HomeಮುಖಪುಟKERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

- Advertisement -
- Advertisement -

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ ವ್ಯಕ್ತಿ ವಿಚಾರಣೆಗೆ ಹಾಜರಾಗಿ ದಾಖಲೆಗಳನ್ನು ನೀಡುವ ಮೂಲಕ ಪೌರತ್ವ ಸಾಬೀತುಪಡಿಸಿದ್ದಾರೆ.

ದಿ ನ್ಯೂಸ್ ಮಿನಿಟ್ ವರದಿಯ ಪ್ರಕಾರ, ಉಪ್ಪಳದ ಕೆ. ಮುಹಮ್ಮದ್ ಅವರಿಗೆ ಫೆಬ್ರವರಿ 12ರಂದು ಇಆರ್‌ಒನಿಂದ ನೋಟಿಸ್ ಬಂದಿತ್ತು. ಫೆಬ್ರವರಿ 13ರಂದು ಮಂಜೇಶ್ವರ ತಾಲೂಕು ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಆ ನೋಟಿಸ್‌ನಲ್ಲಿ ಸೂಚಿಸಲಾಗಿತ್ತು. ನೋಟಿಸ್ ಪಡೆದ ಮುಹಮ್ಮದ್ ಆರಂಭದಲ್ಲಿ ಗೊಂದಲಕ್ಕೆ ಒಳಗಾಗಿದ್ದರು. ನಂತರ, ತಾನು ‘ಭಾರತೀಯ ಅಲ್ಲ ಪೌರ ಅಲ್ಲ’ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಹಾಗಾಗಿ, ಪೌರತ್ವ ಸಾಬೀತುಪಡಿಸಬೇಕಿದೆ ಎಂಬುವುದು ಅವರಿಗೆ ಗೊತ್ತಾಗಿದೆ.

“ನೋಟಿಸ್ ಪಡೆದ ನಾನು ಆತಂಕಕ್ಕೆ ಒಳಗಾದೆ. ಏಕೆಂದರೆ, ನಾನು ಹುಟ್ಟಿದ್ದು, ಬೆಳೆದಿದ್ದು, ವಿದ್ಯಾಭ್ಯಾಸ ಪಡೆದಿದ್ದು ಎಲ್ಲಾ ಇಲ್ಲೆ. ನನ್ನ ಮನೆ ಕೂಡ ಇಲ್ಲೇ ಇದೆ. ಹಠಾತ್ ಆಗಿ ಯಾರೋ ಒಬ್ಬರು ನಾನು ಭಾರತೀಯ ನಾಗರಿಕ ಅಲ್ಲ ಎಂದು ಹೇಳಿದಾಗ ನಿಜವಾಗಿಯೂ ಭಯಭೀತನಾದೆ” ಎಂದು ಮುಹಮ್ಮದ್ ನೆನಪಿಸಿಕೊಂಡಿದ್ದಾಗಿ ನ್ಯೂಸ್ ಮಿನಿಟ್ ವರದಿ ವಿವರಿಸಿದೆ.

ಮುಹಮ್ಮದ್ ಅವರು ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಮತದಾರ. 2016 ಮತ್ತು 2021ರ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಅತ್ಯಂತ ಕಡಿಮೆ ಅಂತರದಿಂದ ಸೋತ ಕ್ಷೇತ್ರ ಇದು.

ಫಾರ್ಮ್ 7ರ ಮೂಲಕ ಮುಹಮ್ಮದ್ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದ ಲೋಕೇಶ್ ನೋಂಡಾ, ಅವರು ‘ಭಾರತೀಯ ಪೌರತ್ವವನ್ನು ಹೊಂದಿಲ್ಲ’ ಎಂಬ ಕಾರಣ ನೀಡಿ ಮತದಾರರ ಪಟ್ಟಿಯಿಂದ ಅವರ ಹೆಸರನ್ನು ತೆಗೆದುಹಾಕುವಂತೆ ಕೋರಿದ್ದರು ಎನ್ನಲಾಗಿದೆ.

ಮತದಾರರ ಪಟ್ಟಿಯಲ್ಲಿ ವ್ಯಕ್ತಿಯ ಸೇರ್ಪಡೆಯನ್ನು ಪ್ರಶ್ನಿಸಲು ಅಥವಾ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಭಾಗವಾಗಿ ಹೆಸರನ್ನು ತೆಗೆದುಹಾಕಲು ವಿನಂತಿಸಲು ಬಳಸುವ ನಿರ್ದಿಷ್ಟ ಶಾಸನಬದ್ಧ ಅರ್ಜಿಯಾಗಿದೆ ಫಾರ್ಮ್ 7. ಎರಡನೇ ಹಂತದಲ್ಲಿ ಮೂರು ಕೇಂದ್ರಾಡಳಿತ ಪ್ರದೇಶಗಳು ಮತ್ತು 9 ರಾಜ್ಯಗಳಲ್ಲಿ ಎಸ್‌ಐಆರ್‌ ಅನ್ನು ಚುನಾವಣಾ ಆಯೋಗ ಘೋಷಿಸಿದೆ. ಆ 9 ರಾಜ್ಯಗಳಲ್ಲಿ ಕೇರಳವೂ ಒಂದು.

ನೋಟಿಸ್ ಬಂದ ಮರುದಿನ ಫೆಬ್ರವರಿ 13ರಂದು, ಮುಹಮ್ಮದ್ ಅವರು ಮಂಜೇಶ್ವರ ತಾಲೂಕು ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ಅವರು ತಮ್ಮ ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಹಾಜರುಪಡಿಸಿದ್ದರು.

ಸುಳ್ಳು ದೂರು

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬೂತ್ ಸಂಖ್ಯೆ 128ರ ಮತಗಟ್ಟೆಯ ಮತದಾರರಾದ ಮುಹಮ್ಮದ್ 1970ರಲ್ಲಿ ಜನಿಸಿದವರು. ಈಗ ಅವರಿಗೆ 55 ವರ್ಷ. ಸ್ಥಳೀಯ ಬೇಕೂರ್ ಶಾಲೆಯಲ್ಲಿ 10ನೇ ತರಗತಿಯವರೆಗೆ ಅಧ್ಯಯನ ಮಾಡಿರುವ ಮುಹಮ್ಮದ್, ನಂತರ ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ.

ನ್ಯೂಸ್ ಮಿನಿಟ್ ವರದಿಯ ಪ್ರಕಾರ, ವಿಚಾರಣೆಯ ನಂತರ ಮುಹಮ್ಮದ್ ಅವರ ವಿರುದ್ದದ ದೂರು ಆಧಾರರಹಿತ ಎಂದು ಅಧಿಕಾರಿಗಳು ಕಂಡುಕೊಂಡಿದ್ದಾರೆ. ಕಾಸರಗೋಡು ಜಿಲ್ಲಾಧಿಕಾರಿ ಕೆ. ಇಂಬಸೇಕರ್ ಐಎಎಸ್ ಅವರ ಫೇಸ್‌ಬುಕ್ ಪೋಸ್ಟ್‌ನ ಪ್ರಕಾರ, ದೂರುದಾರರು ವಿಚಾರಣೆಗೆ ಹಾಜರಾಗಿದ್ದರು, ಆದರೆ ಆರೋಪವನ್ನು ದೃಢೀಕರಿಸಲು ಯಾವುದೇ ದಾಖಲೆ ಪುರಾವೆಗಳನ್ನು ನೀಡುವಲ್ಲಿ ಅವರು ವಿಫಲರಾಗಿದ್ದಾರೆ.

ದಾಖಲೆ ಪರಿಶೀಲನೆ ಮತ್ತು ವಿಚಾರಣೆಯ ಸಮಯದಲ್ಲಿ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ, ಮುಹಮ್ಮದ್ ಅವರ ವಿರುದ್ಧದ ದೂರು ಸುಳ್ಳು ಮತ್ತು ಆಧಾರರಹಿತವಾಗಿದೆ ಎಂದು ಕಂಡುಬಂದಿದೆ. ಅದರಂತೆ, ಪ್ರಸ್ತುತ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಮುಂದುವರಿಯಬೇಕೆಂದು ಇಆರ್‌ಒ ಆದೇಶಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಅಲ್ಲದೆ, ಸುಳ್ಳು ದೂರು ನೀಡಿದ ಲೋಕೇಶ್ ವಿರುದ್ಧ ಎಫ್‌ಐಆರ್‌ ದಾಖಲಿಸಲು ಸಹ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

ನ್ಯೂಸ್‌ ಮಿನಿಟ್ ದೂರುದಾರ ಲೋಕೇಶ್ ನೋಂಡಾನನ್ನು ಮಾತನಾಡಿಸಿದೆ. ಆತ ತಾನು ಮುಹಮ್ಮದ್ ವಿರುದ್ದ ದೂರು ನೀಡಿದ್ದು ಹೌದು, ಆದರೆ ಅವರು ಭಾರತೀಯ ಪ್ರಜೆಯಲ್ಲ ಎಂದು ನಾನು ಹೇಳಿಲ್ಲ. ಅವರನ್ನು ತುಂಬಾ ದಿನಗಳಿಂದ ನೋಡಿಲ್ಲದ ಕಾರಣ, ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದೆ. ನನ್ನಲ್ಲಿ ದೂರಿನ ಪ್ರತಿ ಇದೆ. ನಾನು ದೂರಿಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳು ಮತ್ತು ಪುರಾವೆಗಳನ್ನು ಹೊಂದಿದ್ದೇನೆ. ತನಿಖೆ ಮುಂದುವರಿದಂತೆ ಅವುಗಳನ್ನು ಅಧಿಕಾರಿಗಳಿಗೆ ನೀಡುವುದಾಗಿ ಹೇಳಿದ್ದಾರೆ.

“ಲೋಕೇಶ್ ನೋಂಡಾ ನನ್ನದೇ ಊರಿನವನು. ಹಾಗಾಗಿ, ಆತನನ್ನು ನನಗೆ ಪರಿಚಯವಿದೆ. ತಾಲೂಕು ಕಚೇರಿಯಲ್ಲಿ ನೋಡಿದಾಗಲೇ, ನನ್ನ ವಿರುದ್ದಆತನೇ ದೂರು ಕೊಟ್ಟಿರುವುದು ಎಂದು ನನಗೆ ಗೊತ್ತಾಗಿದ್ದು. ಈಗ ನಾನು ಕೆಲಸ ಹೋದಾಗಲೆಲ್ಲ, “ನಿಮ್ಮನ್ನು ವಿಚಾರಣೆಗೆ ಕರೆದಿದ್ದು ಏಕೆ..ನಿಮ್ಮ ಬಳಿ ದಾಖಲೆಗಳು ಇಲ್ವಾ ಎಂದು ಜನರು ಕೇಳುತ್ತಾರೆ. ನನ್ನ ಬಳಿ ಎಲ್ಲಾ ದಾಖಲೆಗಳು ಇವೆ” ಎಂಬುವುದಾಗಿ ಮುಹಮ್ಮದ್ ತಿಳಿಸಿದ್ದಾರೆ.

ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಎಂಬ ಆರು ಸುಳ್ಳು ದೂರುಗಳು

ಮುಹಮ್ಮದ್ ಮಾತ್ರವಲ್ಲದೆ ಇನ್ನೂ 6 ಮಂದಿ ಮುಸ್ಲಿಂ ಮಹಿಳೆಯರ ವಿರುದ್ದ ‘ಗೈರು ಹಾಜರಿ’ ಅಥವಾ ‘ಶಾಶ್ವತವಾಗಿ ಸ್ಥಳಾಂತರ’ ಎಂಬ ದೂರುಗಳನ್ನು ಇದೇ ಲೋಕೇಶ್ ನೋಂಡಾ ದಾಖಲಿಸಿದ್ದಾರೆ. ನೋಟಿಸ್ ಪಡೆದ ಅಸ್ಮಾ (64), ಸಫಿಯಾ (51), ನಬೀಸಾ (75), ಮೌಝಿಯತ್ ಸುನೈಫಾ ಎ (25), ಕುಬ್ರಾ (35), ಮತ್ತು ಝುಬೈದಾ (55) ನೋಟಿಸ್ ಪಡೆದವರು. ಇವರಲ್ಲಿ ಸಫಿಯಾ, ಝುಬೈದಾ ಮತ್ತು ಕುಬ್ರಾ ವಿವಾಹವಾಗಿ ಬೇರೆ ಊರುಗಳಿಂದ ಗಂಡನ ಮನೆಗೆ ಬಂದವರು. ಆದರೆ, ಒಂದು ದಶಕಕ್ಕೂ ಹೆಚ್ಚು ಸಮಯದಿಂದ ಇವರು ಬೂತ್ ಸಂಖ್ಯೆ 128ರ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದಾರೆ. ಉಳಿದ ಮೂವರು ಇಲ್ಲೇ ಹುಟ್ಟಿ ಬೆಳೆದವರು ಎಂದು ನ್ಯೂಸ್ ಮಿನಿಟ್ ವರದಿ ಉಲ್ಲೇಖಿಸಿದೆ.

ಪೈವಳಿಕೆ ಪಂಚಾಯತ್‌ನ ಮಾಜಿ ಸದಸ್ಯ ಹಾಗೂ ಅಸ್ಮಾ ಅವರ ಮಗ ಝುಲ್ಫಿಕರ್ ಅಲೀ ಮಾತನಾಡಿ, “ದೂರುದಾರ ಲೋಕೇಶ್‌ ನೋಂಡಾಗೆ ಈ ಏಳು ಜನರ ಪೈಕಿ ಹೆಚ್ಚಿನವರ ಪರಿಚಯ ಇದೆ. ಆತ ನನ್ನ ಮನೆ ಸಮೀಪದ ನಿವಾಸಿ. ಆತ ನನ್ನ ತಾಯಿಯನ್ನು ನೋಡಿದ್ದಾರೆ. ನಾವು ಇಆರ್‌ಒ ಬಳಿಗೆ ಹೋದಾಗ ನೋಂಡಾ ಅಲ್ಲಿ ಇರಲಿಲ್ಲ” ಎಂದು ಹೇಳಿದ್ದಾರೆ.

ಇಆರ್‌ಒ ಪ್ರಕಾರ, ಲೋಕೇಶ್ ಈ ಹಿಂದೆ 91 ಜನರ ವಿರುದ್ಧ ಲಿಖಿತ ದೂರುಗಳನ್ನು ದಾಖಲಿಸಿದ್ದರು ಎಂದು ಝುಲ್ಫಿಕರ್ ಹೇಳಿದ್ದಾರೆ. ಇಆರ್‌ಒ ಆನ್‌ಲೈನ್‌ನಲ್ಲಿ ಸಲ್ಲಿಸಲು ಕೇಳಿದಾಗ, ಆತ ಕೇವಲ ಏಳು ದೂರುಗಳನ್ನು ಮಾತ್ರ ಸಲ್ಲಿಸಿದ್ದಾರೆ ಎಂದಿದ್ದಾರೆ. ಲೋಕೇಶ್ ಈ ಆರೋಪಗಳನ್ನು ನಿರಾಕರಿಸಿದ್ದು, ನಾನು ಕೇವಲ 71 ಆಫ್‌ಲೈನ್ ದೂರುಗಳನ್ನು ಮಾತ್ರ ಸಲ್ಲಿಸಿದ್ದೇನೆ. ಆನ್‌ಲೈನ್‌ನಲ್ಲಿ ಏನನ್ನೂ ಸಲ್ಲಿಸಿಲ್ಲ ಎಂದು ಹೇಳಿದ್ದಾರೆ.

ಈ ಬೆಳವಣಿಗೆಯ ನಂತರ ನೋಟಿಸ್ ಬಂದ ವ್ಯಕ್ತಿಗಳು ಲೋಕೇಶ್ ನೋಂಡಾ ವಿರುದ್ದ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದು, ಜಿಲ್ಲಾಧಿಕಾರಿ ಆತನ ಮೇಲೆ ಎಫ್‌ಐಆರ್ ದಾಖಲಿಸುವುದಾಗಿ ಫೆ.15ರಂದು ತಿಳಿಸಿದ್ದಾರೆ.

ಲೋಕೇಶ್ ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ಒದಗಿಸಿದ್ದಾರೆ ಎಂದು ಅಧಿಕಾರಿಗಳು ಕಂಡುಕೊಂಡಿರುವುದರಿಂದ, ಇದನ್ನು 1950ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 31ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲಾಗುತ್ತಿದೆ ಎಂದು ನ್ಯೂಸ್ ಮಿನಿಟ್ ವರದಿ ಉಲ್ಲೇಖಿಸಿದೆ.

ಬಿಜೆಪಿ ಮತ್ತು ಮಂಜೇಶ್ವರ

ಕೇರಳದ ಯುನೈಟೆಡ್‌ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್‌) ಮೈತ್ರಿಕೂಟದ ಭಾಗವಾದ ಇಂಡಿಯನ್‌ ಯೂನಿಯನ್ ಮುಸ್ಲಿಂ ಲೀಗ್‌ (ಐಯುಎಂಎಲ್‌) ಪಕ್ಷದ ನಾಯಕ ಹಾಗೂ ಮಂಜೇಶ್ವರದ ಶಾಸಕ ಎಕೆಎಂ ಅಶ್ರಫ್ ಅವರು ನೋಟಿಸ್ ಬಂದವರ ವಿಚಾರಣೆಯ ದಿನದಂದು ತಾಲೂಕು ಕಚೇರಿಗೆ ಭೇಟಿ ನೀಡಿದ್ದರು. ಅಧಿಕಾರಿಗಳು ಮತ್ತು ಬಿಜೆಪಿ ನಡುವಿನ ಸಂಬಂಧ ಮತದಾರರಿಗೆ ನೋಟಿಸ್ ಬರಲು ಕಾರಣ ಎಂದು ಅವರು ಆರೋಪಿಸಿದ್ದಾರೆ.

“ವೃದ್ಧರನ್ನು ವಿಚಾರಣೆಗೆ ಕರೆಯುವುದು ಮತ್ತು ಅವರಿಗೆ ಅನಾನುಕೂಲತೆಯನ್ನುಂಟುಮಾಡುವುದು ಬಿಜೆಪಿಯೊಂದಿಗಿನ ಅವರ (ಅಧಿಕಾರಿಗಳ) ಸಂಬಂಧದ ಭಾಗವಾಗಿದೆ. ಇದರ ವಿರುದ್ಧ ನಾವು ಬಲವಾದ ಹೋರಾಟವನ್ನು ಪ್ರಾರಂಭಿಸುತ್ತೇವೆ” ಎಂದು ಅಶ್ರಫ್ ಹೇಳಿದ್ದಾರೆ.

ಮಂಜೇಶ್ವರ ಕೇರಳದಲ್ಲಿ ಬಿಜೆಪಿಗೆ ‘ಎ-ಕ್ಲಾಸ್’ ಕ್ಷೇತ್ರವೆಂದು ಪರಿಗಣಿಸಲಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ 2021 ಮತ್ತು 2016ರ ವಿಧಾನಸಭಾ ಚುನಾವಣೆಗಳಲ್ಲಿ ಮತ್ತು 2019 ರ ಉಪಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಎರಡನೇ ಸ್ಥಾನ ಗಳಿಸಿತ್ತು.

2021ರಲ್ಲಿ, ಅಶ್ರಫ್ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ವಿರುದ್ಧ 745 ಮತಗಳ ಅಲ್ಪ ಅಂತರದಿಂದ ಗೆದ್ದರು. 2016ರಲ್ಲಿ, ಸುರೇಂದ್ರನ್ ಯುಡಿಎಫ್‌ನ ಪಿ.ಬಿ. ಅಬ್ದುಲ್ ರಝಾಕ್ ವಿರುದ್ಧ ಕೇವಲ 89 ಮತಗಳಿಂದ ಸೋತಿದ್ದರು.

‍Courtesy : thenewsminute.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...