Homeಮುಖಪುಟಕೇರಳ | 'ಬಡತನ ಮುಕ್ತ ಘೋಷಣೆ' ಕಾರ್ಯಕ್ರಮದಿಂದ ಹಿಂದೆ ಸರಿಯಿರಿ : ಹೋರಾಟ ನಿರತ ಆಶಾಗಳಿಂದ...

ಕೇರಳ | ‘ಬಡತನ ಮುಕ್ತ ಘೋಷಣೆ’ ಕಾರ್ಯಕ್ರಮದಿಂದ ಹಿಂದೆ ಸರಿಯಿರಿ : ಹೋರಾಟ ನಿರತ ಆಶಾಗಳಿಂದ ನಟರಿಗೆ ಮನವಿ

- Advertisement -
- Advertisement -

ಕೇರಳದ ಸಚಿವಾಲಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ‘ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು (ಆಶಾಗಳು)’ ನವೆಂಬರ್ 1ರಂದು ಕೇರಳವನ್ನು ‘ತೀವ್ರ ಬಡತನ ಮುಕ್ತ’ ರಾಜ್ಯವೆಂದು ಘೋಷಿಸಲು ರಾಜ್ಯ ಸರ್ಕಾರ ಆಯೋಜಿಸಿರುವ ಅಧಿಕೃತ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ನಟರಾದ ಮೋಹನ್ ಲಾಲ್, ಮಮ್ಮುಟ್ಟಿ ಮತ್ತು ಕಮಲ್ ಹಾಸನ್ ಅವರನ್ನು ವಿನಂತಿಸಿದೆ.

“ದಿನಕ್ಕೆ 233 ರೂಪಾಯಿಯಲ್ಲಿ ಬದುಕುತ್ತಿರುವ 26,125 ಆಶಾ ಕಾರ್ಯರ್ತೆಯರು ಅತ್ಯಂತ ಬಡವರಲ್ಲಿ ಸೇರಿದ್ದಾರೆ. ನಾವು ದುಃಖದಲ್ಲಿ ಬದುಕುತ್ತಿರುವಾಗ ಕೇರಳವನ್ನು ತೀವ್ರ ಬಡತನ ಮುಕ್ತ ಎಂದು ಘೋಷಿಸಲು ಸಾಧ್ಯವಿಲ್ಲ. ಹಾಗಾಗಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ನಟರು ಉದ್ದೇಶಪೂರ್ವಕವಾಗಿ ಆ ಸುಳ್ಳನ್ನು ಪ್ರಚಾರ ಮಾಡುವ ಭಾಗವಾಗುತ್ತಾರೆ. ಆದ್ದರಿಂದ, ಪ್ರೀತಿ ಮತ್ತು ಗೌರವದಿಂದ ಕೇರಳದ ಬಡ ಆಶಾ ಕಾರ್ಯಕರ್ತೆಯರಾದ ನಾವು ಸರ್ಕಾರದ ಬಡತನ ಮುಕ್ತ ಘೋಷಣೆ ಸಮಾರಂಭದಿಂದ ಹಿಂದೆ ಸರಿಯುವಂತೆ ವಿನಮ್ರವಾಗಿ ವಿನಂತಿಸುತ್ತೇವೆ” ಎಂದು ಆಶಾ ಕಾರ್ಯಕರ್ತೆಯ ಒಕ್ಕೂಟ ಬಹಿರಂಗ ಪತ್ರದಲ್ಲಿ ಹೇಳಿದೆ.

ನವೆಂಬರ್ 1ರಂದು ಕೇರಳವನ್ನು ತೀವ್ರ ಬಡತನದಿಂದ ಮುಕ್ತಗೊಂಡ ದೇಶದ ಮೊದಲ ರಾಜ್ಯವೆಂದು ಅಧಿಕೃತವಾಗಿ ಘೋಷಿಸಲು ಸರ್ಕಾರ ಸಿದ್ದತೆ ನಡೆಸಿದೆ. ತಿರುವನಂತಪುರದ ಸೆಂಟ್ರಲ್ ಕ್ರೀಡಾಂಗಣದಲ್ಲಿ ಕೇರಳ ಪಿರವಿ ದಿನಾಚರಣೆಯ (ರಾಜ್ಯೋತ್ಸವ) ಜೊತೆಗೆ ಈ ಕಾರ್ಯಕ್ರಮ ನಡೆಯಲಿದೆ. ರಾಜ್ಯ ಸರ್ಕಾರವು ನಟರಾದ ಮೋಹನ್ ಲಾಲ್ ಮತ್ತು ಮಮ್ಮುಟ್ಟಿ ಹಾಗೂ ನಟ-ರಾಜಕಾರಣಿ ಕಮಲ್ ಹಾಸನ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದೆ.

ಸರ್ಕಾರದ ಕಾರ್ಯಕ್ರಮದಲ್ಲಿ ಭಾಗವಹಿಸುವ ಬದಲು ನಮ್ಮ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಎಂದು ಆಶಾ ಕಾರ್ಯಕರ್ತೆಯರು ತಮ್ಮ ಬಹಿರಂಗ ಪತ್ರದಲ್ಲಿ ನಟರಿಗೆ ಮನವಿ ಮಾಡಿದ್ದಾರೆ.

“ದಯವಿಟ್ಟು ನಮ್ಮನ್ನು ಭೇಟಿ ಮಾಡಿ, ಸಚಿವಾಲಯದ ಮುಂದೆ ಇರುವ ಆಶಾ ಯೋಧರೇ ಮೂರು ಹೊತ್ತು ಊಟ ಮಾಡಲು ಸಾಧ್ಯವಾಗದವರು, ಮಕ್ಕಳಿಗೆ ಶಿಕ್ಷಣ ನೀಡಲು ಸಾಧ್ಯವಾಗದವರು, ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಸಾಧ್ಯವಾಗದವರು, ಸಾಲದಲ್ಲಿ ಮುಳುಗಿರುವವರು. ನಮ್ಮ ಅಲ್ಪ ವೇತನವನ್ನು ಹೆಚ್ಚಿಸದೆ ಕೇರಳವನ್ನು ತೀವ್ರ ಬಡತನದಿಂದ ಮುಕ್ತಗೊಳಿಸಲಾಗಿದೆ ಎಂದು ಘೋಷಿಸುವುದು ದೊಡ್ಡ ಸುಳ್ಳು, ಸರ್ಕಾರದ ವಂಚನೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಕೇರಳ ಆಶಾ ಆರೋಗ್ಯ ಕಾರ್ಯಕರ್ತರ ಸಂಘ (ಕೆಎಹೆಚ್‌ಡಬ್ಲ್ಯುಎ) ನೇತೃತ್ವದಲ್ಲಿ ಆಶಾ ಕಾರ್ಯಕರ್ತರು ಈ ವರ್ಷದ ಆರಂಭದಿಂದಲೂ ರಾಜ್ಯ ಸಚಿವಾಲಯದ ಹೊರಗೆ ಧರಣಿ ನಡೆಸುತ್ತಿದ್ದಾರೆ. ಅವರ ಬೇಡಿಕೆಗಳಲ್ಲಿ ಗೌರವಧನ ಹೆಚ್ಚಳ ಮತ್ತು ನಿವೃತ್ತಿ ನಂತರದ ಸೌಲಭ್ಯಗಳು ಸೇರಿವೆ.

ಅಕ್ಟೋಬರ್ ಮೂರನೇ ವಾರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳಕ್ಕೆ ನಾಲ್ಕು ದಿನಗಳ ಭೇಟಿ ನೀಡಿದ್ದಾಗ ಅಶಾಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದರು. ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆಯತ್ತ ಮೆರವಣಿಗೆ ಕೈಗೊಂಡಿದ್ದರು. ಈ ವೇಳೆ ಪೊಲೀಸರೊಂದಿಗೆ ಘರ್ಷಣೆ ನಡೆದು, ಅನೇಕ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದ್ದರು.

ಬಿಹಾರ ವಿಧಾನಸಭೆ ಚುನಾವಣೆ : ಮಹಾಘಟಬಂಧನ್ ಪ್ರಣಾಳಿಕೆ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...