Homeಮುಖಪುಟಕೇರಳ | 'ಬಡತನ ಮುಕ್ತ ಘೋಷಣೆ' ಕಾರ್ಯಕ್ರಮದಿಂದ ಹಿಂದೆ ಸರಿಯಿರಿ : ಹೋರಾಟ ನಿರತ ಆಶಾಗಳಿಂದ...

ಕೇರಳ | ‘ಬಡತನ ಮುಕ್ತ ಘೋಷಣೆ’ ಕಾರ್ಯಕ್ರಮದಿಂದ ಹಿಂದೆ ಸರಿಯಿರಿ : ಹೋರಾಟ ನಿರತ ಆಶಾಗಳಿಂದ ನಟರಿಗೆ ಮನವಿ

- Advertisement -
- Advertisement -

ಕೇರಳದ ಸಚಿವಾಲಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ‘ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು (ಆಶಾಗಳು)’ ನವೆಂಬರ್ 1ರಂದು ಕೇರಳವನ್ನು ‘ತೀವ್ರ ಬಡತನ ಮುಕ್ತ’ ರಾಜ್ಯವೆಂದು ಘೋಷಿಸಲು ರಾಜ್ಯ ಸರ್ಕಾರ ಆಯೋಜಿಸಿರುವ ಅಧಿಕೃತ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ನಟರಾದ ಮೋಹನ್ ಲಾಲ್, ಮಮ್ಮುಟ್ಟಿ ಮತ್ತು ಕಮಲ್ ಹಾಸನ್ ಅವರನ್ನು ವಿನಂತಿಸಿದೆ.

“ದಿನಕ್ಕೆ 233 ರೂಪಾಯಿಯಲ್ಲಿ ಬದುಕುತ್ತಿರುವ 26,125 ಆಶಾ ಕಾರ್ಯರ್ತೆಯರು ಅತ್ಯಂತ ಬಡವರಲ್ಲಿ ಸೇರಿದ್ದಾರೆ. ನಾವು ದುಃಖದಲ್ಲಿ ಬದುಕುತ್ತಿರುವಾಗ ಕೇರಳವನ್ನು ತೀವ್ರ ಬಡತನ ಮುಕ್ತ ಎಂದು ಘೋಷಿಸಲು ಸಾಧ್ಯವಿಲ್ಲ. ಹಾಗಾಗಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ನಟರು ಉದ್ದೇಶಪೂರ್ವಕವಾಗಿ ಆ ಸುಳ್ಳನ್ನು ಪ್ರಚಾರ ಮಾಡುವ ಭಾಗವಾಗುತ್ತಾರೆ. ಆದ್ದರಿಂದ, ಪ್ರೀತಿ ಮತ್ತು ಗೌರವದಿಂದ ಕೇರಳದ ಬಡ ಆಶಾ ಕಾರ್ಯಕರ್ತೆಯರಾದ ನಾವು ಸರ್ಕಾರದ ಬಡತನ ಮುಕ್ತ ಘೋಷಣೆ ಸಮಾರಂಭದಿಂದ ಹಿಂದೆ ಸರಿಯುವಂತೆ ವಿನಮ್ರವಾಗಿ ವಿನಂತಿಸುತ್ತೇವೆ” ಎಂದು ಆಶಾ ಕಾರ್ಯಕರ್ತೆಯ ಒಕ್ಕೂಟ ಬಹಿರಂಗ ಪತ್ರದಲ್ಲಿ ಹೇಳಿದೆ.

ನವೆಂಬರ್ 1ರಂದು ಕೇರಳವನ್ನು ತೀವ್ರ ಬಡತನದಿಂದ ಮುಕ್ತಗೊಂಡ ದೇಶದ ಮೊದಲ ರಾಜ್ಯವೆಂದು ಅಧಿಕೃತವಾಗಿ ಘೋಷಿಸಲು ಸರ್ಕಾರ ಸಿದ್ದತೆ ನಡೆಸಿದೆ. ತಿರುವನಂತಪುರದ ಸೆಂಟ್ರಲ್ ಕ್ರೀಡಾಂಗಣದಲ್ಲಿ ಕೇರಳ ಪಿರವಿ ದಿನಾಚರಣೆಯ (ರಾಜ್ಯೋತ್ಸವ) ಜೊತೆಗೆ ಈ ಕಾರ್ಯಕ್ರಮ ನಡೆಯಲಿದೆ. ರಾಜ್ಯ ಸರ್ಕಾರವು ನಟರಾದ ಮೋಹನ್ ಲಾಲ್ ಮತ್ತು ಮಮ್ಮುಟ್ಟಿ ಹಾಗೂ ನಟ-ರಾಜಕಾರಣಿ ಕಮಲ್ ಹಾಸನ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದೆ.

ಸರ್ಕಾರದ ಕಾರ್ಯಕ್ರಮದಲ್ಲಿ ಭಾಗವಹಿಸುವ ಬದಲು ನಮ್ಮ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಎಂದು ಆಶಾ ಕಾರ್ಯಕರ್ತೆಯರು ತಮ್ಮ ಬಹಿರಂಗ ಪತ್ರದಲ್ಲಿ ನಟರಿಗೆ ಮನವಿ ಮಾಡಿದ್ದಾರೆ.

“ದಯವಿಟ್ಟು ನಮ್ಮನ್ನು ಭೇಟಿ ಮಾಡಿ, ಸಚಿವಾಲಯದ ಮುಂದೆ ಇರುವ ಆಶಾ ಯೋಧರೇ ಮೂರು ಹೊತ್ತು ಊಟ ಮಾಡಲು ಸಾಧ್ಯವಾಗದವರು, ಮಕ್ಕಳಿಗೆ ಶಿಕ್ಷಣ ನೀಡಲು ಸಾಧ್ಯವಾಗದವರು, ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಸಾಧ್ಯವಾಗದವರು, ಸಾಲದಲ್ಲಿ ಮುಳುಗಿರುವವರು. ನಮ್ಮ ಅಲ್ಪ ವೇತನವನ್ನು ಹೆಚ್ಚಿಸದೆ ಕೇರಳವನ್ನು ತೀವ್ರ ಬಡತನದಿಂದ ಮುಕ್ತಗೊಳಿಸಲಾಗಿದೆ ಎಂದು ಘೋಷಿಸುವುದು ದೊಡ್ಡ ಸುಳ್ಳು, ಸರ್ಕಾರದ ವಂಚನೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಕೇರಳ ಆಶಾ ಆರೋಗ್ಯ ಕಾರ್ಯಕರ್ತರ ಸಂಘ (ಕೆಎಹೆಚ್‌ಡಬ್ಲ್ಯುಎ) ನೇತೃತ್ವದಲ್ಲಿ ಆಶಾ ಕಾರ್ಯಕರ್ತರು ಈ ವರ್ಷದ ಆರಂಭದಿಂದಲೂ ರಾಜ್ಯ ಸಚಿವಾಲಯದ ಹೊರಗೆ ಧರಣಿ ನಡೆಸುತ್ತಿದ್ದಾರೆ. ಅವರ ಬೇಡಿಕೆಗಳಲ್ಲಿ ಗೌರವಧನ ಹೆಚ್ಚಳ ಮತ್ತು ನಿವೃತ್ತಿ ನಂತರದ ಸೌಲಭ್ಯಗಳು ಸೇರಿವೆ.

ಅಕ್ಟೋಬರ್ ಮೂರನೇ ವಾರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳಕ್ಕೆ ನಾಲ್ಕು ದಿನಗಳ ಭೇಟಿ ನೀಡಿದ್ದಾಗ ಅಶಾಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದರು. ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆಯತ್ತ ಮೆರವಣಿಗೆ ಕೈಗೊಂಡಿದ್ದರು. ಈ ವೇಳೆ ಪೊಲೀಸರೊಂದಿಗೆ ಘರ್ಷಣೆ ನಡೆದು, ಅನೇಕ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದ್ದರು.

ಬಿಹಾರ ವಿಧಾನಸಭೆ ಚುನಾವಣೆ : ಮಹಾಘಟಬಂಧನ್ ಪ್ರಣಾಳಿಕೆ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...