Homeಮುಖಪುಟಕೇರಳ: ಹಿಂದೂ ಅಲ್ಲದ ಕಾರಣಕ್ಕೆ ಭರತನಾಟ್ಯ ಕಲಾವಿದೆಯ ಕಾರ್ಯಕ್ರಮ ರದ್ದುಮಾಡಿದ ದೇವಾಲಯ

ಕೇರಳ: ಹಿಂದೂ ಅಲ್ಲದ ಕಾರಣಕ್ಕೆ ಭರತನಾಟ್ಯ ಕಲಾವಿದೆಯ ಕಾರ್ಯಕ್ರಮ ರದ್ದುಮಾಡಿದ ದೇವಾಲಯ

- Advertisement -
- Advertisement -

ಹಿಂದೂ ಧರ್ಮೀಯರಲ್ಲ ಎಂಬ ಕಾರಣಕ್ಕೆ ಕೇರಳದ ತ್ರಿಶೂರ್‌ನಲ್ಲಿರುವ ದೇವಾಲಯದ ಆಡಳಿತವು ಭರತನಾಟ್ಯ ಕಲಾವಿದೆ ಮಾನ್ಸಿಯಾ ವಿ.ಪಿ. ಅವರ ಕಾರ್ಯಕ್ರಮವನ್ನು ರದ್ದುಗೊಳಿಸಿದೆ ಎಂದು ಆರೋಪಿಸಲಾಗಿದೆ. ಸರ್ಕಾರಿ ಆಡಳಿತದ ದೇವಸ್ವಂ ಮಂಡಳಿಗೆ ಒಳಪಡುವ ಕೂಡಲಮಾಣಿಕ್ಯಂ ದೇವಸ್ಥಾನವು ತನ್ನ ಆವರಣದಲ್ಲಿ ಹಿಂದೂಯೇತರರು ನೃತ್ಯ ಪ್ರದರ್ಶನ ನೀಡುವಂತಿಲ್ಲ ಎಂದು ಹೇಳಿದೆ.

ಭರತನಾಟ್ಯದಲ್ಲಿ ಪಿಎಚ್‌ಡಿ ಸಂಶೋಧನಾ ವಿದ್ವಾಂಸರಾಗಿರುವ ಮಾನ್ಸಿಯಾ ಅವರು ಮುಸ್ಲಿಂ ಧರ್ಮದಲ್ಲಿ ಬೆಳೆದವರಾಗಿದ್ದಾರೆ. ಈ ಹಿಂದೆ ಅವರು ಶಾಸ್ತ್ರೀಯ ನೃತ್ಯ ಪ್ರಕಾರಗಳ ಕಲಾವಿದೆಯಾಗಿದ್ದಕ್ಕೆ ಮುಸ್ಲಿಮರಿಂದಲೂ ಟೀಕೆಗಳನ್ನು ಎದುರಿಸಿದ್ದರು.

ಇದನ್ನೂ ಓದಿ: ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾನ್ಸಿಯಾ, “ಹಿಂದೂ ಅಲ್ಲದ ಕಾರಣಕ್ಕೆ ಪ್ರದರ್ಶನ ನೀಡಲು ಸಾಧ್ಯವಿಲ್ಲ ಎಂದು ತಿಳಿಸಲಾಗಿದೆ. ಎಲ್ಲಾ ವೇದಿಕೆಗಳೂ ಧರ್ಮ ಆಧಾರಲ್ಲಿ ನೀಡಲಾಗುತ್ತಿದ್ದು, ಉತ್ತಮ ನೃತ್ಯಗಾರ್ತಿಯೆ ಎಂಬುವುದು ನೋಡುತ್ತಿಲ್ಲ. ದೇವಸ್ಥಾನದ ಕಡೆಯಿಂದ ಕರೆ ಮಾಡಿರುವ ವ್ಯಕ್ತಿ ಮದುವೆಯಾದ ನಂತರ ಹಿಂದೂ ಮತಕ್ಕೆ ಮತಾಂತರವಾಗಿದ್ದೀರಾ ಎಂಬ ಪ್ರಶ್ನೆಯನ್ನೂ ಕೇಳಿದ್ದಾರೆ. ಆದರೆ ಯಾವುದೆ ಮತದಲ್ಲಿ ಇಲ್ಲದ ನಾನು ಯಾವ ಮತಕ್ಕೆ ಮತಾಂತರವಾಗಿಲಿ” ಎಂದು ಹೇಳಿದ್ದಾರೆ.

“ಮತಗಳ ಆಧಾರದ ಮೇಲೆ ಬಹಿಷ್ಕಾರದ ಅನುಭವ ಆಗುತ್ತಿರುವುದು ಇದುವೆ ಮೊದಲೇನಲ್ಲ. ಕೆಲವು ವರ್ಷಗಳ ಹಿಂದೆ ಗುರುವಾಯೂರು ದೇವಸ್ಥಾನದಲ್ಲಿ ನನ್ನ ಪ್ರದರ್ಶನವನ್ನು ಇದೇ ಕಾರಣಕ್ಕೆ ರದ್ದುಗೊಳಿಸಲಾಗಿತ್ತು. ಕಲೆ ಮತ್ತು ಕಲಾವಿದರು ಮತ ಮತ್ತು ಜಾತಿಯ ಕಟ್ಟುಪಾಡುಗಳಿಂದ ನಿರಂತರವಾಗಿ ಹೊಡೆತ ತಿನ್ನುತ್ತಲೆ ಇದ್ದಾರೆ. ಒಂದು ಮತ ಅದನ್ನು ನಿಷೇಧ ಮಾಡಿದಾಗ, ಇನ್ನೊಂದು ,ಮತ ಅದನ್ನು ಏಕಸ್ವಾಮ್ಯವಾಗಿಸುತ್ತದೆ. ನಮ್ಮ ‘ಜಾತ್ಯತೀತ’ ಕೇರಳದಲ್ಲಿ ಏನೂ ಬದಲಾಗಿಲ್ಲ ಎಂಬುದನ್ನು ನೆನಪಿಸುತ್ತಿದ್ದೇನೆ” ಎಂದು ಮಾನ್ಸಿಯಾ ಹೇಳಿದ್ದಾರೆ.

ಇದನ್ನೂ ಓದಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ಇದೇ ವೇಳೆ, ಕೂಡಲಮಾಣಿಕ್ಯಂ ದೇವಸ್ವಂ ಮಂಡಳಿ ಅಧ್ಯಕ್ಷ ಪ್ರದೀಪ್ ಮೆನನ್ ಮಾತನಾಡಿ, ದೇವಸ್ಥಾನದ ಸಂಪ್ರದಾಯದಂತೆ ದೇವಸ್ಥಾನದ ಆವರಣದೊಳಗೆ ಹಿಂದೂಗಳು ಮಾತ್ರ ಕಾರ್ಯಕ್ರಮ ಮಾಡಬಹುದು ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

“10 ದಿನಗಳ ಕಾಲ ದೇವಾಲಯದ ಆವರಣದಲ್ಲಿ ಉತ್ಸವ ನಡೆಯುತ್ತದೆ. ಸುಮಾರು 800 ಕಲಾವಿದರು ವಿವಿಧ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡುತ್ತಾರೆ. ಕಲಾವಿದರು ಹಿಂದೂ ಸಮುದಾಯಕ್ಕೆ ಸೇರಿದ್ದಾರೋ ಇಲ್ಲವೋ ಎಂದು ಕೇಳಲಾಗುತ್ತದೆ. ಆದರೆ ತನಗೆ ಯಾವುದೇ ಧರ್ಮವಿಲ್ಲ ಎಂದು ಮಾನ್ಸಿಯಾ ಲಿಖಿತವಾಗಿ ನೀಡಿದ್ದರು. ಈ ಕಾರಣಕ್ಕಾಗಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಕೇರಳದಿಂದ ವರದಿಯಾಗುತ್ತಿರುವ ಎರಡನೇ ಪ್ರಕರಣ ಇದಾಗಿದೆ. ಈ ಹಿಂದೆ ಇದೇ ಮಾದರಿಯಲ್ಲಿ ಉತ್ತರ ಮಲಬಾರ್‌ನ ದೇವಸ್ಥಾನದ ಆಡಳಿತವು ತನ್ನ ಮಗ ಮುಸ್ಲಿಂ ಮಹಿಳೆಯನ್ನು ಮದುವೆಯಾದ ಆರೋಪದ ಮೇಲೆ ಪೂರಕ್ಕಳಿ ಕಲಾವಿದನಿಗೆ ದೇವಸ್ಥಾನಗಳಲ್ಲಿ ಪ್ರದರ್ಶನ ನೀಡುವುದಕ್ಕೆ ನಿಷೇಧಿಸಿತ್ತು. ಎರಡೂ ಸಂದರ್ಭಗಳಲ್ಲಿ ಅಧಿಕಾರಿಗಳು ದೇವಾಲಯದ ಸಂಪ್ರದಾಯಗಳನ್ನು ಮುರಿಯಲು ಸಾಧ್ಯವಿಲ್ಲ ಎಂದು ಸಮರ್ಥಿಸಿ ಕೊಂಡಿದ್ದಾರೆ.

ಇದನ್ನೂ ಓದಿ: ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವೈದ್ಯರು,ಇತರೆ ವ್ಯಕ್ತಿಗಳು ಹಿಂದೂ ಅಲ್ಲದಿದ್ದರೂ ಅವರಲ್ಲಿ ವ್ಯವಹರಿಸುವುದು ಇಲ್ಲವೇ. ದೇವರಿಗೆ ದೊಡ್ಡ ಕಾಣಿಕೆ ನೀಡುವುದನ್ನು ಬೇಡ ಅನ್ನುವರೆ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...