Homeಮುಖಪುಟಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

ಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

ನಾವು ಪೋಸ್ಟ್ ಮಾಡಿದ ಚಿತ್ರ ವೈರಲ್ ಆಗುತ್ತದೆ ಎಂದು ನಾವು ಅಂದಾಜಿಸಿರಲಿಲ್ಲ. ಅದು ಅಷ್ಟೊಂದು ಹರಿದಾಡುತ್ತಿರುವುದು ನಮ್ಮ ಈ ಸರಳ ಪ್ರತಿಭಟನೆಗೆ ಜನಬೆಂಬಲವನ್ನು ತೋರಿಸುತ್ತದೆ.

- Advertisement -
- Advertisement -

ಸಾಕ್ಷರತೆಯಲ್ಲಿ ಮುಂದಿರುವ ಕೇರಳ ರಾಜ್ಯವು ಮತೀಯವಾದ, ಕಟ್ಟಳೆಗಳಿಗೆ ಸೊಪ್ಪು ಹಾಕುವುದಿಲ್ಲ ಎನ್ನುವುದನ್ನು ಅಲ್ಲಿನ ವಿದ್ಯಾರ್ಥಿಗಳು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಒಂದು ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ವಿರುದ್ಧ ವಿನೂತನವಾಗಿ ಸೆಡ್ಡು ಹೊಡೆದು ಸುದ್ದಿಯಾಗಿದ್ದಾರೆ.

ಕಾಲೇಜ್ ಆಫ್ ಇಂಜಿನಿಯರಿಂಗ್ ತ್ರಿವೇಂದ್ರಮ್ (ಸಿಇಟಿ) ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಬಸ್‌ ನಿಲ್ದಾಣದಲ್ಲಿ ಲಿಂಗಬೇಧವೆಣಿಸದೆ ಒಬ್ಬರ ಕಾಲಿನ ಮೇಲೆ ಮತ್ತೊಬ್ಬರು ಕುಳಿತುಕೊಂಡು ತೆಗೆಸಿಕೊಂಡ ಸುಂದರ ಫೋಟೊ ಒಂದು ವೈರಲ್ ಆಗಿದೆ. ಹಲವಾರು ಜನ ಆ ಫೋಟೊವನ್ನು ಪ್ರೊಫೈಲ್ ಪಿಕ್ ಆಗಿ, ವಾಟ್ಸಾಪ್ ಸ್ಟೇಟಸ್ ಆಗಿ ಹಾಕಿಕೊಂಡು ಸಂಭ್ರಮಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ಉಳಿದ ವಿದ್ಯಾರ್ಥಿಗಳು ಕೂಡ ಅದೇ ಜಾಗದಲ್ಲಿ ಕುಳಿತು ಫೋಟೊ ತೆಗೆಸಿದ್ದಾರೆ! ಆ ಮೂಲಕ ನೈತಿಕ ಪೊಲೀಸ್‌ಗಿರಿ ಮಾಡಲು ಮುಂದಾದವರಿಗೆ ತಕ್ಕ ಉತ್ತರ ನೀಡಿದ್ದಾರೆ.

ನಡೆದಿದ್ದಿಷ್ಟು..

ಸಿಇಟಿ ಕಾಲೇಜಿನ ಹೊರಗಿನ ಬಸ್‌ ನಿಲ್ದಾಣವು ವಿದ್ಯಾರ್ಥಿಗಳಿಗೆ ತಮ್ಮ ಸ್ನೇಹಿತರನ್ನು ಮಾತನಾಡಿಸಲು, ಹರಟೆ ಹೊಡೆಯಲು ಪ್ರಸಕ್ತ ಸ್ಥಳವಾಗಿತ್ತು. ಕಾಲೇಜು ಮುಗಿದ ನಂತರ ಅಲ್ಲಿ ಕುಳಿತು ಹುಡುಗ ಹುಡುಗಿಯರು ಸೇರಿ ತಮಾಷೆ ಮಾಡುತ್ತಿದ್ದುದು ಎಂದಿನ ದಿನಚರಿ. ಆದರೆ ಇದು ಅಲ್ಲಿನ ಸ್ಥಳೀಯ ಸಂಪ್ರದಾಯವಾದಿಗಳಿಗೆ ಸಹಿಸಿಕೊಳ್ಳಲು ಅಸಾಧ್ಯವಾಗಿತ್ತು. ಅವರ ಪ್ರಕಾರ ಹುಡುಗ ಹುಡುಗಿಯರು ಮಾತನಾಡಬಾರದು, ಸ್ನೇಹ ಪ್ರೀತಿ ಮಾಡಬಾರದು. ಅದಕ್ಕಾಗಿ ಸ್ಥಳೀಯರು ಕಳೆದ ಜುಲೈ 19ರ ಮಂಗಳವಾರ ರಾತ್ರೋರಾತ್ರಿ ಬಸ್‌ ಸ್ಟ್ಯಾಂಡಿನಲ್ಲಿ ಕುಳಿತುಕೊಳ್ಳುವ ಕುರ್ಚಿಗಳನನ್ನು ತೆಗೆದು ಕೇವಲ ಒಬ್ಬೊಬ್ಬರು ಮಾತ್ರ ಕುಳಿತುಕೊಳ್ಳುವಂತೆ ಮೂರು ಕುರ್ಚಿಗಳನ್ನು ಹಾಕಲಾಗಿತ್ತು. ಎರಡು ಕುರ್ಚಿ ಜೊತೆಗಿದ್ದರೆ ಹುಡುಗ-ಹುಡುಗಿ ಕುಳಿತು ಮಾತನಾಡುತ್ತಾರೆ ಎಂಬುದು ಅವರ ಈ ಕೃತ್ಯಕ್ಕೆ ಕಾರಣವಾಗಿತ್ತು.

ಇದನ್ನು ನೋಡಿದ ವಿದ್ಯಾರ್ಥಿಗಳಿಗೆ ಆಶ್ಚರ್ಯ ಮತ್ತು ಆಘಾತವಾಗಿತ್ತು. ಇದನ್ನು ಪ್ರತಿಭಟಿಸಲು ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರ್ಧರಿಸಿದರು. ಒಂದೇ ಸೀಟಿನಲ್ಲಿ ಹುಡುಗ ಹುಡುಗಿಯರು ತೊಡೆಮೇಲೆ ಕುಳಿತು ಫೋಟೊ ತೆಗೆದು ತಮ್ಮ ಸ್ನೇಹಿತರ ಗುಂಪುಗಳಲ್ಲಿ ಹಂಚಿಕೊಂಡರು. ಅವರ ಈ ದಿಟ್ಟ ಮತ್ತು ವಿನೂತನ ಪ್ರತಿಭಟನೆಯ ಈ ಚಿತ್ರಗಳು ನಂತರ ಎಲ್ಲೆಂದರಲ್ಲಿ ವೈರಲ್ ಆದವು. ಉಳಿದ ವಿದ್ಯಾರ್ಥಿಗಳು ಈ ಫೋಟೊ ತೆಗೆಸಿಕೊಳ್ಳುವ ಪ್ರತಿಭಟನೆಗೆ ಕೈಜೋಡಿಸಿ ತಾವು ಜೊತೆಗೆ ಕುಳಿತು ಪೋಟೊ ತೆಗೆಸಿಕೊಂಡರು.

“ನಾವು ಪ್ರತಿನಿತ್ಯ ಅಲ್ಲಿ ಕುಳಿತರೆ, ಹುಡುಗ-ಹುಡುಗಿ ಮಾತನಾಡಿದರೆ ಸ್ಥಳೀಯರು ತೊಂದರೆ ಕೊಡುತ್ತಿದ್ದರು. ನಿಂದಿಸುತ್ತಿದ್ದರು. ಹಾಗಾಗಿ ಇಬ್ಬರು ಕೂರಬಾರದೆಂದು ಒಂದೊಂದು ಕುರ್ಚಿಯನ್ನು ತೆಗೆಸಿದ್ದರು. ಅದನ್ನು ವಿದ್ಯಾರ್ಥಿಗಳು ವಿರೋಧಿಸಿ ವಿನೂತನವಾಗಿ ಪ್ರತಿಭಟಿಸಿದ್ದಾರೆ” ಎಂದು ಸಿಇಟಿ ಕಾಲೇಜು ಸಂಘದ ಉಪಾಧ್ಯಕ್ಷರಾದ ಕೆ.ಪೆ ಫೆಬಿ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಮತ್ತೊಬ್ಬ ವಿದ್ಯಾರ್ಥಿನಿ ಆರ್ಯ ಪ್ರತಿಕ್ರಿಯಿಸಿ, “ನಾವು ಪೋಸ್ಟ್ ಮಾಡಿದ ಚಿತ್ರ ವೈರಲ್ ಆಗುತ್ತದೆ ಎಂದು ನಾವು ಅಂದಾಜಿಸಿರಲಿಲ್ಲ. ಅದು ಅಷ್ಟೊಂದು ಹರಿದಾಡುತ್ತಿರುವುದು ನಮ್ಮ ಈ ಸರಳ ಪ್ರತಿಭಟನೆಗೆ ಜನಬೆಂಬಲವನ್ನು ತೋರಿಸುತ್ತದೆ. ಜೊತೆಗೆ ಇಲ್ಲಿನ ಸ್ಥಳೀಯರು ವಿದ್ಯಾರ್ಥಿಗಳ ಬಗ್ಗೆ ಯಾವ ಅಭಿಪ್ರಾಯ ಹೊಂದಿದ್ದಾರೆ ಮತ್ತು ನಮ್ಮನ್ನು ಹೇಗೆ ನಿಯಂತ್ರಿಸಲು ಬಯಸುತ್ತಾರೆ ಎಂಬುದನ್ನು ತಿಳಿಸುತ್ತದೆ. ಆದರೆ ನಮ್ಮ ಪ್ರತಿಭಟನೆಯ ನಂತರ ಇದುವರೆಗೂ ನಮಗೆ ಸಕರಾತ್ಮಕ ಪ್ರತಿಕ್ರಿಯೆಗಳು ಬಂದಿವೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಉಡುಪಿ ಸಾಮರಸ್ಯ ನಡಿಗೆ, ಸಹಬಾಳ್ವೆ ಸಮಾವೇಶ ಹೀಗಿತ್ತು; ಚಿತ್ರಗಳಲ್ಲಿ ನೋಡಿ

ಈ ಮೊದಲು ಸಹ ಸಿಇಟಿ ಕಾಲೇಜಿನ ವಿದ್ಯಾರ್ಥಿಗಳು ಹಾಸ್ಟೆಲ್ ಸಮಯದ ಕುರಿತು ಪ್ರತಿಭಟನೆ ನಡೆಸಿದ್ದರು. ಸಂಜೆ 6.30ರ ಒಳಗೆ ವಿದ್ಯಾರ್ಥಿನಿಯರು ಹಾಸ್ಟೆಲ್ ಒಳಗೆ ಬರಬೇಕು ಎಂಬ ನಿಯಮ ತಂದಾಗ ದೊಡ್ಡ ಪ್ರತಿಭಟನೆ ನಡೆಸಿ ಅದನ್ನು 9.30ರ ಒಳಗೆ ಬರಬೇಕು ಎಂದು ತಿದ್ದುಪಡಿ ತರಲು ಕಾರಣರಾಗಿದ್ದರು. ಈಗ ಮತ್ತೊಮ್ಮೆ ಮತೀಯ ಗೂಂಡಾಗಿರಿ ವಿರುದ್ಧ ಸ್ಪಷ್ಟ ಸಂದೇಶ ನೀಡಿದ್ದಾರೆ.

ಕೃಪೆ: ಆನ್‌ಮನೋರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಗಂಡು ಹೆಣ್ಣಿನ ಸ್ನೇಹ ಅದು ಗಿಟ್ಟದ ಸಂಪ್ರದಾಯಿಗಳ ಲೈಂಗಿಕ ವಿಕರಾಳಗಳಿಗೆ ಸವಾಲೊಡ್ಡುತ್ತದೆ 😁ಪಾಪ ಆವರೇನು ಮಾಡಿಯಾರು?
    ಆದರೆ ಈ ತಾಲೆಬಾನಿಗಳಿಗೆ ವಿದ್ಯಾರ್ಥಿಗಳ ಉತ್ತರ ಸಮಂಜಸವಾದದ್ದೆ.

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...