Homeಮುಖಪುಟಕೇರಳ: ಹಿಂದೂ ಅಲ್ಲದ ಕಾರಣಕ್ಕೆ ಭರತನಾಟ್ಯ ಕಲಾವಿದೆಯ ಕಾರ್ಯಕ್ರಮ ರದ್ದುಮಾಡಿದ ದೇವಾಲಯ

ಕೇರಳ: ಹಿಂದೂ ಅಲ್ಲದ ಕಾರಣಕ್ಕೆ ಭರತನಾಟ್ಯ ಕಲಾವಿದೆಯ ಕಾರ್ಯಕ್ರಮ ರದ್ದುಮಾಡಿದ ದೇವಾಲಯ

- Advertisement -
- Advertisement -

ಹಿಂದೂ ಧರ್ಮೀಯರಲ್ಲ ಎಂಬ ಕಾರಣಕ್ಕೆ ಕೇರಳದ ತ್ರಿಶೂರ್‌ನಲ್ಲಿರುವ ದೇವಾಲಯದ ಆಡಳಿತವು ಭರತನಾಟ್ಯ ಕಲಾವಿದೆ ಮಾನ್ಸಿಯಾ ವಿ.ಪಿ. ಅವರ ಕಾರ್ಯಕ್ರಮವನ್ನು ರದ್ದುಗೊಳಿಸಿದೆ ಎಂದು ಆರೋಪಿಸಲಾಗಿದೆ. ಸರ್ಕಾರಿ ಆಡಳಿತದ ದೇವಸ್ವಂ ಮಂಡಳಿಗೆ ಒಳಪಡುವ ಕೂಡಲಮಾಣಿಕ್ಯಂ ದೇವಸ್ಥಾನವು ತನ್ನ ಆವರಣದಲ್ಲಿ ಹಿಂದೂಯೇತರರು ನೃತ್ಯ ಪ್ರದರ್ಶನ ನೀಡುವಂತಿಲ್ಲ ಎಂದು ಹೇಳಿದೆ.

ಭರತನಾಟ್ಯದಲ್ಲಿ ಪಿಎಚ್‌ಡಿ ಸಂಶೋಧನಾ ವಿದ್ವಾಂಸರಾಗಿರುವ ಮಾನ್ಸಿಯಾ ಅವರು ಮುಸ್ಲಿಂ ಧರ್ಮದಲ್ಲಿ ಬೆಳೆದವರಾಗಿದ್ದಾರೆ. ಈ ಹಿಂದೆ ಅವರು ಶಾಸ್ತ್ರೀಯ ನೃತ್ಯ ಪ್ರಕಾರಗಳ ಕಲಾವಿದೆಯಾಗಿದ್ದಕ್ಕೆ ಮುಸ್ಲಿಮರಿಂದಲೂ ಟೀಕೆಗಳನ್ನು ಎದುರಿಸಿದ್ದರು.

ಇದನ್ನೂ ಓದಿ: ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾನ್ಸಿಯಾ, “ಹಿಂದೂ ಅಲ್ಲದ ಕಾರಣಕ್ಕೆ ಪ್ರದರ್ಶನ ನೀಡಲು ಸಾಧ್ಯವಿಲ್ಲ ಎಂದು ತಿಳಿಸಲಾಗಿದೆ. ಎಲ್ಲಾ ವೇದಿಕೆಗಳೂ ಧರ್ಮ ಆಧಾರಲ್ಲಿ ನೀಡಲಾಗುತ್ತಿದ್ದು, ಉತ್ತಮ ನೃತ್ಯಗಾರ್ತಿಯೆ ಎಂಬುವುದು ನೋಡುತ್ತಿಲ್ಲ. ದೇವಸ್ಥಾನದ ಕಡೆಯಿಂದ ಕರೆ ಮಾಡಿರುವ ವ್ಯಕ್ತಿ ಮದುವೆಯಾದ ನಂತರ ಹಿಂದೂ ಮತಕ್ಕೆ ಮತಾಂತರವಾಗಿದ್ದೀರಾ ಎಂಬ ಪ್ರಶ್ನೆಯನ್ನೂ ಕೇಳಿದ್ದಾರೆ. ಆದರೆ ಯಾವುದೆ ಮತದಲ್ಲಿ ಇಲ್ಲದ ನಾನು ಯಾವ ಮತಕ್ಕೆ ಮತಾಂತರವಾಗಿಲಿ” ಎಂದು ಹೇಳಿದ್ದಾರೆ.

“ಮತಗಳ ಆಧಾರದ ಮೇಲೆ ಬಹಿಷ್ಕಾರದ ಅನುಭವ ಆಗುತ್ತಿರುವುದು ಇದುವೆ ಮೊದಲೇನಲ್ಲ. ಕೆಲವು ವರ್ಷಗಳ ಹಿಂದೆ ಗುರುವಾಯೂರು ದೇವಸ್ಥಾನದಲ್ಲಿ ನನ್ನ ಪ್ರದರ್ಶನವನ್ನು ಇದೇ ಕಾರಣಕ್ಕೆ ರದ್ದುಗೊಳಿಸಲಾಗಿತ್ತು. ಕಲೆ ಮತ್ತು ಕಲಾವಿದರು ಮತ ಮತ್ತು ಜಾತಿಯ ಕಟ್ಟುಪಾಡುಗಳಿಂದ ನಿರಂತರವಾಗಿ ಹೊಡೆತ ತಿನ್ನುತ್ತಲೆ ಇದ್ದಾರೆ. ಒಂದು ಮತ ಅದನ್ನು ನಿಷೇಧ ಮಾಡಿದಾಗ, ಇನ್ನೊಂದು ,ಮತ ಅದನ್ನು ಏಕಸ್ವಾಮ್ಯವಾಗಿಸುತ್ತದೆ. ನಮ್ಮ ‘ಜಾತ್ಯತೀತ’ ಕೇರಳದಲ್ಲಿ ಏನೂ ಬದಲಾಗಿಲ್ಲ ಎಂಬುದನ್ನು ನೆನಪಿಸುತ್ತಿದ್ದೇನೆ” ಎಂದು ಮಾನ್ಸಿಯಾ ಹೇಳಿದ್ದಾರೆ.

ಇದನ್ನೂ ಓದಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ಇದೇ ವೇಳೆ, ಕೂಡಲಮಾಣಿಕ್ಯಂ ದೇವಸ್ವಂ ಮಂಡಳಿ ಅಧ್ಯಕ್ಷ ಪ್ರದೀಪ್ ಮೆನನ್ ಮಾತನಾಡಿ, ದೇವಸ್ಥಾನದ ಸಂಪ್ರದಾಯದಂತೆ ದೇವಸ್ಥಾನದ ಆವರಣದೊಳಗೆ ಹಿಂದೂಗಳು ಮಾತ್ರ ಕಾರ್ಯಕ್ರಮ ಮಾಡಬಹುದು ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

“10 ದಿನಗಳ ಕಾಲ ದೇವಾಲಯದ ಆವರಣದಲ್ಲಿ ಉತ್ಸವ ನಡೆಯುತ್ತದೆ. ಸುಮಾರು 800 ಕಲಾವಿದರು ವಿವಿಧ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡುತ್ತಾರೆ. ಕಲಾವಿದರು ಹಿಂದೂ ಸಮುದಾಯಕ್ಕೆ ಸೇರಿದ್ದಾರೋ ಇಲ್ಲವೋ ಎಂದು ಕೇಳಲಾಗುತ್ತದೆ. ಆದರೆ ತನಗೆ ಯಾವುದೇ ಧರ್ಮವಿಲ್ಲ ಎಂದು ಮಾನ್ಸಿಯಾ ಲಿಖಿತವಾಗಿ ನೀಡಿದ್ದರು. ಈ ಕಾರಣಕ್ಕಾಗಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಕೇರಳದಿಂದ ವರದಿಯಾಗುತ್ತಿರುವ ಎರಡನೇ ಪ್ರಕರಣ ಇದಾಗಿದೆ. ಈ ಹಿಂದೆ ಇದೇ ಮಾದರಿಯಲ್ಲಿ ಉತ್ತರ ಮಲಬಾರ್‌ನ ದೇವಸ್ಥಾನದ ಆಡಳಿತವು ತನ್ನ ಮಗ ಮುಸ್ಲಿಂ ಮಹಿಳೆಯನ್ನು ಮದುವೆಯಾದ ಆರೋಪದ ಮೇಲೆ ಪೂರಕ್ಕಳಿ ಕಲಾವಿದನಿಗೆ ದೇವಸ್ಥಾನಗಳಲ್ಲಿ ಪ್ರದರ್ಶನ ನೀಡುವುದಕ್ಕೆ ನಿಷೇಧಿಸಿತ್ತು. ಎರಡೂ ಸಂದರ್ಭಗಳಲ್ಲಿ ಅಧಿಕಾರಿಗಳು ದೇವಾಲಯದ ಸಂಪ್ರದಾಯಗಳನ್ನು ಮುರಿಯಲು ಸಾಧ್ಯವಿಲ್ಲ ಎಂದು ಸಮರ್ಥಿಸಿ ಕೊಂಡಿದ್ದಾರೆ.

ಇದನ್ನೂ ಓದಿ: ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವೈದ್ಯರು,ಇತರೆ ವ್ಯಕ್ತಿಗಳು ಹಿಂದೂ ಅಲ್ಲದಿದ್ದರೂ ಅವರಲ್ಲಿ ವ್ಯವಹರಿಸುವುದು ಇಲ್ಲವೇ. ದೇವರಿಗೆ ದೊಡ್ಡ ಕಾಣಿಕೆ ನೀಡುವುದನ್ನು ಬೇಡ ಅನ್ನುವರೆ.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...