Homeಮುಖಪುಟಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

- Advertisement -
- Advertisement -

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್‌) ಕೊನೆಗೊಳಿಸಿದೆ.

56 ಸದಸ್ಯರ ಕೌನ್ಸಿಲ್‌ನಲ್ಲಿ ಯುಡಿಎಫ್ 27 ಸ್ಥಾನಗಳನ್ನು ಗೆದ್ದು, ಕಾರ್ಪೊರೇಷನ್ ಮೇಲೆ ಹಿಡಿತ ಸಾಧಿಸಿತು. ಈ ಮೂಲಕ ಕೇರಳದಲ್ಲಿ ಪ್ರಮುಖ ರಾಜಕೀಯ ಪುನರಾಗಮನವನ್ನು ಗುರುತಿಸಿದೆ. ಎಲ್‌ಡಿಎಫ್ ಇಲ್ಲಿ ಬಲವಾದ ಬಹುಮತವನ್ನು ಹೊಂದಿದ್ದ 2020 ರ ಚುನಾವಣೆಗಳಿಗಿಂತ ಸಾಕಷ್ಟು ಹಿಮ್ಮುಖ ಫಲಿತಾಂಶವಾಗಿದೆ. ಈ ಫಲಿತಾಂಶವು ನಗರ ಮತದಾರರ ಮನಸ್ಥಿತಿಯಲ್ಲಿ ಸ್ಪಷ್ಟ ಬದಲಾವಣೆಯನ್ನು ಸೂಚಿಸುತ್ತದೆ ಎನ್ನಲಾಗಿದ್ದು, ಮುಂದಿನ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಯುಡಿಎಫ್‌ಗೆ ದೊಡ್ಡ ರಾಜಕೀಯ ಉತ್ತೇಜನ ನೀಡುತ್ತದೆ.

ಈ ಫಲಿತಾಂಶವು ಕೊಲ್ಲಂನ ರಾಜಕೀಯ ಭೂದೃಶ್ಯದಲ್ಲಿ ಪ್ರಮುಖ ಬದಲಾವಣೆಯನ್ನು ತೋರಿಸುತ್ತದೆ. ಯುಡಿಎಫ್ ಅತಿದೊಡ್ಡ ಲಾಭ ಗಳಿಸಿದ ಪಕ್ಷವಾಗಿ ಹೊರಹೊಮ್ಮಿದರೂ, ಎಲ್‌ಡಿಎಫ್ ಭಾರೀ ಹಿನ್ನಡೆಯನ್ನು ಅನುಭವಿಸಿತು. ಕೆಲವೆಡೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಸಹ ಬಲವಾದ ನೆಲೆ ಗಳಿಸಿತು. 2020 ರಲ್ಲಿ 39 ಸ್ಥಾನಗಳನ್ನು ಹೊಂದಿದ್ದ ಎಲ್‌ಡಿಎಫ್‌ನ ಸ್ಥಾನಗಳ ಸಂಖ್ಯೆ 2025 ರಲ್ಲಿ ಕೇವಲ 16 ಕ್ಕೆ ಕುಸಿದಿದೆ. ಇದಕ್ಕೆ ವ್ಯತಿರಿಕ್ತವಾಗಿ, ಯುಡಿಎಫ್ ಕೇವಲ 9 ಸ್ಥಾನಗಳಿಂದ 27 ಕ್ಕೆ ಜಿಗಿದಿದೆ. ಎನ್‌ಡಿಎ ತನ್ನ ಅಸ್ತಿತ್ವವನ್ನು ದ್ವಿಗುಣಗೊಳಿಸಿದೆ, 12 ಸ್ಥಾನಗಳನ್ನು ಗೆದ್ದಿದೆ.

ವಡಕ್ಕುಂಭಾಗಂನಿಂದ ಮಾಜಿ ಮೇಯರ್‌ಗಳಾದ ಸಿಪಿಐ ನಾಯಕ ಹನಿ ಬೆಂಜಮಿನ್ ಮತ್ತು ಉಲಿಯಕೋವಿಲ್‌ನಿಂದ ಸಿಪಿಐ(ಎಂ) ನಾಯಕ ವಿ ರಾಜೇಂದ್ರಬಾಬು ಅವರ ಸೋಲು ಕಾರ್ಪೊರೇಷನ್‌ನಲ್ಲಿ ಬಲವಾದ ಆಡಳಿತ ವಿರೋಧಿ ಅಲೆಯನ್ನು ಎತ್ತಿ ತೋರಿಸಿದೆ. ಫಲಿತಾಂಶಗಳು ಎಲ್‌ಡಿಎಫ್ ಆಡಳಿತದ ಬಗ್ಗೆ, ವಿಶೇಷವಾಗಿ ನಾಗರಿಕ ಸಮಸ್ಯೆಗಳ ಬಗ್ಗೆ ವ್ಯಾಪಕ ಅಸಮಾಧಾನವನ್ನು ಸೂಚಿಸುತ್ತವೆ.

ಕೊಲ್ಲಂ ಕಾರ್ಪೊರೇಷನ್ ರಾಜಕೀಯದಲ್ಲಿ ಎನ್‌ಡಿಎ ಒಂದು ಮಹತ್ವದ ಶಕ್ತಿಯಾಗಿದೆ ಎಂದು ಚುನಾವಣೆಗಳು ದೃಢಪಡಿಸಿದವು. 12 ಸ್ಥಾನಗಳೊಂದಿಗೆ, ಎನ್‌ಡಿಎ ಎಲ್‌ಡಿಎಫ್‌ಗಿಂತ ಕೇವಲ ನಾಲ್ಕು ಸ್ಥಾನಗಳನ್ನು ಕಡಿಮೆ ಪಡೆದುಕೊಂಡಿತು. ಇದು ಸ್ಪಷ್ಟವಾದ ತ್ರಕೋನ ರಾಜಕೀಯ ಸ್ಪರ್ಧೆಯನ್ನು ಸೃಷ್ಟಿಸಿತು. ಎಣಿಕೆಯ ಆರಂಭಿಕ ಗಂಟೆಗಳಲ್ಲಿ, ಎನ್‌ಡಿಎ ಒಟ್ಟಾರೆಯಾಗಿ ಎರಡನೇ ಸ್ಥಾನದಲ್ಲಿತ್ತು, ಅದರ ಏರಿಕೆ ಮತ್ತು ಎಲ್‌ಡಿಎಫ್‌ನ ಕುಸಿತ ಎರಡನ್ನೂ ಒತ್ತಿಹೇಳಿತು.

ತಿರುವನಂತಪುರಂ ಕಾರ್ಪೊರೇಷನ್‌ನಲ್ಲಿ ಬಿಜೆಪಿ ಪ್ರಾಬಲ್ಯ

ತಿರುವನಂತಪುರಂ ಕಾರ್ಪೊರೇಷನ್‌ನಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟವು 101 ವಾರ್ಡ್‌ಗಳಲ್ಲಿ 50 ಅನ್ನು ಗೆದ್ದು 45 ವರ್ಷಗಳ ಎಡ ನಿಯಂತ್ರಣವನ್ನು ಕೊನೆಗೊಳಿಸಿತು. ಎಲ್‌ಡಿಎಫ್ 29 ವಾರ್ಡ್‌ಗಳನ್ನು ಗೆದ್ದುಕೊಂಡಿತು, ಯುಡಿಎಫ್ 19 ವಾರ್ಡ್‌ಗಳನ್ನು ಗೆದ್ದಿತು. ಇಬ್ಬರು ಸ್ವತಂತ್ರ ಅಭ್ಯರ್ಥಿಗಳು ಜಯಶೀಲರಾಗಿದ್ದಾರೆ. ಎನ್‌ಡಿಎ ಪಾಲಕ್ಕಾಡ್ ಪುರಸಭೆಯನ್ನು ಉಳಿಸಿಕೊಂಡಿತು, ಕಾಂಗ್ರೆಸ್‌ನಿಂದ ತ್ರಿಪ್ಪುನಿತುರವನ್ನು ಗೆದ್ದಿತು. ತ್ರಿಶೂರ್ ಜಿಲ್ಲೆಯ ಹಲವಾರು ಪುರಸಭೆಗಳಲ್ಲಿ ಗಮನಾರ್ಹ ಲಾಭ ಗಳಿಸಿತು.

ರಾಜ್ಯ ಚುನಾವಣಾ ಆಯೋಗದ ಪ್ರಕಾರ, ಎನ್‌ಡಿಎ ಕೇರಳದಾದ್ಯಂತ 1,402 ಗ್ರಾಮ ಪಂಚಾಯತ್ ವಾರ್ಡ್‌ಗಳನ್ನು ಮತ್ತು 53 ಬ್ಲಾಕ್ ಪಂಚಾಯತ್ ವಾರ್ಡ್‌ಗಳನ್ನು ಗೆದ್ದಿದೆ. ಅದರ ಗೆಲುವುಗಳು ಕೊಲ್ಲಂ ಕಾರ್ಪೊರೇಷನ್‌ನಲ್ಲಿ 11 ವಾರ್ಡ್‌ಗಳು, ಕೋಝಿಕ್ಕೋಡ್ ಕಾರ್ಪೊರೇಷನ್‌ನಲ್ಲಿ 13, ಕಣ್ಣೂರು ಕಾರ್ಪೊರೇಷನ್‌ನಲ್ಲಿ ನಾಲ್ಕು ಮತ್ತು ಕೊಚ್ಚಿ ಕಾರ್ಪೊರೇಷನ್‌ನಲ್ಲಿ ಆರು ವಾರ್ಡ್‌ಗಳನ್ನು ಒಳಗೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...