Homeಮುಖಪುಟಮದುವೆಯಾದ ನಾಲ್ಕು ತಿಂಗಳಿಗೆ ಮಗು ಹೆತ್ತಳೆಂದು ಶಿಕ್ಷಕಿಯನ್ನು ಹೊರದಬ್ಬಿದ ಶಾಲೆ..

ಮದುವೆಯಾದ ನಾಲ್ಕು ತಿಂಗಳಿಗೆ ಮಗು ಹೆತ್ತಳೆಂದು ಶಿಕ್ಷಕಿಯನ್ನು ಹೊರದಬ್ಬಿದ ಶಾಲೆ..

ಇದೊಂದು ನೈತಿಕ ಪೊಲೀಸ್ ಗಿರಿಯಾಗಿದೆ ಮಾತ್ರವಲ್ಲ ಆ ಶಿಕ್ಷಕಿಯ ಖಾಸಗಿತನದ ಮೇಲಿನ ದಾಳಿಯಾಗಿದೆ. ಮದುವೆ ಮಕ್ಕಳು ಅವರವರ ಖಾಸಗಿ ಬದುಕು. ಅದರಲ್ಲಿ ಇಣುಕಲು ಹೊರಗಿನವರಿಗೆ ಹಕ್ಕಿಲ್ಲ

- Advertisement -
- Advertisement -

ಕೇರಳದ ಮಲಪ್ಪುರಂ ಬಳಿಯ ಕೊಟ್ಟಕ್ಕಲ್ ನಲ್ಲಿನ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬಳನ್ನು ಮದುವೆಯಾದ ನಾಲ್ಕು ತಿಂಗಳಿಗೆ ಮಗು ಹೆತ್ತಳೆಂಬ ಕಾರಣದಿಂದ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಪೋಷಕ ಮತ್ತು ಶಿಕ್ಷಕ ಸಂಘ ಶಾಲೆಯಿಂದ ಹೊರಹಾಕಿರುವ ಘಟನೆ ನಡೆದಿದೆ.

ಪೋಷಕರ ಮತ್ತು ಶಿಕ್ಷಕ ಸಂಘ ಸಭೆಯಲ್ಲಿ ತನ್ನ ಬಗ್ಗೆ ಕೆಟ್ಟದಾಗಿ ಮಾತಾಡಲಾಗಿದೆ ಮತ್ತು ನಾನು ಶಾಲೆಗೆ ಮರಳಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಆ ಶಿಕ್ಷಕಿಯು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಸದರಿ ಸರ್ಕಾರಿ ಶಾಲೆಯಲ್ಲಿ ಆ ಶಿಕ್ಷಕಿಯು ಕಳೆದ ಐದು ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆಕೆಯು ಗಂಡನಿಂದ ವಿಚ್ಚೇಧನಕ್ಕೆ ಅರ್ಜಿ ಸಲ್ಲಿಸಿದ್ದು ವಿಚ್ಚೇಧನ ದೊರೆಯುವುದು ವಿಳಂಬವಾಗಿದೆ. ಈಗಿರುವಾಗ ಆಕೆ ತನ್ನ ಎರಡನೇ ಗಂಡನೊಂದಿಗೆ ಮದುವೆಗೂ ಮುಂಚೆಯೇ ವಾಸಿಸಲು ಆರಂಭಿಸಿದ್ದಾರೆ. ನಂತರ 2018ರ ಜೂನ್ ನಲ್ಲಿ ಆಕೆ ಎರಡನೇ ಮದುವೆಯಾಗಿದ್ದಾರೆ. ಇದಾದ ನಾಲ್ಕು ತಿಂಗಳ ನಂತರ ಅವರು ತನಗೆ ಮಾತೃತ್ವ ರಜೆ ನೀಡಬೇಕೆಂದು ಶಾಲೆಗೆ ಅರ್ಜಿ ಸಲ್ಲಿಸಿದ ಮರುದಿನವೇ ಅವರು ಮಗುವಿಗೆ ಜನ್ಮ ನೀಡಿದ್ದಾರೆ.

ನಂತರ ಜನವರಿ 2019ಕ್ಕೆ ಅವರ ಮಾತೃತ್ವ ರಜೆ ಪೂರ್ಣಗೊಂಡ ನಂತರ ಶಾಲೆಗೆ ಬಂದರೆ, ಮದುವೆಯಾದ ನಾಲ್ಕು ತಿಂಗಳಿಗೆ ಮಾತೃತ್ವ ರಜೆ ಪಡೆದ ಕಾರಣ ಮುಂದೊಡ್ಡಿ, ಶಾಲೆಯ ಆಡಳಿತ ಮಂಡಳಿ ಅವರನ್ನು ಶಾಲೆಯೊಳಗೆ ಬಿಟ್ಟುಕೊಂಡಿಲ್ಲ. ಇದರಿಂದ ಮನನೊಂದ ಆಕೆ ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ಆಯೋಗವು ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಬಳಿ ಸ್ಪಷ್ಟೀಕರಣ ಕೇಳಿದೆ.

ಕೆಲವು ತಿಂಗಳುಗಳ ನಂತರ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಮ್ಮ ತನಿಖೆಯನ್ನು ಪೂರ್ಣಗೊಳಿಸಿ ಶಿಕ್ಷಕಿಯನ್ನು ಶಾಲೆಗೆ ಮರುನೇಮಿಸಿಕೊಳ್ಳಬೇಕೆಂದು ಸೂಚನೆ ನೀಡಿದೆ. ಆದರೆ ಶಾಲೆಯ ಆಡಳಿತ ಮಂಡಳಿ ಮತ್ತು ಪೋಷಕ ಮತ್ತು ಶಿಕ್ಷಕ ಸಂಘ ಆ ಸೂಚನೆಯನ್ನು ಧಿಕ್ಕರಿಸಿದ್ದಾರೆ.

“ನಾನು ಶಾಲೆಯ ಆಡಳಿತ ಮಂಡಳಿಯನ್ನು ಸಂಪರ್ಕಿಸಿದೆ. ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಸೂಚನೆಯಂತೆ ನನ್ನನ್ನು ಮತ್ತೆ ಕೆಲಸಕ್ಕೆ ನಿಯೋಜಿಸುವಂತೆ ಮನವಿ ಮಾಡಿದೆ. ಆದರೆ ಸಭೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಂಘದವರು ನನ್ನ ಬಗ್ಗೆ ಅತ್ಯಂತ ಕೀಳು ಮಟ್ಟದಲ್ಲಿ ಮಾತಾಡಿ ಅವಮಾನ ಮಾಡಿದರು. ಅವಾಚ್ಯ ಶಬ್ದಗಳಿಂದ ನಿಂದಿಸಿ, ಶಾಲೆಗೆ ಮರಳಲು ಅವಕಾಶ ನೀಡಲಿಲ್ಲ. ಹಾಗಾಗಿ ಜೂನ್ 14 ರಂದು ನಾನು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ನನ್ನ ವಯಕ್ತಿಕ ಜೀವನದ ಬಗ್ಗೆ ಮಾತನಾಡಲು ಅವರ್ಯಾರಿಗೂ ಹಕ್ಕಿಲ್ಲ. ಆದರೂ ಅವರಿಗೆ ನನ್ನ ಗರ್ಭಿಣಿ ಸಮಯದ ಮೇಲೆ ಯಾಕಷ್ಟು ಕಾಳಜಿ ಎಂದು ನನಗೆ ಗೊತ್ತಿಲ್ಲ”ಎನ್ನುತ್ತಾರೆ ಆ ನೊಂದ ಶಿಕ್ಷಕಿ.

ಇದೊಂದು ನೈತಿಕ ಪೊಲೀಸ್ ಗಿರಿಯಾಗಿದೆ ಮಾತ್ರವಲ್ಲ ಆ ಶಿಕ್ಷಕಿಯ ಖಾಸಗಿತನದ ಮೇಲಿನ ದಾಳಿಯಾಗಿದೆ. ಮದುವೆ ಮಕ್ಕಳು ಅವರವರ ಖಾಸಗಿ ಬದುಕು. ಅದರಲ್ಲಿ ಇಣುಕಲು ಹೊರಗಿನವರಿಗೆ ಹಕ್ಕಿಲ್ಲ ಎಂಬುದನ್ನು ಆ ಶಾಲೆಯ ಆಡಳಿತ ಮಂಡಳಿ ತಿಳಿದಿರಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಅಭಿಪ್ರಾಯ ವ್ಯಕ್ತಿಪಡಿಸಿದ್ದಾರೆ.

“ದೂರದಾರರು ನೀಡಿರುವ ಹೇಳಿಕೆ ಆಧರಿಸಿ, ಶಾಲೆಯ ಆಡಳಿತ ಮಂಡಳಿಯ ವಿರುದ್ಧ ನಾವು ತನಿಖೆ ಆರಂಭಿಸಿದ್ದೇವೆ.” ಎಂದು ಕೊಟ್ಟಕ್ಕಲ್ ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಸಂಧ್ಯಾದೇವಿಯವರು ತಿಳಿಸಿದ್ದಾರೆ.

ಆಧಾರ: ಟೈಂಮ್ಸ್ ಆಫ್ ಇಂಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...