Homeಮುಖಪುಟಕೇರಳ | 'ಮಲ್ಲು ಹಿಂದೂ ಆಫೀಸರ್ಸ್' ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು...

ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

- Advertisement -
- Advertisement -

ಕೇರಳ ಸರ್ಕಾರ ಸೋಮವಾರ (ನ.11) ಐಎಎಸ್ ಅಧಿಕಾರಿಗಳಾದ ಕೆ.ಗೋಪಾಲಕೃಷ್ಣನ್ ಮತ್ತು ‘ಕಲೆಕ್ಟರ್ ಬ್ರೋ’ ಎಂದು ಜನಪ್ರಿಯರಾಗಿದ್ದ ಎನ್. ಪ್ರಶಾಂತ್ ಅವರನ್ನು ಶಿಸ್ತು ಕ್ರಮದ ಭಾಗವಾಗಿ ಅಮಾನತುಗೊಳಿಸಿದೆ ಎಂದು ವರದಿಯಾಗಿದೆ.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿರ್ದೇಶಕ ಕೆ. ಗೋಪಾಲಕೃಷ್ಣನ್ ಅವರನ್ನು ಕೇರಳದ ‘ಹಿಂದೂ ಐಎಎಸ್ ಅಧಿಕಾರಿಗಳಿಗೆ ಪ್ರತ್ಯೇಕವಾಗಿ ವಾಟ್ಸಾಪ್ ಗ್ರೂಪ್’ ರಚಿಸಿದ್ದಕ್ಕಾಗಿ ಮತ್ತು ಕೃಷಿ ಇಲಾಖೆಯ ವಿಶೇಷ ಕಾರ್ಯದರ್ಶಿ ಎನ್. ಪ್ರಶಾಂತ್ ಅವರನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಯತಿಲಕ್ ಅವರನ್ನು ಟೀಕಿಸಿದ್ದಕ್ಕಾಗಿ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಅಧಿಕಾರಿಗಳ ಕಾರ್ಯವೈಖರಿ ಕುರಿತು ಮುಖ್ಯ ಕಾರ್ಯದರ್ಶಿ ಸಲ್ಲಿಸಿದ ವರದಿಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ರಾಜ್ಯ-ಸರ್ಕಾರದ ಉಪಕ್ರಮವಾದ ‘ಉನ್ನತಿ’ಯಿಂದ ಕಡತಗಳು ನಾಪತ್ತೆಯಾಗಿವೆ ಎಂದು ಮಾತೃಭೂಮಿ ನ್ಯೂಸ್ ವರದಿ ಮಾಡಿದ ಬಳಿಕ, ಅಧಿಕಾರಿಗಳಾದ ಪ್ರಶಾಂತ್ ಮತ್ತು ಜಯತಿಲಕ್ ನಡುವೆ ಜಗಳ ಶುರುವಾಗಿತ್ತು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಯತಿಲಕ್ ಅವರು ‘ಉನ್ನತಿ’ ಉಪಕ್ರಮದ ನೇತೃತ್ವ ವಹಿಸಿದ್ದ ಪ್ರಶಾಂತ್ ಅವರ ಸರ್ಕಾರಕ್ಕೆ ವರದಿ ನೀಡಿದ್ದರು.

ನಂತರ ಪ್ರಶಾಂತ್ ಅವರ ಹಾಜರಾತಿ ದಾಖಲೆಗಳನ್ನು ಸುಳ್ಳು ಮಾಡಿದ ಆರೋಪದ ಮೇಲೆ ಮಾತೃಭೂಮಿ ನ್ಯೂಸ್ ಮತ್ತೊಂದು ವರದಿ ಮಾಡಿತ್ತು.

ನವೆಂಬರ್ 9ರ ಶನಿವಾರದಂದು, ಜಯತಿಲಕ್ ಅವರು ವರದಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿ ಪ್ರಶಾಂತ್ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಲವಾರು ಯುವ ಐಎಎಸ್ ಅಧಿಕಾರಿಗಳ ಜೀವನವನ್ನು ಹಾಳು ಮಾಡಿದ್ದಾರೆ. ಅವರು ತಮ್ಮ ಕುಟುಂಬಕ್ಕೆ ಉಪಕಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಪ್ರಶಾಂತ್ ಅವರು ತಮ್ಮ ಹಿರಿಯ ಅಧಿಕಾರಿಯನ್ನು ಸಿನಿಮಾ ಡೈಲಾಗ್ ಬಳಸಿ ಲೇವಡಿ ಮಾಡಿದ್ದರು.

ಅಮಾನತ್ತಾದ ಇನ್ನೋರ್ವ ಅಧಿಕಾರಿ ಗೋಪಾಲಕೃಷ್ಣನ್ ಅವರು ಹಿಂದೂ ಐಎಎಸ್ ಅಧಿಕಾರಿಗಳಿಗಾಗಿಯೇ ಪ್ರತ್ಯೇಕ ವಾಟ್ಸಾಪ್ ಗ್ರೂಪ್ ರಚಿಸಿರುವ ಆರೋಪವಿದೆ. ‘ಮಲ್ಲು ಹಿಂದೂ ಆಫೀಸರ್ಸ್’ ಎಂಬ ವಾಟ್ಸಾಪ್ ಗ್ರೂಪನ್ನು ದೀಪಾವಳಿಗೆ ಸಂಬಂಧಿಸಿದಂತೆ ಗೋಪಾಲಕೃಷ್ಣನ್ ರಚಿಸಿದ್ದಾರೆ ಎಂದು ವರದಿಯಾಗಿದೆ.

ಕೆಲವು ಐಎಎಸ್ ಅಧಿಕಾರಿಗಳು ಈ ಬಗ್ಗೆ ಗೋಪಾಲಕೃಷ್ಣನ್ ಬಳಿ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದರು. ನಂತರ ಆ ವಾಟ್ಸಾಪ್ ಗ್ರೂಪನ್ನು ಡಿಲಿಟ್ ಮಾಡಲಾಗಿತ್ತು.

ಗ್ರೂಪಿನ ಸ್ಕ್ರೀನ್‌ಶಾಟ್ ಮಾಧ್ಯಮಗಳಿಗೆ ಸೋರಿಕೆಯಾದಾಗ, ಗೋಪಾಲಕೃಷ್ಣನ್ ತಮ್ಮ ಮೊಬೈಲ್ ಫೋನ್ ಹ್ಯಾಕ್ ಆಗಿದೆ ಎಂದು ಹೇಳಿದ್ದರು. “ಯಾರೋ ನನ್ನ ಮೊಬೈಲ್ ಹ್ಯಾಕ್ ಮಾಡಿದಂತೆ ತೋರುತ್ತಿದೆ, ಅದರಲ್ಲಿ 11 ಗ್ರೂಪ್‌ಗಳನ್ನು ರಚಿಸಿದ್ದಾರೆ. ನನ್ನ ಎಲ್ಲಾ ಸಂಪರ್ಕ ಸಂಖ್ಯೆಗಳನ್ನು ಅದಕ್ಕೆ ಸೇರಿಸಿದ್ದಾರೆ. ನಾನು ಈಗ ವಾಟ್ಸಾಪ್ ಅನ್‌ ಇನ್‌ಸ್ಟಾಲ್ ಮಾಡಿದ್ದೇನೆ. ಅದರಲ್ಲಿದ್ದ ಎಲ್ಲಾ ಗ್ರೂಪ್‌ಗಳನ್ನು ಮ್ಯಾನುಅಲ್ ಆಗಿ ತೆಗೆದು ಹಾಕಿದ್ದೇನೆ. ಶೀಘ್ರದಲ್ಲೇ ನನ್ನ ಫೋನ್ ಬದಲಾಯಿಸುತ್ತೇನೆ” ಎಂದು ಹೇಳಿಕೊಂಡಿದ್ದರು.

ತನ್ನ ಫೋನ್ ಹ್ಯಾಕ್ ಆಗಿದೆ ಎಂದು ಗೋಪಾಲಕೃಷ್ಣನ್ ದೂರು ನೀಡಿದ ನಂತರ ಪೊಲೀಸರು ತನಿಖೆ ನಡೆಸಿದ್ದರು. ಆದರೆ, ಫೋರೆನ್ಸಿಕ್ ಪರೀಕ್ಷೆಯಲ್ಲಿ ಅವರ ಮೊಬೈಲ್ ಹ್ಯಾಕ್‌ ಆದ ಬಗ್ಗೆ ಯಾವುದೇ ಪುರಾವೆಗಳು ಪೊಲೀಸರಿಗೆ ಸಿಕ್ಕಿರಲಿಲ್ಲ. ಅಲ್ಲದೆ, ಪೊಲೀಸರಿಗೆ ನೀಡುವ ಮೊದಲು ತನ್ನ ಫೋನ್ ಅನ್ನು ಫಾರ್ಮ್ಯಾಟ್ ಮಾಡಿದ್ದೇನೆ ಎಂದು ಗೋಪಾಲಕೃಷ್ಣನ್ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ. ಮೊಬೈಲ್ ಸೈಬರ್ ದಾಳಿಗೆ ಒಳಗಾದ ಯಾವುದೇ ಲಕ್ಷಣಗಳು ಗೋಪಾಕೃಷ್ಣನ್ ಅವರ ಮೊಬೈಲ್‌ನಲ್ಲಿ ಪೊಲೀಸರಿಗೆ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ : ‘ಕೋಮುದ್ವೇಷ’ ಹರಡುವ ಕಾರ್ಟೂನ್ | ಬಿಜೆಪಿ ವಿರುದ್ಧ ಚು.ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...