Homeಮುಖಪುಟಕೇರಳ: ರೈಲಿಗೆ ಬೆಂಕಿ ಹಚ್ಚಿದ್ದ ಆರೋಪಿ ವಿರುದ್ಧ ಯುಎಪಿಎ ಪ್ರಕರಣ ದಾಖಲು

ಕೇರಳ: ರೈಲಿಗೆ ಬೆಂಕಿ ಹಚ್ಚಿದ್ದ ಆರೋಪಿ ವಿರುದ್ಧ ಯುಎಪಿಎ ಪ್ರಕರಣ ದಾಖಲು

- Advertisement -
- Advertisement -

ಕೇರಳದ ಕೋಝಿಕ್ಕೋಡ್‌ನಲ್ಲಿ ರೈಲಿಗೆ ಬೆಂಕಿ ಹಚ್ಚಿ ಮೂವರನ್ನು ಕೊಂದು ಎಂಟು ಮಂದಿಗೆ ಸುಟ್ಟ ಗಾಯಗಳಾಗಲು ಕಾರಣವಾದ ಆರೋಪಿಯ ವಿರುದ್ಧ ಕೇರಳ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಿದ್ದಾರೆ.

ಎಪ್ರಿಲ್ 2ರಂದು ಆಲಪ್ಪುಳ-ಕಣ್ಣೂರು ಎಕ್ಸ್‌ಪ್ರೆಸ್‌ನ ಕೋಚ್ ಸಂಖ್ಯೆ ಡಿ1ಗೆ ಬೆಂಕಿ ಹತ್ತಿಸುವ ದ್ರವವನ್ನು ಸಿಂಪಡಿಸಿ ಬೆಂಕಿ ಹಚ್ಚಿದ ಆರೋಪದ ಮೇಲೆ ದೆಹಲಿಯ ನಿವಾಸಿ ಶಾರುಖ್ ಸೈಫಿ ಎಂಬಾತನನ್ನು ಏಪ್ರಿಲ್ 4ರಂದು ಬಂಧಿಸಲಾಯಿತು. ಸೈಫಿಯನ್ನು ಏಪ್ರಿಲ್ 5ರಂದು ಮಹಾರಾಷ್ಟ್ರದ ರತ್ನಗಿರಿ ನಗರದಲ್ಲಿ ಪೊಲೀಸರು ವಶಕ್ಕೆ ಪಡೆದರು.

ಜೀವಹಾನಿಗೆ ಕಾರಣವಾಗುವ ಭಯೋತ್ಪಾದಕ ಕೃತ್ಯಗಳಿಗೆ ಸಂಬಂಧಿಸಿದಂತೆ ಯುಎಪಿಎಯ ಸೆಕ್ಷನ್ 16 ರ ಅಡಿಯಲ್ಲಿ ಪ್ರಕರಣವನ್ನು ಗುರುತಿಸಲಾಗಿದೆ. ಸೈಫಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಯಾಗುವಂತೆ ಪ್ರಕರಣ ದಾಖಲಾಗಿದೆ ಎಂದು ಕೋಝಿಕ್ಕೋಡ್ ನಗರ ಪೊಲೀಸ್ ಕಮಿಷನರ್ ರಾಜ್‌ಪಾಲ್ ಮೀನಾ ಭಾನುವಾರ ಹೇಳಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಇದನ್ನೂ ಓದಿರಿ: ಪುಲ್ವಾಮಾ ದಾಳಿ ಕುರಿತ ಸತ್ಯಪಾಲ್ ಹೇಳಿಕೆಗೆ ಪಾಕಿಸ್ತಾನ ಪ್ರತಿಕ್ರಿಯೆ

ಈ ಹಿಂದೆ ಪೊಲೀಸರು ಸೈಫಿ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ), 326ಎ (ಆಸಿಡ್ ಇತ್ಯಾದಿಗಳ ಬಳಕೆಯಿಂದ ಘೋರವಾದ ಗಾಯವನ್ನು ಉಂಟುಮಾಡುವುದು), 436 (ಬೆಂಕಿ ಮತ್ತು ಸ್ಫೋಟಕ ವಸ್ತುಗಳಿಂದ ಕಿಡಿಗೇಡಿತನ), 438 (ಬೆಂಕಿ ಅಥವಾ ಸ್ಫೋಟಕಗಳಿಂದ ದುಷ್ಕೃತ್ಯ ಎಸಗುವ ಪ್ರಯತ್ನ) ಮತ್ತು ಭಾರತೀಯ ರೈಲ್ವೇ ಕಾಯಿದೆಯ ಸೆಕ್ಷನ್ 151 (ರೈಲ್ವೆ ಆಸ್ತಿ ಹಾನಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಹೀಗೆ ಬೆಂಕಿ ಇಡುವಲ್ಲಿ ಭಯೋತ್ಪಾದನೆಯ ಉದ್ದೇಶವಿದೆ” ಎಂದು ನ್ಯಾಯಾಲಯಕ್ಕೆ ಕೇರಳ ಪೊಲೀಸರ ವಿಶೇಷ ತನಿಖಾ ತಂಡವು ವರದಿ ಸಲ್ಲಿಸಿದ ನಂತರ ಯುಎಪಿಎ ಅಡಿಯಲ್ಲಿ ಆರೋಪಗಳನ್ನು ಸೇರಿಸಲಾಯಿತು.

ಈ ಕೃತ್ಯದ ಹಿಂದೆ ಸೈಫಿಯ ಉದ್ದೇಶವೇನಿತ್ತು ಎಂಬುದರ ಕುರಿತು ಪೊಲೀಸರು ಇನ್ನೂ ಹೇಳಿಕೆಯನ್ನು ನೀಡಿಲ್ಲ. ಈತ ಕಾರ್ಪೆಂಟರ್ ಆಗಿ ಉತ್ತರ ಪ್ರದೇಶದ ನೋಯ್ಡಾದಲ್ಲಿದ್ದ. ನವದೆಹಲಿಯ ಶಾಹೀನ್ ಬಾಗ್‌ನಲ್ಲಿ ವಾಸವಿದ್ದ. ಈ ಪ್ರದೇಶಗಳಿಗೂ ಈತನ ಕೃತ್ಯಕ್ಕೂ ಏನಾದರೂ ಸಂಪರ್ಕವಿದೆಯೇ ಎಂದು ತಿಳಿಯಲು ಆರೋಪಿಯ ಸಾಮಾಜಿಕ ಮಾಧ್ಯಮ ಚಟುವಟಿಕೆಗಳು ಮತ್ತು ಫೋನ್‌ ಕರೆ ದಾಖಲೆಗಳನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...