Homeಮುಖಪುಟ"ಕೇರಳ ಸರ್ 100% ಲಿಟ್ರೆಸಿ ಸರ್" : ಜಸ್ಪ್ರೀತ್ ಸಿಂಗ್‌ನ ಅವಹೇಳನದ ಹಾಸ್ಯಕ್ಕೆ ಆಕ್ರೋಶಗೊಂಡ ಮಲಯಾಳಿಗಳು

“ಕೇರಳ ಸರ್ 100% ಲಿಟ್ರೆಸಿ ಸರ್” : ಜಸ್ಪ್ರೀತ್ ಸಿಂಗ್‌ನ ಅವಹೇಳನದ ಹಾಸ್ಯಕ್ಕೆ ಆಕ್ರೋಶಗೊಂಡ ಮಲಯಾಳಿಗಳು

- Advertisement -
- Advertisement -

ಕಾಮಿಡಿಯನ್ ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಶೋನಲ್ಲಿ ಬಲಪಂಥೀಯ ಯೂಟ್ಯೂಬರ್ ರಣವೀರ್ ಅಲಹಾಬಾದಿಯಾ ಪೋಷಕರು, ಮಹಿಳೆಯರು ಮತ್ತು ಲೈಂಗಿಕತೆಯ ಕುರಿತು ನೀಡಿರುವ ಅಶ್ಲೀಲ ಹೇಳಿಕೆ ಕುರಿತು ದೇಶದಾದ್ಯಂತ ಬಿಸಿಬಿಸಿ ಚರ್ಚೆ ನಡೆಯುತ್ತಿದೆ.

ಪ್ರಧಾನಿ ಮೋದಿ ಸಮ್ಮಾನಿತ ಅಲಾಬಾದಿಯನ ಒಂದು ಹೇಳಿಕೆಯಿಂದ ಆತ ಭಾಗವಹಿಸಿದ್ದ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಶೋನಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ್ದ ಇತರ ಸಾಮಾಜಿಕ ಜಾಲತಾಣ ಪ್ರಭಾವಿಗಳಾದ ಅಪೂರ್ವ ಮುಖಿಜಾ, ಆಶಿಶ್ ಚಂಚಲಾನಿ ಮತ್ತು ಜಸ್ಪ್ರೀತ್ ಸಿಂಗ್ ಕೂಡ ಕೇಸ್‌ ಹಾಕಿಸಿಕೊಳ್ಳುವಂತಾಗಿದೆ.

ಮುಂಬೈ, ಅಸ್ಸಾಂ ಸೇರಿದಂತೆ ವಿವಿದೆಡೆ ಅಲಹಾಬಾದಿಯ ಮತ್ತು ಇತರರ ವಿರುದ್ದ ದೂರು ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಹುಡುಕುತ್ತಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗ ಸೇರಿದಂತೆ ವಿವಿಧ ಸಂಸ್ಥೆಗಳು ಅಲಹಾಬಾದಿಯನ ಅಸಭ್ಯ ಹಾಸ್ಯವನ್ನು ಗಂಭೀರವಾಗಿ ಪರಿಗಣಿಸಿ ಕಾನೂನಿನ ಬಿಸಿ ಮುಟ್ಟಿಸಲು ಮುಂದಾಗಿವೆ.

ರಣವೀರ್ ಅಲಹಾಬಾದಿಯನ ಹೇಳಿಕೆ ಒಂದೆಡೆ ವಿವಾದವಾದರೆ, ಅತನ ಜೊತೆಗಿದ್ದ ಇತರರು ಅಮಾಯಕರು ಎಂದೆನಿಸಬೇಕಿಲ್ಲ. ಅವರೂ ಕೂಡ ಎಲ್ಲಾ ಮಿತಿಗಳನ್ನು ಮೀರಿ ಅಸಂಬಂದ್ಧ, ಅವಹೇಳನಕಾರಿ ಮತ್ತು ಅಶ್ಲೀಲ ಹಾಸ್ಯಕ್ಕೆ ಕುಖ್ಯಾತಿ ಪಡೆವರು. ಇದೀಗ ಅಲಹಾಬಾದಿಯನ ಹೇಳಿಕೆ ಜೊತೆಗೆ ಕಾಮಿಡಿಯನ್ ಜಸ್ಪ್ರೀತ್ ಸಿಂಗ್‌ ಕೇರಳದ ಕುರಿತು ನೀಡಿರುವ ಹೇಳಿಕೆಯೊಂದು ಭಾರೀ ವೈರಲ್ ಆಗಿದೆ. ಕೇರಳದವರನ್ನು ಅಥವಾ ಮಲಯಾಳಿಗಳನ್ನು ಆಕ್ರೋಶಗೊಳ್ಳುವಂತೆ ಮಾಡಿದೆ.

“ಕೇರಳ ಸರ್ 100% ಲಿಟ್ರೆಸಿ ಸರ್”

ವಿವಾದಿತ ಇಂಡಿಯಾಸ್ ಗಾಟ್ ಲ್ಯಾಟೆಂಟ್ ಶೋನಲ್ಲಿ ಭಾಗವಹಿಸಿದ್ದ ಕೇರಳದ ಸ್ಪರ್ಧಿಯೊಬ್ಬರು “ನನಗೆ ಯಾವುದೇ ರಾಜಕೀಯ ನಿಲುವು ಅಥವಾ ಒಲವು ಇಲ್ಲ. ನಾನು ವೋಟ್ ಕೂಡ ಮಾಡಲ್ಲ” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಕೊಟ್ಟ ತೀರ್ಪುಗಾರ ಜಸ್ಪ್ರೀತ್ ಸಿಂಗ್‌ ” ಕೇರಳ ಸರ್ 100% ಲಿಟ್ರೆಸಿ ಸರ್” ಎಂದು ಹೇಳುವ ಮೂಲಕ, ಆಕೆಯನ್ನು, ಆಕೆಯ ಭಾಷೆಯನ್ನು, ಆಕೆಯ ರಾಜ್ಯವನ್ನು ಅವಮಾನಿಸಿದ್ದಾರೆ. ವಿಶೇಷವಾಗಿ ದಕ್ಷಿಣ ಭಾರತದ ಮೇಲಿನ ತನ್ನ ದ್ವೇಷವನ್ನು ವ್ಯಕ್ತಪಡಿಸಿದ್ದಾರೆ.

ಕೇರಳ, ಕರ್ನಾಟ, ತಮಿಳುನಾಡು, ತೆಲಂಗಾಣದ, ಆಂಧ್ರ ಪ್ರದೇಶ ಸೇರಿದಂತೆ ದಕ್ಷಿಣದ ಡ್ರಾವಿಡ ರಾಜ್ಯಗಳು ಸದಾ ವೈವಿದ್ಯತೆಯನ್ನು ಹೊಂದಿರುವ ರಾಜ್ಯಗಳು. ಭಾರತದ ಸಂವಿಧಾನವನ್ನು ಬಲವಾಗಿ ಪ್ರತಿಪಾದಿಸುವ ರಾಜ್ಯಗಳು. ಶಿಕ್ಷಣ, ಮೂಲ ಸೌಕರ್ಯಗಳ ವಿಚಾರದಲ್ಲಿ ಬಹಳ ಮುಂದುವರಿದ ರಾಜ್ಯಗಳು. ಅಲ್ಲದೆ, ಈ ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳಿವೆ. ಈ ಎಲ್ಲಾ ಕಾರಣಕ್ಕೆ ಉತ್ತರ ಭಾರತದ ಕೆಲವರು ದಕ್ಷಿಣದ ಈ ರಾಜ್ಯಗಳನ್ನು ಮತ್ತು ಇಲ್ಲಿನ ಜನರನ್ನು ದೇಶದ್ರೋಹಿಗಳಂತೆ ಕಾಣುವ ಪರಿಪಾಠವಿದೆ. ಆ ಭಾವನೆ ಜಸ್ಪ್ರೀತ್ ಸಿಂಗ್‌ನ ಹೇಳಿಕೆಯಲ್ಲಿ ವ್ಯಕ್ತವಾಗಿದೆ. ವಿಶೇಷವಾಗಿ ಹಿಂದಿಯೇತರ ರಾಜ್ಯ ಎಂಬ ಕಾರಣಕ್ಕೆ ಹಿಂದಿ ಭಾಷಿಕರ ದ್ವೇಷ ಬಹಿರಂಗವಾಗಿದೆ.

ಆಕ್ರೋಶಗೊಂಡ ಮಲಯಾಳಿಗಳು

ಕೇರಳದ ಭಾರತದಲ್ಲಿ ಅತಿ ಹೆಚ್ಚು ಸಾಕ್ಷರತೆಯನ್ನು ಹೊಂದಿರುವ ರಾಜ್ಯ. ಕೇವಲ ಸಾಕ್ಷರತೆ ಮಾತ್ರವಲ್ಲದೆ ಕೋವಿಡ್, ನಿಫಾ, ಮಂಕಿ ಫಾಕ್ಸ್, ಡೆಂಗ್ಯೂನಂತಹ ಸಾಂಕ್ರಾಮಿಕ ರೋಗಗಳನ್ನು ಸಮರ್ಥವಾಗಿ ನಿಭಾಯಿಸಿದ ಕೀರ್ತಿ ಹೊಂದಿರುವ ರಾಜ್ಯ, ಉದ್ಯೋಗ, ವೇತನದ ವಿಚಾರದಲ್ಲಿ ಉತ್ತರಕ್ಕಿಂತ ಮುಂದಿರುವ ರಾಜ್ಯ. ಈ ಕಾರಣಕ್ಕೆ ಉತ್ತರ ಭಾರತದ ಸಾವಿರಾರು ಜನರು ಕೇರಳ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ. ಇವೆಲ್ಲವೂ ಹೆಮ್ಮೆ ಪಡುವಂತಹ ವಿಚಾರಗಳೇ. ಆದರೆ, ಜಸ್ಪ್ರೀತ್ ಸಿಂಗ್‌ನ ಅಸಂಬದ್ದ ಹಾಸ್ಯ ಕೇರಳ ಸಾಕ್ಷರತೆ ಹೊಂದಿರುವುದೇ ಅಪರಾಧ ಎಂಬಂತೆ ಬಿಂಬಿಸಿದೆ.

ಜಸ್ಪ್ರೀತ್ ಸಿಂಗ್‌ನ ಹೇಳಿಕೆಗೆ ಆಕ್ರೋಶಗೊಂಡಿರುವ ಮಲಯಾಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ನೂರಾರು ವಿಡಿಯೋಗಳನ್ನು ಮಾಡುವ ಮೂಲಕ ತಿರುಗೇಟು ಕೊಡುತ್ತಿದ್ದಾರೆ.

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ನಾವು ನಮ್ಮ ಮತವನ್ನು ಚಿಂತಿಸಿ ಚಲಾಯಿಸುತ್ತೇವೆ.

|ನಾವು 100% ಸಾಕ್ಷರರು, ಅದಕ್ಕಾಗಿಯೇ ನಾವು ಕುಂಬಳಂಗಿ ನೈಟ್ಸ್‌ನಂತಹ ಉತ್ತಮ ಚಲನಚಿತ್ರಗಳನ್ನು ಮಾಡುತ್ತೇವೆ.

ನಾವು 100% ಸಾಕ್ಷರರು, ಅದಕ್ಕಾಗಿಯೇ ಹಿಂದೂಗಳು, ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ಸಾಮರಸ್ಯದಿಂದ ಬದುಕುತ್ತಿದ್ದೇವೆ

ನಾವು 100% ಸಾಕ್ಷರರು, ಅದಕ್ಕಾಗಿಯೇ ಕೇರಳ ಮಾದರಿ ಪ್ರಸಿದ್ಧವಾಗಿದೆ.

ನಾವು 100% ಸಾಕ್ಷರರು, ಅದಕ್ಕಾಗಿಯೇ ನಾವು ಎಲ್ಲಾ ಲಿಂಗಗಳನ್ನು ಗೌರವಿಸುತ್ತೇವೆ ಮತ್ತು ಪ್ರತಿಪಾದಿಸುತ್ತೇವೆ.

ನಾವು 100% ಸಾಕ್ಷರರು, ಅದಕ್ಕಾಗಿಯೇ ನಾವು ಅಗತ್ಯವಿದ್ದರೆ ಸರ್ಕಾರದ ವಿರುದ್ಧ ಮಾತನಾಡುತ್ತೇವೆ.

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ಕೇರಳವನ್ನು ದೇವರ ಸ್ವಂತ ನಾಡು ಎಂದು ಕರೆಯಲಾಗುತ್ತದೆ.

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ಬೀಫ್ ತಿನ್ನುತ್ತೇವೆ

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ಕೋಮುವಾದಿಗಳನ್ನು ನಮ್ಮೊಳಗೆ ಬಿಟ್ಟುಕೊಂಡಿಲ್ಲ

ಈ ರೀತಿಯ ಉತ್ತರಗಳನ್ನು ಜಸ್ಪ್ರೀತ್ ಸಿಂಗ್‌ಗೆ ಮಲಯಾಳಿಗಳು ನೀಡುತ್ತಿದ್ದಾರೆ. ರಣವೀರ್ ಅಲಹಾಬಾದಿಯನ ಹೇಳಿಕೆ ಎಷ್ಟು ಅಸಂಬದ್ದವೋ, ಅಷ್ಟೇ ಜಸ್ಪ್ರೀತ್‌ ಸಿಂಗ್‌ನ ಹೇಳಿಕೆ ಅವಹೇಳನಕಾರಿ. ಹಾಗಾಗಿ, ಆತನ ವಿರುದ್ದವೂ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹಗಳು ವ್ಯಕ್ತವಾಗಿವೆ.

ಅಶ್ಲೀಲ ಹೇಳಿಕೆ: ರಣವೀರ್ ಅಲಹಾಬಾದಿಯಾ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...