Homeಮುಖಪುಟ"ಕೇರಳ ಸರ್ 100% ಲಿಟ್ರೆಸಿ ಸರ್" : ಜಸ್ಪ್ರೀತ್ ಸಿಂಗ್‌ನ ಅವಹೇಳನದ ಹಾಸ್ಯಕ್ಕೆ ಆಕ್ರೋಶಗೊಂಡ ಮಲಯಾಳಿಗಳು

“ಕೇರಳ ಸರ್ 100% ಲಿಟ್ರೆಸಿ ಸರ್” : ಜಸ್ಪ್ರೀತ್ ಸಿಂಗ್‌ನ ಅವಹೇಳನದ ಹಾಸ್ಯಕ್ಕೆ ಆಕ್ರೋಶಗೊಂಡ ಮಲಯಾಳಿಗಳು

- Advertisement -
- Advertisement -

ಕಾಮಿಡಿಯನ್ ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಶೋನಲ್ಲಿ ಬಲಪಂಥೀಯ ಯೂಟ್ಯೂಬರ್ ರಣವೀರ್ ಅಲಹಾಬಾದಿಯಾ ಪೋಷಕರು, ಮಹಿಳೆಯರು ಮತ್ತು ಲೈಂಗಿಕತೆಯ ಕುರಿತು ನೀಡಿರುವ ಅಶ್ಲೀಲ ಹೇಳಿಕೆ ಕುರಿತು ದೇಶದಾದ್ಯಂತ ಬಿಸಿಬಿಸಿ ಚರ್ಚೆ ನಡೆಯುತ್ತಿದೆ.

ಪ್ರಧಾನಿ ಮೋದಿ ಸಮ್ಮಾನಿತ ಅಲಾಬಾದಿಯನ ಒಂದು ಹೇಳಿಕೆಯಿಂದ ಆತ ಭಾಗವಹಿಸಿದ್ದ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಶೋನಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ್ದ ಇತರ ಸಾಮಾಜಿಕ ಜಾಲತಾಣ ಪ್ರಭಾವಿಗಳಾದ ಅಪೂರ್ವ ಮುಖಿಜಾ, ಆಶಿಶ್ ಚಂಚಲಾನಿ ಮತ್ತು ಜಸ್ಪ್ರೀತ್ ಸಿಂಗ್ ಕೂಡ ಕೇಸ್‌ ಹಾಕಿಸಿಕೊಳ್ಳುವಂತಾಗಿದೆ.

ಮುಂಬೈ, ಅಸ್ಸಾಂ ಸೇರಿದಂತೆ ವಿವಿದೆಡೆ ಅಲಹಾಬಾದಿಯ ಮತ್ತು ಇತರರ ವಿರುದ್ದ ದೂರು ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಹುಡುಕುತ್ತಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗ ಸೇರಿದಂತೆ ವಿವಿಧ ಸಂಸ್ಥೆಗಳು ಅಲಹಾಬಾದಿಯನ ಅಸಭ್ಯ ಹಾಸ್ಯವನ್ನು ಗಂಭೀರವಾಗಿ ಪರಿಗಣಿಸಿ ಕಾನೂನಿನ ಬಿಸಿ ಮುಟ್ಟಿಸಲು ಮುಂದಾಗಿವೆ.

ರಣವೀರ್ ಅಲಹಾಬಾದಿಯನ ಹೇಳಿಕೆ ಒಂದೆಡೆ ವಿವಾದವಾದರೆ, ಅತನ ಜೊತೆಗಿದ್ದ ಇತರರು ಅಮಾಯಕರು ಎಂದೆನಿಸಬೇಕಿಲ್ಲ. ಅವರೂ ಕೂಡ ಎಲ್ಲಾ ಮಿತಿಗಳನ್ನು ಮೀರಿ ಅಸಂಬಂದ್ಧ, ಅವಹೇಳನಕಾರಿ ಮತ್ತು ಅಶ್ಲೀಲ ಹಾಸ್ಯಕ್ಕೆ ಕುಖ್ಯಾತಿ ಪಡೆವರು. ಇದೀಗ ಅಲಹಾಬಾದಿಯನ ಹೇಳಿಕೆ ಜೊತೆಗೆ ಕಾಮಿಡಿಯನ್ ಜಸ್ಪ್ರೀತ್ ಸಿಂಗ್‌ ಕೇರಳದ ಕುರಿತು ನೀಡಿರುವ ಹೇಳಿಕೆಯೊಂದು ಭಾರೀ ವೈರಲ್ ಆಗಿದೆ. ಕೇರಳದವರನ್ನು ಅಥವಾ ಮಲಯಾಳಿಗಳನ್ನು ಆಕ್ರೋಶಗೊಳ್ಳುವಂತೆ ಮಾಡಿದೆ.

“ಕೇರಳ ಸರ್ 100% ಲಿಟ್ರೆಸಿ ಸರ್”

ವಿವಾದಿತ ಇಂಡಿಯಾಸ್ ಗಾಟ್ ಲ್ಯಾಟೆಂಟ್ ಶೋನಲ್ಲಿ ಭಾಗವಹಿಸಿದ್ದ ಕೇರಳದ ಸ್ಪರ್ಧಿಯೊಬ್ಬರು “ನನಗೆ ಯಾವುದೇ ರಾಜಕೀಯ ನಿಲುವು ಅಥವಾ ಒಲವು ಇಲ್ಲ. ನಾನು ವೋಟ್ ಕೂಡ ಮಾಡಲ್ಲ” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಕೊಟ್ಟ ತೀರ್ಪುಗಾರ ಜಸ್ಪ್ರೀತ್ ಸಿಂಗ್‌ ” ಕೇರಳ ಸರ್ 100% ಲಿಟ್ರೆಸಿ ಸರ್” ಎಂದು ಹೇಳುವ ಮೂಲಕ, ಆಕೆಯನ್ನು, ಆಕೆಯ ಭಾಷೆಯನ್ನು, ಆಕೆಯ ರಾಜ್ಯವನ್ನು ಅವಮಾನಿಸಿದ್ದಾರೆ. ವಿಶೇಷವಾಗಿ ದಕ್ಷಿಣ ಭಾರತದ ಮೇಲಿನ ತನ್ನ ದ್ವೇಷವನ್ನು ವ್ಯಕ್ತಪಡಿಸಿದ್ದಾರೆ.

ಕೇರಳ, ಕರ್ನಾಟ, ತಮಿಳುನಾಡು, ತೆಲಂಗಾಣದ, ಆಂಧ್ರ ಪ್ರದೇಶ ಸೇರಿದಂತೆ ದಕ್ಷಿಣದ ಡ್ರಾವಿಡ ರಾಜ್ಯಗಳು ಸದಾ ವೈವಿದ್ಯತೆಯನ್ನು ಹೊಂದಿರುವ ರಾಜ್ಯಗಳು. ಭಾರತದ ಸಂವಿಧಾನವನ್ನು ಬಲವಾಗಿ ಪ್ರತಿಪಾದಿಸುವ ರಾಜ್ಯಗಳು. ಶಿಕ್ಷಣ, ಮೂಲ ಸೌಕರ್ಯಗಳ ವಿಚಾರದಲ್ಲಿ ಬಹಳ ಮುಂದುವರಿದ ರಾಜ್ಯಗಳು. ಅಲ್ಲದೆ, ಈ ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳಿವೆ. ಈ ಎಲ್ಲಾ ಕಾರಣಕ್ಕೆ ಉತ್ತರ ಭಾರತದ ಕೆಲವರು ದಕ್ಷಿಣದ ಈ ರಾಜ್ಯಗಳನ್ನು ಮತ್ತು ಇಲ್ಲಿನ ಜನರನ್ನು ದೇಶದ್ರೋಹಿಗಳಂತೆ ಕಾಣುವ ಪರಿಪಾಠವಿದೆ. ಆ ಭಾವನೆ ಜಸ್ಪ್ರೀತ್ ಸಿಂಗ್‌ನ ಹೇಳಿಕೆಯಲ್ಲಿ ವ್ಯಕ್ತವಾಗಿದೆ. ವಿಶೇಷವಾಗಿ ಹಿಂದಿಯೇತರ ರಾಜ್ಯ ಎಂಬ ಕಾರಣಕ್ಕೆ ಹಿಂದಿ ಭಾಷಿಕರ ದ್ವೇಷ ಬಹಿರಂಗವಾಗಿದೆ.

ಆಕ್ರೋಶಗೊಂಡ ಮಲಯಾಳಿಗಳು

ಕೇರಳದ ಭಾರತದಲ್ಲಿ ಅತಿ ಹೆಚ್ಚು ಸಾಕ್ಷರತೆಯನ್ನು ಹೊಂದಿರುವ ರಾಜ್ಯ. ಕೇವಲ ಸಾಕ್ಷರತೆ ಮಾತ್ರವಲ್ಲದೆ ಕೋವಿಡ್, ನಿಫಾ, ಮಂಕಿ ಫಾಕ್ಸ್, ಡೆಂಗ್ಯೂನಂತಹ ಸಾಂಕ್ರಾಮಿಕ ರೋಗಗಳನ್ನು ಸಮರ್ಥವಾಗಿ ನಿಭಾಯಿಸಿದ ಕೀರ್ತಿ ಹೊಂದಿರುವ ರಾಜ್ಯ, ಉದ್ಯೋಗ, ವೇತನದ ವಿಚಾರದಲ್ಲಿ ಉತ್ತರಕ್ಕಿಂತ ಮುಂದಿರುವ ರಾಜ್ಯ. ಈ ಕಾರಣಕ್ಕೆ ಉತ್ತರ ಭಾರತದ ಸಾವಿರಾರು ಜನರು ಕೇರಳ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ. ಇವೆಲ್ಲವೂ ಹೆಮ್ಮೆ ಪಡುವಂತಹ ವಿಚಾರಗಳೇ. ಆದರೆ, ಜಸ್ಪ್ರೀತ್ ಸಿಂಗ್‌ನ ಅಸಂಬದ್ದ ಹಾಸ್ಯ ಕೇರಳ ಸಾಕ್ಷರತೆ ಹೊಂದಿರುವುದೇ ಅಪರಾಧ ಎಂಬಂತೆ ಬಿಂಬಿಸಿದೆ.

ಜಸ್ಪ್ರೀತ್ ಸಿಂಗ್‌ನ ಹೇಳಿಕೆಗೆ ಆಕ್ರೋಶಗೊಂಡಿರುವ ಮಲಯಾಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ನೂರಾರು ವಿಡಿಯೋಗಳನ್ನು ಮಾಡುವ ಮೂಲಕ ತಿರುಗೇಟು ಕೊಡುತ್ತಿದ್ದಾರೆ.

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ನಾವು ನಮ್ಮ ಮತವನ್ನು ಚಿಂತಿಸಿ ಚಲಾಯಿಸುತ್ತೇವೆ.

|ನಾವು 100% ಸಾಕ್ಷರರು, ಅದಕ್ಕಾಗಿಯೇ ನಾವು ಕುಂಬಳಂಗಿ ನೈಟ್ಸ್‌ನಂತಹ ಉತ್ತಮ ಚಲನಚಿತ್ರಗಳನ್ನು ಮಾಡುತ್ತೇವೆ.

ನಾವು 100% ಸಾಕ್ಷರರು, ಅದಕ್ಕಾಗಿಯೇ ಹಿಂದೂಗಳು, ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ಸಾಮರಸ್ಯದಿಂದ ಬದುಕುತ್ತಿದ್ದೇವೆ

ನಾವು 100% ಸಾಕ್ಷರರು, ಅದಕ್ಕಾಗಿಯೇ ಕೇರಳ ಮಾದರಿ ಪ್ರಸಿದ್ಧವಾಗಿದೆ.

ನಾವು 100% ಸಾಕ್ಷರರು, ಅದಕ್ಕಾಗಿಯೇ ನಾವು ಎಲ್ಲಾ ಲಿಂಗಗಳನ್ನು ಗೌರವಿಸುತ್ತೇವೆ ಮತ್ತು ಪ್ರತಿಪಾದಿಸುತ್ತೇವೆ.

ನಾವು 100% ಸಾಕ್ಷರರು, ಅದಕ್ಕಾಗಿಯೇ ನಾವು ಅಗತ್ಯವಿದ್ದರೆ ಸರ್ಕಾರದ ವಿರುದ್ಧ ಮಾತನಾಡುತ್ತೇವೆ.

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ಕೇರಳವನ್ನು ದೇವರ ಸ್ವಂತ ನಾಡು ಎಂದು ಕರೆಯಲಾಗುತ್ತದೆ.

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ಬೀಫ್ ತಿನ್ನುತ್ತೇವೆ

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ಕೋಮುವಾದಿಗಳನ್ನು ನಮ್ಮೊಳಗೆ ಬಿಟ್ಟುಕೊಂಡಿಲ್ಲ

ಈ ರೀತಿಯ ಉತ್ತರಗಳನ್ನು ಜಸ್ಪ್ರೀತ್ ಸಿಂಗ್‌ಗೆ ಮಲಯಾಳಿಗಳು ನೀಡುತ್ತಿದ್ದಾರೆ. ರಣವೀರ್ ಅಲಹಾಬಾದಿಯನ ಹೇಳಿಕೆ ಎಷ್ಟು ಅಸಂಬದ್ದವೋ, ಅಷ್ಟೇ ಜಸ್ಪ್ರೀತ್‌ ಸಿಂಗ್‌ನ ಹೇಳಿಕೆ ಅವಹೇಳನಕಾರಿ. ಹಾಗಾಗಿ, ಆತನ ವಿರುದ್ದವೂ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹಗಳು ವ್ಯಕ್ತವಾಗಿವೆ.

ಅಶ್ಲೀಲ ಹೇಳಿಕೆ: ರಣವೀರ್ ಅಲಹಾಬಾದಿಯಾ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...