Homeಮುಖಪುಟಕೇರಳ | ಟ್ರಾನ್ಸ್‌ಜೆಂಡರ್‌ಗಳಿಗೆ ಮೀಸಲಾತಿ; 6 ತಿಂಗಳ ಗಡುವು ನೀಡಿದ ಹೈಕೋರ್ಟ್

ಕೇರಳ | ಟ್ರಾನ್ಸ್‌ಜೆಂಡರ್‌ಗಳಿಗೆ ಮೀಸಲಾತಿ; 6 ತಿಂಗಳ ಗಡುವು ನೀಡಿದ ಹೈಕೋರ್ಟ್

- Advertisement -
- Advertisement -

ಆದೇಶ ಮಾಡಿದ ದಿನಾಂಕದಿಂದ ಆರು ತಿಂಗಳೊಳಗೆ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳಿಗೆ ಮೀಸಲಾತಿಯನ್ನು ಜಾರಿಗೆ ತರುವಂತೆ ಕೇರಳ ಹೈಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪಿನಲ್ಲಿ ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಎ. ಮುಹಮ್ಮದ್ ಮುಸ್ತಾಕ್ ಮತ್ತು ಪಿ. ಕೃಷ್ಣ ಕುಮಾರ್ ಅವರ ಪೀಠವು ನವೆಂಬರ್ 28, 2024 ರಂದು ಈ ಆದೇಶ ಹೊರಡಿಸಿದ್ದು, ಅದನ್ನು ಜನವರಿ 14, 2025 ರಂದು ಹೈಕೋರ್ಟ್‌ನ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲಾಗಿದೆ.

ಟ್ರಾನ್ಸ್‌ಜೆಂಡರ್ ಮಹಿಳೆ ಅನೀರಾ ಕಬೀರ್ ಅವರು ಕೇರಳ ಸಾರ್ವಜನಿಕ ಸೇವಾ ಆಯೋಗವು ಇನ್ನೂ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಮೀಸಲಾತಿಯನ್ನು ಜಾರಿಗೆ ತಂದಿಲ್ಲ ಎಂದು ಎತ್ತಿ ತೋರಿಸಿ ಸಲ್ಲಿಸಿದ ಅರ್ಜಿಯನ್ನು ಅನುಸರಿಸಿ ಈ ಆದೇಶವನ್ನು ಹೊರಡಿಸಲಾಗಿದೆ. ಶಿಕ್ಷಣ ಮತ್ತು ಸಾರ್ವಜನಿಕ ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ನ್ಯಾಯಾಲಯವನ್ನು ಅವರು ಕೋರಿದ್ದರು.

ರಾಜ್ಯ ಸರ್ಕಾರವು 2015 ರಿಂದ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳಿಗೆ ಸಹಾಯ ಮಾಡಲು ವಿವಿಧ ಕ್ರಮಗಳನ್ನು ಪರಿಚಯಿಸಿದ್ದರೂ, ಅವರಿಗೆ ಮೀಸಲಾತಿಯನ್ನು ಖಚಿತಪಡಿಸಿಕೊಳ್ಳಲು ನೀತಿಗಳನ್ನು ಅಭಿವೃದ್ಧಿಪಡಿಸುವಲ್ಲಿ ವಿಫಲವಾಗಿದೆ ಎಂದು ಪೀಠವು ಹೇಳಿದೆ. ನ್ಯಾಯಾಲಯವು ಸಾಮಾನ್ಯವಾಗಿ ನೀತಿ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲವಾದರೂ, ಮೂಲಭೂತ ಹಕ್ಕುಗಳನ್ನು ಒಳಗೊಂಡ ಪ್ರಕರಣಗಳಲ್ಲಿ ಅದರ ನ್ಯಾಯಾಂಗ ಮಧ್ಯಪ್ರವೇಶ ಕಡ್ಡಾಯವಾಗುತ್ತದೆ ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸ್ಪಷ್ಟ ಕಾನೂನು ಮತ್ತು ಸಾಂವಿಧಾನಿಕ ಬಾಧ್ಯತೆಗಳ ಹೊರತಾಗಿಯೂ, ಸರ್ಕಾರವು ನಿರಂತರವಾಗಿ ನಿಷ್ಕ್ರಿಯವಾಗಿರುವುದರಿಂದ, ಈ ನ್ಯಾಯಾಲಯವು ಸಾಂವಿಧಾನಿಕ ಮತ್ತು ಕಾನೂನು ಆದೇಶದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಸೂಕ್ತ ನಿರ್ದೇಶನಗಳನ್ನು ನೀಡುವುದನ್ನು ಪರಿಗಣಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ” ಎಂದು ನಲ್ಸಾ vs ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿ ಪೀಠ ಹೇಳಿದೆ.

2014ರ ಸುಪ್ರಿಂಕೋರ್ಟ್‌ನ ಈ ತೀರ್ಪು ವ್ಯಕ್ತಿಗಳಿಗೆ ತಮ್ಮ ಲಿಂಗವನ್ನು ಸ್ವಯಂ ಗುರುತಿಸಿಕೊಳ್ಳುವ ಹಕ್ಕನ್ನು ನೀಡಿತು. ಜೊತೆಗೆ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಅವರಿಗೆ ಮೀಸಲಾತಿಗಳನ್ನು ಒದಗಿಸುವ ಆದೇಶ ಸೇರಿದಂತೆ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಕಲ್ಯಾಣಕ್ಕಾಗಿ ಹಲವಾರು ನಿರ್ದೇಶನಗಳನ್ನು ನೀಡಿತ್ತು.

ಕೇರಳದ ಯಾವುದೇ ಸಾರ್ವಜನಿಕ ಉದ್ಯೋಗ ಅಧಿಸೂಚನೆಗಳು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಮೀಸಲಾತಿಯನ್ನು ಉಲ್ಲೇಖಿಸಿಲ್ಲ ಎಂದು ಹೈಕೋರ್ಟ್ ಪೀಠ ಇದೇ ವೇಳೆ ಹೇಳಿದೆ. ಕೇರಳ

“ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ಪ್ರಕರಣದಲ್ಲಿ (ಸುಪ್ರಾ) ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ, ಸರ್ಕಾರವು ಅವರಿಗೆ ಮೀಸಲಾತಿ ನೀಡುವಲ್ಲಿ ಅವರ ಹಕ್ಕುಗಳ ಅನುಷ್ಠಾನವನ್ನು ವಿಳಂಬ ಮಾಡಲು ಸಾಧ್ಯವಿಲ್ಲ. ಅಂತಹ ಸಂದರ್ಭಗಳಲ್ಲಿ, ಈ ತೀರ್ಪಿನ ಪ್ರತಿಯನ್ನು ಸ್ವೀಕರಿಸಿದ ದಿನಾಂಕದಿಂದ ಆರು ತಿಂಗಳೊಳಗೆ ಟ್ರಾನ್ಸ್‌ಜೆಂಡರ್‌ಗಳಿಗೆ (ವ್ಯಕ್ತಿಗಳಿಗೆ) ಮೀಸಲಾತಿಯನ್ನು ಒದಗಿಸುವ ಕ್ರಮಗಳನ್ನು ಸರ್ಕಾರ ಜಾರಿಗೆ ತರಬೇಕು ಎಂದು ನಾವು ಭಾವಿಸುತ್ತೇವೆ” ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಇದನ್ನೂಓದಿ:  ಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು

ಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...