Homeಮುಖಪುಟಕೇರಳ | 'ಮಲ್ಲು ಹಿಂದೂ ಆಫೀಸರ್ಸ್' ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು...

ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

- Advertisement -
- Advertisement -

ಕೇರಳ ಸರ್ಕಾರ ಸೋಮವಾರ (ನ.11) ಐಎಎಸ್ ಅಧಿಕಾರಿಗಳಾದ ಕೆ.ಗೋಪಾಲಕೃಷ್ಣನ್ ಮತ್ತು ‘ಕಲೆಕ್ಟರ್ ಬ್ರೋ’ ಎಂದು ಜನಪ್ರಿಯರಾಗಿದ್ದ ಎನ್. ಪ್ರಶಾಂತ್ ಅವರನ್ನು ಶಿಸ್ತು ಕ್ರಮದ ಭಾಗವಾಗಿ ಅಮಾನತುಗೊಳಿಸಿದೆ ಎಂದು ವರದಿಯಾಗಿದೆ.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿರ್ದೇಶಕ ಕೆ. ಗೋಪಾಲಕೃಷ್ಣನ್ ಅವರನ್ನು ಕೇರಳದ ‘ಹಿಂದೂ ಐಎಎಸ್ ಅಧಿಕಾರಿಗಳಿಗೆ ಪ್ರತ್ಯೇಕವಾಗಿ ವಾಟ್ಸಾಪ್ ಗ್ರೂಪ್’ ರಚಿಸಿದ್ದಕ್ಕಾಗಿ ಮತ್ತು ಕೃಷಿ ಇಲಾಖೆಯ ವಿಶೇಷ ಕಾರ್ಯದರ್ಶಿ ಎನ್. ಪ್ರಶಾಂತ್ ಅವರನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಯತಿಲಕ್ ಅವರನ್ನು ಟೀಕಿಸಿದ್ದಕ್ಕಾಗಿ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಅಧಿಕಾರಿಗಳ ಕಾರ್ಯವೈಖರಿ ಕುರಿತು ಮುಖ್ಯ ಕಾರ್ಯದರ್ಶಿ ಸಲ್ಲಿಸಿದ ವರದಿಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ರಾಜ್ಯ-ಸರ್ಕಾರದ ಉಪಕ್ರಮವಾದ ‘ಉನ್ನತಿ’ಯಿಂದ ಕಡತಗಳು ನಾಪತ್ತೆಯಾಗಿವೆ ಎಂದು ಮಾತೃಭೂಮಿ ನ್ಯೂಸ್ ವರದಿ ಮಾಡಿದ ಬಳಿಕ, ಅಧಿಕಾರಿಗಳಾದ ಪ್ರಶಾಂತ್ ಮತ್ತು ಜಯತಿಲಕ್ ನಡುವೆ ಜಗಳ ಶುರುವಾಗಿತ್ತು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಯತಿಲಕ್ ಅವರು ‘ಉನ್ನತಿ’ ಉಪಕ್ರಮದ ನೇತೃತ್ವ ವಹಿಸಿದ್ದ ಪ್ರಶಾಂತ್ ಅವರ ಸರ್ಕಾರಕ್ಕೆ ವರದಿ ನೀಡಿದ್ದರು.

ನಂತರ ಪ್ರಶಾಂತ್ ಅವರ ಹಾಜರಾತಿ ದಾಖಲೆಗಳನ್ನು ಸುಳ್ಳು ಮಾಡಿದ ಆರೋಪದ ಮೇಲೆ ಮಾತೃಭೂಮಿ ನ್ಯೂಸ್ ಮತ್ತೊಂದು ವರದಿ ಮಾಡಿತ್ತು.

ನವೆಂಬರ್ 9ರ ಶನಿವಾರದಂದು, ಜಯತಿಲಕ್ ಅವರು ವರದಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿ ಪ್ರಶಾಂತ್ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಲವಾರು ಯುವ ಐಎಎಸ್ ಅಧಿಕಾರಿಗಳ ಜೀವನವನ್ನು ಹಾಳು ಮಾಡಿದ್ದಾರೆ. ಅವರು ತಮ್ಮ ಕುಟುಂಬಕ್ಕೆ ಉಪಕಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಪ್ರಶಾಂತ್ ಅವರು ತಮ್ಮ ಹಿರಿಯ ಅಧಿಕಾರಿಯನ್ನು ಸಿನಿಮಾ ಡೈಲಾಗ್ ಬಳಸಿ ಲೇವಡಿ ಮಾಡಿದ್ದರು.

ಅಮಾನತ್ತಾದ ಇನ್ನೋರ್ವ ಅಧಿಕಾರಿ ಗೋಪಾಲಕೃಷ್ಣನ್ ಅವರು ಹಿಂದೂ ಐಎಎಸ್ ಅಧಿಕಾರಿಗಳಿಗಾಗಿಯೇ ಪ್ರತ್ಯೇಕ ವಾಟ್ಸಾಪ್ ಗ್ರೂಪ್ ರಚಿಸಿರುವ ಆರೋಪವಿದೆ. ‘ಮಲ್ಲು ಹಿಂದೂ ಆಫೀಸರ್ಸ್’ ಎಂಬ ವಾಟ್ಸಾಪ್ ಗ್ರೂಪನ್ನು ದೀಪಾವಳಿಗೆ ಸಂಬಂಧಿಸಿದಂತೆ ಗೋಪಾಲಕೃಷ್ಣನ್ ರಚಿಸಿದ್ದಾರೆ ಎಂದು ವರದಿಯಾಗಿದೆ.

ಕೆಲವು ಐಎಎಸ್ ಅಧಿಕಾರಿಗಳು ಈ ಬಗ್ಗೆ ಗೋಪಾಲಕೃಷ್ಣನ್ ಬಳಿ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದರು. ನಂತರ ಆ ವಾಟ್ಸಾಪ್ ಗ್ರೂಪನ್ನು ಡಿಲಿಟ್ ಮಾಡಲಾಗಿತ್ತು.

ಗ್ರೂಪಿನ ಸ್ಕ್ರೀನ್‌ಶಾಟ್ ಮಾಧ್ಯಮಗಳಿಗೆ ಸೋರಿಕೆಯಾದಾಗ, ಗೋಪಾಲಕೃಷ್ಣನ್ ತಮ್ಮ ಮೊಬೈಲ್ ಫೋನ್ ಹ್ಯಾಕ್ ಆಗಿದೆ ಎಂದು ಹೇಳಿದ್ದರು. “ಯಾರೋ ನನ್ನ ಮೊಬೈಲ್ ಹ್ಯಾಕ್ ಮಾಡಿದಂತೆ ತೋರುತ್ತಿದೆ, ಅದರಲ್ಲಿ 11 ಗ್ರೂಪ್‌ಗಳನ್ನು ರಚಿಸಿದ್ದಾರೆ. ನನ್ನ ಎಲ್ಲಾ ಸಂಪರ್ಕ ಸಂಖ್ಯೆಗಳನ್ನು ಅದಕ್ಕೆ ಸೇರಿಸಿದ್ದಾರೆ. ನಾನು ಈಗ ವಾಟ್ಸಾಪ್ ಅನ್‌ ಇನ್‌ಸ್ಟಾಲ್ ಮಾಡಿದ್ದೇನೆ. ಅದರಲ್ಲಿದ್ದ ಎಲ್ಲಾ ಗ್ರೂಪ್‌ಗಳನ್ನು ಮ್ಯಾನುಅಲ್ ಆಗಿ ತೆಗೆದು ಹಾಕಿದ್ದೇನೆ. ಶೀಘ್ರದಲ್ಲೇ ನನ್ನ ಫೋನ್ ಬದಲಾಯಿಸುತ್ತೇನೆ” ಎಂದು ಹೇಳಿಕೊಂಡಿದ್ದರು.

ತನ್ನ ಫೋನ್ ಹ್ಯಾಕ್ ಆಗಿದೆ ಎಂದು ಗೋಪಾಲಕೃಷ್ಣನ್ ದೂರು ನೀಡಿದ ನಂತರ ಪೊಲೀಸರು ತನಿಖೆ ನಡೆಸಿದ್ದರು. ಆದರೆ, ಫೋರೆನ್ಸಿಕ್ ಪರೀಕ್ಷೆಯಲ್ಲಿ ಅವರ ಮೊಬೈಲ್ ಹ್ಯಾಕ್‌ ಆದ ಬಗ್ಗೆ ಯಾವುದೇ ಪುರಾವೆಗಳು ಪೊಲೀಸರಿಗೆ ಸಿಕ್ಕಿರಲಿಲ್ಲ. ಅಲ್ಲದೆ, ಪೊಲೀಸರಿಗೆ ನೀಡುವ ಮೊದಲು ತನ್ನ ಫೋನ್ ಅನ್ನು ಫಾರ್ಮ್ಯಾಟ್ ಮಾಡಿದ್ದೇನೆ ಎಂದು ಗೋಪಾಲಕೃಷ್ಣನ್ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ. ಮೊಬೈಲ್ ಸೈಬರ್ ದಾಳಿಗೆ ಒಳಗಾದ ಯಾವುದೇ ಲಕ್ಷಣಗಳು ಗೋಪಾಕೃಷ್ಣನ್ ಅವರ ಮೊಬೈಲ್‌ನಲ್ಲಿ ಪೊಲೀಸರಿಗೆ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ : ‘ಕೋಮುದ್ವೇಷ’ ಹರಡುವ ಕಾರ್ಟೂನ್ | ಬಿಜೆಪಿ ವಿರುದ್ಧ ಚು.ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...