Homeಮುಖಪುಟಕೇರಳ: ಹಿಂದೂ ಅಲ್ಲದ ಕಾರಣಕ್ಕೆ ಭರತನಾಟ್ಯ ಕಲಾವಿದೆಯ ಕಾರ್ಯಕ್ರಮ ರದ್ದುಮಾಡಿದ ದೇವಾಲಯ

ಕೇರಳ: ಹಿಂದೂ ಅಲ್ಲದ ಕಾರಣಕ್ಕೆ ಭರತನಾಟ್ಯ ಕಲಾವಿದೆಯ ಕಾರ್ಯಕ್ರಮ ರದ್ದುಮಾಡಿದ ದೇವಾಲಯ

- Advertisement -
- Advertisement -

ಹಿಂದೂ ಧರ್ಮೀಯರಲ್ಲ ಎಂಬ ಕಾರಣಕ್ಕೆ ಕೇರಳದ ತ್ರಿಶೂರ್‌ನಲ್ಲಿರುವ ದೇವಾಲಯದ ಆಡಳಿತವು ಭರತನಾಟ್ಯ ಕಲಾವಿದೆ ಮಾನ್ಸಿಯಾ ವಿ.ಪಿ. ಅವರ ಕಾರ್ಯಕ್ರಮವನ್ನು ರದ್ದುಗೊಳಿಸಿದೆ ಎಂದು ಆರೋಪಿಸಲಾಗಿದೆ. ಸರ್ಕಾರಿ ಆಡಳಿತದ ದೇವಸ್ವಂ ಮಂಡಳಿಗೆ ಒಳಪಡುವ ಕೂಡಲಮಾಣಿಕ್ಯಂ ದೇವಸ್ಥಾನವು ತನ್ನ ಆವರಣದಲ್ಲಿ ಹಿಂದೂಯೇತರರು ನೃತ್ಯ ಪ್ರದರ್ಶನ ನೀಡುವಂತಿಲ್ಲ ಎಂದು ಹೇಳಿದೆ.

ಭರತನಾಟ್ಯದಲ್ಲಿ ಪಿಎಚ್‌ಡಿ ಸಂಶೋಧನಾ ವಿದ್ವಾಂಸರಾಗಿರುವ ಮಾನ್ಸಿಯಾ ಅವರು ಮುಸ್ಲಿಂ ಧರ್ಮದಲ್ಲಿ ಬೆಳೆದವರಾಗಿದ್ದಾರೆ. ಈ ಹಿಂದೆ ಅವರು ಶಾಸ್ತ್ರೀಯ ನೃತ್ಯ ಪ್ರಕಾರಗಳ ಕಲಾವಿದೆಯಾಗಿದ್ದಕ್ಕೆ ಮುಸ್ಲಿಮರಿಂದಲೂ ಟೀಕೆಗಳನ್ನು ಎದುರಿಸಿದ್ದರು.

ಇದನ್ನೂ ಓದಿ: ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾನ್ಸಿಯಾ, “ಹಿಂದೂ ಅಲ್ಲದ ಕಾರಣಕ್ಕೆ ಪ್ರದರ್ಶನ ನೀಡಲು ಸಾಧ್ಯವಿಲ್ಲ ಎಂದು ತಿಳಿಸಲಾಗಿದೆ. ಎಲ್ಲಾ ವೇದಿಕೆಗಳೂ ಧರ್ಮ ಆಧಾರಲ್ಲಿ ನೀಡಲಾಗುತ್ತಿದ್ದು, ಉತ್ತಮ ನೃತ್ಯಗಾರ್ತಿಯೆ ಎಂಬುವುದು ನೋಡುತ್ತಿಲ್ಲ. ದೇವಸ್ಥಾನದ ಕಡೆಯಿಂದ ಕರೆ ಮಾಡಿರುವ ವ್ಯಕ್ತಿ ಮದುವೆಯಾದ ನಂತರ ಹಿಂದೂ ಮತಕ್ಕೆ ಮತಾಂತರವಾಗಿದ್ದೀರಾ ಎಂಬ ಪ್ರಶ್ನೆಯನ್ನೂ ಕೇಳಿದ್ದಾರೆ. ಆದರೆ ಯಾವುದೆ ಮತದಲ್ಲಿ ಇಲ್ಲದ ನಾನು ಯಾವ ಮತಕ್ಕೆ ಮತಾಂತರವಾಗಿಲಿ” ಎಂದು ಹೇಳಿದ್ದಾರೆ.

“ಮತಗಳ ಆಧಾರದ ಮೇಲೆ ಬಹಿಷ್ಕಾರದ ಅನುಭವ ಆಗುತ್ತಿರುವುದು ಇದುವೆ ಮೊದಲೇನಲ್ಲ. ಕೆಲವು ವರ್ಷಗಳ ಹಿಂದೆ ಗುರುವಾಯೂರು ದೇವಸ್ಥಾನದಲ್ಲಿ ನನ್ನ ಪ್ರದರ್ಶನವನ್ನು ಇದೇ ಕಾರಣಕ್ಕೆ ರದ್ದುಗೊಳಿಸಲಾಗಿತ್ತು. ಕಲೆ ಮತ್ತು ಕಲಾವಿದರು ಮತ ಮತ್ತು ಜಾತಿಯ ಕಟ್ಟುಪಾಡುಗಳಿಂದ ನಿರಂತರವಾಗಿ ಹೊಡೆತ ತಿನ್ನುತ್ತಲೆ ಇದ್ದಾರೆ. ಒಂದು ಮತ ಅದನ್ನು ನಿಷೇಧ ಮಾಡಿದಾಗ, ಇನ್ನೊಂದು ,ಮತ ಅದನ್ನು ಏಕಸ್ವಾಮ್ಯವಾಗಿಸುತ್ತದೆ. ನಮ್ಮ ‘ಜಾತ್ಯತೀತ’ ಕೇರಳದಲ್ಲಿ ಏನೂ ಬದಲಾಗಿಲ್ಲ ಎಂಬುದನ್ನು ನೆನಪಿಸುತ್ತಿದ್ದೇನೆ” ಎಂದು ಮಾನ್ಸಿಯಾ ಹೇಳಿದ್ದಾರೆ.

ಇದನ್ನೂ ಓದಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ಇದೇ ವೇಳೆ, ಕೂಡಲಮಾಣಿಕ್ಯಂ ದೇವಸ್ವಂ ಮಂಡಳಿ ಅಧ್ಯಕ್ಷ ಪ್ರದೀಪ್ ಮೆನನ್ ಮಾತನಾಡಿ, ದೇವಸ್ಥಾನದ ಸಂಪ್ರದಾಯದಂತೆ ದೇವಸ್ಥಾನದ ಆವರಣದೊಳಗೆ ಹಿಂದೂಗಳು ಮಾತ್ರ ಕಾರ್ಯಕ್ರಮ ಮಾಡಬಹುದು ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

“10 ದಿನಗಳ ಕಾಲ ದೇವಾಲಯದ ಆವರಣದಲ್ಲಿ ಉತ್ಸವ ನಡೆಯುತ್ತದೆ. ಸುಮಾರು 800 ಕಲಾವಿದರು ವಿವಿಧ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡುತ್ತಾರೆ. ಕಲಾವಿದರು ಹಿಂದೂ ಸಮುದಾಯಕ್ಕೆ ಸೇರಿದ್ದಾರೋ ಇಲ್ಲವೋ ಎಂದು ಕೇಳಲಾಗುತ್ತದೆ. ಆದರೆ ತನಗೆ ಯಾವುದೇ ಧರ್ಮವಿಲ್ಲ ಎಂದು ಮಾನ್ಸಿಯಾ ಲಿಖಿತವಾಗಿ ನೀಡಿದ್ದರು. ಈ ಕಾರಣಕ್ಕಾಗಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಕೇರಳದಿಂದ ವರದಿಯಾಗುತ್ತಿರುವ ಎರಡನೇ ಪ್ರಕರಣ ಇದಾಗಿದೆ. ಈ ಹಿಂದೆ ಇದೇ ಮಾದರಿಯಲ್ಲಿ ಉತ್ತರ ಮಲಬಾರ್‌ನ ದೇವಸ್ಥಾನದ ಆಡಳಿತವು ತನ್ನ ಮಗ ಮುಸ್ಲಿಂ ಮಹಿಳೆಯನ್ನು ಮದುವೆಯಾದ ಆರೋಪದ ಮೇಲೆ ಪೂರಕ್ಕಳಿ ಕಲಾವಿದನಿಗೆ ದೇವಸ್ಥಾನಗಳಲ್ಲಿ ಪ್ರದರ್ಶನ ನೀಡುವುದಕ್ಕೆ ನಿಷೇಧಿಸಿತ್ತು. ಎರಡೂ ಸಂದರ್ಭಗಳಲ್ಲಿ ಅಧಿಕಾರಿಗಳು ದೇವಾಲಯದ ಸಂಪ್ರದಾಯಗಳನ್ನು ಮುರಿಯಲು ಸಾಧ್ಯವಿಲ್ಲ ಎಂದು ಸಮರ್ಥಿಸಿ ಕೊಂಡಿದ್ದಾರೆ.

ಇದನ್ನೂ ಓದಿ: ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವೈದ್ಯರು,ಇತರೆ ವ್ಯಕ್ತಿಗಳು ಹಿಂದೂ ಅಲ್ಲದಿದ್ದರೂ ಅವರಲ್ಲಿ ವ್ಯವಹರಿಸುವುದು ಇಲ್ಲವೇ. ದೇವರಿಗೆ ದೊಡ್ಡ ಕಾಣಿಕೆ ನೀಡುವುದನ್ನು ಬೇಡ ಅನ್ನುವರೆ.

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...