Homeಮುಖಪುಟಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

- Advertisement -
- Advertisement -

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್‌) ಕೊನೆಗೊಳಿಸಿದೆ.

56 ಸದಸ್ಯರ ಕೌನ್ಸಿಲ್‌ನಲ್ಲಿ ಯುಡಿಎಫ್ 27 ಸ್ಥಾನಗಳನ್ನು ಗೆದ್ದು, ಕಾರ್ಪೊರೇಷನ್ ಮೇಲೆ ಹಿಡಿತ ಸಾಧಿಸಿತು. ಈ ಮೂಲಕ ಕೇರಳದಲ್ಲಿ ಪ್ರಮುಖ ರಾಜಕೀಯ ಪುನರಾಗಮನವನ್ನು ಗುರುತಿಸಿದೆ. ಎಲ್‌ಡಿಎಫ್ ಇಲ್ಲಿ ಬಲವಾದ ಬಹುಮತವನ್ನು ಹೊಂದಿದ್ದ 2020 ರ ಚುನಾವಣೆಗಳಿಗಿಂತ ಸಾಕಷ್ಟು ಹಿಮ್ಮುಖ ಫಲಿತಾಂಶವಾಗಿದೆ. ಈ ಫಲಿತಾಂಶವು ನಗರ ಮತದಾರರ ಮನಸ್ಥಿತಿಯಲ್ಲಿ ಸ್ಪಷ್ಟ ಬದಲಾವಣೆಯನ್ನು ಸೂಚಿಸುತ್ತದೆ ಎನ್ನಲಾಗಿದ್ದು, ಮುಂದಿನ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಯುಡಿಎಫ್‌ಗೆ ದೊಡ್ಡ ರಾಜಕೀಯ ಉತ್ತೇಜನ ನೀಡುತ್ತದೆ.

ಈ ಫಲಿತಾಂಶವು ಕೊಲ್ಲಂನ ರಾಜಕೀಯ ಭೂದೃಶ್ಯದಲ್ಲಿ ಪ್ರಮುಖ ಬದಲಾವಣೆಯನ್ನು ತೋರಿಸುತ್ತದೆ. ಯುಡಿಎಫ್ ಅತಿದೊಡ್ಡ ಲಾಭ ಗಳಿಸಿದ ಪಕ್ಷವಾಗಿ ಹೊರಹೊಮ್ಮಿದರೂ, ಎಲ್‌ಡಿಎಫ್ ಭಾರೀ ಹಿನ್ನಡೆಯನ್ನು ಅನುಭವಿಸಿತು. ಕೆಲವೆಡೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಸಹ ಬಲವಾದ ನೆಲೆ ಗಳಿಸಿತು. 2020 ರಲ್ಲಿ 39 ಸ್ಥಾನಗಳನ್ನು ಹೊಂದಿದ್ದ ಎಲ್‌ಡಿಎಫ್‌ನ ಸ್ಥಾನಗಳ ಸಂಖ್ಯೆ 2025 ರಲ್ಲಿ ಕೇವಲ 16 ಕ್ಕೆ ಕುಸಿದಿದೆ. ಇದಕ್ಕೆ ವ್ಯತಿರಿಕ್ತವಾಗಿ, ಯುಡಿಎಫ್ ಕೇವಲ 9 ಸ್ಥಾನಗಳಿಂದ 27 ಕ್ಕೆ ಜಿಗಿದಿದೆ. ಎನ್‌ಡಿಎ ತನ್ನ ಅಸ್ತಿತ್ವವನ್ನು ದ್ವಿಗುಣಗೊಳಿಸಿದೆ, 12 ಸ್ಥಾನಗಳನ್ನು ಗೆದ್ದಿದೆ.

ವಡಕ್ಕುಂಭಾಗಂನಿಂದ ಮಾಜಿ ಮೇಯರ್‌ಗಳಾದ ಸಿಪಿಐ ನಾಯಕ ಹನಿ ಬೆಂಜಮಿನ್ ಮತ್ತು ಉಲಿಯಕೋವಿಲ್‌ನಿಂದ ಸಿಪಿಐ(ಎಂ) ನಾಯಕ ವಿ ರಾಜೇಂದ್ರಬಾಬು ಅವರ ಸೋಲು ಕಾರ್ಪೊರೇಷನ್‌ನಲ್ಲಿ ಬಲವಾದ ಆಡಳಿತ ವಿರೋಧಿ ಅಲೆಯನ್ನು ಎತ್ತಿ ತೋರಿಸಿದೆ. ಫಲಿತಾಂಶಗಳು ಎಲ್‌ಡಿಎಫ್ ಆಡಳಿತದ ಬಗ್ಗೆ, ವಿಶೇಷವಾಗಿ ನಾಗರಿಕ ಸಮಸ್ಯೆಗಳ ಬಗ್ಗೆ ವ್ಯಾಪಕ ಅಸಮಾಧಾನವನ್ನು ಸೂಚಿಸುತ್ತವೆ.

ಕೊಲ್ಲಂ ಕಾರ್ಪೊರೇಷನ್ ರಾಜಕೀಯದಲ್ಲಿ ಎನ್‌ಡಿಎ ಒಂದು ಮಹತ್ವದ ಶಕ್ತಿಯಾಗಿದೆ ಎಂದು ಚುನಾವಣೆಗಳು ದೃಢಪಡಿಸಿದವು. 12 ಸ್ಥಾನಗಳೊಂದಿಗೆ, ಎನ್‌ಡಿಎ ಎಲ್‌ಡಿಎಫ್‌ಗಿಂತ ಕೇವಲ ನಾಲ್ಕು ಸ್ಥಾನಗಳನ್ನು ಕಡಿಮೆ ಪಡೆದುಕೊಂಡಿತು. ಇದು ಸ್ಪಷ್ಟವಾದ ತ್ರಕೋನ ರಾಜಕೀಯ ಸ್ಪರ್ಧೆಯನ್ನು ಸೃಷ್ಟಿಸಿತು. ಎಣಿಕೆಯ ಆರಂಭಿಕ ಗಂಟೆಗಳಲ್ಲಿ, ಎನ್‌ಡಿಎ ಒಟ್ಟಾರೆಯಾಗಿ ಎರಡನೇ ಸ್ಥಾನದಲ್ಲಿತ್ತು, ಅದರ ಏರಿಕೆ ಮತ್ತು ಎಲ್‌ಡಿಎಫ್‌ನ ಕುಸಿತ ಎರಡನ್ನೂ ಒತ್ತಿಹೇಳಿತು.

ತಿರುವನಂತಪುರಂ ಕಾರ್ಪೊರೇಷನ್‌ನಲ್ಲಿ ಬಿಜೆಪಿ ಪ್ರಾಬಲ್ಯ

ತಿರುವನಂತಪುರಂ ಕಾರ್ಪೊರೇಷನ್‌ನಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟವು 101 ವಾರ್ಡ್‌ಗಳಲ್ಲಿ 50 ಅನ್ನು ಗೆದ್ದು 45 ವರ್ಷಗಳ ಎಡ ನಿಯಂತ್ರಣವನ್ನು ಕೊನೆಗೊಳಿಸಿತು. ಎಲ್‌ಡಿಎಫ್ 29 ವಾರ್ಡ್‌ಗಳನ್ನು ಗೆದ್ದುಕೊಂಡಿತು, ಯುಡಿಎಫ್ 19 ವಾರ್ಡ್‌ಗಳನ್ನು ಗೆದ್ದಿತು. ಇಬ್ಬರು ಸ್ವತಂತ್ರ ಅಭ್ಯರ್ಥಿಗಳು ಜಯಶೀಲರಾಗಿದ್ದಾರೆ. ಎನ್‌ಡಿಎ ಪಾಲಕ್ಕಾಡ್ ಪುರಸಭೆಯನ್ನು ಉಳಿಸಿಕೊಂಡಿತು, ಕಾಂಗ್ರೆಸ್‌ನಿಂದ ತ್ರಿಪ್ಪುನಿತುರವನ್ನು ಗೆದ್ದಿತು. ತ್ರಿಶೂರ್ ಜಿಲ್ಲೆಯ ಹಲವಾರು ಪುರಸಭೆಗಳಲ್ಲಿ ಗಮನಾರ್ಹ ಲಾಭ ಗಳಿಸಿತು.

ರಾಜ್ಯ ಚುನಾವಣಾ ಆಯೋಗದ ಪ್ರಕಾರ, ಎನ್‌ಡಿಎ ಕೇರಳದಾದ್ಯಂತ 1,402 ಗ್ರಾಮ ಪಂಚಾಯತ್ ವಾರ್ಡ್‌ಗಳನ್ನು ಮತ್ತು 53 ಬ್ಲಾಕ್ ಪಂಚಾಯತ್ ವಾರ್ಡ್‌ಗಳನ್ನು ಗೆದ್ದಿದೆ. ಅದರ ಗೆಲುವುಗಳು ಕೊಲ್ಲಂ ಕಾರ್ಪೊರೇಷನ್‌ನಲ್ಲಿ 11 ವಾರ್ಡ್‌ಗಳು, ಕೋಝಿಕ್ಕೋಡ್ ಕಾರ್ಪೊರೇಷನ್‌ನಲ್ಲಿ 13, ಕಣ್ಣೂರು ಕಾರ್ಪೊರೇಷನ್‌ನಲ್ಲಿ ನಾಲ್ಕು ಮತ್ತು ಕೊಚ್ಚಿ ಕಾರ್ಪೊರೇಷನ್‌ನಲ್ಲಿ ಆರು ವಾರ್ಡ್‌ಗಳನ್ನು ಒಳಗೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...