Homeಮುಖಪುಟಮದುವೆಯಾದ ನಾಲ್ಕು ತಿಂಗಳಿಗೆ ಮಗು ಹೆತ್ತಳೆಂದು ಶಿಕ್ಷಕಿಯನ್ನು ಹೊರದಬ್ಬಿದ ಶಾಲೆ..

ಮದುವೆಯಾದ ನಾಲ್ಕು ತಿಂಗಳಿಗೆ ಮಗು ಹೆತ್ತಳೆಂದು ಶಿಕ್ಷಕಿಯನ್ನು ಹೊರದಬ್ಬಿದ ಶಾಲೆ..

ಇದೊಂದು ನೈತಿಕ ಪೊಲೀಸ್ ಗಿರಿಯಾಗಿದೆ ಮಾತ್ರವಲ್ಲ ಆ ಶಿಕ್ಷಕಿಯ ಖಾಸಗಿತನದ ಮೇಲಿನ ದಾಳಿಯಾಗಿದೆ. ಮದುವೆ ಮಕ್ಕಳು ಅವರವರ ಖಾಸಗಿ ಬದುಕು. ಅದರಲ್ಲಿ ಇಣುಕಲು ಹೊರಗಿನವರಿಗೆ ಹಕ್ಕಿಲ್ಲ

- Advertisement -
- Advertisement -

ಕೇರಳದ ಮಲಪ್ಪುರಂ ಬಳಿಯ ಕೊಟ್ಟಕ್ಕಲ್ ನಲ್ಲಿನ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬಳನ್ನು ಮದುವೆಯಾದ ನಾಲ್ಕು ತಿಂಗಳಿಗೆ ಮಗು ಹೆತ್ತಳೆಂಬ ಕಾರಣದಿಂದ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಪೋಷಕ ಮತ್ತು ಶಿಕ್ಷಕ ಸಂಘ ಶಾಲೆಯಿಂದ ಹೊರಹಾಕಿರುವ ಘಟನೆ ನಡೆದಿದೆ.

ಪೋಷಕರ ಮತ್ತು ಶಿಕ್ಷಕ ಸಂಘ ಸಭೆಯಲ್ಲಿ ತನ್ನ ಬಗ್ಗೆ ಕೆಟ್ಟದಾಗಿ ಮಾತಾಡಲಾಗಿದೆ ಮತ್ತು ನಾನು ಶಾಲೆಗೆ ಮರಳಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಆ ಶಿಕ್ಷಕಿಯು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಸದರಿ ಸರ್ಕಾರಿ ಶಾಲೆಯಲ್ಲಿ ಆ ಶಿಕ್ಷಕಿಯು ಕಳೆದ ಐದು ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆಕೆಯು ಗಂಡನಿಂದ ವಿಚ್ಚೇಧನಕ್ಕೆ ಅರ್ಜಿ ಸಲ್ಲಿಸಿದ್ದು ವಿಚ್ಚೇಧನ ದೊರೆಯುವುದು ವಿಳಂಬವಾಗಿದೆ. ಈಗಿರುವಾಗ ಆಕೆ ತನ್ನ ಎರಡನೇ ಗಂಡನೊಂದಿಗೆ ಮದುವೆಗೂ ಮುಂಚೆಯೇ ವಾಸಿಸಲು ಆರಂಭಿಸಿದ್ದಾರೆ. ನಂತರ 2018ರ ಜೂನ್ ನಲ್ಲಿ ಆಕೆ ಎರಡನೇ ಮದುವೆಯಾಗಿದ್ದಾರೆ. ಇದಾದ ನಾಲ್ಕು ತಿಂಗಳ ನಂತರ ಅವರು ತನಗೆ ಮಾತೃತ್ವ ರಜೆ ನೀಡಬೇಕೆಂದು ಶಾಲೆಗೆ ಅರ್ಜಿ ಸಲ್ಲಿಸಿದ ಮರುದಿನವೇ ಅವರು ಮಗುವಿಗೆ ಜನ್ಮ ನೀಡಿದ್ದಾರೆ.

ನಂತರ ಜನವರಿ 2019ಕ್ಕೆ ಅವರ ಮಾತೃತ್ವ ರಜೆ ಪೂರ್ಣಗೊಂಡ ನಂತರ ಶಾಲೆಗೆ ಬಂದರೆ, ಮದುವೆಯಾದ ನಾಲ್ಕು ತಿಂಗಳಿಗೆ ಮಾತೃತ್ವ ರಜೆ ಪಡೆದ ಕಾರಣ ಮುಂದೊಡ್ಡಿ, ಶಾಲೆಯ ಆಡಳಿತ ಮಂಡಳಿ ಅವರನ್ನು ಶಾಲೆಯೊಳಗೆ ಬಿಟ್ಟುಕೊಂಡಿಲ್ಲ. ಇದರಿಂದ ಮನನೊಂದ ಆಕೆ ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ಆಯೋಗವು ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಬಳಿ ಸ್ಪಷ್ಟೀಕರಣ ಕೇಳಿದೆ.

ಕೆಲವು ತಿಂಗಳುಗಳ ನಂತರ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಮ್ಮ ತನಿಖೆಯನ್ನು ಪೂರ್ಣಗೊಳಿಸಿ ಶಿಕ್ಷಕಿಯನ್ನು ಶಾಲೆಗೆ ಮರುನೇಮಿಸಿಕೊಳ್ಳಬೇಕೆಂದು ಸೂಚನೆ ನೀಡಿದೆ. ಆದರೆ ಶಾಲೆಯ ಆಡಳಿತ ಮಂಡಳಿ ಮತ್ತು ಪೋಷಕ ಮತ್ತು ಶಿಕ್ಷಕ ಸಂಘ ಆ ಸೂಚನೆಯನ್ನು ಧಿಕ್ಕರಿಸಿದ್ದಾರೆ.

“ನಾನು ಶಾಲೆಯ ಆಡಳಿತ ಮಂಡಳಿಯನ್ನು ಸಂಪರ್ಕಿಸಿದೆ. ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಸೂಚನೆಯಂತೆ ನನ್ನನ್ನು ಮತ್ತೆ ಕೆಲಸಕ್ಕೆ ನಿಯೋಜಿಸುವಂತೆ ಮನವಿ ಮಾಡಿದೆ. ಆದರೆ ಸಭೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಂಘದವರು ನನ್ನ ಬಗ್ಗೆ ಅತ್ಯಂತ ಕೀಳು ಮಟ್ಟದಲ್ಲಿ ಮಾತಾಡಿ ಅವಮಾನ ಮಾಡಿದರು. ಅವಾಚ್ಯ ಶಬ್ದಗಳಿಂದ ನಿಂದಿಸಿ, ಶಾಲೆಗೆ ಮರಳಲು ಅವಕಾಶ ನೀಡಲಿಲ್ಲ. ಹಾಗಾಗಿ ಜೂನ್ 14 ರಂದು ನಾನು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ನನ್ನ ವಯಕ್ತಿಕ ಜೀವನದ ಬಗ್ಗೆ ಮಾತನಾಡಲು ಅವರ್ಯಾರಿಗೂ ಹಕ್ಕಿಲ್ಲ. ಆದರೂ ಅವರಿಗೆ ನನ್ನ ಗರ್ಭಿಣಿ ಸಮಯದ ಮೇಲೆ ಯಾಕಷ್ಟು ಕಾಳಜಿ ಎಂದು ನನಗೆ ಗೊತ್ತಿಲ್ಲ”ಎನ್ನುತ್ತಾರೆ ಆ ನೊಂದ ಶಿಕ್ಷಕಿ.

ಇದೊಂದು ನೈತಿಕ ಪೊಲೀಸ್ ಗಿರಿಯಾಗಿದೆ ಮಾತ್ರವಲ್ಲ ಆ ಶಿಕ್ಷಕಿಯ ಖಾಸಗಿತನದ ಮೇಲಿನ ದಾಳಿಯಾಗಿದೆ. ಮದುವೆ ಮಕ್ಕಳು ಅವರವರ ಖಾಸಗಿ ಬದುಕು. ಅದರಲ್ಲಿ ಇಣುಕಲು ಹೊರಗಿನವರಿಗೆ ಹಕ್ಕಿಲ್ಲ ಎಂಬುದನ್ನು ಆ ಶಾಲೆಯ ಆಡಳಿತ ಮಂಡಳಿ ತಿಳಿದಿರಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಅಭಿಪ್ರಾಯ ವ್ಯಕ್ತಿಪಡಿಸಿದ್ದಾರೆ.

“ದೂರದಾರರು ನೀಡಿರುವ ಹೇಳಿಕೆ ಆಧರಿಸಿ, ಶಾಲೆಯ ಆಡಳಿತ ಮಂಡಳಿಯ ವಿರುದ್ಧ ನಾವು ತನಿಖೆ ಆರಂಭಿಸಿದ್ದೇವೆ.” ಎಂದು ಕೊಟ್ಟಕ್ಕಲ್ ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಸಂಧ್ಯಾದೇವಿಯವರು ತಿಳಿಸಿದ್ದಾರೆ.

ಆಧಾರ: ಟೈಂಮ್ಸ್ ಆಫ್ ಇಂಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...