Homeದಲಿತ್ ಫೈಲ್ಸ್ಐದು ವರ್ಷಗಳಲ್ಲಿ 60ಕ್ಕೂ ಹೆಚ್ಚು ಜನರಿಂದ ಲೈಂಗಿಕ ದೌರ್ಜನ್ಯ : ದಲಿತ ಯುವತಿಯಿಂದ ಗಂಭೀರ ಆರೋಪ

ಐದು ವರ್ಷಗಳಲ್ಲಿ 60ಕ್ಕೂ ಹೆಚ್ಚು ಜನರಿಂದ ಲೈಂಗಿಕ ದೌರ್ಜನ್ಯ : ದಲಿತ ಯುವತಿಯಿಂದ ಗಂಭೀರ ಆರೋಪ

- Advertisement -
- Advertisement -

ಕಳೆದ ಐದು ವರ್ಷಗಳಲ್ಲಿ 60ಕ್ಕಿಂತ ಹೆಚ್ಚು ಪುರುಷರು ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಕೇರಳದ ಪತ್ತನಂತಿಟ್ಟದ 18 ವರ್ಷದ ದಲಿತ ಯುವತಿಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ

ತನ್ನ 13ನೇ ವಯಸ್ಸಿನಿಂದ ಇದುವರೆಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಕ್ರೀಡಾಪಟುವಾಗಿರುವ ಯುವತಿ ಆರೋಪಿಸಿದ್ದಾರೆ. ಈ ಸಂಬಂಧ ಜನವರಿ 10ರಂದು ಶುಕ್ರವಾರ ಪತ್ತನಂತಿಟ್ಟದ ಎಲವುಂತಿಟ್ಟ ಪೊಲೀಸರು ಎರಡು ಎಫ್‌ಐಆರ್‌ ದಾಖಲಿಸಿದ್ದಾರೆ.

ಪ್ರಕರಣಗಳ ತನಿಖೆಯನ್ನು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ನಂದಕುಮಾರ್ ಮತ್ತು ಇನ್ಸ್‌ಪೆಕ್ಟರ್ ವಿನೋದ್ ಕೃಷ್ಣನ್ ಪ್ರತ್ಯೇಕವಾಗಿ ನಡೆಸಲಿದ್ದಾರೆ.

ಕಾಲೇಜಿನಲ್ಲಿ ಕೌನ್ಸೆಲಿಂಗ್ ನಡೆಸುವ ವೇಳೆ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ವಿಷಯ ಬೆಳಕಿಗೆ ಬಂದಿದೆ. ಈ ಕುರಿತು ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಪೊಲೀಸರಿಗೆ ಮಾಹಿತಿ ನೀಡಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸುಬಿನ್ (24), ಎಸ್. ಸಂದೀಪ್ (30), ವಿಕೆ ವಿನೀತ್ (30), ಕೆ ಆನಂದು (21), ಮತ್ತು ಶ್ರೀನಿ ಅಲಿಯಾಸ್ ಎಸ್ ಸುಧಿ ಶ್ರೀನಿ (24) ಎಂಬವರನ್ನು ಬಂಧಿಸಿದ್ದಾರೆ. ಇವರೆಲ್ಲರೂ ಪತ್ತನಂತಿಟ್ಟದ ಚೆನ್ನೀರ್ಕರ ನಿವಾಸಿಗಳು ಎಂದು ತಿಳಿದು ಬಂದಿದೆ.

ಪೊಲೀಸರ ಪ್ರಕಾರ, ಹುಡುಗಿಯ ನೆರೆಮನೆಯವನಾದ ಸುಬಿನ್, ಹುಡುಗಿ 13 ವರ್ಷದವಳಿದ್ದಾಗ ಆಕೆಯ ನಗ್ನ ಫೋಟೋಗಳನ್ನು ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ 16ನೇ ವಯಸ್ಸಿನಲ್ಲಿ ಮತ್ತೊಮ್ಮೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅದರ ವಿಡಿಯೋಗಳನ್ನು ರೆಕಾರ್ಡ್ ಮಾಡಿ, ಅವುಗಳನ್ನು ಇತರ ಆರೋಪಿಗಳೊಂದಿಗೆ ಹಂಚಿಕೊಂಡಿದ್ದ. ಆ ವಿಡಿಯೋ ಮುಂದಿಟ್ಟುಕೊಂಡು ಹುಡುಗಿಯನ್ನು ಹೆದರಿಸಿದ್ದ ಆರೋಪಿಗಳು, ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದರು.

ಪೊಲೀಸರ ಪ್ರಾಥಮಿಕ ತನಿಖೆಗಳು ಕನಿಷ್ಠ 60 ಆರೋಪಿಗಳನ್ನು ಗುರುತಿಸಿವೆ. ಇವರಲ್ಲಿ ಯುವತಿಯ ಕೋಚ್ ಮತ್ತು ಸಹ ಕ್ರೀಡಾಪಟುಗಳು ಸೇರಿದ್ದಾರೆ ಎಂದು ವರದಿಗಳು ಹೇಳಿವೆ.

ಆರೋಪಿಗಳ ವಿರುದ್ಧ 1989ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(2)(v) ಮತ್ತು ಐಪಿಸಿ ಸೆಕ್ಷನ್ 376(2) (ತೀವ್ರ ಅತ್ಯಾಚಾರ), 376(3) (ಹದಿನಾರು ವರ್ಷದೊಳಗಿನ ಹೆಣ್ಣಿನ ಮೇಲೆ ಅತ್ಯಾಚಾರ), 376(n)(ಒಂದೇ ಹೆಣ್ಣಿನ ಮೇಲೆ ಪುನರಾವರ್ತಿತ ಅತ್ಯಾಚಾರ), 376(D)(ಸಾಮೂಹಿಕ ಅತ್ಯಾಚಾರ), ಮತ್ತು 354A (ಲೈಂಗಿಕ ಕಿರುಕುಳ) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಅಲ್ಲದೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO)ಕಾಯ್ದೆಯ ಸೆಕ್ಷನ್ 3(a), 5(g),11, 12 ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸೆಕ್ಷನ್ 66ಇ (ಗೌಪ್ಯತೆಯ ಉಲ್ಲಂಘನೆ) ಮತ್ತು 67ಬಿ (ಲೈಂಗಿಕವಾಗಿ ಸ್ಪಷ್ಟವಾದ ಕೃತ್ಯಗಳಲ್ಲಿ ಮಕ್ಕಳನ್ನು ಚಿತ್ರಿಸುವುದು) ಅನ್ವಯಿಸಲಾಗಿದೆ.

ಬೀದರ್ | ಅನ್ಯ ಜಾತಿಯ ಬಾಲಕಿಯನ್ನು ಪ್ರೀತಿಸುತ್ತಿದ್ದ ದಲಿತ ಯುವಕನ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...