Homeಮುಖಪುಟಕೇರಳ | 'ಬಡತನ ಮುಕ್ತ ಘೋಷಣೆ' ಕಾರ್ಯಕ್ರಮದಿಂದ ಹಿಂದೆ ಸರಿಯಿರಿ : ಹೋರಾಟ ನಿರತ ಆಶಾಗಳಿಂದ...

ಕೇರಳ | ‘ಬಡತನ ಮುಕ್ತ ಘೋಷಣೆ’ ಕಾರ್ಯಕ್ರಮದಿಂದ ಹಿಂದೆ ಸರಿಯಿರಿ : ಹೋರಾಟ ನಿರತ ಆಶಾಗಳಿಂದ ನಟರಿಗೆ ಮನವಿ

- Advertisement -
- Advertisement -

ಕೇರಳದ ಸಚಿವಾಲಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ‘ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು (ಆಶಾಗಳು)’ ನವೆಂಬರ್ 1ರಂದು ಕೇರಳವನ್ನು ‘ತೀವ್ರ ಬಡತನ ಮುಕ್ತ’ ರಾಜ್ಯವೆಂದು ಘೋಷಿಸಲು ರಾಜ್ಯ ಸರ್ಕಾರ ಆಯೋಜಿಸಿರುವ ಅಧಿಕೃತ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ನಟರಾದ ಮೋಹನ್ ಲಾಲ್, ಮಮ್ಮುಟ್ಟಿ ಮತ್ತು ಕಮಲ್ ಹಾಸನ್ ಅವರನ್ನು ವಿನಂತಿಸಿದೆ.

“ದಿನಕ್ಕೆ 233 ರೂಪಾಯಿಯಲ್ಲಿ ಬದುಕುತ್ತಿರುವ 26,125 ಆಶಾ ಕಾರ್ಯರ್ತೆಯರು ಅತ್ಯಂತ ಬಡವರಲ್ಲಿ ಸೇರಿದ್ದಾರೆ. ನಾವು ದುಃಖದಲ್ಲಿ ಬದುಕುತ್ತಿರುವಾಗ ಕೇರಳವನ್ನು ತೀವ್ರ ಬಡತನ ಮುಕ್ತ ಎಂದು ಘೋಷಿಸಲು ಸಾಧ್ಯವಿಲ್ಲ. ಹಾಗಾಗಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ನಟರು ಉದ್ದೇಶಪೂರ್ವಕವಾಗಿ ಆ ಸುಳ್ಳನ್ನು ಪ್ರಚಾರ ಮಾಡುವ ಭಾಗವಾಗುತ್ತಾರೆ. ಆದ್ದರಿಂದ, ಪ್ರೀತಿ ಮತ್ತು ಗೌರವದಿಂದ ಕೇರಳದ ಬಡ ಆಶಾ ಕಾರ್ಯಕರ್ತೆಯರಾದ ನಾವು ಸರ್ಕಾರದ ಬಡತನ ಮುಕ್ತ ಘೋಷಣೆ ಸಮಾರಂಭದಿಂದ ಹಿಂದೆ ಸರಿಯುವಂತೆ ವಿನಮ್ರವಾಗಿ ವಿನಂತಿಸುತ್ತೇವೆ” ಎಂದು ಆಶಾ ಕಾರ್ಯಕರ್ತೆಯ ಒಕ್ಕೂಟ ಬಹಿರಂಗ ಪತ್ರದಲ್ಲಿ ಹೇಳಿದೆ.

ನವೆಂಬರ್ 1ರಂದು ಕೇರಳವನ್ನು ತೀವ್ರ ಬಡತನದಿಂದ ಮುಕ್ತಗೊಂಡ ದೇಶದ ಮೊದಲ ರಾಜ್ಯವೆಂದು ಅಧಿಕೃತವಾಗಿ ಘೋಷಿಸಲು ಸರ್ಕಾರ ಸಿದ್ದತೆ ನಡೆಸಿದೆ. ತಿರುವನಂತಪುರದ ಸೆಂಟ್ರಲ್ ಕ್ರೀಡಾಂಗಣದಲ್ಲಿ ಕೇರಳ ಪಿರವಿ ದಿನಾಚರಣೆಯ (ರಾಜ್ಯೋತ್ಸವ) ಜೊತೆಗೆ ಈ ಕಾರ್ಯಕ್ರಮ ನಡೆಯಲಿದೆ. ರಾಜ್ಯ ಸರ್ಕಾರವು ನಟರಾದ ಮೋಹನ್ ಲಾಲ್ ಮತ್ತು ಮಮ್ಮುಟ್ಟಿ ಹಾಗೂ ನಟ-ರಾಜಕಾರಣಿ ಕಮಲ್ ಹಾಸನ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದೆ.

ಸರ್ಕಾರದ ಕಾರ್ಯಕ್ರಮದಲ್ಲಿ ಭಾಗವಹಿಸುವ ಬದಲು ನಮ್ಮ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಎಂದು ಆಶಾ ಕಾರ್ಯಕರ್ತೆಯರು ತಮ್ಮ ಬಹಿರಂಗ ಪತ್ರದಲ್ಲಿ ನಟರಿಗೆ ಮನವಿ ಮಾಡಿದ್ದಾರೆ.

“ದಯವಿಟ್ಟು ನಮ್ಮನ್ನು ಭೇಟಿ ಮಾಡಿ, ಸಚಿವಾಲಯದ ಮುಂದೆ ಇರುವ ಆಶಾ ಯೋಧರೇ ಮೂರು ಹೊತ್ತು ಊಟ ಮಾಡಲು ಸಾಧ್ಯವಾಗದವರು, ಮಕ್ಕಳಿಗೆ ಶಿಕ್ಷಣ ನೀಡಲು ಸಾಧ್ಯವಾಗದವರು, ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಸಾಧ್ಯವಾಗದವರು, ಸಾಲದಲ್ಲಿ ಮುಳುಗಿರುವವರು. ನಮ್ಮ ಅಲ್ಪ ವೇತನವನ್ನು ಹೆಚ್ಚಿಸದೆ ಕೇರಳವನ್ನು ತೀವ್ರ ಬಡತನದಿಂದ ಮುಕ್ತಗೊಳಿಸಲಾಗಿದೆ ಎಂದು ಘೋಷಿಸುವುದು ದೊಡ್ಡ ಸುಳ್ಳು, ಸರ್ಕಾರದ ವಂಚನೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಕೇರಳ ಆಶಾ ಆರೋಗ್ಯ ಕಾರ್ಯಕರ್ತರ ಸಂಘ (ಕೆಎಹೆಚ್‌ಡಬ್ಲ್ಯುಎ) ನೇತೃತ್ವದಲ್ಲಿ ಆಶಾ ಕಾರ್ಯಕರ್ತರು ಈ ವರ್ಷದ ಆರಂಭದಿಂದಲೂ ರಾಜ್ಯ ಸಚಿವಾಲಯದ ಹೊರಗೆ ಧರಣಿ ನಡೆಸುತ್ತಿದ್ದಾರೆ. ಅವರ ಬೇಡಿಕೆಗಳಲ್ಲಿ ಗೌರವಧನ ಹೆಚ್ಚಳ ಮತ್ತು ನಿವೃತ್ತಿ ನಂತರದ ಸೌಲಭ್ಯಗಳು ಸೇರಿವೆ.

ಅಕ್ಟೋಬರ್ ಮೂರನೇ ವಾರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳಕ್ಕೆ ನಾಲ್ಕು ದಿನಗಳ ಭೇಟಿ ನೀಡಿದ್ದಾಗ ಅಶಾಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದರು. ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆಯತ್ತ ಮೆರವಣಿಗೆ ಕೈಗೊಂಡಿದ್ದರು. ಈ ವೇಳೆ ಪೊಲೀಸರೊಂದಿಗೆ ಘರ್ಷಣೆ ನಡೆದು, ಅನೇಕ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದ್ದರು.

ಬಿಹಾರ ವಿಧಾನಸಭೆ ಚುನಾವಣೆ : ಮಹಾಘಟಬಂಧನ್ ಪ್ರಣಾಳಿಕೆ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...