Homeಮುಖಪುಟಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದ 'ಕೇರಳ ಸ್ಟೋರಿ-2' ತಂಡ

ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದ ‘ಕೇರಳ ಸ್ಟೋರಿ-2’ ತಂಡ

- Advertisement -
- Advertisement -

‘ದಿ ಕೇರಳ ಸ್ಟೋರಿ-2 ಗೋಸ್ ಬಿಯಾಂಡ್’ ತಂಡ ಕೇರಳ ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದೆ.

ಮಂಗಳವಾರ (ಫೆ.24) ಬೆಳಗ್ಗಿನ ಅವಧಿಯ ವಿಚಾರಣೆಯ ವೇಳೆ ನ್ಯಾಯಮೂರ್ತಿ ಬಿಚು ಕುರಿಯನ್ ಥಾಮಸ್ ಅವರು, “ಸಿನಿಮಾದ ವಿರುದ್ದ ಸಲ್ಲಿಕೆಯಾಗಿರುವ ಮೂರು ಅರ್ಜಿಗಳ ಸಂಬಂಧ ಯಾವುದೇ ಆದೇಶ ಕೊಡುವ ಮೊದಲು ನಾನು ಸಿನಿಮಾ ನೋಡಬೇಕು” ಎಂದಿದ್ದರು.

ಇದಕ್ಕೆ ಒಪ್ಪಿದ್ದ ಸಿನಿಮಾ ತಂಡ “ನಾವು ತೋರಿಸಲು ಸಿದ್ದರಿದ್ದೇವೆ” ಎಂದು ಹೇಳಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ನ್ಯಾಯಮೂರ್ತಿ, “ನಾನು ನಾಳೆಯೇ ಸಿನಿಮಾ ನೋಡುತ್ತೇನೆ” ಎಂದಿದ್ದರು. ಹಾಗಾಗಿ, ಮಧ್ಯಾಹ್ನದ ನಂತರದ ವಿಚಾರಣೆಯ ವೇಳೆ ನ್ಯಾಯಾಧೀಶರಿಗೆ ಸಿನಿಮಾ ತೋರಿಸುವ ಸಮಯ ನಿರ್ಧಾರವಾಗಬಹುದು ಎಂದು ನಿರೀಕ್ಷಿಸಲಾಗಿತ್ತು.

ಆದರೆ, ಮಧ್ಯಾಹ್ನದ ನಂತರ ವಿಚಾರಣೆ ವೇಳೆ ಹೊಸ ವಿಷಯವನ್ನು ಮುಂದೆ ತಂಡ ಸಿನಿಮಾ ತಂಡ, ನ್ಯಾಯಾಧೀಶರಿಗೆ ಸಿನಿಮಾ ತೋರಿಸುವುದಕ್ಕೆ ಹಿಂದೇಟು ಹಾಕಿದೆ.

ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿಯ ಪ್ರಕಾರ, ಮಧ್ಯಾಹ್ನ ನಂತರದ ವಿಚಾರಣೆ ಆರಂಭವಾದಾಗ ಸಿನಿಮಾ ನಿರ್ಮಾಪಕರ ಪರವಾಗಿ ಹಾಜರಾದ ಹಿರಿಯ ವಕೀಲ ಎಸ್. ಶ್ರೀಕುಮಾರ್, “ನ್ಯಾಯಾಲಯದ ಮುಂದಿರುವ ಅರ್ಜಿಗಳು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ಸ್ವರೂಪದಲ್ಲಿವೆಯೇ ಅಥವಾ ಖಾಸಗಿ ಮೊಕದ್ದಮೆಯ ಸ್ವರೂಪದಲ್ಲಿವೆಯೇ ಎಂಬುವುದನ್ನು ನ್ಯಾಯಾಲಯವು ಮೊದಲು ನಿರ್ಧರಿಸಬೇಕು” ಎಂದು ವಾದಿಸಿದ್ದಾರೆ.

ಈ ಬದಲಾವಣೆಯನ್ನು ಗಮನಿಸಿದ ನ್ಯಾಯಮೂರ್ತಿ ಥಾಮಸ್ ಅವರು, “ನಿರ್ಮಾಪಕರು ನ್ಯಾಯಾಲಯ ಸಿನಿಮಾ ವೀಕ್ಷಿಸುವ ವಿಷಯದಲ್ಲಿ ಆಸಕ್ತಿ ಹೊಂದಿಲ್ಲ” ಎಂದು ಮೌಖಿಕವಾಗಿ ಹೇಳಿದ್ದಾರೆ.

“ನ್ಯಾಯಾಲಯ ಸಿನಿಮಾ ನೋಡಬೇಕೆಂದು ನೀವು ಉತ್ಸುಕರಾಗಿಲ್ಲ. ಈ ಅರ್ಜಿಯು ಖಾಸಗಿ ಮೊಕದ್ದಮೆಯೋ ಅಥವಾ ಸಾರ್ವಜನಿಕ ಮೊಕದ್ದಮೆಯೋ ಎಂಬುವುದರ ಮೇಲೆ ನೀವು ಸಮಸ್ಯೆಯನ್ನು ನಿರ್ಧರಿಸಲು ಬಯಸಿದ್ದೀರಿ” ಎಂದು ನ್ಯಾಯಾಧೀಶರು ಟೀಕಿಸಿದ್ದಾಗಿ ಬಾರ್ & ಬೆಂಚ್ ವರದಿ ಉಲ್ಲೇಖಿಸಿದೆ.

ಪ್ರಸ್ತಾವಿತ ಸಿನಿಮಾ ಪ್ರದರ್ಶನದ ಕುರಿತು ಸಿಬಿಎಫ್‌ಸಿ ಮತ್ತು ನಿರ್ಮಾಪಕರಿಗೆ ಯಾವುದೇ ಸೂಚನೆಗಳು ಸಿಗದ ಕಾರಣ, ಅರ್ಜಿಗಳ ನಿರ್ವಹಣೆಗೆ ಸಂಬಂಧಿಸಿದ ಪ್ರಾಥಮಿಕ ಸಮಸ್ಯೆಯನ್ನು ಮೊದಲು ಪರಿಗಣಿಸುವುದಾಗಿ ತಿಳಿಸಿದ್ದಾರೆ.

‘ಕೇರಳ ಸ್ಟೋರಿ-2 ಗೋಸ್ ಬಿಯಾಂಡ್’ ಸಿನಿಮಾದ ವಿರುದ್ದ ಕೇರಳ ಹೈಕೋರ್ಟ್‌ಗೆ ಮೂರು ಪ್ರತ್ಯೇಕ ಅರ್ಜಿಗಳು ಸಲ್ಲಿಕೆಯಾಗಿವೆ.

1. ಮೊದಲ ಅರ್ಜಿಯನ್ನು ಕಣ್ಣೂರು ಜಿಲ್ಲೆಯ ಚಿತ್ತಾರಿಪರಂಬದ ನಿವಾಸಿ 26 ವರ್ಷದ ಜೀವವಿಜ್ಞಾನಿ ಶ್ರೀದೇವ್ ನಂಬೂದಿರಿ ಅವರು ಸಲ್ಲಿಸಿದ್ದಾರೆ.

ಇವರು ತನ್ನ ಅರ್ಜಿಯಲ್ಲಿ, ” ಸಿನಿಮಾದ ಟ್ರೈಲರ್‌ನಲ್ಲಿ ವಿವಿಧ ರಾಜ್ಯಗಳ ಮಹಿಳೆಯರ ಕಥೆಗಳಿದ್ದರೂ, ಶೀರ್ಷಿಕೆಯಲ್ಲಿ ‘ಕೇರಳ’ ಎಂದು ಬಳಸಿರುವುದು ಇಡೀ ರಾಜ್ಯದ ಜನರನ್ನು ಅಪರಾಧಿಗಳಂತೆ ಬಿಂಬಿಸುತ್ತದೆ ಮತ್ತು ಕೇರಳವನ್ನು ಭಯೋತ್ಪಾದನೆಯ ಕೇಂದ್ರವೆಂದು ತಪ್ಪಾಗಿ ತೋರಿಸುತ್ತದೆ” ಎಂದು ಹೇಳಿದ್ದಾರೆ.

ಟೀಸರ್‌ನ ಕೊನೆಯಲ್ಲಿರುವ “ಅಬ್ ಸಹೆಂಗೆ ನಹೀ… ಲಡೆಂಗೆ” (ಇನ್ನು ಸಹಿಸುವುದಿಲ್ಲ… ಹೋರಾಡುತ್ತೇವೆ) ಎಂಬ ಸಂಭಾಷಣೆಯು ಸಾರ್ವಜನಿಕರಲ್ಲಿ ದ್ವೇಷ ಮೂಡಿಸುವ ಮತ್ತು ಹಿಂಸೆಗೆ ಪ್ರಚೋದನೆ ನೀಡುವಂತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು (ಸಿಬಿಎಫ್‌ಸಿ) ಸಿನಿಮಾದಿಂದ ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಯ ಮೇಲೆ ಉಂಟಾಗುವ ಪರಿಣಾಮಗಳನ್ನು ಸರಿಯಾಗಿ ಪರಿಶೀಲಿಸದೆ ಪ್ರಮಾಣಪತ್ರ ನೀಡಿದೆ ಎಂದು ಅವರು ಆರೋಪಿಸಿದ್ದಾರೆ.

ಸಿನಿಮಾವು ನೈಜ ಘಟನೆಗಳ ಆಧಾರಿತ ಎಂದು ಹೇಳಿಕೊಳ್ಳುತ್ತಾ, ಕಾಲ್ಪನಿಕ ಭಯವನ್ನು ಕೇರಳ ರಾಜ್ಯದ ಮೇಲೆ ಹೊರಿಸುತ್ತಿದೆ. ಇದು ಕೇರಳದ ಜನರನ್ನು ದೇಶದ ಇತರ ಭಾಗದವರಿಂದ ಪ್ರತ್ಯೇಕಿಸುವ ಪ್ರಯತ್ನ ಎಂದು ಶ್ರೀದೇವ್ ನಂಬೂದಿರಿ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

2.ಫ್ರೆಡ್ಡಿ ವಿ. ಫ್ರಾನ್ಸಿಸ್ ಎಂಬವರು ಎರಡನೇ ಅರ್ಜಿ ಸಲ್ಲಿಸಿದ್ದು, ಇವರು ಸಿನಿಮಾದ ಬಿಡುಗಡೆಗೆ ತಡೆ ಕೋರಿದ್ದಾರೆ.

ಫ್ರೆಡ್ಡಿ ಅವರು ಈ ಸಿನಿಮಾದ ಶೀರ್ಷಿಕೆ ಮತ್ತು ಪ್ರಚಾರದ ವಿಧಾನವನ್ನು “ದ್ವೇಷದ ಮಾರ್ಕೆಟಿಂಗ್” ಎಂದು ಬಣ್ಣಿಸಿದ್ದಾರೆ. ಮೊದಲ ಭಾಗದ ಬಿಡುಗಡೆಯ ನಂತರ ಜಾಗತಿಕವಾಗಿ ಮಲಯಾಳಿಗಳ ಬಗ್ಗೆ ಉಂಟಾಗಿರುವ ಪೂರ್ವಾಗ್ರಹ ಪೀಡಿತ ಮನಸ್ಥಿತಿಯನ್ನು ಈ ಸಿನಿಮಾ ಮತ್ತಷ್ಟು ಕೆರಳಿಸುತ್ತದೆ ಎಂದು ಅವರು ವಾದಿಸಿದ್ದಾರೆ.

ಸಿನಿಮಾದ ಟ್ರೈಲರ್‌ನಲ್ಲಿ ರಾಜಸ್ಥಾನ ಮತ್ತು ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಮಹಿಳೆಯರ ಕಥೆಗಳಿದ್ದರೂ, ಕೇವಲ ‘ಕೇರಳ’ದ ಹೆಸರನ್ನು ಬಳಸಿರುವುದು ಭಯೋತ್ಪಾದನೆಯನ್ನು ಕೇವಲ ಒಂದು ರಾಜ್ಯಕ್ಕೆ ಸೀಮಿತಗೊಳಿಸಿ ತೋರಿಸುವ ಪ್ರಯತ್ನವಾಗಿದೆ. ಇದು ರಾಜ್ಯದ ಜಾತ್ಯತೀತ ಅಸ್ಮಿತೆಗೆ ದಕ್ಕೆ ತರುವಂತಿದೆ ಎಂದು ಆಕ್ಷೇಪಿಸಿದ್ದಾರೆ.

ಸೆನ್ಸಾರ್ ಮಂಡಳಿಯು 1952ರ ‘ಸಿನಿಮ್ಯಾಟೋಗ್ರಾಫ್ ಆಕ್ಟ್’ ಅಡಿಯಲ್ಲಿ ಸಾರ್ವಜನಿಕ ಸುವ್ಯವಸ್ಥೆ ಮತ್ತು ನೈತಿಕತೆಯನ್ನು ಸರಿಯಾಗಿ ಪರಿಶೀಲಿಸದೆ ಸಿನಿಮಾಕ್ಕೆ ಅನುಮತಿ ನೀಡಿದೆ ಎಂದು ಫ್ರೆಡ್ಡಿ ಹೇಳಿದ್ದಾರೆ.

ಈ ಸಿನಿಮಾ ಕೇರಳದ ಜನರ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವ ಮೂಲಕ ಸಂವಿಧಾನದ ವಿಧಿ 14 (ಸಮಾನತೆಯ ಹಕ್ಕು) ಮತ್ತು ವಿಧಿ 21 (ಜೀವಿಸುವ ಹಕ್ಕು) ಅನ್ನು ಉಲ್ಲಂಘಿಸುತ್ತದೆ ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

3.ಮೂರನೇ ಅರ್ಜಿಯನ್ನು ವಕೀಲ ಅತುಲ್ ರಾಯ್ ಸಲ್ಲಿಸಿದ್ದಾರೆ. ಈ ಅರ್ಜಿ ಮೊದಲ ಎರಡು ಅರ್ಜಿಗಳೊಂದಿಗೆ ವಿಚಾರಣೆಗೆ ಬಂದಿದೆ.

ಸಿನಿಮಾದ ಶೀರ್ಷಿಕೆಯಲ್ಲಿ ‘ಕೇರಳ’ ಎಂಬ ಪದವನ್ನು ಬಳಸಿರುವುದಕ್ಕೆ ರಾಯ್ ಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿನಿಮಾದ ಕಥೆಯು ಇಡೀ ರಾಜ್ಯಕ್ಕೆ ಸಂಬಂಧಿಸಿಲ್ಲದಿದ್ದರೂ, ಈ ಹೆಸರನ್ನು ಬಳಸುವ ಮೂಲಕ ರಾಜ್ಯದ ಘನತೆಗೆ ಧಕ್ಕೆ ತರಲಾಗುತ್ತಿದೆ ಎಂದು ವಾದಿಸಿದ್ದಾರೆ.

ಸೆನ್ಸಾರ್ ಮಂಡಳಿ ಸಿನಿಮಾಕ್ಕೆ ನೀಡಿರುವ ಪ್ರಮಾಣಪತ್ರವನ್ನು ಅವರು ಪ್ರಶ್ನಿಸಿದ್ದಾರೆ. ಸಾರ್ವಜನಿಕ ಸುವ್ಯವಸ್ಥೆ ಮತ್ತು ನೈತಿಕತೆಯ ಮೇಲೆ ಈ ಸಿನಿಮಾ ಬೀರಬಹುದಾದ ಪರಿಣಾಮಗಳನ್ನು ಪರಿಶೀಲಿಸುವಲ್ಲಿ ಮಂಡಳಿಯು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಸಂವಿಧಾನದ ಅಡಿಯಲ್ಲಿ ಸಮಾನತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿರುವ ಸಮರ್ಥನೀಯ ನಿರ್ಬಂಧಗಳನ್ನು ಈ ಚಿತ್ರವು ಮೀರುತ್ತದೆ ಎಂದು ಅವರು ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ.

ಅರ್ಜಿಗಳ ವಿಚಾರಣೆ ಇಂದು (ಫೆ.25, ಬುಧವಾರ) ಮುಂದುವರಿಯಲಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...