Homeಮುಖಪುಟಮದುವೆಯಾದ ನಾಲ್ಕು ತಿಂಗಳಿಗೆ ಮಗು ಹೆತ್ತಳೆಂದು ಶಿಕ್ಷಕಿಯನ್ನು ಹೊರದಬ್ಬಿದ ಶಾಲೆ..

ಮದುವೆಯಾದ ನಾಲ್ಕು ತಿಂಗಳಿಗೆ ಮಗು ಹೆತ್ತಳೆಂದು ಶಿಕ್ಷಕಿಯನ್ನು ಹೊರದಬ್ಬಿದ ಶಾಲೆ..

ಇದೊಂದು ನೈತಿಕ ಪೊಲೀಸ್ ಗಿರಿಯಾಗಿದೆ ಮಾತ್ರವಲ್ಲ ಆ ಶಿಕ್ಷಕಿಯ ಖಾಸಗಿತನದ ಮೇಲಿನ ದಾಳಿಯಾಗಿದೆ. ಮದುವೆ ಮಕ್ಕಳು ಅವರವರ ಖಾಸಗಿ ಬದುಕು. ಅದರಲ್ಲಿ ಇಣುಕಲು ಹೊರಗಿನವರಿಗೆ ಹಕ್ಕಿಲ್ಲ

- Advertisement -
- Advertisement -

ಕೇರಳದ ಮಲಪ್ಪುರಂ ಬಳಿಯ ಕೊಟ್ಟಕ್ಕಲ್ ನಲ್ಲಿನ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬಳನ್ನು ಮದುವೆಯಾದ ನಾಲ್ಕು ತಿಂಗಳಿಗೆ ಮಗು ಹೆತ್ತಳೆಂಬ ಕಾರಣದಿಂದ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಪೋಷಕ ಮತ್ತು ಶಿಕ್ಷಕ ಸಂಘ ಶಾಲೆಯಿಂದ ಹೊರಹಾಕಿರುವ ಘಟನೆ ನಡೆದಿದೆ.

ಪೋಷಕರ ಮತ್ತು ಶಿಕ್ಷಕ ಸಂಘ ಸಭೆಯಲ್ಲಿ ತನ್ನ ಬಗ್ಗೆ ಕೆಟ್ಟದಾಗಿ ಮಾತಾಡಲಾಗಿದೆ ಮತ್ತು ನಾನು ಶಾಲೆಗೆ ಮರಳಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಆ ಶಿಕ್ಷಕಿಯು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಸದರಿ ಸರ್ಕಾರಿ ಶಾಲೆಯಲ್ಲಿ ಆ ಶಿಕ್ಷಕಿಯು ಕಳೆದ ಐದು ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆಕೆಯು ಗಂಡನಿಂದ ವಿಚ್ಚೇಧನಕ್ಕೆ ಅರ್ಜಿ ಸಲ್ಲಿಸಿದ್ದು ವಿಚ್ಚೇಧನ ದೊರೆಯುವುದು ವಿಳಂಬವಾಗಿದೆ. ಈಗಿರುವಾಗ ಆಕೆ ತನ್ನ ಎರಡನೇ ಗಂಡನೊಂದಿಗೆ ಮದುವೆಗೂ ಮುಂಚೆಯೇ ವಾಸಿಸಲು ಆರಂಭಿಸಿದ್ದಾರೆ. ನಂತರ 2018ರ ಜೂನ್ ನಲ್ಲಿ ಆಕೆ ಎರಡನೇ ಮದುವೆಯಾಗಿದ್ದಾರೆ. ಇದಾದ ನಾಲ್ಕು ತಿಂಗಳ ನಂತರ ಅವರು ತನಗೆ ಮಾತೃತ್ವ ರಜೆ ನೀಡಬೇಕೆಂದು ಶಾಲೆಗೆ ಅರ್ಜಿ ಸಲ್ಲಿಸಿದ ಮರುದಿನವೇ ಅವರು ಮಗುವಿಗೆ ಜನ್ಮ ನೀಡಿದ್ದಾರೆ.

ನಂತರ ಜನವರಿ 2019ಕ್ಕೆ ಅವರ ಮಾತೃತ್ವ ರಜೆ ಪೂರ್ಣಗೊಂಡ ನಂತರ ಶಾಲೆಗೆ ಬಂದರೆ, ಮದುವೆಯಾದ ನಾಲ್ಕು ತಿಂಗಳಿಗೆ ಮಾತೃತ್ವ ರಜೆ ಪಡೆದ ಕಾರಣ ಮುಂದೊಡ್ಡಿ, ಶಾಲೆಯ ಆಡಳಿತ ಮಂಡಳಿ ಅವರನ್ನು ಶಾಲೆಯೊಳಗೆ ಬಿಟ್ಟುಕೊಂಡಿಲ್ಲ. ಇದರಿಂದ ಮನನೊಂದ ಆಕೆ ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ಆಯೋಗವು ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಬಳಿ ಸ್ಪಷ್ಟೀಕರಣ ಕೇಳಿದೆ.

ಕೆಲವು ತಿಂಗಳುಗಳ ನಂತರ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಮ್ಮ ತನಿಖೆಯನ್ನು ಪೂರ್ಣಗೊಳಿಸಿ ಶಿಕ್ಷಕಿಯನ್ನು ಶಾಲೆಗೆ ಮರುನೇಮಿಸಿಕೊಳ್ಳಬೇಕೆಂದು ಸೂಚನೆ ನೀಡಿದೆ. ಆದರೆ ಶಾಲೆಯ ಆಡಳಿತ ಮಂಡಳಿ ಮತ್ತು ಪೋಷಕ ಮತ್ತು ಶಿಕ್ಷಕ ಸಂಘ ಆ ಸೂಚನೆಯನ್ನು ಧಿಕ್ಕರಿಸಿದ್ದಾರೆ.

“ನಾನು ಶಾಲೆಯ ಆಡಳಿತ ಮಂಡಳಿಯನ್ನು ಸಂಪರ್ಕಿಸಿದೆ. ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಸೂಚನೆಯಂತೆ ನನ್ನನ್ನು ಮತ್ತೆ ಕೆಲಸಕ್ಕೆ ನಿಯೋಜಿಸುವಂತೆ ಮನವಿ ಮಾಡಿದೆ. ಆದರೆ ಸಭೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಂಘದವರು ನನ್ನ ಬಗ್ಗೆ ಅತ್ಯಂತ ಕೀಳು ಮಟ್ಟದಲ್ಲಿ ಮಾತಾಡಿ ಅವಮಾನ ಮಾಡಿದರು. ಅವಾಚ್ಯ ಶಬ್ದಗಳಿಂದ ನಿಂದಿಸಿ, ಶಾಲೆಗೆ ಮರಳಲು ಅವಕಾಶ ನೀಡಲಿಲ್ಲ. ಹಾಗಾಗಿ ಜೂನ್ 14 ರಂದು ನಾನು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ನನ್ನ ವಯಕ್ತಿಕ ಜೀವನದ ಬಗ್ಗೆ ಮಾತನಾಡಲು ಅವರ್ಯಾರಿಗೂ ಹಕ್ಕಿಲ್ಲ. ಆದರೂ ಅವರಿಗೆ ನನ್ನ ಗರ್ಭಿಣಿ ಸಮಯದ ಮೇಲೆ ಯಾಕಷ್ಟು ಕಾಳಜಿ ಎಂದು ನನಗೆ ಗೊತ್ತಿಲ್ಲ”ಎನ್ನುತ್ತಾರೆ ಆ ನೊಂದ ಶಿಕ್ಷಕಿ.

ಇದೊಂದು ನೈತಿಕ ಪೊಲೀಸ್ ಗಿರಿಯಾಗಿದೆ ಮಾತ್ರವಲ್ಲ ಆ ಶಿಕ್ಷಕಿಯ ಖಾಸಗಿತನದ ಮೇಲಿನ ದಾಳಿಯಾಗಿದೆ. ಮದುವೆ ಮಕ್ಕಳು ಅವರವರ ಖಾಸಗಿ ಬದುಕು. ಅದರಲ್ಲಿ ಇಣುಕಲು ಹೊರಗಿನವರಿಗೆ ಹಕ್ಕಿಲ್ಲ ಎಂಬುದನ್ನು ಆ ಶಾಲೆಯ ಆಡಳಿತ ಮಂಡಳಿ ತಿಳಿದಿರಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಅಭಿಪ್ರಾಯ ವ್ಯಕ್ತಿಪಡಿಸಿದ್ದಾರೆ.

“ದೂರದಾರರು ನೀಡಿರುವ ಹೇಳಿಕೆ ಆಧರಿಸಿ, ಶಾಲೆಯ ಆಡಳಿತ ಮಂಡಳಿಯ ವಿರುದ್ಧ ನಾವು ತನಿಖೆ ಆರಂಭಿಸಿದ್ದೇವೆ.” ಎಂದು ಕೊಟ್ಟಕ್ಕಲ್ ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಸಂಧ್ಯಾದೇವಿಯವರು ತಿಳಿಸಿದ್ದಾರೆ.

ಆಧಾರ: ಟೈಂಮ್ಸ್ ಆಫ್ ಇಂಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...