Homeಮುಖಪುಟತೀವ್ರ ವಿರೋಧದ ನಡುವೆಯೂ ಕೇಂದ್ರದ 'ಪಿಎಂಶ್ರೀ' ಯೋಜನೆಗೆ ಸಹಿ ಹಾಕಿದ ಕೇರಳ ಸರ್ಕಾರ

ತೀವ್ರ ವಿರೋಧದ ನಡುವೆಯೂ ಕೇಂದ್ರದ ‘ಪಿಎಂಶ್ರೀ’ ಯೋಜನೆಗೆ ಸಹಿ ಹಾಕಿದ ಕೇರಳ ಸರ್ಕಾರ

- Advertisement -
- Advertisement -

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ರೂಪಿಸಲಾಗಿದೆ ಎನ್ನಲಾದ ರಾಷ್ಟ್ರೀಯ ಉಪಕ್ರಮ, ‘ಪಿಎಂಶ್ರೀ’ (Prime Minister’s Schools for Rising India scheme) ಯೋಜನೆಯ ತಿಳುವಳಿಕೆ ಪತ್ರಕ್ಕೆ (ಎಂಒಯು) ಕೇರಳ ಸರ್ಕಾರ ಗುರುವಾರ (ಅ.24) ಸಹಿ ಹಾಕಿದೆ.

ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ-ಸಿಪಿಐ(ಎಂ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಸರ್ಕಾರದ ಎರಡನೇ ಅತಿದೊಡ್ಡ ಮಿತ್ರಪಕ್ಷವಾದ ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ತೀವ್ರ ವಿರೋಧದ ನಡುವೆಯೂ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ಶಿಕ್ಷಣ ಸಚಿವಾಲಯದೊಂದಿಗಿನ ತಿಳುವಳಿಕೆ ಪತ್ರಕ್ಕೆ ಕೇರಳ ಸರ್ಕಾರದ ಪರವಾಗಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಸಹಿ ಹಾಕಿದ್ದಾರೆ.

ಕೇಂದ್ರ ಸರ್ಕಾರದ ವಿಶಾಲ ಶಿಕ್ಷಣ ಸುಧಾರಣಾ ಕಾರ್ಯಸೂಚಿಯ ಭಾಗವೆಂದು ಹೇಳಲಾಗುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರ ಹಲವಾರು ನಿಬಂಧನೆಗಳಿಗೆ ಆಕ್ಷೇಪಣೆಗಳನ್ನು ಉಲ್ಲೇಖಿಸಿ ಎಲ್‌ಡಿಎಫ್ ಸರ್ಕಾರವು ಈ ಹಿಂದೆ ‘ಪಿಎಂಶ್ರೀ’ ಯೋಜನೆಯಲ್ಲಿ ಭಾಗವಹಿಸದಿರಲು ನಿರ್ಧರಿಸಿತ್ತು. ಸರ್ಕಾರ ಈ ನಿಲುವು ರಾಜ್ಯಕ್ಕೆ ಕೇಂದ್ರ ಶಿಕ್ಷಣ ನಿಧಿ ಪಡೆಯಲು ಅಡ್ಡಿಯುಂಟುಮಾಡಿದೆ. ಹಾಗಾಗಿ ಸರ್ಕಾರ ನಿರ್ಧಾರ ಬದಲಿಸಿದೆ ಎಂದು ವರದಿಯಾಗಿದೆ.

‘ಪಿಎಂಶ್ರೀ’ ಯೋಜನೆಯನ್ನು ಒಪ್ಪಿಕೊಳ್ಳದ ಕಾರಣ ಕೇಂದ್ರ ಸರ್ಕಾರವು ಸಮಗ್ರ ಶಿಕ್ಷಾ ಕೇರಳ (ಎಸ್‌ಎಸ್‌ಕೆ) ಕಾರ್ಯಕ್ರಮದಡಿ ನೀಡಬೇಕಿದ್ದ ಸುಮಾರು 1,500 ಕೋಟಿ ರೂ. ಅನುದಾನವನ್ನು ತಡೆಹಿಡಿದಿದೆ. ಈಗ ಯೋಜನೆಗೆ ಸಹಿ ಹಾಕಿರುವ ಹಿನ್ನೆಲೆ, ಅನುದಾನ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಮಾಧ್ಯಮಗಳೊಂದಿಗೆ ಮಾತನಾಡಿರು ಕೇರಳದ ಪ್ರಾಥಮಿಕ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ, “ಸರ್ಕಾರದ ನಿರ್ಧಾರವು ರಾಜ್ಯಕ್ಕೆ ಕೇಂದ್ರದಿಂದ ಗಣನೀಯ ನಿಧಿಯನ್ನು ಪಡೆಯಲು ಸಹಾಯ ಮಾಡುತ್ತದೆ. ಕೇಂದ್ರ ಬಿಡುಗಡೆ ಮಾಡುವ ಅನುದಾನದಲ್ಲಿ ವಿವಿಧ ಶಿಕ್ಷಣ ಯೋಜನೆಗಳ ಅಡಿಯಲ್ಲಿ ನೀಡಲು ಬಾಕಿ ಇರುವ ಸರಿಸುಮಾರು 1,500 ಕೋಟಿ ರೂ. ಸೇರಿವೆ ಎಂದು ಹೇಳಿದ್ದಾರೆ.

ಈ ನಿಧಿಯು ಪಠ್ಯಪುಸ್ತಕ ಮುದ್ರಣ, ಪ್ರಶ್ನೆಪತ್ರಿಕೆ ತಯಾರಿಕೆ, ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ) ಮತ್ತು ಕರಾವಳಿಯ ಸಮುದಾಯಗಳ ವಿದ್ಯಾರ್ಥಿಗಳಿಗೆ ಪ್ರಯಾಣ, ಊಟ ಮತ್ತು ಹಾಸ್ಟೆಲ್ ಸೌಲಭ್ಯಗಳು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸಹಾಯ ಮಾಡುತ್ತದೆ ಎಂದಿದ್ದಾರೆ.

ಆದಾಗ್ಯೂ, ಕ್ಯಾಬಿನೆಟ್ ಮಟ್ಟದ ಪೂರ್ವ ಚರ್ಚೆಗಳಿಲ್ಲದೆ ಸರ್ಕಾರ ನಿರ್ಧಾರ ತೆಗೆದುಕೊಂಡಿರುವುದನ್ನು ಸಿಪಿಐ ವಿರೋಧಿಸಿದೆ. ಈ ಕುರಿತು ಮಾತನಾಡಿರುವ ಸಿಪಿಐ ರಾಜ್ಯ ಕಾರ್ಯದರ್ಶಿ ಬಿನೋಯ್ ವಿಶ್ವಂ, “ನಮ್ಮ ಪಕ್ಷವು ಎನ್ಇಪಿಯನ್ನು ವಿರೋಧಿಸುತ್ತಲೇ ಬಂದಿದೆ. ಎನ್‌ಇಪಿ ಆರ್‌ಎಸ್‌ಎಸ್‌ನ ಅಜೆಂಡಾ” ಎಂದಿದ್ದಾರೆ. ಸರ್ಕಾರ ಎಂಒಯುಗೆ ಸಹಿ ಹಾಕಿರುವ ಬಗ್ಗೆ ಕೇಳಿದ್ದಕ್ಕೆ, “ನಮ್ಮ ಪಕ್ಷ ಸದ್ಯಕ್ಕೆ ಏನೂ ಹೇಳುವುದಿಲ್ಲ” ಎಂದಿದ್ದಾರೆ.

“ಪಿಎಂ ಶ್ರೀ’ ಯೋಜನೆಗೆ ಸಹಿ ಹಾಕುವ ಮೂಲಕ ಪಿಣರಾಯಿ ಸರ್ಕಾರವು ಸಾವರ್ಕರ್ ಮಾಡಿದ್ದಕ್ಕಿಂತ ದೊಡ್ಡ ದ್ರೋಹವನ್ನು ಮಾಡಿದೆ. ಕೇರಳದ ಶಿಕ್ಷಣ ಕ್ಷೇತ್ರವನ್ನು ಆರ್‌ಎಸ್‌ಎಸ್‌ಗೆ ಮಾರಿದ ಪಿಣರಾಯಿ ಅವರಿಗೂ ಸಾವರ್ಕರ್‌ಗೂ ಏನು ವ್ಯತ್ಯಾಸ?” ಎಂದು ಕಾಂಗ್ರೆಸ್‌ನ ವಿದ್ಯಾರ್ಥಿ ವಿಭಾಗವಾದ ಕೇರಳ ವಿದ್ಯಾರ್ಥಿ ಒಕ್ಕೂಟದ (ಕೆಎಸ್‌ಯು) ರಾಜ್ಯ ಅಧ್ಯಕ್ಷ ಅಲೋಶಿಯಸ್ ಕ್ಸೇವಿಯರ್ ಪ್ರಶ್ನಿಸಿದ್ದಾರೆ.

“ಮುಂಬರುವ ದಿನಗಳಲ್ಲಿ, ಕೇರಳದ ಕಾಲೇಜುಗಳಲ್ಲಿ ಭವಿಷ್ಯದ ಪೀಳಿಗೆಗಳು ನಾಥೂರಾಮ್ ವಿನಾಯಕ್ ಗೋಡ್ಸೆ ಮತ್ತು ಗೋಲ್ವಾಲ್ಕರ್ ಅವರನ್ನು ಭಾರತೀಯ ಸ್ವಾತಂತ್ರ್ಯ ಹೋರಾಟಗಾರರೆಂದು ಅಧ್ಯಯನ ಮಾಡುವಂತೆ ಮಾಡಿದರೆ, ಅದಕ್ಕೆ ಸಿಪಿಎಂ ಮತ್ತು ‘ಪಿಣರಾಯ್-ಮೋದಿ’ ಸರ್ಕಾರ ಹೊಣೆಯಾಗಿರುತ್ತದೆ” ಎಂದು ಕ್ಸೇವಿಯರ್ ಹೇಳಿದ್ದಾರೆ.

ಫ್ರಾಟರ್ನಿಟಿ ಮೂವ್‌ಮೆಂಟ್ ಕೂಡ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದು, ಕೇರಳದ ಶಿಕ್ಷಣ ಕ್ಷೇತ್ರವನ್ನು ಹಿಂದುತ್ವ ಶಕ್ತಿಗಳಿಗೆ ಹಸ್ತಾಂತರಿಸುವ ಯಾವುದೇ ಪ್ರಯತ್ನವನ್ನು ವಿರೋಧಿಸುವುದಾಗಿ ತಿಳಿಸಿದೆ.

“ಕೇರಳದಲ್ಲಿ ಪಿಎಂ ಶ್ರೀ ಯೋಜನೆ ಅಥವಾ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲು ನಾವು ಅನುಮತಿಸುವುದಿಲ್ಲ” ಎಂದಿದೆ.

ತಮಿಳುನಾಡು, ಪಶ್ಚಿಮ ಬಂಗಾಳ ಸೇರಿದಂತೆ ಹಲವು ಬಿಜೆಪಿಯೇತರ ಆಡಳಿತದ ರಾಜ್ಯಗಳು ‘ಪಿಎಂಶ್ರೀ’ ಯೋಜನೆಯನ್ನು ಇದುವರೆಗೆ ಒಪ್ಪಿಕೊಂಡಿಲ್ಲ. ಕೇರಳ ಕೂಡ ಈ ಪಟ್ಟಿಯಲ್ಲಿ ಇತ್ತು. ಆದರೆ, ಕೇರಳ ಈಗ ನಿಲುವು ಬದಲಿಸಿದೆ. ಪಿಎಂಶ್ರೀ ಯೋಜನೆಯು ವಿವಾದಾತ್ಮಕ ಎನ್‌ಇಪಿಯನ್ನು ಒತ್ತಾಯಪೂರ್ವಕವಾಗಿ ಹೇರುವ ಪ್ರಯತ್ನವಾಗಿದೆ ಎಂದು ರಾಜ್ಯಗಳು ಆರೋಪಿಸಿವೆ. ಕೇಂದ್ರ ಸರ್ಕಾರ ಪಿಎಂಶ್ರೀ ಯೋಜನೆಯನ್ನು ಒಪ್ಪಿಕೊಳ್ಳದ ರಾಜ್ಯಗಳ ಶಿಕ್ಷಣ ನಿಧಿಯನ್ನು ತಡೆಹಿಡಿದಿದೆ.

‘ಬಿಜೆಪಿಯಿಂದ ಮುಂಬೈ ರಕ್ಷಿಸಲು ಕೈಜೋಡಿಸಿ..’; ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ ಶಿವಸೇನೆ ಸಂಸದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....