Homeಮುಖಪುಟತೀವ್ರ ವಿರೋಧದ ನಡುವೆಯೂ ಕೇಂದ್ರದ 'ಪಿಎಂಶ್ರೀ' ಯೋಜನೆಗೆ ಸಹಿ ಹಾಕಿದ ಕೇರಳ ಸರ್ಕಾರ

ತೀವ್ರ ವಿರೋಧದ ನಡುವೆಯೂ ಕೇಂದ್ರದ ‘ಪಿಎಂಶ್ರೀ’ ಯೋಜನೆಗೆ ಸಹಿ ಹಾಕಿದ ಕೇರಳ ಸರ್ಕಾರ

- Advertisement -
- Advertisement -

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ರೂಪಿಸಲಾಗಿದೆ ಎನ್ನಲಾದ ರಾಷ್ಟ್ರೀಯ ಉಪಕ್ರಮ, ‘ಪಿಎಂಶ್ರೀ’ (Prime Minister’s Schools for Rising India scheme) ಯೋಜನೆಯ ತಿಳುವಳಿಕೆ ಪತ್ರಕ್ಕೆ (ಎಂಒಯು) ಕೇರಳ ಸರ್ಕಾರ ಗುರುವಾರ (ಅ.24) ಸಹಿ ಹಾಕಿದೆ.

ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ-ಸಿಪಿಐ(ಎಂ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಸರ್ಕಾರದ ಎರಡನೇ ಅತಿದೊಡ್ಡ ಮಿತ್ರಪಕ್ಷವಾದ ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ತೀವ್ರ ವಿರೋಧದ ನಡುವೆಯೂ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ಶಿಕ್ಷಣ ಸಚಿವಾಲಯದೊಂದಿಗಿನ ತಿಳುವಳಿಕೆ ಪತ್ರಕ್ಕೆ ಕೇರಳ ಸರ್ಕಾರದ ಪರವಾಗಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಸಹಿ ಹಾಕಿದ್ದಾರೆ.

ಕೇಂದ್ರ ಸರ್ಕಾರದ ವಿಶಾಲ ಶಿಕ್ಷಣ ಸುಧಾರಣಾ ಕಾರ್ಯಸೂಚಿಯ ಭಾಗವೆಂದು ಹೇಳಲಾಗುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರ ಹಲವಾರು ನಿಬಂಧನೆಗಳಿಗೆ ಆಕ್ಷೇಪಣೆಗಳನ್ನು ಉಲ್ಲೇಖಿಸಿ ಎಲ್‌ಡಿಎಫ್ ಸರ್ಕಾರವು ಈ ಹಿಂದೆ ‘ಪಿಎಂಶ್ರೀ’ ಯೋಜನೆಯಲ್ಲಿ ಭಾಗವಹಿಸದಿರಲು ನಿರ್ಧರಿಸಿತ್ತು. ಸರ್ಕಾರ ಈ ನಿಲುವು ರಾಜ್ಯಕ್ಕೆ ಕೇಂದ್ರ ಶಿಕ್ಷಣ ನಿಧಿ ಪಡೆಯಲು ಅಡ್ಡಿಯುಂಟುಮಾಡಿದೆ. ಹಾಗಾಗಿ ಸರ್ಕಾರ ನಿರ್ಧಾರ ಬದಲಿಸಿದೆ ಎಂದು ವರದಿಯಾಗಿದೆ.

‘ಪಿಎಂಶ್ರೀ’ ಯೋಜನೆಯನ್ನು ಒಪ್ಪಿಕೊಳ್ಳದ ಕಾರಣ ಕೇಂದ್ರ ಸರ್ಕಾರವು ಸಮಗ್ರ ಶಿಕ್ಷಾ ಕೇರಳ (ಎಸ್‌ಎಸ್‌ಕೆ) ಕಾರ್ಯಕ್ರಮದಡಿ ನೀಡಬೇಕಿದ್ದ ಸುಮಾರು 1,500 ಕೋಟಿ ರೂ. ಅನುದಾನವನ್ನು ತಡೆಹಿಡಿದಿದೆ. ಈಗ ಯೋಜನೆಗೆ ಸಹಿ ಹಾಕಿರುವ ಹಿನ್ನೆಲೆ, ಅನುದಾನ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಮಾಧ್ಯಮಗಳೊಂದಿಗೆ ಮಾತನಾಡಿರು ಕೇರಳದ ಪ್ರಾಥಮಿಕ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ, “ಸರ್ಕಾರದ ನಿರ್ಧಾರವು ರಾಜ್ಯಕ್ಕೆ ಕೇಂದ್ರದಿಂದ ಗಣನೀಯ ನಿಧಿಯನ್ನು ಪಡೆಯಲು ಸಹಾಯ ಮಾಡುತ್ತದೆ. ಕೇಂದ್ರ ಬಿಡುಗಡೆ ಮಾಡುವ ಅನುದಾನದಲ್ಲಿ ವಿವಿಧ ಶಿಕ್ಷಣ ಯೋಜನೆಗಳ ಅಡಿಯಲ್ಲಿ ನೀಡಲು ಬಾಕಿ ಇರುವ ಸರಿಸುಮಾರು 1,500 ಕೋಟಿ ರೂ. ಸೇರಿವೆ ಎಂದು ಹೇಳಿದ್ದಾರೆ.

ಈ ನಿಧಿಯು ಪಠ್ಯಪುಸ್ತಕ ಮುದ್ರಣ, ಪ್ರಶ್ನೆಪತ್ರಿಕೆ ತಯಾರಿಕೆ, ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ) ಮತ್ತು ಕರಾವಳಿಯ ಸಮುದಾಯಗಳ ವಿದ್ಯಾರ್ಥಿಗಳಿಗೆ ಪ್ರಯಾಣ, ಊಟ ಮತ್ತು ಹಾಸ್ಟೆಲ್ ಸೌಲಭ್ಯಗಳು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸಹಾಯ ಮಾಡುತ್ತದೆ ಎಂದಿದ್ದಾರೆ.

ಆದಾಗ್ಯೂ, ಕ್ಯಾಬಿನೆಟ್ ಮಟ್ಟದ ಪೂರ್ವ ಚರ್ಚೆಗಳಿಲ್ಲದೆ ಸರ್ಕಾರ ನಿರ್ಧಾರ ತೆಗೆದುಕೊಂಡಿರುವುದನ್ನು ಸಿಪಿಐ ವಿರೋಧಿಸಿದೆ. ಈ ಕುರಿತು ಮಾತನಾಡಿರುವ ಸಿಪಿಐ ರಾಜ್ಯ ಕಾರ್ಯದರ್ಶಿ ಬಿನೋಯ್ ವಿಶ್ವಂ, “ನಮ್ಮ ಪಕ್ಷವು ಎನ್ಇಪಿಯನ್ನು ವಿರೋಧಿಸುತ್ತಲೇ ಬಂದಿದೆ. ಎನ್‌ಇಪಿ ಆರ್‌ಎಸ್‌ಎಸ್‌ನ ಅಜೆಂಡಾ” ಎಂದಿದ್ದಾರೆ. ಸರ್ಕಾರ ಎಂಒಯುಗೆ ಸಹಿ ಹಾಕಿರುವ ಬಗ್ಗೆ ಕೇಳಿದ್ದಕ್ಕೆ, “ನಮ್ಮ ಪಕ್ಷ ಸದ್ಯಕ್ಕೆ ಏನೂ ಹೇಳುವುದಿಲ್ಲ” ಎಂದಿದ್ದಾರೆ.

“ಪಿಎಂ ಶ್ರೀ’ ಯೋಜನೆಗೆ ಸಹಿ ಹಾಕುವ ಮೂಲಕ ಪಿಣರಾಯಿ ಸರ್ಕಾರವು ಸಾವರ್ಕರ್ ಮಾಡಿದ್ದಕ್ಕಿಂತ ದೊಡ್ಡ ದ್ರೋಹವನ್ನು ಮಾಡಿದೆ. ಕೇರಳದ ಶಿಕ್ಷಣ ಕ್ಷೇತ್ರವನ್ನು ಆರ್‌ಎಸ್‌ಎಸ್‌ಗೆ ಮಾರಿದ ಪಿಣರಾಯಿ ಅವರಿಗೂ ಸಾವರ್ಕರ್‌ಗೂ ಏನು ವ್ಯತ್ಯಾಸ?” ಎಂದು ಕಾಂಗ್ರೆಸ್‌ನ ವಿದ್ಯಾರ್ಥಿ ವಿಭಾಗವಾದ ಕೇರಳ ವಿದ್ಯಾರ್ಥಿ ಒಕ್ಕೂಟದ (ಕೆಎಸ್‌ಯು) ರಾಜ್ಯ ಅಧ್ಯಕ್ಷ ಅಲೋಶಿಯಸ್ ಕ್ಸೇವಿಯರ್ ಪ್ರಶ್ನಿಸಿದ್ದಾರೆ.

“ಮುಂಬರುವ ದಿನಗಳಲ್ಲಿ, ಕೇರಳದ ಕಾಲೇಜುಗಳಲ್ಲಿ ಭವಿಷ್ಯದ ಪೀಳಿಗೆಗಳು ನಾಥೂರಾಮ್ ವಿನಾಯಕ್ ಗೋಡ್ಸೆ ಮತ್ತು ಗೋಲ್ವಾಲ್ಕರ್ ಅವರನ್ನು ಭಾರತೀಯ ಸ್ವಾತಂತ್ರ್ಯ ಹೋರಾಟಗಾರರೆಂದು ಅಧ್ಯಯನ ಮಾಡುವಂತೆ ಮಾಡಿದರೆ, ಅದಕ್ಕೆ ಸಿಪಿಎಂ ಮತ್ತು ‘ಪಿಣರಾಯ್-ಮೋದಿ’ ಸರ್ಕಾರ ಹೊಣೆಯಾಗಿರುತ್ತದೆ” ಎಂದು ಕ್ಸೇವಿಯರ್ ಹೇಳಿದ್ದಾರೆ.

ಫ್ರಾಟರ್ನಿಟಿ ಮೂವ್‌ಮೆಂಟ್ ಕೂಡ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದು, ಕೇರಳದ ಶಿಕ್ಷಣ ಕ್ಷೇತ್ರವನ್ನು ಹಿಂದುತ್ವ ಶಕ್ತಿಗಳಿಗೆ ಹಸ್ತಾಂತರಿಸುವ ಯಾವುದೇ ಪ್ರಯತ್ನವನ್ನು ವಿರೋಧಿಸುವುದಾಗಿ ತಿಳಿಸಿದೆ.

“ಕೇರಳದಲ್ಲಿ ಪಿಎಂ ಶ್ರೀ ಯೋಜನೆ ಅಥವಾ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲು ನಾವು ಅನುಮತಿಸುವುದಿಲ್ಲ” ಎಂದಿದೆ.

ತಮಿಳುನಾಡು, ಪಶ್ಚಿಮ ಬಂಗಾಳ ಸೇರಿದಂತೆ ಹಲವು ಬಿಜೆಪಿಯೇತರ ಆಡಳಿತದ ರಾಜ್ಯಗಳು ‘ಪಿಎಂಶ್ರೀ’ ಯೋಜನೆಯನ್ನು ಇದುವರೆಗೆ ಒಪ್ಪಿಕೊಂಡಿಲ್ಲ. ಕೇರಳ ಕೂಡ ಈ ಪಟ್ಟಿಯಲ್ಲಿ ಇತ್ತು. ಆದರೆ, ಕೇರಳ ಈಗ ನಿಲುವು ಬದಲಿಸಿದೆ. ಪಿಎಂಶ್ರೀ ಯೋಜನೆಯು ವಿವಾದಾತ್ಮಕ ಎನ್‌ಇಪಿಯನ್ನು ಒತ್ತಾಯಪೂರ್ವಕವಾಗಿ ಹೇರುವ ಪ್ರಯತ್ನವಾಗಿದೆ ಎಂದು ರಾಜ್ಯಗಳು ಆರೋಪಿಸಿವೆ. ಕೇಂದ್ರ ಸರ್ಕಾರ ಪಿಎಂಶ್ರೀ ಯೋಜನೆಯನ್ನು ಒಪ್ಪಿಕೊಳ್ಳದ ರಾಜ್ಯಗಳ ಶಿಕ್ಷಣ ನಿಧಿಯನ್ನು ತಡೆಹಿಡಿದಿದೆ.

‘ಬಿಜೆಪಿಯಿಂದ ಮುಂಬೈ ರಕ್ಷಿಸಲು ಕೈಜೋಡಿಸಿ..’; ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ ಶಿವಸೇನೆ ಸಂಸದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....