Homeಮುಖಪುಟತೀವ್ರ ವಿರೋಧದ ನಡುವೆಯೂ ಕೇಂದ್ರದ 'ಪಿಎಂಶ್ರೀ' ಯೋಜನೆಗೆ ಸಹಿ ಹಾಕಿದ ಕೇರಳ ಸರ್ಕಾರ

ತೀವ್ರ ವಿರೋಧದ ನಡುವೆಯೂ ಕೇಂದ್ರದ ‘ಪಿಎಂಶ್ರೀ’ ಯೋಜನೆಗೆ ಸಹಿ ಹಾಕಿದ ಕೇರಳ ಸರ್ಕಾರ

- Advertisement -
- Advertisement -

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ರೂಪಿಸಲಾಗಿದೆ ಎನ್ನಲಾದ ರಾಷ್ಟ್ರೀಯ ಉಪಕ್ರಮ, ‘ಪಿಎಂಶ್ರೀ’ (Prime Minister’s Schools for Rising India scheme) ಯೋಜನೆಯ ತಿಳುವಳಿಕೆ ಪತ್ರಕ್ಕೆ (ಎಂಒಯು) ಕೇರಳ ಸರ್ಕಾರ ಗುರುವಾರ (ಅ.24) ಸಹಿ ಹಾಕಿದೆ.

ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ-ಸಿಪಿಐ(ಎಂ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಸರ್ಕಾರದ ಎರಡನೇ ಅತಿದೊಡ್ಡ ಮಿತ್ರಪಕ್ಷವಾದ ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ತೀವ್ರ ವಿರೋಧದ ನಡುವೆಯೂ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ಶಿಕ್ಷಣ ಸಚಿವಾಲಯದೊಂದಿಗಿನ ತಿಳುವಳಿಕೆ ಪತ್ರಕ್ಕೆ ಕೇರಳ ಸರ್ಕಾರದ ಪರವಾಗಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಸಹಿ ಹಾಕಿದ್ದಾರೆ.

ಕೇಂದ್ರ ಸರ್ಕಾರದ ವಿಶಾಲ ಶಿಕ್ಷಣ ಸುಧಾರಣಾ ಕಾರ್ಯಸೂಚಿಯ ಭಾಗವೆಂದು ಹೇಳಲಾಗುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರ ಹಲವಾರು ನಿಬಂಧನೆಗಳಿಗೆ ಆಕ್ಷೇಪಣೆಗಳನ್ನು ಉಲ್ಲೇಖಿಸಿ ಎಲ್‌ಡಿಎಫ್ ಸರ್ಕಾರವು ಈ ಹಿಂದೆ ‘ಪಿಎಂಶ್ರೀ’ ಯೋಜನೆಯಲ್ಲಿ ಭಾಗವಹಿಸದಿರಲು ನಿರ್ಧರಿಸಿತ್ತು. ಸರ್ಕಾರ ಈ ನಿಲುವು ರಾಜ್ಯಕ್ಕೆ ಕೇಂದ್ರ ಶಿಕ್ಷಣ ನಿಧಿ ಪಡೆಯಲು ಅಡ್ಡಿಯುಂಟುಮಾಡಿದೆ. ಹಾಗಾಗಿ ಸರ್ಕಾರ ನಿರ್ಧಾರ ಬದಲಿಸಿದೆ ಎಂದು ವರದಿಯಾಗಿದೆ.

‘ಪಿಎಂಶ್ರೀ’ ಯೋಜನೆಯನ್ನು ಒಪ್ಪಿಕೊಳ್ಳದ ಕಾರಣ ಕೇಂದ್ರ ಸರ್ಕಾರವು ಸಮಗ್ರ ಶಿಕ್ಷಾ ಕೇರಳ (ಎಸ್‌ಎಸ್‌ಕೆ) ಕಾರ್ಯಕ್ರಮದಡಿ ನೀಡಬೇಕಿದ್ದ ಸುಮಾರು 1,500 ಕೋಟಿ ರೂ. ಅನುದಾನವನ್ನು ತಡೆಹಿಡಿದಿದೆ. ಈಗ ಯೋಜನೆಗೆ ಸಹಿ ಹಾಕಿರುವ ಹಿನ್ನೆಲೆ, ಅನುದಾನ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಮಾಧ್ಯಮಗಳೊಂದಿಗೆ ಮಾತನಾಡಿರು ಕೇರಳದ ಪ್ರಾಥಮಿಕ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ, “ಸರ್ಕಾರದ ನಿರ್ಧಾರವು ರಾಜ್ಯಕ್ಕೆ ಕೇಂದ್ರದಿಂದ ಗಣನೀಯ ನಿಧಿಯನ್ನು ಪಡೆಯಲು ಸಹಾಯ ಮಾಡುತ್ತದೆ. ಕೇಂದ್ರ ಬಿಡುಗಡೆ ಮಾಡುವ ಅನುದಾನದಲ್ಲಿ ವಿವಿಧ ಶಿಕ್ಷಣ ಯೋಜನೆಗಳ ಅಡಿಯಲ್ಲಿ ನೀಡಲು ಬಾಕಿ ಇರುವ ಸರಿಸುಮಾರು 1,500 ಕೋಟಿ ರೂ. ಸೇರಿವೆ ಎಂದು ಹೇಳಿದ್ದಾರೆ.

ಈ ನಿಧಿಯು ಪಠ್ಯಪುಸ್ತಕ ಮುದ್ರಣ, ಪ್ರಶ್ನೆಪತ್ರಿಕೆ ತಯಾರಿಕೆ, ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ) ಮತ್ತು ಕರಾವಳಿಯ ಸಮುದಾಯಗಳ ವಿದ್ಯಾರ್ಥಿಗಳಿಗೆ ಪ್ರಯಾಣ, ಊಟ ಮತ್ತು ಹಾಸ್ಟೆಲ್ ಸೌಲಭ್ಯಗಳು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸಹಾಯ ಮಾಡುತ್ತದೆ ಎಂದಿದ್ದಾರೆ.

ಆದಾಗ್ಯೂ, ಕ್ಯಾಬಿನೆಟ್ ಮಟ್ಟದ ಪೂರ್ವ ಚರ್ಚೆಗಳಿಲ್ಲದೆ ಸರ್ಕಾರ ನಿರ್ಧಾರ ತೆಗೆದುಕೊಂಡಿರುವುದನ್ನು ಸಿಪಿಐ ವಿರೋಧಿಸಿದೆ. ಈ ಕುರಿತು ಮಾತನಾಡಿರುವ ಸಿಪಿಐ ರಾಜ್ಯ ಕಾರ್ಯದರ್ಶಿ ಬಿನೋಯ್ ವಿಶ್ವಂ, “ನಮ್ಮ ಪಕ್ಷವು ಎನ್ಇಪಿಯನ್ನು ವಿರೋಧಿಸುತ್ತಲೇ ಬಂದಿದೆ. ಎನ್‌ಇಪಿ ಆರ್‌ಎಸ್‌ಎಸ್‌ನ ಅಜೆಂಡಾ” ಎಂದಿದ್ದಾರೆ. ಸರ್ಕಾರ ಎಂಒಯುಗೆ ಸಹಿ ಹಾಕಿರುವ ಬಗ್ಗೆ ಕೇಳಿದ್ದಕ್ಕೆ, “ನಮ್ಮ ಪಕ್ಷ ಸದ್ಯಕ್ಕೆ ಏನೂ ಹೇಳುವುದಿಲ್ಲ” ಎಂದಿದ್ದಾರೆ.

“ಪಿಎಂ ಶ್ರೀ’ ಯೋಜನೆಗೆ ಸಹಿ ಹಾಕುವ ಮೂಲಕ ಪಿಣರಾಯಿ ಸರ್ಕಾರವು ಸಾವರ್ಕರ್ ಮಾಡಿದ್ದಕ್ಕಿಂತ ದೊಡ್ಡ ದ್ರೋಹವನ್ನು ಮಾಡಿದೆ. ಕೇರಳದ ಶಿಕ್ಷಣ ಕ್ಷೇತ್ರವನ್ನು ಆರ್‌ಎಸ್‌ಎಸ್‌ಗೆ ಮಾರಿದ ಪಿಣರಾಯಿ ಅವರಿಗೂ ಸಾವರ್ಕರ್‌ಗೂ ಏನು ವ್ಯತ್ಯಾಸ?” ಎಂದು ಕಾಂಗ್ರೆಸ್‌ನ ವಿದ್ಯಾರ್ಥಿ ವಿಭಾಗವಾದ ಕೇರಳ ವಿದ್ಯಾರ್ಥಿ ಒಕ್ಕೂಟದ (ಕೆಎಸ್‌ಯು) ರಾಜ್ಯ ಅಧ್ಯಕ್ಷ ಅಲೋಶಿಯಸ್ ಕ್ಸೇವಿಯರ್ ಪ್ರಶ್ನಿಸಿದ್ದಾರೆ.

“ಮುಂಬರುವ ದಿನಗಳಲ್ಲಿ, ಕೇರಳದ ಕಾಲೇಜುಗಳಲ್ಲಿ ಭವಿಷ್ಯದ ಪೀಳಿಗೆಗಳು ನಾಥೂರಾಮ್ ವಿನಾಯಕ್ ಗೋಡ್ಸೆ ಮತ್ತು ಗೋಲ್ವಾಲ್ಕರ್ ಅವರನ್ನು ಭಾರತೀಯ ಸ್ವಾತಂತ್ರ್ಯ ಹೋರಾಟಗಾರರೆಂದು ಅಧ್ಯಯನ ಮಾಡುವಂತೆ ಮಾಡಿದರೆ, ಅದಕ್ಕೆ ಸಿಪಿಎಂ ಮತ್ತು ‘ಪಿಣರಾಯ್-ಮೋದಿ’ ಸರ್ಕಾರ ಹೊಣೆಯಾಗಿರುತ್ತದೆ” ಎಂದು ಕ್ಸೇವಿಯರ್ ಹೇಳಿದ್ದಾರೆ.

ಫ್ರಾಟರ್ನಿಟಿ ಮೂವ್‌ಮೆಂಟ್ ಕೂಡ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದು, ಕೇರಳದ ಶಿಕ್ಷಣ ಕ್ಷೇತ್ರವನ್ನು ಹಿಂದುತ್ವ ಶಕ್ತಿಗಳಿಗೆ ಹಸ್ತಾಂತರಿಸುವ ಯಾವುದೇ ಪ್ರಯತ್ನವನ್ನು ವಿರೋಧಿಸುವುದಾಗಿ ತಿಳಿಸಿದೆ.

“ಕೇರಳದಲ್ಲಿ ಪಿಎಂ ಶ್ರೀ ಯೋಜನೆ ಅಥವಾ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲು ನಾವು ಅನುಮತಿಸುವುದಿಲ್ಲ” ಎಂದಿದೆ.

ತಮಿಳುನಾಡು, ಪಶ್ಚಿಮ ಬಂಗಾಳ ಸೇರಿದಂತೆ ಹಲವು ಬಿಜೆಪಿಯೇತರ ಆಡಳಿತದ ರಾಜ್ಯಗಳು ‘ಪಿಎಂಶ್ರೀ’ ಯೋಜನೆಯನ್ನು ಇದುವರೆಗೆ ಒಪ್ಪಿಕೊಂಡಿಲ್ಲ. ಕೇರಳ ಕೂಡ ಈ ಪಟ್ಟಿಯಲ್ಲಿ ಇತ್ತು. ಆದರೆ, ಕೇರಳ ಈಗ ನಿಲುವು ಬದಲಿಸಿದೆ. ಪಿಎಂಶ್ರೀ ಯೋಜನೆಯು ವಿವಾದಾತ್ಮಕ ಎನ್‌ಇಪಿಯನ್ನು ಒತ್ತಾಯಪೂರ್ವಕವಾಗಿ ಹೇರುವ ಪ್ರಯತ್ನವಾಗಿದೆ ಎಂದು ರಾಜ್ಯಗಳು ಆರೋಪಿಸಿವೆ. ಕೇಂದ್ರ ಸರ್ಕಾರ ಪಿಎಂಶ್ರೀ ಯೋಜನೆಯನ್ನು ಒಪ್ಪಿಕೊಳ್ಳದ ರಾಜ್ಯಗಳ ಶಿಕ್ಷಣ ನಿಧಿಯನ್ನು ತಡೆಹಿಡಿದಿದೆ.

‘ಬಿಜೆಪಿಯಿಂದ ಮುಂಬೈ ರಕ್ಷಿಸಲು ಕೈಜೋಡಿಸಿ..’; ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ ಶಿವಸೇನೆ ಸಂಸದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...