Homeಮುಖಪುಟಕೇರಳ: ಹಿಂದೂ ಅಲ್ಲದ ಕಾರಣಕ್ಕೆ ಭರತನಾಟ್ಯ ಕಲಾವಿದೆಯ ಕಾರ್ಯಕ್ರಮ ರದ್ದುಮಾಡಿದ ದೇವಾಲಯ

ಕೇರಳ: ಹಿಂದೂ ಅಲ್ಲದ ಕಾರಣಕ್ಕೆ ಭರತನಾಟ್ಯ ಕಲಾವಿದೆಯ ಕಾರ್ಯಕ್ರಮ ರದ್ದುಮಾಡಿದ ದೇವಾಲಯ

- Advertisement -
- Advertisement -

ಹಿಂದೂ ಧರ್ಮೀಯರಲ್ಲ ಎಂಬ ಕಾರಣಕ್ಕೆ ಕೇರಳದ ತ್ರಿಶೂರ್‌ನಲ್ಲಿರುವ ದೇವಾಲಯದ ಆಡಳಿತವು ಭರತನಾಟ್ಯ ಕಲಾವಿದೆ ಮಾನ್ಸಿಯಾ ವಿ.ಪಿ. ಅವರ ಕಾರ್ಯಕ್ರಮವನ್ನು ರದ್ದುಗೊಳಿಸಿದೆ ಎಂದು ಆರೋಪಿಸಲಾಗಿದೆ. ಸರ್ಕಾರಿ ಆಡಳಿತದ ದೇವಸ್ವಂ ಮಂಡಳಿಗೆ ಒಳಪಡುವ ಕೂಡಲಮಾಣಿಕ್ಯಂ ದೇವಸ್ಥಾನವು ತನ್ನ ಆವರಣದಲ್ಲಿ ಹಿಂದೂಯೇತರರು ನೃತ್ಯ ಪ್ರದರ್ಶನ ನೀಡುವಂತಿಲ್ಲ ಎಂದು ಹೇಳಿದೆ.

ಭರತನಾಟ್ಯದಲ್ಲಿ ಪಿಎಚ್‌ಡಿ ಸಂಶೋಧನಾ ವಿದ್ವಾಂಸರಾಗಿರುವ ಮಾನ್ಸಿಯಾ ಅವರು ಮುಸ್ಲಿಂ ಧರ್ಮದಲ್ಲಿ ಬೆಳೆದವರಾಗಿದ್ದಾರೆ. ಈ ಹಿಂದೆ ಅವರು ಶಾಸ್ತ್ರೀಯ ನೃತ್ಯ ಪ್ರಕಾರಗಳ ಕಲಾವಿದೆಯಾಗಿದ್ದಕ್ಕೆ ಮುಸ್ಲಿಮರಿಂದಲೂ ಟೀಕೆಗಳನ್ನು ಎದುರಿಸಿದ್ದರು.

ಇದನ್ನೂ ಓದಿ: ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾನ್ಸಿಯಾ, “ಹಿಂದೂ ಅಲ್ಲದ ಕಾರಣಕ್ಕೆ ಪ್ರದರ್ಶನ ನೀಡಲು ಸಾಧ್ಯವಿಲ್ಲ ಎಂದು ತಿಳಿಸಲಾಗಿದೆ. ಎಲ್ಲಾ ವೇದಿಕೆಗಳೂ ಧರ್ಮ ಆಧಾರಲ್ಲಿ ನೀಡಲಾಗುತ್ತಿದ್ದು, ಉತ್ತಮ ನೃತ್ಯಗಾರ್ತಿಯೆ ಎಂಬುವುದು ನೋಡುತ್ತಿಲ್ಲ. ದೇವಸ್ಥಾನದ ಕಡೆಯಿಂದ ಕರೆ ಮಾಡಿರುವ ವ್ಯಕ್ತಿ ಮದುವೆಯಾದ ನಂತರ ಹಿಂದೂ ಮತಕ್ಕೆ ಮತಾಂತರವಾಗಿದ್ದೀರಾ ಎಂಬ ಪ್ರಶ್ನೆಯನ್ನೂ ಕೇಳಿದ್ದಾರೆ. ಆದರೆ ಯಾವುದೆ ಮತದಲ್ಲಿ ಇಲ್ಲದ ನಾನು ಯಾವ ಮತಕ್ಕೆ ಮತಾಂತರವಾಗಿಲಿ” ಎಂದು ಹೇಳಿದ್ದಾರೆ.

“ಮತಗಳ ಆಧಾರದ ಮೇಲೆ ಬಹಿಷ್ಕಾರದ ಅನುಭವ ಆಗುತ್ತಿರುವುದು ಇದುವೆ ಮೊದಲೇನಲ್ಲ. ಕೆಲವು ವರ್ಷಗಳ ಹಿಂದೆ ಗುರುವಾಯೂರು ದೇವಸ್ಥಾನದಲ್ಲಿ ನನ್ನ ಪ್ರದರ್ಶನವನ್ನು ಇದೇ ಕಾರಣಕ್ಕೆ ರದ್ದುಗೊಳಿಸಲಾಗಿತ್ತು. ಕಲೆ ಮತ್ತು ಕಲಾವಿದರು ಮತ ಮತ್ತು ಜಾತಿಯ ಕಟ್ಟುಪಾಡುಗಳಿಂದ ನಿರಂತರವಾಗಿ ಹೊಡೆತ ತಿನ್ನುತ್ತಲೆ ಇದ್ದಾರೆ. ಒಂದು ಮತ ಅದನ್ನು ನಿಷೇಧ ಮಾಡಿದಾಗ, ಇನ್ನೊಂದು ,ಮತ ಅದನ್ನು ಏಕಸ್ವಾಮ್ಯವಾಗಿಸುತ್ತದೆ. ನಮ್ಮ ‘ಜಾತ್ಯತೀತ’ ಕೇರಳದಲ್ಲಿ ಏನೂ ಬದಲಾಗಿಲ್ಲ ಎಂಬುದನ್ನು ನೆನಪಿಸುತ್ತಿದ್ದೇನೆ” ಎಂದು ಮಾನ್ಸಿಯಾ ಹೇಳಿದ್ದಾರೆ.

ಇದನ್ನೂ ಓದಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ಇದೇ ವೇಳೆ, ಕೂಡಲಮಾಣಿಕ್ಯಂ ದೇವಸ್ವಂ ಮಂಡಳಿ ಅಧ್ಯಕ್ಷ ಪ್ರದೀಪ್ ಮೆನನ್ ಮಾತನಾಡಿ, ದೇವಸ್ಥಾನದ ಸಂಪ್ರದಾಯದಂತೆ ದೇವಸ್ಥಾನದ ಆವರಣದೊಳಗೆ ಹಿಂದೂಗಳು ಮಾತ್ರ ಕಾರ್ಯಕ್ರಮ ಮಾಡಬಹುದು ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

“10 ದಿನಗಳ ಕಾಲ ದೇವಾಲಯದ ಆವರಣದಲ್ಲಿ ಉತ್ಸವ ನಡೆಯುತ್ತದೆ. ಸುಮಾರು 800 ಕಲಾವಿದರು ವಿವಿಧ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡುತ್ತಾರೆ. ಕಲಾವಿದರು ಹಿಂದೂ ಸಮುದಾಯಕ್ಕೆ ಸೇರಿದ್ದಾರೋ ಇಲ್ಲವೋ ಎಂದು ಕೇಳಲಾಗುತ್ತದೆ. ಆದರೆ ತನಗೆ ಯಾವುದೇ ಧರ್ಮವಿಲ್ಲ ಎಂದು ಮಾನ್ಸಿಯಾ ಲಿಖಿತವಾಗಿ ನೀಡಿದ್ದರು. ಈ ಕಾರಣಕ್ಕಾಗಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಕೇರಳದಿಂದ ವರದಿಯಾಗುತ್ತಿರುವ ಎರಡನೇ ಪ್ರಕರಣ ಇದಾಗಿದೆ. ಈ ಹಿಂದೆ ಇದೇ ಮಾದರಿಯಲ್ಲಿ ಉತ್ತರ ಮಲಬಾರ್‌ನ ದೇವಸ್ಥಾನದ ಆಡಳಿತವು ತನ್ನ ಮಗ ಮುಸ್ಲಿಂ ಮಹಿಳೆಯನ್ನು ಮದುವೆಯಾದ ಆರೋಪದ ಮೇಲೆ ಪೂರಕ್ಕಳಿ ಕಲಾವಿದನಿಗೆ ದೇವಸ್ಥಾನಗಳಲ್ಲಿ ಪ್ರದರ್ಶನ ನೀಡುವುದಕ್ಕೆ ನಿಷೇಧಿಸಿತ್ತು. ಎರಡೂ ಸಂದರ್ಭಗಳಲ್ಲಿ ಅಧಿಕಾರಿಗಳು ದೇವಾಲಯದ ಸಂಪ್ರದಾಯಗಳನ್ನು ಮುರಿಯಲು ಸಾಧ್ಯವಿಲ್ಲ ಎಂದು ಸಮರ್ಥಿಸಿ ಕೊಂಡಿದ್ದಾರೆ.

ಇದನ್ನೂ ಓದಿ: ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವೈದ್ಯರು,ಇತರೆ ವ್ಯಕ್ತಿಗಳು ಹಿಂದೂ ಅಲ್ಲದಿದ್ದರೂ ಅವರಲ್ಲಿ ವ್ಯವಹರಿಸುವುದು ಇಲ್ಲವೇ. ದೇವರಿಗೆ ದೊಡ್ಡ ಕಾಣಿಕೆ ನೀಡುವುದನ್ನು ಬೇಡ ಅನ್ನುವರೆ.

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...