Homeಮುಖಪುಟತೀವ್ರ ವಿರೋಧದ ನಡುವೆಯೂ ಕೇಂದ್ರದ 'ಪಿಎಂಶ್ರೀ' ಯೋಜನೆಗೆ ಸಹಿ ಹಾಕಿದ ಕೇರಳ ಸರ್ಕಾರ

ತೀವ್ರ ವಿರೋಧದ ನಡುವೆಯೂ ಕೇಂದ್ರದ ‘ಪಿಎಂಶ್ರೀ’ ಯೋಜನೆಗೆ ಸಹಿ ಹಾಕಿದ ಕೇರಳ ಸರ್ಕಾರ

- Advertisement -
- Advertisement -

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ರೂಪಿಸಲಾಗಿದೆ ಎನ್ನಲಾದ ರಾಷ್ಟ್ರೀಯ ಉಪಕ್ರಮ, ‘ಪಿಎಂಶ್ರೀ’ (Prime Minister’s Schools for Rising India scheme) ಯೋಜನೆಯ ತಿಳುವಳಿಕೆ ಪತ್ರಕ್ಕೆ (ಎಂಒಯು) ಕೇರಳ ಸರ್ಕಾರ ಗುರುವಾರ (ಅ.24) ಸಹಿ ಹಾಕಿದೆ.

ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ-ಸಿಪಿಐ(ಎಂ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಸರ್ಕಾರದ ಎರಡನೇ ಅತಿದೊಡ್ಡ ಮಿತ್ರಪಕ್ಷವಾದ ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ತೀವ್ರ ವಿರೋಧದ ನಡುವೆಯೂ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ಶಿಕ್ಷಣ ಸಚಿವಾಲಯದೊಂದಿಗಿನ ತಿಳುವಳಿಕೆ ಪತ್ರಕ್ಕೆ ಕೇರಳ ಸರ್ಕಾರದ ಪರವಾಗಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಸಹಿ ಹಾಕಿದ್ದಾರೆ.

ಕೇಂದ್ರ ಸರ್ಕಾರದ ವಿಶಾಲ ಶಿಕ್ಷಣ ಸುಧಾರಣಾ ಕಾರ್ಯಸೂಚಿಯ ಭಾಗವೆಂದು ಹೇಳಲಾಗುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರ ಹಲವಾರು ನಿಬಂಧನೆಗಳಿಗೆ ಆಕ್ಷೇಪಣೆಗಳನ್ನು ಉಲ್ಲೇಖಿಸಿ ಎಲ್‌ಡಿಎಫ್ ಸರ್ಕಾರವು ಈ ಹಿಂದೆ ‘ಪಿಎಂಶ್ರೀ’ ಯೋಜನೆಯಲ್ಲಿ ಭಾಗವಹಿಸದಿರಲು ನಿರ್ಧರಿಸಿತ್ತು. ಸರ್ಕಾರ ಈ ನಿಲುವು ರಾಜ್ಯಕ್ಕೆ ಕೇಂದ್ರ ಶಿಕ್ಷಣ ನಿಧಿ ಪಡೆಯಲು ಅಡ್ಡಿಯುಂಟುಮಾಡಿದೆ. ಹಾಗಾಗಿ ಸರ್ಕಾರ ನಿರ್ಧಾರ ಬದಲಿಸಿದೆ ಎಂದು ವರದಿಯಾಗಿದೆ.

‘ಪಿಎಂಶ್ರೀ’ ಯೋಜನೆಯನ್ನು ಒಪ್ಪಿಕೊಳ್ಳದ ಕಾರಣ ಕೇಂದ್ರ ಸರ್ಕಾರವು ಸಮಗ್ರ ಶಿಕ್ಷಾ ಕೇರಳ (ಎಸ್‌ಎಸ್‌ಕೆ) ಕಾರ್ಯಕ್ರಮದಡಿ ನೀಡಬೇಕಿದ್ದ ಸುಮಾರು 1,500 ಕೋಟಿ ರೂ. ಅನುದಾನವನ್ನು ತಡೆಹಿಡಿದಿದೆ. ಈಗ ಯೋಜನೆಗೆ ಸಹಿ ಹಾಕಿರುವ ಹಿನ್ನೆಲೆ, ಅನುದಾನ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಮಾಧ್ಯಮಗಳೊಂದಿಗೆ ಮಾತನಾಡಿರು ಕೇರಳದ ಪ್ರಾಥಮಿಕ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ, “ಸರ್ಕಾರದ ನಿರ್ಧಾರವು ರಾಜ್ಯಕ್ಕೆ ಕೇಂದ್ರದಿಂದ ಗಣನೀಯ ನಿಧಿಯನ್ನು ಪಡೆಯಲು ಸಹಾಯ ಮಾಡುತ್ತದೆ. ಕೇಂದ್ರ ಬಿಡುಗಡೆ ಮಾಡುವ ಅನುದಾನದಲ್ಲಿ ವಿವಿಧ ಶಿಕ್ಷಣ ಯೋಜನೆಗಳ ಅಡಿಯಲ್ಲಿ ನೀಡಲು ಬಾಕಿ ಇರುವ ಸರಿಸುಮಾರು 1,500 ಕೋಟಿ ರೂ. ಸೇರಿವೆ ಎಂದು ಹೇಳಿದ್ದಾರೆ.

ಈ ನಿಧಿಯು ಪಠ್ಯಪುಸ್ತಕ ಮುದ್ರಣ, ಪ್ರಶ್ನೆಪತ್ರಿಕೆ ತಯಾರಿಕೆ, ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ) ಮತ್ತು ಕರಾವಳಿಯ ಸಮುದಾಯಗಳ ವಿದ್ಯಾರ್ಥಿಗಳಿಗೆ ಪ್ರಯಾಣ, ಊಟ ಮತ್ತು ಹಾಸ್ಟೆಲ್ ಸೌಲಭ್ಯಗಳು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸಹಾಯ ಮಾಡುತ್ತದೆ ಎಂದಿದ್ದಾರೆ.

ಆದಾಗ್ಯೂ, ಕ್ಯಾಬಿನೆಟ್ ಮಟ್ಟದ ಪೂರ್ವ ಚರ್ಚೆಗಳಿಲ್ಲದೆ ಸರ್ಕಾರ ನಿರ್ಧಾರ ತೆಗೆದುಕೊಂಡಿರುವುದನ್ನು ಸಿಪಿಐ ವಿರೋಧಿಸಿದೆ. ಈ ಕುರಿತು ಮಾತನಾಡಿರುವ ಸಿಪಿಐ ರಾಜ್ಯ ಕಾರ್ಯದರ್ಶಿ ಬಿನೋಯ್ ವಿಶ್ವಂ, “ನಮ್ಮ ಪಕ್ಷವು ಎನ್ಇಪಿಯನ್ನು ವಿರೋಧಿಸುತ್ತಲೇ ಬಂದಿದೆ. ಎನ್‌ಇಪಿ ಆರ್‌ಎಸ್‌ಎಸ್‌ನ ಅಜೆಂಡಾ” ಎಂದಿದ್ದಾರೆ. ಸರ್ಕಾರ ಎಂಒಯುಗೆ ಸಹಿ ಹಾಕಿರುವ ಬಗ್ಗೆ ಕೇಳಿದ್ದಕ್ಕೆ, “ನಮ್ಮ ಪಕ್ಷ ಸದ್ಯಕ್ಕೆ ಏನೂ ಹೇಳುವುದಿಲ್ಲ” ಎಂದಿದ್ದಾರೆ.

“ಪಿಎಂ ಶ್ರೀ’ ಯೋಜನೆಗೆ ಸಹಿ ಹಾಕುವ ಮೂಲಕ ಪಿಣರಾಯಿ ಸರ್ಕಾರವು ಸಾವರ್ಕರ್ ಮಾಡಿದ್ದಕ್ಕಿಂತ ದೊಡ್ಡ ದ್ರೋಹವನ್ನು ಮಾಡಿದೆ. ಕೇರಳದ ಶಿಕ್ಷಣ ಕ್ಷೇತ್ರವನ್ನು ಆರ್‌ಎಸ್‌ಎಸ್‌ಗೆ ಮಾರಿದ ಪಿಣರಾಯಿ ಅವರಿಗೂ ಸಾವರ್ಕರ್‌ಗೂ ಏನು ವ್ಯತ್ಯಾಸ?” ಎಂದು ಕಾಂಗ್ರೆಸ್‌ನ ವಿದ್ಯಾರ್ಥಿ ವಿಭಾಗವಾದ ಕೇರಳ ವಿದ್ಯಾರ್ಥಿ ಒಕ್ಕೂಟದ (ಕೆಎಸ್‌ಯು) ರಾಜ್ಯ ಅಧ್ಯಕ್ಷ ಅಲೋಶಿಯಸ್ ಕ್ಸೇವಿಯರ್ ಪ್ರಶ್ನಿಸಿದ್ದಾರೆ.

“ಮುಂಬರುವ ದಿನಗಳಲ್ಲಿ, ಕೇರಳದ ಕಾಲೇಜುಗಳಲ್ಲಿ ಭವಿಷ್ಯದ ಪೀಳಿಗೆಗಳು ನಾಥೂರಾಮ್ ವಿನಾಯಕ್ ಗೋಡ್ಸೆ ಮತ್ತು ಗೋಲ್ವಾಲ್ಕರ್ ಅವರನ್ನು ಭಾರತೀಯ ಸ್ವಾತಂತ್ರ್ಯ ಹೋರಾಟಗಾರರೆಂದು ಅಧ್ಯಯನ ಮಾಡುವಂತೆ ಮಾಡಿದರೆ, ಅದಕ್ಕೆ ಸಿಪಿಎಂ ಮತ್ತು ‘ಪಿಣರಾಯ್-ಮೋದಿ’ ಸರ್ಕಾರ ಹೊಣೆಯಾಗಿರುತ್ತದೆ” ಎಂದು ಕ್ಸೇವಿಯರ್ ಹೇಳಿದ್ದಾರೆ.

ಫ್ರಾಟರ್ನಿಟಿ ಮೂವ್‌ಮೆಂಟ್ ಕೂಡ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದು, ಕೇರಳದ ಶಿಕ್ಷಣ ಕ್ಷೇತ್ರವನ್ನು ಹಿಂದುತ್ವ ಶಕ್ತಿಗಳಿಗೆ ಹಸ್ತಾಂತರಿಸುವ ಯಾವುದೇ ಪ್ರಯತ್ನವನ್ನು ವಿರೋಧಿಸುವುದಾಗಿ ತಿಳಿಸಿದೆ.

“ಕೇರಳದಲ್ಲಿ ಪಿಎಂ ಶ್ರೀ ಯೋಜನೆ ಅಥವಾ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲು ನಾವು ಅನುಮತಿಸುವುದಿಲ್ಲ” ಎಂದಿದೆ.

ತಮಿಳುನಾಡು, ಪಶ್ಚಿಮ ಬಂಗಾಳ ಸೇರಿದಂತೆ ಹಲವು ಬಿಜೆಪಿಯೇತರ ಆಡಳಿತದ ರಾಜ್ಯಗಳು ‘ಪಿಎಂಶ್ರೀ’ ಯೋಜನೆಯನ್ನು ಇದುವರೆಗೆ ಒಪ್ಪಿಕೊಂಡಿಲ್ಲ. ಕೇರಳ ಕೂಡ ಈ ಪಟ್ಟಿಯಲ್ಲಿ ಇತ್ತು. ಆದರೆ, ಕೇರಳ ಈಗ ನಿಲುವು ಬದಲಿಸಿದೆ. ಪಿಎಂಶ್ರೀ ಯೋಜನೆಯು ವಿವಾದಾತ್ಮಕ ಎನ್‌ಇಪಿಯನ್ನು ಒತ್ತಾಯಪೂರ್ವಕವಾಗಿ ಹೇರುವ ಪ್ರಯತ್ನವಾಗಿದೆ ಎಂದು ರಾಜ್ಯಗಳು ಆರೋಪಿಸಿವೆ. ಕೇಂದ್ರ ಸರ್ಕಾರ ಪಿಎಂಶ್ರೀ ಯೋಜನೆಯನ್ನು ಒಪ್ಪಿಕೊಳ್ಳದ ರಾಜ್ಯಗಳ ಶಿಕ್ಷಣ ನಿಧಿಯನ್ನು ತಡೆಹಿಡಿದಿದೆ.

‘ಬಿಜೆಪಿಯಿಂದ ಮುಂಬೈ ರಕ್ಷಿಸಲು ಕೈಜೋಡಿಸಿ..’; ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ ಶಿವಸೇನೆ ಸಂಸದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...