Homeಮುಖಪುಟ"ಕೇರಳ ಸರ್ 100% ಲಿಟ್ರೆಸಿ ಸರ್" : ಜಸ್ಪ್ರೀತ್ ಸಿಂಗ್‌ನ ಅವಹೇಳನದ ಹಾಸ್ಯಕ್ಕೆ ಆಕ್ರೋಶಗೊಂಡ ಮಲಯಾಳಿಗಳು

“ಕೇರಳ ಸರ್ 100% ಲಿಟ್ರೆಸಿ ಸರ್” : ಜಸ್ಪ್ರೀತ್ ಸಿಂಗ್‌ನ ಅವಹೇಳನದ ಹಾಸ್ಯಕ್ಕೆ ಆಕ್ರೋಶಗೊಂಡ ಮಲಯಾಳಿಗಳು

- Advertisement -
- Advertisement -

ಕಾಮಿಡಿಯನ್ ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಶೋನಲ್ಲಿ ಬಲಪಂಥೀಯ ಯೂಟ್ಯೂಬರ್ ರಣವೀರ್ ಅಲಹಾಬಾದಿಯಾ ಪೋಷಕರು, ಮಹಿಳೆಯರು ಮತ್ತು ಲೈಂಗಿಕತೆಯ ಕುರಿತು ನೀಡಿರುವ ಅಶ್ಲೀಲ ಹೇಳಿಕೆ ಕುರಿತು ದೇಶದಾದ್ಯಂತ ಬಿಸಿಬಿಸಿ ಚರ್ಚೆ ನಡೆಯುತ್ತಿದೆ.

ಪ್ರಧಾನಿ ಮೋದಿ ಸಮ್ಮಾನಿತ ಅಲಾಬಾದಿಯನ ಒಂದು ಹೇಳಿಕೆಯಿಂದ ಆತ ಭಾಗವಹಿಸಿದ್ದ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಶೋನಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ್ದ ಇತರ ಸಾಮಾಜಿಕ ಜಾಲತಾಣ ಪ್ರಭಾವಿಗಳಾದ ಅಪೂರ್ವ ಮುಖಿಜಾ, ಆಶಿಶ್ ಚಂಚಲಾನಿ ಮತ್ತು ಜಸ್ಪ್ರೀತ್ ಸಿಂಗ್ ಕೂಡ ಕೇಸ್‌ ಹಾಕಿಸಿಕೊಳ್ಳುವಂತಾಗಿದೆ.

ಮುಂಬೈ, ಅಸ್ಸಾಂ ಸೇರಿದಂತೆ ವಿವಿದೆಡೆ ಅಲಹಾಬಾದಿಯ ಮತ್ತು ಇತರರ ವಿರುದ್ದ ದೂರು ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಹುಡುಕುತ್ತಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗ ಸೇರಿದಂತೆ ವಿವಿಧ ಸಂಸ್ಥೆಗಳು ಅಲಹಾಬಾದಿಯನ ಅಸಭ್ಯ ಹಾಸ್ಯವನ್ನು ಗಂಭೀರವಾಗಿ ಪರಿಗಣಿಸಿ ಕಾನೂನಿನ ಬಿಸಿ ಮುಟ್ಟಿಸಲು ಮುಂದಾಗಿವೆ.

ರಣವೀರ್ ಅಲಹಾಬಾದಿಯನ ಹೇಳಿಕೆ ಒಂದೆಡೆ ವಿವಾದವಾದರೆ, ಅತನ ಜೊತೆಗಿದ್ದ ಇತರರು ಅಮಾಯಕರು ಎಂದೆನಿಸಬೇಕಿಲ್ಲ. ಅವರೂ ಕೂಡ ಎಲ್ಲಾ ಮಿತಿಗಳನ್ನು ಮೀರಿ ಅಸಂಬಂದ್ಧ, ಅವಹೇಳನಕಾರಿ ಮತ್ತು ಅಶ್ಲೀಲ ಹಾಸ್ಯಕ್ಕೆ ಕುಖ್ಯಾತಿ ಪಡೆವರು. ಇದೀಗ ಅಲಹಾಬಾದಿಯನ ಹೇಳಿಕೆ ಜೊತೆಗೆ ಕಾಮಿಡಿಯನ್ ಜಸ್ಪ್ರೀತ್ ಸಿಂಗ್‌ ಕೇರಳದ ಕುರಿತು ನೀಡಿರುವ ಹೇಳಿಕೆಯೊಂದು ಭಾರೀ ವೈರಲ್ ಆಗಿದೆ. ಕೇರಳದವರನ್ನು ಅಥವಾ ಮಲಯಾಳಿಗಳನ್ನು ಆಕ್ರೋಶಗೊಳ್ಳುವಂತೆ ಮಾಡಿದೆ.

“ಕೇರಳ ಸರ್ 100% ಲಿಟ್ರೆಸಿ ಸರ್”

ವಿವಾದಿತ ಇಂಡಿಯಾಸ್ ಗಾಟ್ ಲ್ಯಾಟೆಂಟ್ ಶೋನಲ್ಲಿ ಭಾಗವಹಿಸಿದ್ದ ಕೇರಳದ ಸ್ಪರ್ಧಿಯೊಬ್ಬರು “ನನಗೆ ಯಾವುದೇ ರಾಜಕೀಯ ನಿಲುವು ಅಥವಾ ಒಲವು ಇಲ್ಲ. ನಾನು ವೋಟ್ ಕೂಡ ಮಾಡಲ್ಲ” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಕೊಟ್ಟ ತೀರ್ಪುಗಾರ ಜಸ್ಪ್ರೀತ್ ಸಿಂಗ್‌ ” ಕೇರಳ ಸರ್ 100% ಲಿಟ್ರೆಸಿ ಸರ್” ಎಂದು ಹೇಳುವ ಮೂಲಕ, ಆಕೆಯನ್ನು, ಆಕೆಯ ಭಾಷೆಯನ್ನು, ಆಕೆಯ ರಾಜ್ಯವನ್ನು ಅವಮಾನಿಸಿದ್ದಾರೆ. ವಿಶೇಷವಾಗಿ ದಕ್ಷಿಣ ಭಾರತದ ಮೇಲಿನ ತನ್ನ ದ್ವೇಷವನ್ನು ವ್ಯಕ್ತಪಡಿಸಿದ್ದಾರೆ.

ಕೇರಳ, ಕರ್ನಾಟ, ತಮಿಳುನಾಡು, ತೆಲಂಗಾಣದ, ಆಂಧ್ರ ಪ್ರದೇಶ ಸೇರಿದಂತೆ ದಕ್ಷಿಣದ ಡ್ರಾವಿಡ ರಾಜ್ಯಗಳು ಸದಾ ವೈವಿದ್ಯತೆಯನ್ನು ಹೊಂದಿರುವ ರಾಜ್ಯಗಳು. ಭಾರತದ ಸಂವಿಧಾನವನ್ನು ಬಲವಾಗಿ ಪ್ರತಿಪಾದಿಸುವ ರಾಜ್ಯಗಳು. ಶಿಕ್ಷಣ, ಮೂಲ ಸೌಕರ್ಯಗಳ ವಿಚಾರದಲ್ಲಿ ಬಹಳ ಮುಂದುವರಿದ ರಾಜ್ಯಗಳು. ಅಲ್ಲದೆ, ಈ ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳಿವೆ. ಈ ಎಲ್ಲಾ ಕಾರಣಕ್ಕೆ ಉತ್ತರ ಭಾರತದ ಕೆಲವರು ದಕ್ಷಿಣದ ಈ ರಾಜ್ಯಗಳನ್ನು ಮತ್ತು ಇಲ್ಲಿನ ಜನರನ್ನು ದೇಶದ್ರೋಹಿಗಳಂತೆ ಕಾಣುವ ಪರಿಪಾಠವಿದೆ. ಆ ಭಾವನೆ ಜಸ್ಪ್ರೀತ್ ಸಿಂಗ್‌ನ ಹೇಳಿಕೆಯಲ್ಲಿ ವ್ಯಕ್ತವಾಗಿದೆ. ವಿಶೇಷವಾಗಿ ಹಿಂದಿಯೇತರ ರಾಜ್ಯ ಎಂಬ ಕಾರಣಕ್ಕೆ ಹಿಂದಿ ಭಾಷಿಕರ ದ್ವೇಷ ಬಹಿರಂಗವಾಗಿದೆ.

ಆಕ್ರೋಶಗೊಂಡ ಮಲಯಾಳಿಗಳು

ಕೇರಳದ ಭಾರತದಲ್ಲಿ ಅತಿ ಹೆಚ್ಚು ಸಾಕ್ಷರತೆಯನ್ನು ಹೊಂದಿರುವ ರಾಜ್ಯ. ಕೇವಲ ಸಾಕ್ಷರತೆ ಮಾತ್ರವಲ್ಲದೆ ಕೋವಿಡ್, ನಿಫಾ, ಮಂಕಿ ಫಾಕ್ಸ್, ಡೆಂಗ್ಯೂನಂತಹ ಸಾಂಕ್ರಾಮಿಕ ರೋಗಗಳನ್ನು ಸಮರ್ಥವಾಗಿ ನಿಭಾಯಿಸಿದ ಕೀರ್ತಿ ಹೊಂದಿರುವ ರಾಜ್ಯ, ಉದ್ಯೋಗ, ವೇತನದ ವಿಚಾರದಲ್ಲಿ ಉತ್ತರಕ್ಕಿಂತ ಮುಂದಿರುವ ರಾಜ್ಯ. ಈ ಕಾರಣಕ್ಕೆ ಉತ್ತರ ಭಾರತದ ಸಾವಿರಾರು ಜನರು ಕೇರಳ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ. ಇವೆಲ್ಲವೂ ಹೆಮ್ಮೆ ಪಡುವಂತಹ ವಿಚಾರಗಳೇ. ಆದರೆ, ಜಸ್ಪ್ರೀತ್ ಸಿಂಗ್‌ನ ಅಸಂಬದ್ದ ಹಾಸ್ಯ ಕೇರಳ ಸಾಕ್ಷರತೆ ಹೊಂದಿರುವುದೇ ಅಪರಾಧ ಎಂಬಂತೆ ಬಿಂಬಿಸಿದೆ.

ಜಸ್ಪ್ರೀತ್ ಸಿಂಗ್‌ನ ಹೇಳಿಕೆಗೆ ಆಕ್ರೋಶಗೊಂಡಿರುವ ಮಲಯಾಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ನೂರಾರು ವಿಡಿಯೋಗಳನ್ನು ಮಾಡುವ ಮೂಲಕ ತಿರುಗೇಟು ಕೊಡುತ್ತಿದ್ದಾರೆ.

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ನಾವು ನಮ್ಮ ಮತವನ್ನು ಚಿಂತಿಸಿ ಚಲಾಯಿಸುತ್ತೇವೆ.

|ನಾವು 100% ಸಾಕ್ಷರರು, ಅದಕ್ಕಾಗಿಯೇ ನಾವು ಕುಂಬಳಂಗಿ ನೈಟ್ಸ್‌ನಂತಹ ಉತ್ತಮ ಚಲನಚಿತ್ರಗಳನ್ನು ಮಾಡುತ್ತೇವೆ.

ನಾವು 100% ಸಾಕ್ಷರರು, ಅದಕ್ಕಾಗಿಯೇ ಹಿಂದೂಗಳು, ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ಸಾಮರಸ್ಯದಿಂದ ಬದುಕುತ್ತಿದ್ದೇವೆ

ನಾವು 100% ಸಾಕ್ಷರರು, ಅದಕ್ಕಾಗಿಯೇ ಕೇರಳ ಮಾದರಿ ಪ್ರಸಿದ್ಧವಾಗಿದೆ.

ನಾವು 100% ಸಾಕ್ಷರರು, ಅದಕ್ಕಾಗಿಯೇ ನಾವು ಎಲ್ಲಾ ಲಿಂಗಗಳನ್ನು ಗೌರವಿಸುತ್ತೇವೆ ಮತ್ತು ಪ್ರತಿಪಾದಿಸುತ್ತೇವೆ.

ನಾವು 100% ಸಾಕ್ಷರರು, ಅದಕ್ಕಾಗಿಯೇ ನಾವು ಅಗತ್ಯವಿದ್ದರೆ ಸರ್ಕಾರದ ವಿರುದ್ಧ ಮಾತನಾಡುತ್ತೇವೆ.

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ಕೇರಳವನ್ನು ದೇವರ ಸ್ವಂತ ನಾಡು ಎಂದು ಕರೆಯಲಾಗುತ್ತದೆ.

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ಬೀಫ್ ತಿನ್ನುತ್ತೇವೆ

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ಕೋಮುವಾದಿಗಳನ್ನು ನಮ್ಮೊಳಗೆ ಬಿಟ್ಟುಕೊಂಡಿಲ್ಲ

ಈ ರೀತಿಯ ಉತ್ತರಗಳನ್ನು ಜಸ್ಪ್ರೀತ್ ಸಿಂಗ್‌ಗೆ ಮಲಯಾಳಿಗಳು ನೀಡುತ್ತಿದ್ದಾರೆ. ರಣವೀರ್ ಅಲಹಾಬಾದಿಯನ ಹೇಳಿಕೆ ಎಷ್ಟು ಅಸಂಬದ್ದವೋ, ಅಷ್ಟೇ ಜಸ್ಪ್ರೀತ್‌ ಸಿಂಗ್‌ನ ಹೇಳಿಕೆ ಅವಹೇಳನಕಾರಿ. ಹಾಗಾಗಿ, ಆತನ ವಿರುದ್ದವೂ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹಗಳು ವ್ಯಕ್ತವಾಗಿವೆ.

ಅಶ್ಲೀಲ ಹೇಳಿಕೆ: ರಣವೀರ್ ಅಲಹಾಬಾದಿಯಾ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...