ಉಲ್ಲೇಖಿಸಿ ಎಲ್‌ಡಿಎಫ್ ಸರ್ಕಾರವು ಈ ಹಿಂದೆ ‘ಪಿಎಂಶ್ರೀ’ ಯೋಜನೆಯಲ್ಲಿ ಭಾಗವಹಿಸದಿರಲು ನಿರ್ಧರಿಸಿತ್ತು. ಸರ್ಕಾರ ಈ ನಿಲುವು ರಾಜ್ಯಕ್ಕೆ ಕೇಂದ್ರ ಶಿಕ್ಷಣ ನಿಧಿ ಪಡೆಯಲು ಅಡ್ಡಿಯುಂಟುಮಾಡಿದೆ. ಹಾಗಾಗಿ ಸರ್ಕಾರ ನಿರ್ಧಾರ ಬದಲಿಸಿದೆ ಎಂದು ವರದಿಯಾಗಿದೆ.

‘ಪಿಎಂಶ್ರೀ’ ಯೋಜನೆಯನ್ನು ಒಪ್ಪಿಕೊಳ್ಳದ ಕಾರಣ ಕೇಂದ್ರ ಸರ್ಕಾರವು ಸಮಗ್ರ ಶಿಕ್ಷಾ ಕೇರಳ (ಎಸ್‌ಎಸ್‌ಕೆ) ಕಾರ್ಯಕ್ರಮದಡಿ ನೀಡಬೇಕಿದ್ದ ಸುಮಾರು 1,500 ಕೋಟಿ ರೂ. ಅನುದಾನವನ್ನು ತಡೆಹಿಡಿದಿದೆ. ಈಗ ಯೋಜನೆಗೆ ಸಹಿ ಹಾಕಿರುವ ಹಿನ್ನೆಲೆ, ಅನುದಾನ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಮಾಧ್ಯಮಗಳೊಂದಿಗೆ ಮಾತನಾಡಿರು ಕೇರಳದ ಪ್ರಾಥಮಿಕ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ, “ಸರ್ಕಾರದ ನಿರ್ಧಾರವು ರಾಜ್ಯಕ್ಕೆ ಕೇಂದ್ರದಿಂದ ಗಣನೀಯ ನಿಧಿಯನ್ನು ಪಡೆಯಲು ಸಹಾಯ ಮಾಡುತ್ತದೆ. ಕೇಂದ್ರ ಬಿಡುಗಡೆ ಮಾಡುವ ಅನುದಾನದಲ್ಲಿ ವಿವಿಧ ಶಿಕ್ಷಣ ಯೋಜನೆಗಳ ಅಡಿಯಲ್ಲಿ ನೀಡಲು ಬಾಕಿ ಇರುವ ಸರಿಸುಮಾರು 1,500 ಕೋಟಿ ರೂ. ಸೇರಿವೆ ಎಂದು ಹೇಳಿದ್ದಾರೆ.

ಈ ನಿಧಿಯು ಪಠ್ಯಪುಸ್ತಕ ಮುದ್ರಣ, ಪ್ರಶ್ನೆಪತ್ರಿಕೆ ತಯಾರಿಕೆ, ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ) ಮತ್ತು ಕರಾವಳಿಯ ಸಮುದಾಯಗಳ ವಿದ್ಯಾರ್ಥಿಗಳಿಗೆ ಪ್ರಯಾಣ, ಊಟ ಮತ್ತು ಹಾಸ್ಟೆಲ್ ಸೌಲಭ್ಯಗಳು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸಹಾಯ ಮಾಡುತ್ತದೆ ಎಂದಿದ್ದಾರೆ.

ಆದಾಗ್ಯೂ, ಕ್ಯಾಬಿನೆಟ್ ಮಟ್ಟದ ಪೂರ್ವ ಚರ್ಚೆಗಳಿಲ್ಲದೆ ಸರ್ಕಾರ ನಿರ್ಧಾರ ತೆಗೆದುಕೊಂಡಿರುವುದನ್ನು ಸಿಪಿಐ ವಿರೋಧಿಸಿದೆ. ಈ ಕುರಿತು ಮಾತನಾಡಿರುವ ಸಿಪಿಐ ರಾಜ್ಯ ಕಾರ್ಯದರ್ಶಿ ಬಿನೋಯ್ ವಿಶ್ವಂ, “ನಮ್ಮ ಪಕ್ಷವು ಎನ್ಇಪಿಯನ್ನು ವಿರೋಧಿಸುತ್ತಲೇ ಬಂದಿದೆ. ಎನ್‌ಇಪಿ ಆರ್‌ಎಸ್‌ಎಸ್‌ನ ಅಜೆಂಡಾ” ಎಂದಿದ್ದಾರೆ. ಸರ್ಕಾರ ಎಂಒಯುಗೆ ಸಹಿ ಹಾಕಿರುವ ಬಗ್ಗೆ ಕೇಳಿದ್ದಕ್ಕೆ, “ನಮ್ಮ ಪಕ್ಷ ಸದ್ಯಕ್ಕೆ ಏನೂ ಹೇಳುವುದಿಲ್ಲ” ಎಂದಿದ್ದಾರೆ.

“ಪಿಎಂ ಶ್ರೀ’ ಯೋಜನೆಗೆ ಸಹಿ ಹಾಕುವ ಮೂಲಕ ಪಿಣರಾಯಿ ಸರ್ಕಾರವು ಸಾವರ್ಕರ್ ಮಾಡಿದ್ದಕ್ಕಿಂತ ದೊಡ್ಡ ದ್ರೋಹವನ್ನು ಮಾಡಿದೆ. ಕೇರಳದ ಶಿಕ್ಷಣ ಕ್ಷೇತ್ರವನ್ನು ಆರ್‌ಎಸ್‌ಎಸ್‌ಗೆ ಮಾರಿದ ಪಿಣರಾಯಿ ಅವರಿಗೂ ಸಾವರ್ಕರ್‌ಗೂ ಏನು ವ್ಯತ್ಯಾಸ?” ಎಂದು ಕಾಂಗ್ರೆಸ್‌ನ ವಿದ್ಯಾರ್ಥಿ ವಿಭಾಗವಾದ ಕೇರಳ ವಿದ್ಯಾರ್ಥಿ ಒಕ್ಕೂಟದ (ಕೆಎಸ್‌ಯು) ರಾಜ್ಯ ಅಧ್ಯಕ್ಷ ಅಲೋಶಿಯಸ್ ಕ್ಸೇವಿಯರ್ ಪ್ರಶ್ನಿಸಿದ್ದಾರೆ.

“ಮುಂಬರುವ ದಿನಗಳಲ್ಲಿ, ಕೇರಳದ ಕಾಲೇಜುಗಳಲ್ಲಿ ಭವಿಷ್ಯದ ಪೀಳಿಗೆಗಳು ನಾಥೂರಾಮ್ ವಿನಾಯಕ್ ಗೋಡ್ಸೆ ಮತ್ತು ಗೋಲ್ವಾಲ್ಕರ್ ಅವರನ್ನು ಭಾರತೀಯ ಸ್ವಾತಂತ್ರ್ಯ ಹೋರಾಟಗಾರರೆಂದು ಅಧ್ಯಯನ ಮಾಡುವಂತೆ ಮಾಡಿದರೆ, ಅದಕ್ಕೆ ಸಿಪಿಎಂ ಮತ್ತು ‘ಪಿಣರಾಯ್-ಮೋದಿ’ ಸರ್ಕಾರ ಹೊಣೆಯಾಗಿರುತ್ತದೆ” ಎಂದು ಕ್ಸೇವಿಯರ್ ಹೇಳಿದ್ದಾರೆ.

ಫ್ರಾಟರ್ನಿಟಿ ಮೂವ್‌ಮೆಂಟ್ ಕೂಡ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದು, ಕೇರಳದ ಶಿಕ್ಷಣ ಕ್ಷೇತ್ರವನ್ನು ಹಿಂದುತ್ವ ಶಕ್ತಿಗಳಿಗೆ ಹಸ್ತಾಂತರಿಸುವ ಯಾವುದೇ ಪ್ರಯತ್ನವನ್ನು ವಿರೋಧಿಸುವುದಾಗಿ ತಿಳಿಸಿದೆ.

“ಕೇರಳದಲ್ಲಿ ಪಿಎಂ ಶ್ರೀ ಯೋಜನೆ ಅಥವಾ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲು ನಾವು ಅನುಮತಿಸುವುದಿಲ್ಲ” ಎಂದಿದೆ.

ತಮಿಳುನಾಡು, ಪಶ್ಚಿಮ ಬಂಗಾಳ ಸೇರಿದಂತೆ ಹಲವು ಬಿಜೆಪಿಯೇತರ ಆಡಳಿತದ ರಾಜ್ಯಗಳು ‘ಪಿಎಂಶ್ರೀ’ ಯೋಜನೆಯನ್ನು ಇದುವರೆಗೆ ಒಪ್ಪಿಕೊಂಡಿಲ್ಲ. ಕೇರಳ ಕೂಡ ಈ ಪಟ್ಟಿಯಲ್ಲಿ ಇತ್ತು. ಆದರೆ, ಕೇರಳ ಈಗ ನಿಲುವು ಬದಲಿಸಿದೆ. ಪಿಎಂಶ್ರೀ ಯೋಜನೆಯು ವಿವಾದಾತ್ಮಕ ಎನ್‌ಇಪಿಯನ್ನು ಒತ್ತಾಯಪೂರ್ವಕವಾಗಿ ಹೇರುವ ಪ್ರಯತ್ನವಾಗಿದೆ ಎಂದು ರಾಜ್ಯಗಳು ಆರೋಪಿಸಿವೆ. ಕೇಂದ್ರ ಸರ್ಕಾರ ಪಿಎಂಶ್ರೀ ಯೋಜನೆಯನ್ನು ಒಪ್ಪಿಕೊಳ್ಳದ ರಾಜ್ಯಗಳ ಶಿಕ್ಷಣ ನಿಧಿಯನ್ನು ತಡೆಹಿಡಿದಿದೆ.

‘ಬಿಜೆಪಿಯಿಂದ ಮುಂಬೈ ರಕ್ಷಿಸಲು ಕೈಜೋಡಿಸಿ..’; ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ ಶಿವಸೇನೆ ಸಂಸದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...