Homeಮುಖಪುಟಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ಗ್ರೇಟ್‌ ಇಂಡಿಯನ್ ಕಿಚನ್‌’ ಅತ್ಯುತ್ತಮ ಸಿನಿಮಾ

ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ಗ್ರೇಟ್‌ ಇಂಡಿಯನ್ ಕಿಚನ್‌’ ಅತ್ಯುತ್ತಮ ಸಿನಿಮಾ

- Advertisement -
- Advertisement -

2020ರಲ್ಲಿ ಬಿಡುಗಡೆಯಾದ ಮಲಯಾಳಂ ಸಿನಿಮಾಗಳಿಗೆ ಸಂಬಂಧಿಸಿದಂತೆ 51ನೇ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಜಿಯೋ ಬೇಬಿ ಅವರು ನಿರ್ದೇಶಿಸಿರುವ ‘ದಿ ಗ್ರೇಟ್ ಇಂಡಿಯನ್ ಕಿಚನ್‌’ ಅತ್ಯುತ್ತಮ ಸಿನಿಮಾ ಪ್ರಶಸ್ತಿಗೆ ಆಯ್ಕೆಯಾಗಿದೆ.

‘ದಿ ಗ್ರೇಟ್‌ ಇಂಡಿಯನ್‌ ಕಿಚನ್‌’ ಸಿನಿಮಾವು ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ಮೆಚ್ಚುಗೆಗೆ ಪಾತ್ರವಾಗಿತ್ತು. ಮಹಿಳಾ ಸ್ವಾವಲಂಬನೆ, ಮಹಿಳಾ ಸ್ವತಂತ್ರಕ್ಕೆ ಅಡುಗೆ ಮನೆಯೇ ಅತಿದೊಡ್ಡ ಸಂಕೋಲೆಯಾಗಿರುವುದನ್ನು ಈ ಸಿನಿಮಾದಲ್ಲಿ ಕಟ್ಟಿಕೊಡಲಾಗಿತ್ತು. ದೃಶ್ಯಗಳೇ ಮಾತನಾಡುವಂತೆ ಚಿತ್ರಕತೆಯನ್ನು ಜಿಯೋ ಬೇಬಿ ಎಣೆದಿದ್ದು, ಚಿತ್ರಕತೆ ಪ್ರಶಸ್ತಿಗೆ ಅವರು ಆಯ್ಕೆಯಾಗಿದ್ದಾರೆ.

‘ವೆಲ್ಲಮ್‌’ ಚಿತ್ರದ ನಟನೆಗಾಗಿ ಜಯಸೂರ್ಯ ಅತ್ಯುತ್ತಮ ನಟ, ‘ಕಪ್ಪೆಲ’ ಸಿನಿಮಾ ನಟನೆಗಾಗಿ ಅನ್ನಾ ಬೆನ್‌ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜಯಸೂರ್ಯ
ಅನ್ನ ಬೆನ್‌

‘ಅಯ್ಯಪ್ಪನ್ನುಮುಂ ಕೋಶಿಯುಂ’ ಅತ್ಯುತ್ತಮ ಮನರಂಜನಾ ಸಿನಿಮಾವಾಗಿ ಆಯ್ಕೆಯಾಗಿದೆ. ಈ ಸಿನಿಮಾದ ನಿರ್ದೇಶಕ ಸಚ್ಚಿ (ಸಚ್ಚಿದಾನಂದ) 2020ರ ಜೂನ್‌ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಖ್ಯಾತ ನಟಿ ಸುಹಾಸಿನಿ ಮಣಿರತ್ನಂ ಅಧ್ಯಕ್ಷತೆಯಲ್ಲಿ ರೂಪಿಸಿದ್ದ ಪ್ರಶಸ್ತಿ ಸಮಿತಿಯಲ್ಲಿ ಕನ್ನಡ ಚಿತ್ರನಿರ್ದೇಶಕ ಪಿ.ಶೇಷಾದ್ರಿ ಅವರೂ ಇದ್ದರು. ಒಟ್ಟು ಎಂಬತ್ತು ಸಿನಿಮಾಗಳು ಪ್ರಶಸ್ತಿ ಸುತ್ತಿನಲ್ಲಿದ್ದವು.

ಪ್ರಶಸ್ತಿ ಪಟ್ಟಿ

ಅತ್ಯುತ್ತಮ ನಟ : ಜಯಸೂರ್ಯ (ವೆಲ್ಲಮ್‌), ಅತ್ಯುತ್ತಮ ನಟಿ : ಅನ್ನಾ ಬೆನ್‌ (ಕಪ್ಪೆಲ), ಅತ್ಯುತ್ತಮ ಸಿನಿಮಾ: ದಿ ಗ್ರೇಟ್‌ ಇಂಡಿಯನ್ ಕಿಚನ್‌ (ನಿರ್ದೇಶನ – ಜಿಯೋ ಬೇಬಿ), ಅತ್ಯುತ್ತಮ ಮನರಂಜನಾತ್ಮಕ ಸಿನಿಮಾ: ಅಯ್ಯಪ್ಪನುಮ್‌ ಕೋಶಿಯುಂ (ನಿರ್ದೇಶನ : ಸಚಿ), ಅತ್ಯುತ್ತಮ ನಿರ್ದೇಶಕ: ಸಿದ್ಧಾರ್ಥ ಶಿವ (ಎನ್ನಿವರ್‌), ಅತ್ಯುತ್ತಮ ಚೊಚ್ಚಲ ನಿರ್ದೇಶನ: ಮೊಹಮ್ಮದ್ ಮುಸ್ತಾಫಾ (ಕಪ್ಪೆಲಾ), ಅತ್ಯುತ್ತಮ ಚಿತ್ರಕಥೆ : ಜಿಯೋ ಬೇಬಿ (ದಿ ಗ್ರೇಟ್ ಇಂಡಿಯನ್ ಕಿಚನ್‌), ಅತ್ಯುತ್ತಮ ಸಂಕಲನ : ಮಹೇಶ್ ನಾಯಾಯಣನ್‌ (ಸಿ ಯೂ ಸೂನ್‌), ಅತ್ಯುತ್ತಮ ಸಂಗೀತ ನಿರ್ದೇಶಕ : ಎಂ.ಜಯಚಂದ್ರನ್‌ (ಸೂಫಿಯಂ ಸುಜಾತಯಂ), ಅತ್ಯುತ್ತಮ ಗಾಯಕ : ಶಾಬಾಝ್ ಅಮಾನ್‌, ಅತ್ಯುತ್ತಮ ಗಾಯಕಿ : ನಿತ್ಯಾ ಮಮ್ಮೆನ್‌, ಅತ್ಯುತ್ತಮ ಗೀತರಚನೆ : ಅನ್ವರ್ ಅಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಯ್ಯಪ್ಪನುಂ ಕೋಶಿಯುಂ ಸಿನಿಮಾ ನಿರ್ದೇಶಕರಾದ ಸಚ್ಚಿದಾನಂದ ಮರಣಹೊಂದಿದ್ದು 2020 ಜೂನ್ ತಿಂಗಳಲ್ಲಿ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...