Homeಮುಖಪುಟ"ಕೇರಳ ಸರ್ 100% ಲಿಟ್ರೆಸಿ ಸರ್" : ಜಸ್ಪ್ರೀತ್ ಸಿಂಗ್‌ನ ಅವಹೇಳನದ ಹಾಸ್ಯಕ್ಕೆ ಆಕ್ರೋಶಗೊಂಡ ಮಲಯಾಳಿಗಳು

“ಕೇರಳ ಸರ್ 100% ಲಿಟ್ರೆಸಿ ಸರ್” : ಜಸ್ಪ್ರೀತ್ ಸಿಂಗ್‌ನ ಅವಹೇಳನದ ಹಾಸ್ಯಕ್ಕೆ ಆಕ್ರೋಶಗೊಂಡ ಮಲಯಾಳಿಗಳು

- Advertisement -
- Advertisement -

ಕಾಮಿಡಿಯನ್ ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಶೋನಲ್ಲಿ ಬಲಪಂಥೀಯ ಯೂಟ್ಯೂಬರ್ ರಣವೀರ್ ಅಲಹಾಬಾದಿಯಾ ಪೋಷಕರು, ಮಹಿಳೆಯರು ಮತ್ತು ಲೈಂಗಿಕತೆಯ ಕುರಿತು ನೀಡಿರುವ ಅಶ್ಲೀಲ ಹೇಳಿಕೆ ಕುರಿತು ದೇಶದಾದ್ಯಂತ ಬಿಸಿಬಿಸಿ ಚರ್ಚೆ ನಡೆಯುತ್ತಿದೆ.

ಪ್ರಧಾನಿ ಮೋದಿ ಸಮ್ಮಾನಿತ ಅಲಾಬಾದಿಯನ ಒಂದು ಹೇಳಿಕೆಯಿಂದ ಆತ ಭಾಗವಹಿಸಿದ್ದ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಶೋನಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ್ದ ಇತರ ಸಾಮಾಜಿಕ ಜಾಲತಾಣ ಪ್ರಭಾವಿಗಳಾದ ಅಪೂರ್ವ ಮುಖಿಜಾ, ಆಶಿಶ್ ಚಂಚಲಾನಿ ಮತ್ತು ಜಸ್ಪ್ರೀತ್ ಸಿಂಗ್ ಕೂಡ ಕೇಸ್‌ ಹಾಕಿಸಿಕೊಳ್ಳುವಂತಾಗಿದೆ.

ಮುಂಬೈ, ಅಸ್ಸಾಂ ಸೇರಿದಂತೆ ವಿವಿದೆಡೆ ಅಲಹಾಬಾದಿಯ ಮತ್ತು ಇತರರ ವಿರುದ್ದ ದೂರು ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಹುಡುಕುತ್ತಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗ ಸೇರಿದಂತೆ ವಿವಿಧ ಸಂಸ್ಥೆಗಳು ಅಲಹಾಬಾದಿಯನ ಅಸಭ್ಯ ಹಾಸ್ಯವನ್ನು ಗಂಭೀರವಾಗಿ ಪರಿಗಣಿಸಿ ಕಾನೂನಿನ ಬಿಸಿ ಮುಟ್ಟಿಸಲು ಮುಂದಾಗಿವೆ.

ರಣವೀರ್ ಅಲಹಾಬಾದಿಯನ ಹೇಳಿಕೆ ಒಂದೆಡೆ ವಿವಾದವಾದರೆ, ಅತನ ಜೊತೆಗಿದ್ದ ಇತರರು ಅಮಾಯಕರು ಎಂದೆನಿಸಬೇಕಿಲ್ಲ. ಅವರೂ ಕೂಡ ಎಲ್ಲಾ ಮಿತಿಗಳನ್ನು ಮೀರಿ ಅಸಂಬಂದ್ಧ, ಅವಹೇಳನಕಾರಿ ಮತ್ತು ಅಶ್ಲೀಲ ಹಾಸ್ಯಕ್ಕೆ ಕುಖ್ಯಾತಿ ಪಡೆವರು. ಇದೀಗ ಅಲಹಾಬಾದಿಯನ ಹೇಳಿಕೆ ಜೊತೆಗೆ ಕಾಮಿಡಿಯನ್ ಜಸ್ಪ್ರೀತ್ ಸಿಂಗ್‌ ಕೇರಳದ ಕುರಿತು ನೀಡಿರುವ ಹೇಳಿಕೆಯೊಂದು ಭಾರೀ ವೈರಲ್ ಆಗಿದೆ. ಕೇರಳದವರನ್ನು ಅಥವಾ ಮಲಯಾಳಿಗಳನ್ನು ಆಕ್ರೋಶಗೊಳ್ಳುವಂತೆ ಮಾಡಿದೆ.

“ಕೇರಳ ಸರ್ 100% ಲಿಟ್ರೆಸಿ ಸರ್”

ವಿವಾದಿತ ಇಂಡಿಯಾಸ್ ಗಾಟ್ ಲ್ಯಾಟೆಂಟ್ ಶೋನಲ್ಲಿ ಭಾಗವಹಿಸಿದ್ದ ಕೇರಳದ ಸ್ಪರ್ಧಿಯೊಬ್ಬರು “ನನಗೆ ಯಾವುದೇ ರಾಜಕೀಯ ನಿಲುವು ಅಥವಾ ಒಲವು ಇಲ್ಲ. ನಾನು ವೋಟ್ ಕೂಡ ಮಾಡಲ್ಲ” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಕೊಟ್ಟ ತೀರ್ಪುಗಾರ ಜಸ್ಪ್ರೀತ್ ಸಿಂಗ್‌ ” ಕೇರಳ ಸರ್ 100% ಲಿಟ್ರೆಸಿ ಸರ್” ಎಂದು ಹೇಳುವ ಮೂಲಕ, ಆಕೆಯನ್ನು, ಆಕೆಯ ಭಾಷೆಯನ್ನು, ಆಕೆಯ ರಾಜ್ಯವನ್ನು ಅವಮಾನಿಸಿದ್ದಾರೆ. ವಿಶೇಷವಾಗಿ ದಕ್ಷಿಣ ಭಾರತದ ಮೇಲಿನ ತನ್ನ ದ್ವೇಷವನ್ನು ವ್ಯಕ್ತಪಡಿಸಿದ್ದಾರೆ.

ಕೇರಳ, ಕರ್ನಾಟ, ತಮಿಳುನಾಡು, ತೆಲಂಗಾಣದ, ಆಂಧ್ರ ಪ್ರದೇಶ ಸೇರಿದಂತೆ ದಕ್ಷಿಣದ ಡ್ರಾವಿಡ ರಾಜ್ಯಗಳು ಸದಾ ವೈವಿದ್ಯತೆಯನ್ನು ಹೊಂದಿರುವ ರಾಜ್ಯಗಳು. ಭಾರತದ ಸಂವಿಧಾನವನ್ನು ಬಲವಾಗಿ ಪ್ರತಿಪಾದಿಸುವ ರಾಜ್ಯಗಳು. ಶಿಕ್ಷಣ, ಮೂಲ ಸೌಕರ್ಯಗಳ ವಿಚಾರದಲ್ಲಿ ಬಹಳ ಮುಂದುವರಿದ ರಾಜ್ಯಗಳು. ಅಲ್ಲದೆ, ಈ ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳಿವೆ. ಈ ಎಲ್ಲಾ ಕಾರಣಕ್ಕೆ ಉತ್ತರ ಭಾರತದ ಕೆಲವರು ದಕ್ಷಿಣದ ಈ ರಾಜ್ಯಗಳನ್ನು ಮತ್ತು ಇಲ್ಲಿನ ಜನರನ್ನು ದೇಶದ್ರೋಹಿಗಳಂತೆ ಕಾಣುವ ಪರಿಪಾಠವಿದೆ. ಆ ಭಾವನೆ ಜಸ್ಪ್ರೀತ್ ಸಿಂಗ್‌ನ ಹೇಳಿಕೆಯಲ್ಲಿ ವ್ಯಕ್ತವಾಗಿದೆ. ವಿಶೇಷವಾಗಿ ಹಿಂದಿಯೇತರ ರಾಜ್ಯ ಎಂಬ ಕಾರಣಕ್ಕೆ ಹಿಂದಿ ಭಾಷಿಕರ ದ್ವೇಷ ಬಹಿರಂಗವಾಗಿದೆ.

ಆಕ್ರೋಶಗೊಂಡ ಮಲಯಾಳಿಗಳು

ಕೇರಳದ ಭಾರತದಲ್ಲಿ ಅತಿ ಹೆಚ್ಚು ಸಾಕ್ಷರತೆಯನ್ನು ಹೊಂದಿರುವ ರಾಜ್ಯ. ಕೇವಲ ಸಾಕ್ಷರತೆ ಮಾತ್ರವಲ್ಲದೆ ಕೋವಿಡ್, ನಿಫಾ, ಮಂಕಿ ಫಾಕ್ಸ್, ಡೆಂಗ್ಯೂನಂತಹ ಸಾಂಕ್ರಾಮಿಕ ರೋಗಗಳನ್ನು ಸಮರ್ಥವಾಗಿ ನಿಭಾಯಿಸಿದ ಕೀರ್ತಿ ಹೊಂದಿರುವ ರಾಜ್ಯ, ಉದ್ಯೋಗ, ವೇತನದ ವಿಚಾರದಲ್ಲಿ ಉತ್ತರಕ್ಕಿಂತ ಮುಂದಿರುವ ರಾಜ್ಯ. ಈ ಕಾರಣಕ್ಕೆ ಉತ್ತರ ಭಾರತದ ಸಾವಿರಾರು ಜನರು ಕೇರಳ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ. ಇವೆಲ್ಲವೂ ಹೆಮ್ಮೆ ಪಡುವಂತಹ ವಿಚಾರಗಳೇ. ಆದರೆ, ಜಸ್ಪ್ರೀತ್ ಸಿಂಗ್‌ನ ಅಸಂಬದ್ದ ಹಾಸ್ಯ ಕೇರಳ ಸಾಕ್ಷರತೆ ಹೊಂದಿರುವುದೇ ಅಪರಾಧ ಎಂಬಂತೆ ಬಿಂಬಿಸಿದೆ.

ಜಸ್ಪ್ರೀತ್ ಸಿಂಗ್‌ನ ಹೇಳಿಕೆಗೆ ಆಕ್ರೋಶಗೊಂಡಿರುವ ಮಲಯಾಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ನೂರಾರು ವಿಡಿಯೋಗಳನ್ನು ಮಾಡುವ ಮೂಲಕ ತಿರುಗೇಟು ಕೊಡುತ್ತಿದ್ದಾರೆ.

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ನಾವು ನಮ್ಮ ಮತವನ್ನು ಚಿಂತಿಸಿ ಚಲಾಯಿಸುತ್ತೇವೆ.

|ನಾವು 100% ಸಾಕ್ಷರರು, ಅದಕ್ಕಾಗಿಯೇ ನಾವು ಕುಂಬಳಂಗಿ ನೈಟ್ಸ್‌ನಂತಹ ಉತ್ತಮ ಚಲನಚಿತ್ರಗಳನ್ನು ಮಾಡುತ್ತೇವೆ.

ನಾವು 100% ಸಾಕ್ಷರರು, ಅದಕ್ಕಾಗಿಯೇ ಹಿಂದೂಗಳು, ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ಸಾಮರಸ್ಯದಿಂದ ಬದುಕುತ್ತಿದ್ದೇವೆ

ನಾವು 100% ಸಾಕ್ಷರರು, ಅದಕ್ಕಾಗಿಯೇ ಕೇರಳ ಮಾದರಿ ಪ್ರಸಿದ್ಧವಾಗಿದೆ.

ನಾವು 100% ಸಾಕ್ಷರರು, ಅದಕ್ಕಾಗಿಯೇ ನಾವು ಎಲ್ಲಾ ಲಿಂಗಗಳನ್ನು ಗೌರವಿಸುತ್ತೇವೆ ಮತ್ತು ಪ್ರತಿಪಾದಿಸುತ್ತೇವೆ.

ನಾವು 100% ಸಾಕ್ಷರರು, ಅದಕ್ಕಾಗಿಯೇ ನಾವು ಅಗತ್ಯವಿದ್ದರೆ ಸರ್ಕಾರದ ವಿರುದ್ಧ ಮಾತನಾಡುತ್ತೇವೆ.

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ಕೇರಳವನ್ನು ದೇವರ ಸ್ವಂತ ನಾಡು ಎಂದು ಕರೆಯಲಾಗುತ್ತದೆ.

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ಬೀಫ್ ತಿನ್ನುತ್ತೇವೆ

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ಕೋಮುವಾದಿಗಳನ್ನು ನಮ್ಮೊಳಗೆ ಬಿಟ್ಟುಕೊಂಡಿಲ್ಲ

ಈ ರೀತಿಯ ಉತ್ತರಗಳನ್ನು ಜಸ್ಪ್ರೀತ್ ಸಿಂಗ್‌ಗೆ ಮಲಯಾಳಿಗಳು ನೀಡುತ್ತಿದ್ದಾರೆ. ರಣವೀರ್ ಅಲಹಾಬಾದಿಯನ ಹೇಳಿಕೆ ಎಷ್ಟು ಅಸಂಬದ್ದವೋ, ಅಷ್ಟೇ ಜಸ್ಪ್ರೀತ್‌ ಸಿಂಗ್‌ನ ಹೇಳಿಕೆ ಅವಹೇಳನಕಾರಿ. ಹಾಗಾಗಿ, ಆತನ ವಿರುದ್ದವೂ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹಗಳು ವ್ಯಕ್ತವಾಗಿವೆ.

ಅಶ್ಲೀಲ ಹೇಳಿಕೆ: ರಣವೀರ್ ಅಲಹಾಬಾದಿಯಾ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...