Homeಮುಖಪುಟಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

ಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

ನಾವು ಪೋಸ್ಟ್ ಮಾಡಿದ ಚಿತ್ರ ವೈರಲ್ ಆಗುತ್ತದೆ ಎಂದು ನಾವು ಅಂದಾಜಿಸಿರಲಿಲ್ಲ. ಅದು ಅಷ್ಟೊಂದು ಹರಿದಾಡುತ್ತಿರುವುದು ನಮ್ಮ ಈ ಸರಳ ಪ್ರತಿಭಟನೆಗೆ ಜನಬೆಂಬಲವನ್ನು ತೋರಿಸುತ್ತದೆ.

- Advertisement -
- Advertisement -

ಸಾಕ್ಷರತೆಯಲ್ಲಿ ಮುಂದಿರುವ ಕೇರಳ ರಾಜ್ಯವು ಮತೀಯವಾದ, ಕಟ್ಟಳೆಗಳಿಗೆ ಸೊಪ್ಪು ಹಾಕುವುದಿಲ್ಲ ಎನ್ನುವುದನ್ನು ಅಲ್ಲಿನ ವಿದ್ಯಾರ್ಥಿಗಳು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಒಂದು ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ವಿರುದ್ಧ ವಿನೂತನವಾಗಿ ಸೆಡ್ಡು ಹೊಡೆದು ಸುದ್ದಿಯಾಗಿದ್ದಾರೆ.

ಕಾಲೇಜ್ ಆಫ್ ಇಂಜಿನಿಯರಿಂಗ್ ತ್ರಿವೇಂದ್ರಮ್ (ಸಿಇಟಿ) ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಬಸ್‌ ನಿಲ್ದಾಣದಲ್ಲಿ ಲಿಂಗಬೇಧವೆಣಿಸದೆ ಒಬ್ಬರ ಕಾಲಿನ ಮೇಲೆ ಮತ್ತೊಬ್ಬರು ಕುಳಿತುಕೊಂಡು ತೆಗೆಸಿಕೊಂಡ ಸುಂದರ ಫೋಟೊ ಒಂದು ವೈರಲ್ ಆಗಿದೆ. ಹಲವಾರು ಜನ ಆ ಫೋಟೊವನ್ನು ಪ್ರೊಫೈಲ್ ಪಿಕ್ ಆಗಿ, ವಾಟ್ಸಾಪ್ ಸ್ಟೇಟಸ್ ಆಗಿ ಹಾಕಿಕೊಂಡು ಸಂಭ್ರಮಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ಉಳಿದ ವಿದ್ಯಾರ್ಥಿಗಳು ಕೂಡ ಅದೇ ಜಾಗದಲ್ಲಿ ಕುಳಿತು ಫೋಟೊ ತೆಗೆಸಿದ್ದಾರೆ! ಆ ಮೂಲಕ ನೈತಿಕ ಪೊಲೀಸ್‌ಗಿರಿ ಮಾಡಲು ಮುಂದಾದವರಿಗೆ ತಕ್ಕ ಉತ್ತರ ನೀಡಿದ್ದಾರೆ.

ನಡೆದಿದ್ದಿಷ್ಟು..

ಸಿಇಟಿ ಕಾಲೇಜಿನ ಹೊರಗಿನ ಬಸ್‌ ನಿಲ್ದಾಣವು ವಿದ್ಯಾರ್ಥಿಗಳಿಗೆ ತಮ್ಮ ಸ್ನೇಹಿತರನ್ನು ಮಾತನಾಡಿಸಲು, ಹರಟೆ ಹೊಡೆಯಲು ಪ್ರಸಕ್ತ ಸ್ಥಳವಾಗಿತ್ತು. ಕಾಲೇಜು ಮುಗಿದ ನಂತರ ಅಲ್ಲಿ ಕುಳಿತು ಹುಡುಗ ಹುಡುಗಿಯರು ಸೇರಿ ತಮಾಷೆ ಮಾಡುತ್ತಿದ್ದುದು ಎಂದಿನ ದಿನಚರಿ. ಆದರೆ ಇದು ಅಲ್ಲಿನ ಸ್ಥಳೀಯ ಸಂಪ್ರದಾಯವಾದಿಗಳಿಗೆ ಸಹಿಸಿಕೊಳ್ಳಲು ಅಸಾಧ್ಯವಾಗಿತ್ತು. ಅವರ ಪ್ರಕಾರ ಹುಡುಗ ಹುಡುಗಿಯರು ಮಾತನಾಡಬಾರದು, ಸ್ನೇಹ ಪ್ರೀತಿ ಮಾಡಬಾರದು. ಅದಕ್ಕಾಗಿ ಸ್ಥಳೀಯರು ಕಳೆದ ಜುಲೈ 19ರ ಮಂಗಳವಾರ ರಾತ್ರೋರಾತ್ರಿ ಬಸ್‌ ಸ್ಟ್ಯಾಂಡಿನಲ್ಲಿ ಕುಳಿತುಕೊಳ್ಳುವ ಕುರ್ಚಿಗಳನನ್ನು ತೆಗೆದು ಕೇವಲ ಒಬ್ಬೊಬ್ಬರು ಮಾತ್ರ ಕುಳಿತುಕೊಳ್ಳುವಂತೆ ಮೂರು ಕುರ್ಚಿಗಳನ್ನು ಹಾಕಲಾಗಿತ್ತು. ಎರಡು ಕುರ್ಚಿ ಜೊತೆಗಿದ್ದರೆ ಹುಡುಗ-ಹುಡುಗಿ ಕುಳಿತು ಮಾತನಾಡುತ್ತಾರೆ ಎಂಬುದು ಅವರ ಈ ಕೃತ್ಯಕ್ಕೆ ಕಾರಣವಾಗಿತ್ತು.

ಇದನ್ನು ನೋಡಿದ ವಿದ್ಯಾರ್ಥಿಗಳಿಗೆ ಆಶ್ಚರ್ಯ ಮತ್ತು ಆಘಾತವಾಗಿತ್ತು. ಇದನ್ನು ಪ್ರತಿಭಟಿಸಲು ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರ್ಧರಿಸಿದರು. ಒಂದೇ ಸೀಟಿನಲ್ಲಿ ಹುಡುಗ ಹುಡುಗಿಯರು ತೊಡೆಮೇಲೆ ಕುಳಿತು ಫೋಟೊ ತೆಗೆದು ತಮ್ಮ ಸ್ನೇಹಿತರ ಗುಂಪುಗಳಲ್ಲಿ ಹಂಚಿಕೊಂಡರು. ಅವರ ಈ ದಿಟ್ಟ ಮತ್ತು ವಿನೂತನ ಪ್ರತಿಭಟನೆಯ ಈ ಚಿತ್ರಗಳು ನಂತರ ಎಲ್ಲೆಂದರಲ್ಲಿ ವೈರಲ್ ಆದವು. ಉಳಿದ ವಿದ್ಯಾರ್ಥಿಗಳು ಈ ಫೋಟೊ ತೆಗೆಸಿಕೊಳ್ಳುವ ಪ್ರತಿಭಟನೆಗೆ ಕೈಜೋಡಿಸಿ ತಾವು ಜೊತೆಗೆ ಕುಳಿತು ಪೋಟೊ ತೆಗೆಸಿಕೊಂಡರು.

“ನಾವು ಪ್ರತಿನಿತ್ಯ ಅಲ್ಲಿ ಕುಳಿತರೆ, ಹುಡುಗ-ಹುಡುಗಿ ಮಾತನಾಡಿದರೆ ಸ್ಥಳೀಯರು ತೊಂದರೆ ಕೊಡುತ್ತಿದ್ದರು. ನಿಂದಿಸುತ್ತಿದ್ದರು. ಹಾಗಾಗಿ ಇಬ್ಬರು ಕೂರಬಾರದೆಂದು ಒಂದೊಂದು ಕುರ್ಚಿಯನ್ನು ತೆಗೆಸಿದ್ದರು. ಅದನ್ನು ವಿದ್ಯಾರ್ಥಿಗಳು ವಿರೋಧಿಸಿ ವಿನೂತನವಾಗಿ ಪ್ರತಿಭಟಿಸಿದ್ದಾರೆ” ಎಂದು ಸಿಇಟಿ ಕಾಲೇಜು ಸಂಘದ ಉಪಾಧ್ಯಕ್ಷರಾದ ಕೆ.ಪೆ ಫೆಬಿ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಮತ್ತೊಬ್ಬ ವಿದ್ಯಾರ್ಥಿನಿ ಆರ್ಯ ಪ್ರತಿಕ್ರಿಯಿಸಿ, “ನಾವು ಪೋಸ್ಟ್ ಮಾಡಿದ ಚಿತ್ರ ವೈರಲ್ ಆಗುತ್ತದೆ ಎಂದು ನಾವು ಅಂದಾಜಿಸಿರಲಿಲ್ಲ. ಅದು ಅಷ್ಟೊಂದು ಹರಿದಾಡುತ್ತಿರುವುದು ನಮ್ಮ ಈ ಸರಳ ಪ್ರತಿಭಟನೆಗೆ ಜನಬೆಂಬಲವನ್ನು ತೋರಿಸುತ್ತದೆ. ಜೊತೆಗೆ ಇಲ್ಲಿನ ಸ್ಥಳೀಯರು ವಿದ್ಯಾರ್ಥಿಗಳ ಬಗ್ಗೆ ಯಾವ ಅಭಿಪ್ರಾಯ ಹೊಂದಿದ್ದಾರೆ ಮತ್ತು ನಮ್ಮನ್ನು ಹೇಗೆ ನಿಯಂತ್ರಿಸಲು ಬಯಸುತ್ತಾರೆ ಎಂಬುದನ್ನು ತಿಳಿಸುತ್ತದೆ. ಆದರೆ ನಮ್ಮ ಪ್ರತಿಭಟನೆಯ ನಂತರ ಇದುವರೆಗೂ ನಮಗೆ ಸಕರಾತ್ಮಕ ಪ್ರತಿಕ್ರಿಯೆಗಳು ಬಂದಿವೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಉಡುಪಿ ಸಾಮರಸ್ಯ ನಡಿಗೆ, ಸಹಬಾಳ್ವೆ ಸಮಾವೇಶ ಹೀಗಿತ್ತು; ಚಿತ್ರಗಳಲ್ಲಿ ನೋಡಿ

ಈ ಮೊದಲು ಸಹ ಸಿಇಟಿ ಕಾಲೇಜಿನ ವಿದ್ಯಾರ್ಥಿಗಳು ಹಾಸ್ಟೆಲ್ ಸಮಯದ ಕುರಿತು ಪ್ರತಿಭಟನೆ ನಡೆಸಿದ್ದರು. ಸಂಜೆ 6.30ರ ಒಳಗೆ ವಿದ್ಯಾರ್ಥಿನಿಯರು ಹಾಸ್ಟೆಲ್ ಒಳಗೆ ಬರಬೇಕು ಎಂಬ ನಿಯಮ ತಂದಾಗ ದೊಡ್ಡ ಪ್ರತಿಭಟನೆ ನಡೆಸಿ ಅದನ್ನು 9.30ರ ಒಳಗೆ ಬರಬೇಕು ಎಂದು ತಿದ್ದುಪಡಿ ತರಲು ಕಾರಣರಾಗಿದ್ದರು. ಈಗ ಮತ್ತೊಮ್ಮೆ ಮತೀಯ ಗೂಂಡಾಗಿರಿ ವಿರುದ್ಧ ಸ್ಪಷ್ಟ ಸಂದೇಶ ನೀಡಿದ್ದಾರೆ.

ಕೃಪೆ: ಆನ್‌ಮನೋರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಗಂಡು ಹೆಣ್ಣಿನ ಸ್ನೇಹ ಅದು ಗಿಟ್ಟದ ಸಂಪ್ರದಾಯಿಗಳ ಲೈಂಗಿಕ ವಿಕರಾಳಗಳಿಗೆ ಸವಾಲೊಡ್ಡುತ್ತದೆ 😁ಪಾಪ ಆವರೇನು ಮಾಡಿಯಾರು?
    ಆದರೆ ಈ ತಾಲೆಬಾನಿಗಳಿಗೆ ವಿದ್ಯಾರ್ಥಿಗಳ ಉತ್ತರ ಸಮಂಜಸವಾದದ್ದೆ.

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...