Homeಮುಖಪುಟಮದುವೆಯಾದ ನಾಲ್ಕು ತಿಂಗಳಿಗೆ ಮಗು ಹೆತ್ತಳೆಂದು ಶಿಕ್ಷಕಿಯನ್ನು ಹೊರದಬ್ಬಿದ ಶಾಲೆ..

ಮದುವೆಯಾದ ನಾಲ್ಕು ತಿಂಗಳಿಗೆ ಮಗು ಹೆತ್ತಳೆಂದು ಶಿಕ್ಷಕಿಯನ್ನು ಹೊರದಬ್ಬಿದ ಶಾಲೆ..

ಇದೊಂದು ನೈತಿಕ ಪೊಲೀಸ್ ಗಿರಿಯಾಗಿದೆ ಮಾತ್ರವಲ್ಲ ಆ ಶಿಕ್ಷಕಿಯ ಖಾಸಗಿತನದ ಮೇಲಿನ ದಾಳಿಯಾಗಿದೆ. ಮದುವೆ ಮಕ್ಕಳು ಅವರವರ ಖಾಸಗಿ ಬದುಕು. ಅದರಲ್ಲಿ ಇಣುಕಲು ಹೊರಗಿನವರಿಗೆ ಹಕ್ಕಿಲ್ಲ

- Advertisement -
- Advertisement -

ಕೇರಳದ ಮಲಪ್ಪುರಂ ಬಳಿಯ ಕೊಟ್ಟಕ್ಕಲ್ ನಲ್ಲಿನ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬಳನ್ನು ಮದುವೆಯಾದ ನಾಲ್ಕು ತಿಂಗಳಿಗೆ ಮಗು ಹೆತ್ತಳೆಂಬ ಕಾರಣದಿಂದ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಪೋಷಕ ಮತ್ತು ಶಿಕ್ಷಕ ಸಂಘ ಶಾಲೆಯಿಂದ ಹೊರಹಾಕಿರುವ ಘಟನೆ ನಡೆದಿದೆ.

ಪೋಷಕರ ಮತ್ತು ಶಿಕ್ಷಕ ಸಂಘ ಸಭೆಯಲ್ಲಿ ತನ್ನ ಬಗ್ಗೆ ಕೆಟ್ಟದಾಗಿ ಮಾತಾಡಲಾಗಿದೆ ಮತ್ತು ನಾನು ಶಾಲೆಗೆ ಮರಳಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಆ ಶಿಕ್ಷಕಿಯು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಸದರಿ ಸರ್ಕಾರಿ ಶಾಲೆಯಲ್ಲಿ ಆ ಶಿಕ್ಷಕಿಯು ಕಳೆದ ಐದು ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆಕೆಯು ಗಂಡನಿಂದ ವಿಚ್ಚೇಧನಕ್ಕೆ ಅರ್ಜಿ ಸಲ್ಲಿಸಿದ್ದು ವಿಚ್ಚೇಧನ ದೊರೆಯುವುದು ವಿಳಂಬವಾಗಿದೆ. ಈಗಿರುವಾಗ ಆಕೆ ತನ್ನ ಎರಡನೇ ಗಂಡನೊಂದಿಗೆ ಮದುವೆಗೂ ಮುಂಚೆಯೇ ವಾಸಿಸಲು ಆರಂಭಿಸಿದ್ದಾರೆ. ನಂತರ 2018ರ ಜೂನ್ ನಲ್ಲಿ ಆಕೆ ಎರಡನೇ ಮದುವೆಯಾಗಿದ್ದಾರೆ. ಇದಾದ ನಾಲ್ಕು ತಿಂಗಳ ನಂತರ ಅವರು ತನಗೆ ಮಾತೃತ್ವ ರಜೆ ನೀಡಬೇಕೆಂದು ಶಾಲೆಗೆ ಅರ್ಜಿ ಸಲ್ಲಿಸಿದ ಮರುದಿನವೇ ಅವರು ಮಗುವಿಗೆ ಜನ್ಮ ನೀಡಿದ್ದಾರೆ.

ನಂತರ ಜನವರಿ 2019ಕ್ಕೆ ಅವರ ಮಾತೃತ್ವ ರಜೆ ಪೂರ್ಣಗೊಂಡ ನಂತರ ಶಾಲೆಗೆ ಬಂದರೆ, ಮದುವೆಯಾದ ನಾಲ್ಕು ತಿಂಗಳಿಗೆ ಮಾತೃತ್ವ ರಜೆ ಪಡೆದ ಕಾರಣ ಮುಂದೊಡ್ಡಿ, ಶಾಲೆಯ ಆಡಳಿತ ಮಂಡಳಿ ಅವರನ್ನು ಶಾಲೆಯೊಳಗೆ ಬಿಟ್ಟುಕೊಂಡಿಲ್ಲ. ಇದರಿಂದ ಮನನೊಂದ ಆಕೆ ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ಆಯೋಗವು ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಬಳಿ ಸ್ಪಷ್ಟೀಕರಣ ಕೇಳಿದೆ.

ಕೆಲವು ತಿಂಗಳುಗಳ ನಂತರ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಮ್ಮ ತನಿಖೆಯನ್ನು ಪೂರ್ಣಗೊಳಿಸಿ ಶಿಕ್ಷಕಿಯನ್ನು ಶಾಲೆಗೆ ಮರುನೇಮಿಸಿಕೊಳ್ಳಬೇಕೆಂದು ಸೂಚನೆ ನೀಡಿದೆ. ಆದರೆ ಶಾಲೆಯ ಆಡಳಿತ ಮಂಡಳಿ ಮತ್ತು ಪೋಷಕ ಮತ್ತು ಶಿಕ್ಷಕ ಸಂಘ ಆ ಸೂಚನೆಯನ್ನು ಧಿಕ್ಕರಿಸಿದ್ದಾರೆ.

“ನಾನು ಶಾಲೆಯ ಆಡಳಿತ ಮಂಡಳಿಯನ್ನು ಸಂಪರ್ಕಿಸಿದೆ. ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಸೂಚನೆಯಂತೆ ನನ್ನನ್ನು ಮತ್ತೆ ಕೆಲಸಕ್ಕೆ ನಿಯೋಜಿಸುವಂತೆ ಮನವಿ ಮಾಡಿದೆ. ಆದರೆ ಸಭೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಂಘದವರು ನನ್ನ ಬಗ್ಗೆ ಅತ್ಯಂತ ಕೀಳು ಮಟ್ಟದಲ್ಲಿ ಮಾತಾಡಿ ಅವಮಾನ ಮಾಡಿದರು. ಅವಾಚ್ಯ ಶಬ್ದಗಳಿಂದ ನಿಂದಿಸಿ, ಶಾಲೆಗೆ ಮರಳಲು ಅವಕಾಶ ನೀಡಲಿಲ್ಲ. ಹಾಗಾಗಿ ಜೂನ್ 14 ರಂದು ನಾನು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ನನ್ನ ವಯಕ್ತಿಕ ಜೀವನದ ಬಗ್ಗೆ ಮಾತನಾಡಲು ಅವರ್ಯಾರಿಗೂ ಹಕ್ಕಿಲ್ಲ. ಆದರೂ ಅವರಿಗೆ ನನ್ನ ಗರ್ಭಿಣಿ ಸಮಯದ ಮೇಲೆ ಯಾಕಷ್ಟು ಕಾಳಜಿ ಎಂದು ನನಗೆ ಗೊತ್ತಿಲ್ಲ”ಎನ್ನುತ್ತಾರೆ ಆ ನೊಂದ ಶಿಕ್ಷಕಿ.

ಇದೊಂದು ನೈತಿಕ ಪೊಲೀಸ್ ಗಿರಿಯಾಗಿದೆ ಮಾತ್ರವಲ್ಲ ಆ ಶಿಕ್ಷಕಿಯ ಖಾಸಗಿತನದ ಮೇಲಿನ ದಾಳಿಯಾಗಿದೆ. ಮದುವೆ ಮಕ್ಕಳು ಅವರವರ ಖಾಸಗಿ ಬದುಕು. ಅದರಲ್ಲಿ ಇಣುಕಲು ಹೊರಗಿನವರಿಗೆ ಹಕ್ಕಿಲ್ಲ ಎಂಬುದನ್ನು ಆ ಶಾಲೆಯ ಆಡಳಿತ ಮಂಡಳಿ ತಿಳಿದಿರಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಅಭಿಪ್ರಾಯ ವ್ಯಕ್ತಿಪಡಿಸಿದ್ದಾರೆ.

“ದೂರದಾರರು ನೀಡಿರುವ ಹೇಳಿಕೆ ಆಧರಿಸಿ, ಶಾಲೆಯ ಆಡಳಿತ ಮಂಡಳಿಯ ವಿರುದ್ಧ ನಾವು ತನಿಖೆ ಆರಂಭಿಸಿದ್ದೇವೆ.” ಎಂದು ಕೊಟ್ಟಕ್ಕಲ್ ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಸಂಧ್ಯಾದೇವಿಯವರು ತಿಳಿಸಿದ್ದಾರೆ.

ಆಧಾರ: ಟೈಂಮ್ಸ್ ಆಫ್ ಇಂಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...