Homeಮುಖಪುಟಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

ಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

ನಾವು ಪೋಸ್ಟ್ ಮಾಡಿದ ಚಿತ್ರ ವೈರಲ್ ಆಗುತ್ತದೆ ಎಂದು ನಾವು ಅಂದಾಜಿಸಿರಲಿಲ್ಲ. ಅದು ಅಷ್ಟೊಂದು ಹರಿದಾಡುತ್ತಿರುವುದು ನಮ್ಮ ಈ ಸರಳ ಪ್ರತಿಭಟನೆಗೆ ಜನಬೆಂಬಲವನ್ನು ತೋರಿಸುತ್ತದೆ.

- Advertisement -
- Advertisement -

ಸಾಕ್ಷರತೆಯಲ್ಲಿ ಮುಂದಿರುವ ಕೇರಳ ರಾಜ್ಯವು ಮತೀಯವಾದ, ಕಟ್ಟಳೆಗಳಿಗೆ ಸೊಪ್ಪು ಹಾಕುವುದಿಲ್ಲ ಎನ್ನುವುದನ್ನು ಅಲ್ಲಿನ ವಿದ್ಯಾರ್ಥಿಗಳು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಒಂದು ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ವಿರುದ್ಧ ವಿನೂತನವಾಗಿ ಸೆಡ್ಡು ಹೊಡೆದು ಸುದ್ದಿಯಾಗಿದ್ದಾರೆ.

ಕಾಲೇಜ್ ಆಫ್ ಇಂಜಿನಿಯರಿಂಗ್ ತ್ರಿವೇಂದ್ರಮ್ (ಸಿಇಟಿ) ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಬಸ್‌ ನಿಲ್ದಾಣದಲ್ಲಿ ಲಿಂಗಬೇಧವೆಣಿಸದೆ ಒಬ್ಬರ ಕಾಲಿನ ಮೇಲೆ ಮತ್ತೊಬ್ಬರು ಕುಳಿತುಕೊಂಡು ತೆಗೆಸಿಕೊಂಡ ಸುಂದರ ಫೋಟೊ ಒಂದು ವೈರಲ್ ಆಗಿದೆ. ಹಲವಾರು ಜನ ಆ ಫೋಟೊವನ್ನು ಪ್ರೊಫೈಲ್ ಪಿಕ್ ಆಗಿ, ವಾಟ್ಸಾಪ್ ಸ್ಟೇಟಸ್ ಆಗಿ ಹಾಕಿಕೊಂಡು ಸಂಭ್ರಮಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ಉಳಿದ ವಿದ್ಯಾರ್ಥಿಗಳು ಕೂಡ ಅದೇ ಜಾಗದಲ್ಲಿ ಕುಳಿತು ಫೋಟೊ ತೆಗೆಸಿದ್ದಾರೆ! ಆ ಮೂಲಕ ನೈತಿಕ ಪೊಲೀಸ್‌ಗಿರಿ ಮಾಡಲು ಮುಂದಾದವರಿಗೆ ತಕ್ಕ ಉತ್ತರ ನೀಡಿದ್ದಾರೆ.

ನಡೆದಿದ್ದಿಷ್ಟು..

ಸಿಇಟಿ ಕಾಲೇಜಿನ ಹೊರಗಿನ ಬಸ್‌ ನಿಲ್ದಾಣವು ವಿದ್ಯಾರ್ಥಿಗಳಿಗೆ ತಮ್ಮ ಸ್ನೇಹಿತರನ್ನು ಮಾತನಾಡಿಸಲು, ಹರಟೆ ಹೊಡೆಯಲು ಪ್ರಸಕ್ತ ಸ್ಥಳವಾಗಿತ್ತು. ಕಾಲೇಜು ಮುಗಿದ ನಂತರ ಅಲ್ಲಿ ಕುಳಿತು ಹುಡುಗ ಹುಡುಗಿಯರು ಸೇರಿ ತಮಾಷೆ ಮಾಡುತ್ತಿದ್ದುದು ಎಂದಿನ ದಿನಚರಿ. ಆದರೆ ಇದು ಅಲ್ಲಿನ ಸ್ಥಳೀಯ ಸಂಪ್ರದಾಯವಾದಿಗಳಿಗೆ ಸಹಿಸಿಕೊಳ್ಳಲು ಅಸಾಧ್ಯವಾಗಿತ್ತು. ಅವರ ಪ್ರಕಾರ ಹುಡುಗ ಹುಡುಗಿಯರು ಮಾತನಾಡಬಾರದು, ಸ್ನೇಹ ಪ್ರೀತಿ ಮಾಡಬಾರದು. ಅದಕ್ಕಾಗಿ ಸ್ಥಳೀಯರು ಕಳೆದ ಜುಲೈ 19ರ ಮಂಗಳವಾರ ರಾತ್ರೋರಾತ್ರಿ ಬಸ್‌ ಸ್ಟ್ಯಾಂಡಿನಲ್ಲಿ ಕುಳಿತುಕೊಳ್ಳುವ ಕುರ್ಚಿಗಳನನ್ನು ತೆಗೆದು ಕೇವಲ ಒಬ್ಬೊಬ್ಬರು ಮಾತ್ರ ಕುಳಿತುಕೊಳ್ಳುವಂತೆ ಮೂರು ಕುರ್ಚಿಗಳನ್ನು ಹಾಕಲಾಗಿತ್ತು. ಎರಡು ಕುರ್ಚಿ ಜೊತೆಗಿದ್ದರೆ ಹುಡುಗ-ಹುಡುಗಿ ಕುಳಿತು ಮಾತನಾಡುತ್ತಾರೆ ಎಂಬುದು ಅವರ ಈ ಕೃತ್ಯಕ್ಕೆ ಕಾರಣವಾಗಿತ್ತು.

ಇದನ್ನು ನೋಡಿದ ವಿದ್ಯಾರ್ಥಿಗಳಿಗೆ ಆಶ್ಚರ್ಯ ಮತ್ತು ಆಘಾತವಾಗಿತ್ತು. ಇದನ್ನು ಪ್ರತಿಭಟಿಸಲು ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರ್ಧರಿಸಿದರು. ಒಂದೇ ಸೀಟಿನಲ್ಲಿ ಹುಡುಗ ಹುಡುಗಿಯರು ತೊಡೆಮೇಲೆ ಕುಳಿತು ಫೋಟೊ ತೆಗೆದು ತಮ್ಮ ಸ್ನೇಹಿತರ ಗುಂಪುಗಳಲ್ಲಿ ಹಂಚಿಕೊಂಡರು. ಅವರ ಈ ದಿಟ್ಟ ಮತ್ತು ವಿನೂತನ ಪ್ರತಿಭಟನೆಯ ಈ ಚಿತ್ರಗಳು ನಂತರ ಎಲ್ಲೆಂದರಲ್ಲಿ ವೈರಲ್ ಆದವು. ಉಳಿದ ವಿದ್ಯಾರ್ಥಿಗಳು ಈ ಫೋಟೊ ತೆಗೆಸಿಕೊಳ್ಳುವ ಪ್ರತಿಭಟನೆಗೆ ಕೈಜೋಡಿಸಿ ತಾವು ಜೊತೆಗೆ ಕುಳಿತು ಪೋಟೊ ತೆಗೆಸಿಕೊಂಡರು.

“ನಾವು ಪ್ರತಿನಿತ್ಯ ಅಲ್ಲಿ ಕುಳಿತರೆ, ಹುಡುಗ-ಹುಡುಗಿ ಮಾತನಾಡಿದರೆ ಸ್ಥಳೀಯರು ತೊಂದರೆ ಕೊಡುತ್ತಿದ್ದರು. ನಿಂದಿಸುತ್ತಿದ್ದರು. ಹಾಗಾಗಿ ಇಬ್ಬರು ಕೂರಬಾರದೆಂದು ಒಂದೊಂದು ಕುರ್ಚಿಯನ್ನು ತೆಗೆಸಿದ್ದರು. ಅದನ್ನು ವಿದ್ಯಾರ್ಥಿಗಳು ವಿರೋಧಿಸಿ ವಿನೂತನವಾಗಿ ಪ್ರತಿಭಟಿಸಿದ್ದಾರೆ” ಎಂದು ಸಿಇಟಿ ಕಾಲೇಜು ಸಂಘದ ಉಪಾಧ್ಯಕ್ಷರಾದ ಕೆ.ಪೆ ಫೆಬಿ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಮತ್ತೊಬ್ಬ ವಿದ್ಯಾರ್ಥಿನಿ ಆರ್ಯ ಪ್ರತಿಕ್ರಿಯಿಸಿ, “ನಾವು ಪೋಸ್ಟ್ ಮಾಡಿದ ಚಿತ್ರ ವೈರಲ್ ಆಗುತ್ತದೆ ಎಂದು ನಾವು ಅಂದಾಜಿಸಿರಲಿಲ್ಲ. ಅದು ಅಷ್ಟೊಂದು ಹರಿದಾಡುತ್ತಿರುವುದು ನಮ್ಮ ಈ ಸರಳ ಪ್ರತಿಭಟನೆಗೆ ಜನಬೆಂಬಲವನ್ನು ತೋರಿಸುತ್ತದೆ. ಜೊತೆಗೆ ಇಲ್ಲಿನ ಸ್ಥಳೀಯರು ವಿದ್ಯಾರ್ಥಿಗಳ ಬಗ್ಗೆ ಯಾವ ಅಭಿಪ್ರಾಯ ಹೊಂದಿದ್ದಾರೆ ಮತ್ತು ನಮ್ಮನ್ನು ಹೇಗೆ ನಿಯಂತ್ರಿಸಲು ಬಯಸುತ್ತಾರೆ ಎಂಬುದನ್ನು ತಿಳಿಸುತ್ತದೆ. ಆದರೆ ನಮ್ಮ ಪ್ರತಿಭಟನೆಯ ನಂತರ ಇದುವರೆಗೂ ನಮಗೆ ಸಕರಾತ್ಮಕ ಪ್ರತಿಕ್ರಿಯೆಗಳು ಬಂದಿವೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಉಡುಪಿ ಸಾಮರಸ್ಯ ನಡಿಗೆ, ಸಹಬಾಳ್ವೆ ಸಮಾವೇಶ ಹೀಗಿತ್ತು; ಚಿತ್ರಗಳಲ್ಲಿ ನೋಡಿ

ಈ ಮೊದಲು ಸಹ ಸಿಇಟಿ ಕಾಲೇಜಿನ ವಿದ್ಯಾರ್ಥಿಗಳು ಹಾಸ್ಟೆಲ್ ಸಮಯದ ಕುರಿತು ಪ್ರತಿಭಟನೆ ನಡೆಸಿದ್ದರು. ಸಂಜೆ 6.30ರ ಒಳಗೆ ವಿದ್ಯಾರ್ಥಿನಿಯರು ಹಾಸ್ಟೆಲ್ ಒಳಗೆ ಬರಬೇಕು ಎಂಬ ನಿಯಮ ತಂದಾಗ ದೊಡ್ಡ ಪ್ರತಿಭಟನೆ ನಡೆಸಿ ಅದನ್ನು 9.30ರ ಒಳಗೆ ಬರಬೇಕು ಎಂದು ತಿದ್ದುಪಡಿ ತರಲು ಕಾರಣರಾಗಿದ್ದರು. ಈಗ ಮತ್ತೊಮ್ಮೆ ಮತೀಯ ಗೂಂಡಾಗಿರಿ ವಿರುದ್ಧ ಸ್ಪಷ್ಟ ಸಂದೇಶ ನೀಡಿದ್ದಾರೆ.

ಕೃಪೆ: ಆನ್‌ಮನೋರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಗಂಡು ಹೆಣ್ಣಿನ ಸ್ನೇಹ ಅದು ಗಿಟ್ಟದ ಸಂಪ್ರದಾಯಿಗಳ ಲೈಂಗಿಕ ವಿಕರಾಳಗಳಿಗೆ ಸವಾಲೊಡ್ಡುತ್ತದೆ 😁ಪಾಪ ಆವರೇನು ಮಾಡಿಯಾರು?
    ಆದರೆ ಈ ತಾಲೆಬಾನಿಗಳಿಗೆ ವಿದ್ಯಾರ್ಥಿಗಳ ಉತ್ತರ ಸಮಂಜಸವಾದದ್ದೆ.

LEAVE A REPLY

Please enter your comment!
Please enter your name here

- Advertisment -

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...