Homeಮುಖಪುಟ"ಕೇರಳ ಸರ್ 100% ಲಿಟ್ರೆಸಿ ಸರ್" : ಜಸ್ಪ್ರೀತ್ ಸಿಂಗ್‌ನ ಅವಹೇಳನದ ಹಾಸ್ಯಕ್ಕೆ ಆಕ್ರೋಶಗೊಂಡ ಮಲಯಾಳಿಗಳು

“ಕೇರಳ ಸರ್ 100% ಲಿಟ್ರೆಸಿ ಸರ್” : ಜಸ್ಪ್ರೀತ್ ಸಿಂಗ್‌ನ ಅವಹೇಳನದ ಹಾಸ್ಯಕ್ಕೆ ಆಕ್ರೋಶಗೊಂಡ ಮಲಯಾಳಿಗಳು

- Advertisement -
- Advertisement -

ಕಾಮಿಡಿಯನ್ ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಶೋನಲ್ಲಿ ಬಲಪಂಥೀಯ ಯೂಟ್ಯೂಬರ್ ರಣವೀರ್ ಅಲಹಾಬಾದಿಯಾ ಪೋಷಕರು, ಮಹಿಳೆಯರು ಮತ್ತು ಲೈಂಗಿಕತೆಯ ಕುರಿತು ನೀಡಿರುವ ಅಶ್ಲೀಲ ಹೇಳಿಕೆ ಕುರಿತು ದೇಶದಾದ್ಯಂತ ಬಿಸಿಬಿಸಿ ಚರ್ಚೆ ನಡೆಯುತ್ತಿದೆ.

ಪ್ರಧಾನಿ ಮೋದಿ ಸಮ್ಮಾನಿತ ಅಲಾಬಾದಿಯನ ಒಂದು ಹೇಳಿಕೆಯಿಂದ ಆತ ಭಾಗವಹಿಸಿದ್ದ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಶೋನಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ್ದ ಇತರ ಸಾಮಾಜಿಕ ಜಾಲತಾಣ ಪ್ರಭಾವಿಗಳಾದ ಅಪೂರ್ವ ಮುಖಿಜಾ, ಆಶಿಶ್ ಚಂಚಲಾನಿ ಮತ್ತು ಜಸ್ಪ್ರೀತ್ ಸಿಂಗ್ ಕೂಡ ಕೇಸ್‌ ಹಾಕಿಸಿಕೊಳ್ಳುವಂತಾಗಿದೆ.

ಮುಂಬೈ, ಅಸ್ಸಾಂ ಸೇರಿದಂತೆ ವಿವಿದೆಡೆ ಅಲಹಾಬಾದಿಯ ಮತ್ತು ಇತರರ ವಿರುದ್ದ ದೂರು ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಹುಡುಕುತ್ತಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗ ಸೇರಿದಂತೆ ವಿವಿಧ ಸಂಸ್ಥೆಗಳು ಅಲಹಾಬಾದಿಯನ ಅಸಭ್ಯ ಹಾಸ್ಯವನ್ನು ಗಂಭೀರವಾಗಿ ಪರಿಗಣಿಸಿ ಕಾನೂನಿನ ಬಿಸಿ ಮುಟ್ಟಿಸಲು ಮುಂದಾಗಿವೆ.

ರಣವೀರ್ ಅಲಹಾಬಾದಿಯನ ಹೇಳಿಕೆ ಒಂದೆಡೆ ವಿವಾದವಾದರೆ, ಅತನ ಜೊತೆಗಿದ್ದ ಇತರರು ಅಮಾಯಕರು ಎಂದೆನಿಸಬೇಕಿಲ್ಲ. ಅವರೂ ಕೂಡ ಎಲ್ಲಾ ಮಿತಿಗಳನ್ನು ಮೀರಿ ಅಸಂಬಂದ್ಧ, ಅವಹೇಳನಕಾರಿ ಮತ್ತು ಅಶ್ಲೀಲ ಹಾಸ್ಯಕ್ಕೆ ಕುಖ್ಯಾತಿ ಪಡೆವರು. ಇದೀಗ ಅಲಹಾಬಾದಿಯನ ಹೇಳಿಕೆ ಜೊತೆಗೆ ಕಾಮಿಡಿಯನ್ ಜಸ್ಪ್ರೀತ್ ಸಿಂಗ್‌ ಕೇರಳದ ಕುರಿತು ನೀಡಿರುವ ಹೇಳಿಕೆಯೊಂದು ಭಾರೀ ವೈರಲ್ ಆಗಿದೆ. ಕೇರಳದವರನ್ನು ಅಥವಾ ಮಲಯಾಳಿಗಳನ್ನು ಆಕ್ರೋಶಗೊಳ್ಳುವಂತೆ ಮಾಡಿದೆ.

“ಕೇರಳ ಸರ್ 100% ಲಿಟ್ರೆಸಿ ಸರ್”

ವಿವಾದಿತ ಇಂಡಿಯಾಸ್ ಗಾಟ್ ಲ್ಯಾಟೆಂಟ್ ಶೋನಲ್ಲಿ ಭಾಗವಹಿಸಿದ್ದ ಕೇರಳದ ಸ್ಪರ್ಧಿಯೊಬ್ಬರು “ನನಗೆ ಯಾವುದೇ ರಾಜಕೀಯ ನಿಲುವು ಅಥವಾ ಒಲವು ಇಲ್ಲ. ನಾನು ವೋಟ್ ಕೂಡ ಮಾಡಲ್ಲ” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಕೊಟ್ಟ ತೀರ್ಪುಗಾರ ಜಸ್ಪ್ರೀತ್ ಸಿಂಗ್‌ ” ಕೇರಳ ಸರ್ 100% ಲಿಟ್ರೆಸಿ ಸರ್” ಎಂದು ಹೇಳುವ ಮೂಲಕ, ಆಕೆಯನ್ನು, ಆಕೆಯ ಭಾಷೆಯನ್ನು, ಆಕೆಯ ರಾಜ್ಯವನ್ನು ಅವಮಾನಿಸಿದ್ದಾರೆ. ವಿಶೇಷವಾಗಿ ದಕ್ಷಿಣ ಭಾರತದ ಮೇಲಿನ ತನ್ನ ದ್ವೇಷವನ್ನು ವ್ಯಕ್ತಪಡಿಸಿದ್ದಾರೆ.

ಕೇರಳ, ಕರ್ನಾಟ, ತಮಿಳುನಾಡು, ತೆಲಂಗಾಣದ, ಆಂಧ್ರ ಪ್ರದೇಶ ಸೇರಿದಂತೆ ದಕ್ಷಿಣದ ಡ್ರಾವಿಡ ರಾಜ್ಯಗಳು ಸದಾ ವೈವಿದ್ಯತೆಯನ್ನು ಹೊಂದಿರುವ ರಾಜ್ಯಗಳು. ಭಾರತದ ಸಂವಿಧಾನವನ್ನು ಬಲವಾಗಿ ಪ್ರತಿಪಾದಿಸುವ ರಾಜ್ಯಗಳು. ಶಿಕ್ಷಣ, ಮೂಲ ಸೌಕರ್ಯಗಳ ವಿಚಾರದಲ್ಲಿ ಬಹಳ ಮುಂದುವರಿದ ರಾಜ್ಯಗಳು. ಅಲ್ಲದೆ, ಈ ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳಿವೆ. ಈ ಎಲ್ಲಾ ಕಾರಣಕ್ಕೆ ಉತ್ತರ ಭಾರತದ ಕೆಲವರು ದಕ್ಷಿಣದ ಈ ರಾಜ್ಯಗಳನ್ನು ಮತ್ತು ಇಲ್ಲಿನ ಜನರನ್ನು ದೇಶದ್ರೋಹಿಗಳಂತೆ ಕಾಣುವ ಪರಿಪಾಠವಿದೆ. ಆ ಭಾವನೆ ಜಸ್ಪ್ರೀತ್ ಸಿಂಗ್‌ನ ಹೇಳಿಕೆಯಲ್ಲಿ ವ್ಯಕ್ತವಾಗಿದೆ. ವಿಶೇಷವಾಗಿ ಹಿಂದಿಯೇತರ ರಾಜ್ಯ ಎಂಬ ಕಾರಣಕ್ಕೆ ಹಿಂದಿ ಭಾಷಿಕರ ದ್ವೇಷ ಬಹಿರಂಗವಾಗಿದೆ.

ಆಕ್ರೋಶಗೊಂಡ ಮಲಯಾಳಿಗಳು

ಕೇರಳದ ಭಾರತದಲ್ಲಿ ಅತಿ ಹೆಚ್ಚು ಸಾಕ್ಷರತೆಯನ್ನು ಹೊಂದಿರುವ ರಾಜ್ಯ. ಕೇವಲ ಸಾಕ್ಷರತೆ ಮಾತ್ರವಲ್ಲದೆ ಕೋವಿಡ್, ನಿಫಾ, ಮಂಕಿ ಫಾಕ್ಸ್, ಡೆಂಗ್ಯೂನಂತಹ ಸಾಂಕ್ರಾಮಿಕ ರೋಗಗಳನ್ನು ಸಮರ್ಥವಾಗಿ ನಿಭಾಯಿಸಿದ ಕೀರ್ತಿ ಹೊಂದಿರುವ ರಾಜ್ಯ, ಉದ್ಯೋಗ, ವೇತನದ ವಿಚಾರದಲ್ಲಿ ಉತ್ತರಕ್ಕಿಂತ ಮುಂದಿರುವ ರಾಜ್ಯ. ಈ ಕಾರಣಕ್ಕೆ ಉತ್ತರ ಭಾರತದ ಸಾವಿರಾರು ಜನರು ಕೇರಳ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ. ಇವೆಲ್ಲವೂ ಹೆಮ್ಮೆ ಪಡುವಂತಹ ವಿಚಾರಗಳೇ. ಆದರೆ, ಜಸ್ಪ್ರೀತ್ ಸಿಂಗ್‌ನ ಅಸಂಬದ್ದ ಹಾಸ್ಯ ಕೇರಳ ಸಾಕ್ಷರತೆ ಹೊಂದಿರುವುದೇ ಅಪರಾಧ ಎಂಬಂತೆ ಬಿಂಬಿಸಿದೆ.

ಜಸ್ಪ್ರೀತ್ ಸಿಂಗ್‌ನ ಹೇಳಿಕೆಗೆ ಆಕ್ರೋಶಗೊಂಡಿರುವ ಮಲಯಾಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ನೂರಾರು ವಿಡಿಯೋಗಳನ್ನು ಮಾಡುವ ಮೂಲಕ ತಿರುಗೇಟು ಕೊಡುತ್ತಿದ್ದಾರೆ.

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ನಾವು ನಮ್ಮ ಮತವನ್ನು ಚಿಂತಿಸಿ ಚಲಾಯಿಸುತ್ತೇವೆ.

|ನಾವು 100% ಸಾಕ್ಷರರು, ಅದಕ್ಕಾಗಿಯೇ ನಾವು ಕುಂಬಳಂಗಿ ನೈಟ್ಸ್‌ನಂತಹ ಉತ್ತಮ ಚಲನಚಿತ್ರಗಳನ್ನು ಮಾಡುತ್ತೇವೆ.

ನಾವು 100% ಸಾಕ್ಷರರು, ಅದಕ್ಕಾಗಿಯೇ ಹಿಂದೂಗಳು, ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ಸಾಮರಸ್ಯದಿಂದ ಬದುಕುತ್ತಿದ್ದೇವೆ

ನಾವು 100% ಸಾಕ್ಷರರು, ಅದಕ್ಕಾಗಿಯೇ ಕೇರಳ ಮಾದರಿ ಪ್ರಸಿದ್ಧವಾಗಿದೆ.

ನಾವು 100% ಸಾಕ್ಷರರು, ಅದಕ್ಕಾಗಿಯೇ ನಾವು ಎಲ್ಲಾ ಲಿಂಗಗಳನ್ನು ಗೌರವಿಸುತ್ತೇವೆ ಮತ್ತು ಪ್ರತಿಪಾದಿಸುತ್ತೇವೆ.

ನಾವು 100% ಸಾಕ್ಷರರು, ಅದಕ್ಕಾಗಿಯೇ ನಾವು ಅಗತ್ಯವಿದ್ದರೆ ಸರ್ಕಾರದ ವಿರುದ್ಧ ಮಾತನಾಡುತ್ತೇವೆ.

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ಕೇರಳವನ್ನು ದೇವರ ಸ್ವಂತ ನಾಡು ಎಂದು ಕರೆಯಲಾಗುತ್ತದೆ.

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ಬೀಫ್ ತಿನ್ನುತ್ತೇವೆ

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ಕೋಮುವಾದಿಗಳನ್ನು ನಮ್ಮೊಳಗೆ ಬಿಟ್ಟುಕೊಂಡಿಲ್ಲ

ಈ ರೀತಿಯ ಉತ್ತರಗಳನ್ನು ಜಸ್ಪ್ರೀತ್ ಸಿಂಗ್‌ಗೆ ಮಲಯಾಳಿಗಳು ನೀಡುತ್ತಿದ್ದಾರೆ. ರಣವೀರ್ ಅಲಹಾಬಾದಿಯನ ಹೇಳಿಕೆ ಎಷ್ಟು ಅಸಂಬದ್ದವೋ, ಅಷ್ಟೇ ಜಸ್ಪ್ರೀತ್‌ ಸಿಂಗ್‌ನ ಹೇಳಿಕೆ ಅವಹೇಳನಕಾರಿ. ಹಾಗಾಗಿ, ಆತನ ವಿರುದ್ದವೂ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹಗಳು ವ್ಯಕ್ತವಾಗಿವೆ.

ಅಶ್ಲೀಲ ಹೇಳಿಕೆ: ರಣವೀರ್ ಅಲಹಾಬಾದಿಯಾ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...