Homeಮುಖಪುಟಕೇರಳ | 'ಬಡತನ ಮುಕ್ತ ಘೋಷಣೆ' ಕಾರ್ಯಕ್ರಮದಿಂದ ಹಿಂದೆ ಸರಿಯಿರಿ : ಹೋರಾಟ ನಿರತ ಆಶಾಗಳಿಂದ...

ಕೇರಳ | ‘ಬಡತನ ಮುಕ್ತ ಘೋಷಣೆ’ ಕಾರ್ಯಕ್ರಮದಿಂದ ಹಿಂದೆ ಸರಿಯಿರಿ : ಹೋರಾಟ ನಿರತ ಆಶಾಗಳಿಂದ ನಟರಿಗೆ ಮನವಿ

- Advertisement -
- Advertisement -

ಕೇರಳದ ಸಚಿವಾಲಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ‘ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು (ಆಶಾಗಳು)’ ನವೆಂಬರ್ 1ರಂದು ಕೇರಳವನ್ನು ‘ತೀವ್ರ ಬಡತನ ಮುಕ್ತ’ ರಾಜ್ಯವೆಂದು ಘೋಷಿಸಲು ರಾಜ್ಯ ಸರ್ಕಾರ ಆಯೋಜಿಸಿರುವ ಅಧಿಕೃತ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ನಟರಾದ ಮೋಹನ್ ಲಾಲ್, ಮಮ್ಮುಟ್ಟಿ ಮತ್ತು ಕಮಲ್ ಹಾಸನ್ ಅವರನ್ನು ವಿನಂತಿಸಿದೆ.

“ದಿನಕ್ಕೆ 233 ರೂಪಾಯಿಯಲ್ಲಿ ಬದುಕುತ್ತಿರುವ 26,125 ಆಶಾ ಕಾರ್ಯರ್ತೆಯರು ಅತ್ಯಂತ ಬಡವರಲ್ಲಿ ಸೇರಿದ್ದಾರೆ. ನಾವು ದುಃಖದಲ್ಲಿ ಬದುಕುತ್ತಿರುವಾಗ ಕೇರಳವನ್ನು ತೀವ್ರ ಬಡತನ ಮುಕ್ತ ಎಂದು ಘೋಷಿಸಲು ಸಾಧ್ಯವಿಲ್ಲ. ಹಾಗಾಗಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ನಟರು ಉದ್ದೇಶಪೂರ್ವಕವಾಗಿ ಆ ಸುಳ್ಳನ್ನು ಪ್ರಚಾರ ಮಾಡುವ ಭಾಗವಾಗುತ್ತಾರೆ. ಆದ್ದರಿಂದ, ಪ್ರೀತಿ ಮತ್ತು ಗೌರವದಿಂದ ಕೇರಳದ ಬಡ ಆಶಾ ಕಾರ್ಯಕರ್ತೆಯರಾದ ನಾವು ಸರ್ಕಾರದ ಬಡತನ ಮುಕ್ತ ಘೋಷಣೆ ಸಮಾರಂಭದಿಂದ ಹಿಂದೆ ಸರಿಯುವಂತೆ ವಿನಮ್ರವಾಗಿ ವಿನಂತಿಸುತ್ತೇವೆ” ಎಂದು ಆಶಾ ಕಾರ್ಯಕರ್ತೆಯ ಒಕ್ಕೂಟ ಬಹಿರಂಗ ಪತ್ರದಲ್ಲಿ ಹೇಳಿದೆ.

ನವೆಂಬರ್ 1ರಂದು ಕೇರಳವನ್ನು ತೀವ್ರ ಬಡತನದಿಂದ ಮುಕ್ತಗೊಂಡ ದೇಶದ ಮೊದಲ ರಾಜ್ಯವೆಂದು ಅಧಿಕೃತವಾಗಿ ಘೋಷಿಸಲು ಸರ್ಕಾರ ಸಿದ್ದತೆ ನಡೆಸಿದೆ. ತಿರುವನಂತಪುರದ ಸೆಂಟ್ರಲ್ ಕ್ರೀಡಾಂಗಣದಲ್ಲಿ ಕೇರಳ ಪಿರವಿ ದಿನಾಚರಣೆಯ (ರಾಜ್ಯೋತ್ಸವ) ಜೊತೆಗೆ ಈ ಕಾರ್ಯಕ್ರಮ ನಡೆಯಲಿದೆ. ರಾಜ್ಯ ಸರ್ಕಾರವು ನಟರಾದ ಮೋಹನ್ ಲಾಲ್ ಮತ್ತು ಮಮ್ಮುಟ್ಟಿ ಹಾಗೂ ನಟ-ರಾಜಕಾರಣಿ ಕಮಲ್ ಹಾಸನ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದೆ.

ಸರ್ಕಾರದ ಕಾರ್ಯಕ್ರಮದಲ್ಲಿ ಭಾಗವಹಿಸುವ ಬದಲು ನಮ್ಮ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಎಂದು ಆಶಾ ಕಾರ್ಯಕರ್ತೆಯರು ತಮ್ಮ ಬಹಿರಂಗ ಪತ್ರದಲ್ಲಿ ನಟರಿಗೆ ಮನವಿ ಮಾಡಿದ್ದಾರೆ.

“ದಯವಿಟ್ಟು ನಮ್ಮನ್ನು ಭೇಟಿ ಮಾಡಿ, ಸಚಿವಾಲಯದ ಮುಂದೆ ಇರುವ ಆಶಾ ಯೋಧರೇ ಮೂರು ಹೊತ್ತು ಊಟ ಮಾಡಲು ಸಾಧ್ಯವಾಗದವರು, ಮಕ್ಕಳಿಗೆ ಶಿಕ್ಷಣ ನೀಡಲು ಸಾಧ್ಯವಾಗದವರು, ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಸಾಧ್ಯವಾಗದವರು, ಸಾಲದಲ್ಲಿ ಮುಳುಗಿರುವವರು. ನಮ್ಮ ಅಲ್ಪ ವೇತನವನ್ನು ಹೆಚ್ಚಿಸದೆ ಕೇರಳವನ್ನು ತೀವ್ರ ಬಡತನದಿಂದ ಮುಕ್ತಗೊಳಿಸಲಾಗಿದೆ ಎಂದು ಘೋಷಿಸುವುದು ದೊಡ್ಡ ಸುಳ್ಳು, ಸರ್ಕಾರದ ವಂಚನೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಕೇರಳ ಆಶಾ ಆರೋಗ್ಯ ಕಾರ್ಯಕರ್ತರ ಸಂಘ (ಕೆಎಹೆಚ್‌ಡಬ್ಲ್ಯುಎ) ನೇತೃತ್ವದಲ್ಲಿ ಆಶಾ ಕಾರ್ಯಕರ್ತರು ಈ ವರ್ಷದ ಆರಂಭದಿಂದಲೂ ರಾಜ್ಯ ಸಚಿವಾಲಯದ ಹೊರಗೆ ಧರಣಿ ನಡೆಸುತ್ತಿದ್ದಾರೆ. ಅವರ ಬೇಡಿಕೆಗಳಲ್ಲಿ ಗೌರವಧನ ಹೆಚ್ಚಳ ಮತ್ತು ನಿವೃತ್ತಿ ನಂತರದ ಸೌಲಭ್ಯಗಳು ಸೇರಿವೆ.

ಅಕ್ಟೋಬರ್ ಮೂರನೇ ವಾರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳಕ್ಕೆ ನಾಲ್ಕು ದಿನಗಳ ಭೇಟಿ ನೀಡಿದ್ದಾಗ ಅಶಾಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದರು. ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆಯತ್ತ ಮೆರವಣಿಗೆ ಕೈಗೊಂಡಿದ್ದರು. ಈ ವೇಳೆ ಪೊಲೀಸರೊಂದಿಗೆ ಘರ್ಷಣೆ ನಡೆದು, ಅನೇಕ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದ್ದರು.

ಬಿಹಾರ ವಿಧಾನಸಭೆ ಚುನಾವಣೆ : ಮಹಾಘಟಬಂಧನ್ ಪ್ರಣಾಳಿಕೆ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...