Homeಮುಖಪುಟಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

- Advertisement -
- Advertisement -

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್‌) ಕೊನೆಗೊಳಿಸಿದೆ.

56 ಸದಸ್ಯರ ಕೌನ್ಸಿಲ್‌ನಲ್ಲಿ ಯುಡಿಎಫ್ 27 ಸ್ಥಾನಗಳನ್ನು ಗೆದ್ದು, ಕಾರ್ಪೊರೇಷನ್ ಮೇಲೆ ಹಿಡಿತ ಸಾಧಿಸಿತು. ಈ ಮೂಲಕ ಕೇರಳದಲ್ಲಿ ಪ್ರಮುಖ ರಾಜಕೀಯ ಪುನರಾಗಮನವನ್ನು ಗುರುತಿಸಿದೆ. ಎಲ್‌ಡಿಎಫ್ ಇಲ್ಲಿ ಬಲವಾದ ಬಹುಮತವನ್ನು ಹೊಂದಿದ್ದ 2020 ರ ಚುನಾವಣೆಗಳಿಗಿಂತ ಸಾಕಷ್ಟು ಹಿಮ್ಮುಖ ಫಲಿತಾಂಶವಾಗಿದೆ. ಈ ಫಲಿತಾಂಶವು ನಗರ ಮತದಾರರ ಮನಸ್ಥಿತಿಯಲ್ಲಿ ಸ್ಪಷ್ಟ ಬದಲಾವಣೆಯನ್ನು ಸೂಚಿಸುತ್ತದೆ ಎನ್ನಲಾಗಿದ್ದು, ಮುಂದಿನ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಯುಡಿಎಫ್‌ಗೆ ದೊಡ್ಡ ರಾಜಕೀಯ ಉತ್ತೇಜನ ನೀಡುತ್ತದೆ.

ಈ ಫಲಿತಾಂಶವು ಕೊಲ್ಲಂನ ರಾಜಕೀಯ ಭೂದೃಶ್ಯದಲ್ಲಿ ಪ್ರಮುಖ ಬದಲಾವಣೆಯನ್ನು ತೋರಿಸುತ್ತದೆ. ಯುಡಿಎಫ್ ಅತಿದೊಡ್ಡ ಲಾಭ ಗಳಿಸಿದ ಪಕ್ಷವಾಗಿ ಹೊರಹೊಮ್ಮಿದರೂ, ಎಲ್‌ಡಿಎಫ್ ಭಾರೀ ಹಿನ್ನಡೆಯನ್ನು ಅನುಭವಿಸಿತು. ಕೆಲವೆಡೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಸಹ ಬಲವಾದ ನೆಲೆ ಗಳಿಸಿತು. 2020 ರಲ್ಲಿ 39 ಸ್ಥಾನಗಳನ್ನು ಹೊಂದಿದ್ದ ಎಲ್‌ಡಿಎಫ್‌ನ ಸ್ಥಾನಗಳ ಸಂಖ್ಯೆ 2025 ರಲ್ಲಿ ಕೇವಲ 16 ಕ್ಕೆ ಕುಸಿದಿದೆ. ಇದಕ್ಕೆ ವ್ಯತಿರಿಕ್ತವಾಗಿ, ಯುಡಿಎಫ್ ಕೇವಲ 9 ಸ್ಥಾನಗಳಿಂದ 27 ಕ್ಕೆ ಜಿಗಿದಿದೆ. ಎನ್‌ಡಿಎ ತನ್ನ ಅಸ್ತಿತ್ವವನ್ನು ದ್ವಿಗುಣಗೊಳಿಸಿದೆ, 12 ಸ್ಥಾನಗಳನ್ನು ಗೆದ್ದಿದೆ.

ವಡಕ್ಕುಂಭಾಗಂನಿಂದ ಮಾಜಿ ಮೇಯರ್‌ಗಳಾದ ಸಿಪಿಐ ನಾಯಕ ಹನಿ ಬೆಂಜಮಿನ್ ಮತ್ತು ಉಲಿಯಕೋವಿಲ್‌ನಿಂದ ಸಿಪಿಐ(ಎಂ) ನಾಯಕ ವಿ ರಾಜೇಂದ್ರಬಾಬು ಅವರ ಸೋಲು ಕಾರ್ಪೊರೇಷನ್‌ನಲ್ಲಿ ಬಲವಾದ ಆಡಳಿತ ವಿರೋಧಿ ಅಲೆಯನ್ನು ಎತ್ತಿ ತೋರಿಸಿದೆ. ಫಲಿತಾಂಶಗಳು ಎಲ್‌ಡಿಎಫ್ ಆಡಳಿತದ ಬಗ್ಗೆ, ವಿಶೇಷವಾಗಿ ನಾಗರಿಕ ಸಮಸ್ಯೆಗಳ ಬಗ್ಗೆ ವ್ಯಾಪಕ ಅಸಮಾಧಾನವನ್ನು ಸೂಚಿಸುತ್ತವೆ.

ಕೊಲ್ಲಂ ಕಾರ್ಪೊರೇಷನ್ ರಾಜಕೀಯದಲ್ಲಿ ಎನ್‌ಡಿಎ ಒಂದು ಮಹತ್ವದ ಶಕ್ತಿಯಾಗಿದೆ ಎಂದು ಚುನಾವಣೆಗಳು ದೃಢಪಡಿಸಿದವು. 12 ಸ್ಥಾನಗಳೊಂದಿಗೆ, ಎನ್‌ಡಿಎ ಎಲ್‌ಡಿಎಫ್‌ಗಿಂತ ಕೇವಲ ನಾಲ್ಕು ಸ್ಥಾನಗಳನ್ನು ಕಡಿಮೆ ಪಡೆದುಕೊಂಡಿತು. ಇದು ಸ್ಪಷ್ಟವಾದ ತ್ರಕೋನ ರಾಜಕೀಯ ಸ್ಪರ್ಧೆಯನ್ನು ಸೃಷ್ಟಿಸಿತು. ಎಣಿಕೆಯ ಆರಂಭಿಕ ಗಂಟೆಗಳಲ್ಲಿ, ಎನ್‌ಡಿಎ ಒಟ್ಟಾರೆಯಾಗಿ ಎರಡನೇ ಸ್ಥಾನದಲ್ಲಿತ್ತು, ಅದರ ಏರಿಕೆ ಮತ್ತು ಎಲ್‌ಡಿಎಫ್‌ನ ಕುಸಿತ ಎರಡನ್ನೂ ಒತ್ತಿಹೇಳಿತು.

ತಿರುವನಂತಪುರಂ ಕಾರ್ಪೊರೇಷನ್‌ನಲ್ಲಿ ಬಿಜೆಪಿ ಪ್ರಾಬಲ್ಯ

ತಿರುವನಂತಪುರಂ ಕಾರ್ಪೊರೇಷನ್‌ನಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟವು 101 ವಾರ್ಡ್‌ಗಳಲ್ಲಿ 50 ಅನ್ನು ಗೆದ್ದು 45 ವರ್ಷಗಳ ಎಡ ನಿಯಂತ್ರಣವನ್ನು ಕೊನೆಗೊಳಿಸಿತು. ಎಲ್‌ಡಿಎಫ್ 29 ವಾರ್ಡ್‌ಗಳನ್ನು ಗೆದ್ದುಕೊಂಡಿತು, ಯುಡಿಎಫ್ 19 ವಾರ್ಡ್‌ಗಳನ್ನು ಗೆದ್ದಿತು. ಇಬ್ಬರು ಸ್ವತಂತ್ರ ಅಭ್ಯರ್ಥಿಗಳು ಜಯಶೀಲರಾಗಿದ್ದಾರೆ. ಎನ್‌ಡಿಎ ಪಾಲಕ್ಕಾಡ್ ಪುರಸಭೆಯನ್ನು ಉಳಿಸಿಕೊಂಡಿತು, ಕಾಂಗ್ರೆಸ್‌ನಿಂದ ತ್ರಿಪ್ಪುನಿತುರವನ್ನು ಗೆದ್ದಿತು. ತ್ರಿಶೂರ್ ಜಿಲ್ಲೆಯ ಹಲವಾರು ಪುರಸಭೆಗಳಲ್ಲಿ ಗಮನಾರ್ಹ ಲಾಭ ಗಳಿಸಿತು.

ರಾಜ್ಯ ಚುನಾವಣಾ ಆಯೋಗದ ಪ್ರಕಾರ, ಎನ್‌ಡಿಎ ಕೇರಳದಾದ್ಯಂತ 1,402 ಗ್ರಾಮ ಪಂಚಾಯತ್ ವಾರ್ಡ್‌ಗಳನ್ನು ಮತ್ತು 53 ಬ್ಲಾಕ್ ಪಂಚಾಯತ್ ವಾರ್ಡ್‌ಗಳನ್ನು ಗೆದ್ದಿದೆ. ಅದರ ಗೆಲುವುಗಳು ಕೊಲ್ಲಂ ಕಾರ್ಪೊರೇಷನ್‌ನಲ್ಲಿ 11 ವಾರ್ಡ್‌ಗಳು, ಕೋಝಿಕ್ಕೋಡ್ ಕಾರ್ಪೊರೇಷನ್‌ನಲ್ಲಿ 13, ಕಣ್ಣೂರು ಕಾರ್ಪೊರೇಷನ್‌ನಲ್ಲಿ ನಾಲ್ಕು ಮತ್ತು ಕೊಚ್ಚಿ ಕಾರ್ಪೊರೇಷನ್‌ನಲ್ಲಿ ಆರು ವಾರ್ಡ್‌ಗಳನ್ನು ಒಳಗೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...