Homeಮುಖಪುಟಕೇರಳ | 'ಮಲ್ಲು ಹಿಂದೂ ಆಫೀಸರ್ಸ್' ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು...

ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

- Advertisement -
- Advertisement -

ಕೇರಳ ಸರ್ಕಾರ ಸೋಮವಾರ (ನ.11) ಐಎಎಸ್ ಅಧಿಕಾರಿಗಳಾದ ಕೆ.ಗೋಪಾಲಕೃಷ್ಣನ್ ಮತ್ತು ‘ಕಲೆಕ್ಟರ್ ಬ್ರೋ’ ಎಂದು ಜನಪ್ರಿಯರಾಗಿದ್ದ ಎನ್. ಪ್ರಶಾಂತ್ ಅವರನ್ನು ಶಿಸ್ತು ಕ್ರಮದ ಭಾಗವಾಗಿ ಅಮಾನತುಗೊಳಿಸಿದೆ ಎಂದು ವರದಿಯಾಗಿದೆ.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿರ್ದೇಶಕ ಕೆ. ಗೋಪಾಲಕೃಷ್ಣನ್ ಅವರನ್ನು ಕೇರಳದ ‘ಹಿಂದೂ ಐಎಎಸ್ ಅಧಿಕಾರಿಗಳಿಗೆ ಪ್ರತ್ಯೇಕವಾಗಿ ವಾಟ್ಸಾಪ್ ಗ್ರೂಪ್’ ರಚಿಸಿದ್ದಕ್ಕಾಗಿ ಮತ್ತು ಕೃಷಿ ಇಲಾಖೆಯ ವಿಶೇಷ ಕಾರ್ಯದರ್ಶಿ ಎನ್. ಪ್ರಶಾಂತ್ ಅವರನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಯತಿಲಕ್ ಅವರನ್ನು ಟೀಕಿಸಿದ್ದಕ್ಕಾಗಿ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಅಧಿಕಾರಿಗಳ ಕಾರ್ಯವೈಖರಿ ಕುರಿತು ಮುಖ್ಯ ಕಾರ್ಯದರ್ಶಿ ಸಲ್ಲಿಸಿದ ವರದಿಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ರಾಜ್ಯ-ಸರ್ಕಾರದ ಉಪಕ್ರಮವಾದ ‘ಉನ್ನತಿ’ಯಿಂದ ಕಡತಗಳು ನಾಪತ್ತೆಯಾಗಿವೆ ಎಂದು ಮಾತೃಭೂಮಿ ನ್ಯೂಸ್ ವರದಿ ಮಾಡಿದ ಬಳಿಕ, ಅಧಿಕಾರಿಗಳಾದ ಪ್ರಶಾಂತ್ ಮತ್ತು ಜಯತಿಲಕ್ ನಡುವೆ ಜಗಳ ಶುರುವಾಗಿತ್ತು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಯತಿಲಕ್ ಅವರು ‘ಉನ್ನತಿ’ ಉಪಕ್ರಮದ ನೇತೃತ್ವ ವಹಿಸಿದ್ದ ಪ್ರಶಾಂತ್ ಅವರ ಸರ್ಕಾರಕ್ಕೆ ವರದಿ ನೀಡಿದ್ದರು.

ನಂತರ ಪ್ರಶಾಂತ್ ಅವರ ಹಾಜರಾತಿ ದಾಖಲೆಗಳನ್ನು ಸುಳ್ಳು ಮಾಡಿದ ಆರೋಪದ ಮೇಲೆ ಮಾತೃಭೂಮಿ ನ್ಯೂಸ್ ಮತ್ತೊಂದು ವರದಿ ಮಾಡಿತ್ತು.

ನವೆಂಬರ್ 9ರ ಶನಿವಾರದಂದು, ಜಯತಿಲಕ್ ಅವರು ವರದಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿ ಪ್ರಶಾಂತ್ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಲವಾರು ಯುವ ಐಎಎಸ್ ಅಧಿಕಾರಿಗಳ ಜೀವನವನ್ನು ಹಾಳು ಮಾಡಿದ್ದಾರೆ. ಅವರು ತಮ್ಮ ಕುಟುಂಬಕ್ಕೆ ಉಪಕಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಪ್ರಶಾಂತ್ ಅವರು ತಮ್ಮ ಹಿರಿಯ ಅಧಿಕಾರಿಯನ್ನು ಸಿನಿಮಾ ಡೈಲಾಗ್ ಬಳಸಿ ಲೇವಡಿ ಮಾಡಿದ್ದರು.

ಅಮಾನತ್ತಾದ ಇನ್ನೋರ್ವ ಅಧಿಕಾರಿ ಗೋಪಾಲಕೃಷ್ಣನ್ ಅವರು ಹಿಂದೂ ಐಎಎಸ್ ಅಧಿಕಾರಿಗಳಿಗಾಗಿಯೇ ಪ್ರತ್ಯೇಕ ವಾಟ್ಸಾಪ್ ಗ್ರೂಪ್ ರಚಿಸಿರುವ ಆರೋಪವಿದೆ. ‘ಮಲ್ಲು ಹಿಂದೂ ಆಫೀಸರ್ಸ್’ ಎಂಬ ವಾಟ್ಸಾಪ್ ಗ್ರೂಪನ್ನು ದೀಪಾವಳಿಗೆ ಸಂಬಂಧಿಸಿದಂತೆ ಗೋಪಾಲಕೃಷ್ಣನ್ ರಚಿಸಿದ್ದಾರೆ ಎಂದು ವರದಿಯಾಗಿದೆ.

ಕೆಲವು ಐಎಎಸ್ ಅಧಿಕಾರಿಗಳು ಈ ಬಗ್ಗೆ ಗೋಪಾಲಕೃಷ್ಣನ್ ಬಳಿ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದರು. ನಂತರ ಆ ವಾಟ್ಸಾಪ್ ಗ್ರೂಪನ್ನು ಡಿಲಿಟ್ ಮಾಡಲಾಗಿತ್ತು.

ಗ್ರೂಪಿನ ಸ್ಕ್ರೀನ್‌ಶಾಟ್ ಮಾಧ್ಯಮಗಳಿಗೆ ಸೋರಿಕೆಯಾದಾಗ, ಗೋಪಾಲಕೃಷ್ಣನ್ ತಮ್ಮ ಮೊಬೈಲ್ ಫೋನ್ ಹ್ಯಾಕ್ ಆಗಿದೆ ಎಂದು ಹೇಳಿದ್ದರು. “ಯಾರೋ ನನ್ನ ಮೊಬೈಲ್ ಹ್ಯಾಕ್ ಮಾಡಿದಂತೆ ತೋರುತ್ತಿದೆ, ಅದರಲ್ಲಿ 11 ಗ್ರೂಪ್‌ಗಳನ್ನು ರಚಿಸಿದ್ದಾರೆ. ನನ್ನ ಎಲ್ಲಾ ಸಂಪರ್ಕ ಸಂಖ್ಯೆಗಳನ್ನು ಅದಕ್ಕೆ ಸೇರಿಸಿದ್ದಾರೆ. ನಾನು ಈಗ ವಾಟ್ಸಾಪ್ ಅನ್‌ ಇನ್‌ಸ್ಟಾಲ್ ಮಾಡಿದ್ದೇನೆ. ಅದರಲ್ಲಿದ್ದ ಎಲ್ಲಾ ಗ್ರೂಪ್‌ಗಳನ್ನು ಮ್ಯಾನುಅಲ್ ಆಗಿ ತೆಗೆದು ಹಾಕಿದ್ದೇನೆ. ಶೀಘ್ರದಲ್ಲೇ ನನ್ನ ಫೋನ್ ಬದಲಾಯಿಸುತ್ತೇನೆ” ಎಂದು ಹೇಳಿಕೊಂಡಿದ್ದರು.

ತನ್ನ ಫೋನ್ ಹ್ಯಾಕ್ ಆಗಿದೆ ಎಂದು ಗೋಪಾಲಕೃಷ್ಣನ್ ದೂರು ನೀಡಿದ ನಂತರ ಪೊಲೀಸರು ತನಿಖೆ ನಡೆಸಿದ್ದರು. ಆದರೆ, ಫೋರೆನ್ಸಿಕ್ ಪರೀಕ್ಷೆಯಲ್ಲಿ ಅವರ ಮೊಬೈಲ್ ಹ್ಯಾಕ್‌ ಆದ ಬಗ್ಗೆ ಯಾವುದೇ ಪುರಾವೆಗಳು ಪೊಲೀಸರಿಗೆ ಸಿಕ್ಕಿರಲಿಲ್ಲ. ಅಲ್ಲದೆ, ಪೊಲೀಸರಿಗೆ ನೀಡುವ ಮೊದಲು ತನ್ನ ಫೋನ್ ಅನ್ನು ಫಾರ್ಮ್ಯಾಟ್ ಮಾಡಿದ್ದೇನೆ ಎಂದು ಗೋಪಾಲಕೃಷ್ಣನ್ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ. ಮೊಬೈಲ್ ಸೈಬರ್ ದಾಳಿಗೆ ಒಳಗಾದ ಯಾವುದೇ ಲಕ್ಷಣಗಳು ಗೋಪಾಕೃಷ್ಣನ್ ಅವರ ಮೊಬೈಲ್‌ನಲ್ಲಿ ಪೊಲೀಸರಿಗೆ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ : ‘ಕೋಮುದ್ವೇಷ’ ಹರಡುವ ಕಾರ್ಟೂನ್ | ಬಿಜೆಪಿ ವಿರುದ್ಧ ಚು.ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...