Homeಮುಖಪುಟ"ಕೇರಳ ಸರ್ 100% ಲಿಟ್ರೆಸಿ ಸರ್" : ಜಸ್ಪ್ರೀತ್ ಸಿಂಗ್‌ನ ಅವಹೇಳನದ ಹಾಸ್ಯಕ್ಕೆ ಆಕ್ರೋಶಗೊಂಡ ಮಲಯಾಳಿಗಳು

“ಕೇರಳ ಸರ್ 100% ಲಿಟ್ರೆಸಿ ಸರ್” : ಜಸ್ಪ್ರೀತ್ ಸಿಂಗ್‌ನ ಅವಹೇಳನದ ಹಾಸ್ಯಕ್ಕೆ ಆಕ್ರೋಶಗೊಂಡ ಮಲಯಾಳಿಗಳು

- Advertisement -
- Advertisement -

ಕಾಮಿಡಿಯನ್ ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಶೋನಲ್ಲಿ ಬಲಪಂಥೀಯ ಯೂಟ್ಯೂಬರ್ ರಣವೀರ್ ಅಲಹಾಬಾದಿಯಾ ಪೋಷಕರು, ಮಹಿಳೆಯರು ಮತ್ತು ಲೈಂಗಿಕತೆಯ ಕುರಿತು ನೀಡಿರುವ ಅಶ್ಲೀಲ ಹೇಳಿಕೆ ಕುರಿತು ದೇಶದಾದ್ಯಂತ ಬಿಸಿಬಿಸಿ ಚರ್ಚೆ ನಡೆಯುತ್ತಿದೆ.

ಪ್ರಧಾನಿ ಮೋದಿ ಸಮ್ಮಾನಿತ ಅಲಾಬಾದಿಯನ ಒಂದು ಹೇಳಿಕೆಯಿಂದ ಆತ ಭಾಗವಹಿಸಿದ್ದ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಶೋನಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ್ದ ಇತರ ಸಾಮಾಜಿಕ ಜಾಲತಾಣ ಪ್ರಭಾವಿಗಳಾದ ಅಪೂರ್ವ ಮುಖಿಜಾ, ಆಶಿಶ್ ಚಂಚಲಾನಿ ಮತ್ತು ಜಸ್ಪ್ರೀತ್ ಸಿಂಗ್ ಕೂಡ ಕೇಸ್‌ ಹಾಕಿಸಿಕೊಳ್ಳುವಂತಾಗಿದೆ.

ಮುಂಬೈ, ಅಸ್ಸಾಂ ಸೇರಿದಂತೆ ವಿವಿದೆಡೆ ಅಲಹಾಬಾದಿಯ ಮತ್ತು ಇತರರ ವಿರುದ್ದ ದೂರು ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಹುಡುಕುತ್ತಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗ ಸೇರಿದಂತೆ ವಿವಿಧ ಸಂಸ್ಥೆಗಳು ಅಲಹಾಬಾದಿಯನ ಅಸಭ್ಯ ಹಾಸ್ಯವನ್ನು ಗಂಭೀರವಾಗಿ ಪರಿಗಣಿಸಿ ಕಾನೂನಿನ ಬಿಸಿ ಮುಟ್ಟಿಸಲು ಮುಂದಾಗಿವೆ.

ರಣವೀರ್ ಅಲಹಾಬಾದಿಯನ ಹೇಳಿಕೆ ಒಂದೆಡೆ ವಿವಾದವಾದರೆ, ಅತನ ಜೊತೆಗಿದ್ದ ಇತರರು ಅಮಾಯಕರು ಎಂದೆನಿಸಬೇಕಿಲ್ಲ. ಅವರೂ ಕೂಡ ಎಲ್ಲಾ ಮಿತಿಗಳನ್ನು ಮೀರಿ ಅಸಂಬಂದ್ಧ, ಅವಹೇಳನಕಾರಿ ಮತ್ತು ಅಶ್ಲೀಲ ಹಾಸ್ಯಕ್ಕೆ ಕುಖ್ಯಾತಿ ಪಡೆವರು. ಇದೀಗ ಅಲಹಾಬಾದಿಯನ ಹೇಳಿಕೆ ಜೊತೆಗೆ ಕಾಮಿಡಿಯನ್ ಜಸ್ಪ್ರೀತ್ ಸಿಂಗ್‌ ಕೇರಳದ ಕುರಿತು ನೀಡಿರುವ ಹೇಳಿಕೆಯೊಂದು ಭಾರೀ ವೈರಲ್ ಆಗಿದೆ. ಕೇರಳದವರನ್ನು ಅಥವಾ ಮಲಯಾಳಿಗಳನ್ನು ಆಕ್ರೋಶಗೊಳ್ಳುವಂತೆ ಮಾಡಿದೆ.

“ಕೇರಳ ಸರ್ 100% ಲಿಟ್ರೆಸಿ ಸರ್”

ವಿವಾದಿತ ಇಂಡಿಯಾಸ್ ಗಾಟ್ ಲ್ಯಾಟೆಂಟ್ ಶೋನಲ್ಲಿ ಭಾಗವಹಿಸಿದ್ದ ಕೇರಳದ ಸ್ಪರ್ಧಿಯೊಬ್ಬರು “ನನಗೆ ಯಾವುದೇ ರಾಜಕೀಯ ನಿಲುವು ಅಥವಾ ಒಲವು ಇಲ್ಲ. ನಾನು ವೋಟ್ ಕೂಡ ಮಾಡಲ್ಲ” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಕೊಟ್ಟ ತೀರ್ಪುಗಾರ ಜಸ್ಪ್ರೀತ್ ಸಿಂಗ್‌ ” ಕೇರಳ ಸರ್ 100% ಲಿಟ್ರೆಸಿ ಸರ್” ಎಂದು ಹೇಳುವ ಮೂಲಕ, ಆಕೆಯನ್ನು, ಆಕೆಯ ಭಾಷೆಯನ್ನು, ಆಕೆಯ ರಾಜ್ಯವನ್ನು ಅವಮಾನಿಸಿದ್ದಾರೆ. ವಿಶೇಷವಾಗಿ ದಕ್ಷಿಣ ಭಾರತದ ಮೇಲಿನ ತನ್ನ ದ್ವೇಷವನ್ನು ವ್ಯಕ್ತಪಡಿಸಿದ್ದಾರೆ.

ಕೇರಳ, ಕರ್ನಾಟ, ತಮಿಳುನಾಡು, ತೆಲಂಗಾಣದ, ಆಂಧ್ರ ಪ್ರದೇಶ ಸೇರಿದಂತೆ ದಕ್ಷಿಣದ ಡ್ರಾವಿಡ ರಾಜ್ಯಗಳು ಸದಾ ವೈವಿದ್ಯತೆಯನ್ನು ಹೊಂದಿರುವ ರಾಜ್ಯಗಳು. ಭಾರತದ ಸಂವಿಧಾನವನ್ನು ಬಲವಾಗಿ ಪ್ರತಿಪಾದಿಸುವ ರಾಜ್ಯಗಳು. ಶಿಕ್ಷಣ, ಮೂಲ ಸೌಕರ್ಯಗಳ ವಿಚಾರದಲ್ಲಿ ಬಹಳ ಮುಂದುವರಿದ ರಾಜ್ಯಗಳು. ಅಲ್ಲದೆ, ಈ ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳಿವೆ. ಈ ಎಲ್ಲಾ ಕಾರಣಕ್ಕೆ ಉತ್ತರ ಭಾರತದ ಕೆಲವರು ದಕ್ಷಿಣದ ಈ ರಾಜ್ಯಗಳನ್ನು ಮತ್ತು ಇಲ್ಲಿನ ಜನರನ್ನು ದೇಶದ್ರೋಹಿಗಳಂತೆ ಕಾಣುವ ಪರಿಪಾಠವಿದೆ. ಆ ಭಾವನೆ ಜಸ್ಪ್ರೀತ್ ಸಿಂಗ್‌ನ ಹೇಳಿಕೆಯಲ್ಲಿ ವ್ಯಕ್ತವಾಗಿದೆ. ವಿಶೇಷವಾಗಿ ಹಿಂದಿಯೇತರ ರಾಜ್ಯ ಎಂಬ ಕಾರಣಕ್ಕೆ ಹಿಂದಿ ಭಾಷಿಕರ ದ್ವೇಷ ಬಹಿರಂಗವಾಗಿದೆ.

ಆಕ್ರೋಶಗೊಂಡ ಮಲಯಾಳಿಗಳು

ಕೇರಳದ ಭಾರತದಲ್ಲಿ ಅತಿ ಹೆಚ್ಚು ಸಾಕ್ಷರತೆಯನ್ನು ಹೊಂದಿರುವ ರಾಜ್ಯ. ಕೇವಲ ಸಾಕ್ಷರತೆ ಮಾತ್ರವಲ್ಲದೆ ಕೋವಿಡ್, ನಿಫಾ, ಮಂಕಿ ಫಾಕ್ಸ್, ಡೆಂಗ್ಯೂನಂತಹ ಸಾಂಕ್ರಾಮಿಕ ರೋಗಗಳನ್ನು ಸಮರ್ಥವಾಗಿ ನಿಭಾಯಿಸಿದ ಕೀರ್ತಿ ಹೊಂದಿರುವ ರಾಜ್ಯ, ಉದ್ಯೋಗ, ವೇತನದ ವಿಚಾರದಲ್ಲಿ ಉತ್ತರಕ್ಕಿಂತ ಮುಂದಿರುವ ರಾಜ್ಯ. ಈ ಕಾರಣಕ್ಕೆ ಉತ್ತರ ಭಾರತದ ಸಾವಿರಾರು ಜನರು ಕೇರಳ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ. ಇವೆಲ್ಲವೂ ಹೆಮ್ಮೆ ಪಡುವಂತಹ ವಿಚಾರಗಳೇ. ಆದರೆ, ಜಸ್ಪ್ರೀತ್ ಸಿಂಗ್‌ನ ಅಸಂಬದ್ದ ಹಾಸ್ಯ ಕೇರಳ ಸಾಕ್ಷರತೆ ಹೊಂದಿರುವುದೇ ಅಪರಾಧ ಎಂಬಂತೆ ಬಿಂಬಿಸಿದೆ.

ಜಸ್ಪ್ರೀತ್ ಸಿಂಗ್‌ನ ಹೇಳಿಕೆಗೆ ಆಕ್ರೋಶಗೊಂಡಿರುವ ಮಲಯಾಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ನೂರಾರು ವಿಡಿಯೋಗಳನ್ನು ಮಾಡುವ ಮೂಲಕ ತಿರುಗೇಟು ಕೊಡುತ್ತಿದ್ದಾರೆ.

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ನಾವು ನಮ್ಮ ಮತವನ್ನು ಚಿಂತಿಸಿ ಚಲಾಯಿಸುತ್ತೇವೆ.

|ನಾವು 100% ಸಾಕ್ಷರರು, ಅದಕ್ಕಾಗಿಯೇ ನಾವು ಕುಂಬಳಂಗಿ ನೈಟ್ಸ್‌ನಂತಹ ಉತ್ತಮ ಚಲನಚಿತ್ರಗಳನ್ನು ಮಾಡುತ್ತೇವೆ.

ನಾವು 100% ಸಾಕ್ಷರರು, ಅದಕ್ಕಾಗಿಯೇ ಹಿಂದೂಗಳು, ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ಸಾಮರಸ್ಯದಿಂದ ಬದುಕುತ್ತಿದ್ದೇವೆ

ನಾವು 100% ಸಾಕ್ಷರರು, ಅದಕ್ಕಾಗಿಯೇ ಕೇರಳ ಮಾದರಿ ಪ್ರಸಿದ್ಧವಾಗಿದೆ.

ನಾವು 100% ಸಾಕ್ಷರರು, ಅದಕ್ಕಾಗಿಯೇ ನಾವು ಎಲ್ಲಾ ಲಿಂಗಗಳನ್ನು ಗೌರವಿಸುತ್ತೇವೆ ಮತ್ತು ಪ್ರತಿಪಾದಿಸುತ್ತೇವೆ.

ನಾವು 100% ಸಾಕ್ಷರರು, ಅದಕ್ಕಾಗಿಯೇ ನಾವು ಅಗತ್ಯವಿದ್ದರೆ ಸರ್ಕಾರದ ವಿರುದ್ಧ ಮಾತನಾಡುತ್ತೇವೆ.

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ಕೇರಳವನ್ನು ದೇವರ ಸ್ವಂತ ನಾಡು ಎಂದು ಕರೆಯಲಾಗುತ್ತದೆ.

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ಬೀಫ್ ತಿನ್ನುತ್ತೇವೆ

ನಮಗೆ 100% ಸಾಕ್ಷರತೆ ಇದೆ, ಅದಕ್ಕಾಗಿಯೇ ಕೋಮುವಾದಿಗಳನ್ನು ನಮ್ಮೊಳಗೆ ಬಿಟ್ಟುಕೊಂಡಿಲ್ಲ

ಈ ರೀತಿಯ ಉತ್ತರಗಳನ್ನು ಜಸ್ಪ್ರೀತ್ ಸಿಂಗ್‌ಗೆ ಮಲಯಾಳಿಗಳು ನೀಡುತ್ತಿದ್ದಾರೆ. ರಣವೀರ್ ಅಲಹಾಬಾದಿಯನ ಹೇಳಿಕೆ ಎಷ್ಟು ಅಸಂಬದ್ದವೋ, ಅಷ್ಟೇ ಜಸ್ಪ್ರೀತ್‌ ಸಿಂಗ್‌ನ ಹೇಳಿಕೆ ಅವಹೇಳನಕಾರಿ. ಹಾಗಾಗಿ, ಆತನ ವಿರುದ್ದವೂ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹಗಳು ವ್ಯಕ್ತವಾಗಿವೆ.

ಅಶ್ಲೀಲ ಹೇಳಿಕೆ: ರಣವೀರ್ ಅಲಹಾಬಾದಿಯಾ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...