Homeಮುಖಪುಟಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

- Advertisement -
- Advertisement -

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್‌) ಕೊನೆಗೊಳಿಸಿದೆ.

56 ಸದಸ್ಯರ ಕೌನ್ಸಿಲ್‌ನಲ್ಲಿ ಯುಡಿಎಫ್ 27 ಸ್ಥಾನಗಳನ್ನು ಗೆದ್ದು, ಕಾರ್ಪೊರೇಷನ್ ಮೇಲೆ ಹಿಡಿತ ಸಾಧಿಸಿತು. ಈ ಮೂಲಕ ಕೇರಳದಲ್ಲಿ ಪ್ರಮುಖ ರಾಜಕೀಯ ಪುನರಾಗಮನವನ್ನು ಗುರುತಿಸಿದೆ. ಎಲ್‌ಡಿಎಫ್ ಇಲ್ಲಿ ಬಲವಾದ ಬಹುಮತವನ್ನು ಹೊಂದಿದ್ದ 2020 ರ ಚುನಾವಣೆಗಳಿಗಿಂತ ಸಾಕಷ್ಟು ಹಿಮ್ಮುಖ ಫಲಿತಾಂಶವಾಗಿದೆ. ಈ ಫಲಿತಾಂಶವು ನಗರ ಮತದಾರರ ಮನಸ್ಥಿತಿಯಲ್ಲಿ ಸ್ಪಷ್ಟ ಬದಲಾವಣೆಯನ್ನು ಸೂಚಿಸುತ್ತದೆ ಎನ್ನಲಾಗಿದ್ದು, ಮುಂದಿನ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಯುಡಿಎಫ್‌ಗೆ ದೊಡ್ಡ ರಾಜಕೀಯ ಉತ್ತೇಜನ ನೀಡುತ್ತದೆ.

ಈ ಫಲಿತಾಂಶವು ಕೊಲ್ಲಂನ ರಾಜಕೀಯ ಭೂದೃಶ್ಯದಲ್ಲಿ ಪ್ರಮುಖ ಬದಲಾವಣೆಯನ್ನು ತೋರಿಸುತ್ತದೆ. ಯುಡಿಎಫ್ ಅತಿದೊಡ್ಡ ಲಾಭ ಗಳಿಸಿದ ಪಕ್ಷವಾಗಿ ಹೊರಹೊಮ್ಮಿದರೂ, ಎಲ್‌ಡಿಎಫ್ ಭಾರೀ ಹಿನ್ನಡೆಯನ್ನು ಅನುಭವಿಸಿತು. ಕೆಲವೆಡೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಸಹ ಬಲವಾದ ನೆಲೆ ಗಳಿಸಿತು. 2020 ರಲ್ಲಿ 39 ಸ್ಥಾನಗಳನ್ನು ಹೊಂದಿದ್ದ ಎಲ್‌ಡಿಎಫ್‌ನ ಸ್ಥಾನಗಳ ಸಂಖ್ಯೆ 2025 ರಲ್ಲಿ ಕೇವಲ 16 ಕ್ಕೆ ಕುಸಿದಿದೆ. ಇದಕ್ಕೆ ವ್ಯತಿರಿಕ್ತವಾಗಿ, ಯುಡಿಎಫ್ ಕೇವಲ 9 ಸ್ಥಾನಗಳಿಂದ 27 ಕ್ಕೆ ಜಿಗಿದಿದೆ. ಎನ್‌ಡಿಎ ತನ್ನ ಅಸ್ತಿತ್ವವನ್ನು ದ್ವಿಗುಣಗೊಳಿಸಿದೆ, 12 ಸ್ಥಾನಗಳನ್ನು ಗೆದ್ದಿದೆ.

ವಡಕ್ಕುಂಭಾಗಂನಿಂದ ಮಾಜಿ ಮೇಯರ್‌ಗಳಾದ ಸಿಪಿಐ ನಾಯಕ ಹನಿ ಬೆಂಜಮಿನ್ ಮತ್ತು ಉಲಿಯಕೋವಿಲ್‌ನಿಂದ ಸಿಪಿಐ(ಎಂ) ನಾಯಕ ವಿ ರಾಜೇಂದ್ರಬಾಬು ಅವರ ಸೋಲು ಕಾರ್ಪೊರೇಷನ್‌ನಲ್ಲಿ ಬಲವಾದ ಆಡಳಿತ ವಿರೋಧಿ ಅಲೆಯನ್ನು ಎತ್ತಿ ತೋರಿಸಿದೆ. ಫಲಿತಾಂಶಗಳು ಎಲ್‌ಡಿಎಫ್ ಆಡಳಿತದ ಬಗ್ಗೆ, ವಿಶೇಷವಾಗಿ ನಾಗರಿಕ ಸಮಸ್ಯೆಗಳ ಬಗ್ಗೆ ವ್ಯಾಪಕ ಅಸಮಾಧಾನವನ್ನು ಸೂಚಿಸುತ್ತವೆ.

ಕೊಲ್ಲಂ ಕಾರ್ಪೊರೇಷನ್ ರಾಜಕೀಯದಲ್ಲಿ ಎನ್‌ಡಿಎ ಒಂದು ಮಹತ್ವದ ಶಕ್ತಿಯಾಗಿದೆ ಎಂದು ಚುನಾವಣೆಗಳು ದೃಢಪಡಿಸಿದವು. 12 ಸ್ಥಾನಗಳೊಂದಿಗೆ, ಎನ್‌ಡಿಎ ಎಲ್‌ಡಿಎಫ್‌ಗಿಂತ ಕೇವಲ ನಾಲ್ಕು ಸ್ಥಾನಗಳನ್ನು ಕಡಿಮೆ ಪಡೆದುಕೊಂಡಿತು. ಇದು ಸ್ಪಷ್ಟವಾದ ತ್ರಕೋನ ರಾಜಕೀಯ ಸ್ಪರ್ಧೆಯನ್ನು ಸೃಷ್ಟಿಸಿತು. ಎಣಿಕೆಯ ಆರಂಭಿಕ ಗಂಟೆಗಳಲ್ಲಿ, ಎನ್‌ಡಿಎ ಒಟ್ಟಾರೆಯಾಗಿ ಎರಡನೇ ಸ್ಥಾನದಲ್ಲಿತ್ತು, ಅದರ ಏರಿಕೆ ಮತ್ತು ಎಲ್‌ಡಿಎಫ್‌ನ ಕುಸಿತ ಎರಡನ್ನೂ ಒತ್ತಿಹೇಳಿತು.

ತಿರುವನಂತಪುರಂ ಕಾರ್ಪೊರೇಷನ್‌ನಲ್ಲಿ ಬಿಜೆಪಿ ಪ್ರಾಬಲ್ಯ

ತಿರುವನಂತಪುರಂ ಕಾರ್ಪೊರೇಷನ್‌ನಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟವು 101 ವಾರ್ಡ್‌ಗಳಲ್ಲಿ 50 ಅನ್ನು ಗೆದ್ದು 45 ವರ್ಷಗಳ ಎಡ ನಿಯಂತ್ರಣವನ್ನು ಕೊನೆಗೊಳಿಸಿತು. ಎಲ್‌ಡಿಎಫ್ 29 ವಾರ್ಡ್‌ಗಳನ್ನು ಗೆದ್ದುಕೊಂಡಿತು, ಯುಡಿಎಫ್ 19 ವಾರ್ಡ್‌ಗಳನ್ನು ಗೆದ್ದಿತು. ಇಬ್ಬರು ಸ್ವತಂತ್ರ ಅಭ್ಯರ್ಥಿಗಳು ಜಯಶೀಲರಾಗಿದ್ದಾರೆ. ಎನ್‌ಡಿಎ ಪಾಲಕ್ಕಾಡ್ ಪುರಸಭೆಯನ್ನು ಉಳಿಸಿಕೊಂಡಿತು, ಕಾಂಗ್ರೆಸ್‌ನಿಂದ ತ್ರಿಪ್ಪುನಿತುರವನ್ನು ಗೆದ್ದಿತು. ತ್ರಿಶೂರ್ ಜಿಲ್ಲೆಯ ಹಲವಾರು ಪುರಸಭೆಗಳಲ್ಲಿ ಗಮನಾರ್ಹ ಲಾಭ ಗಳಿಸಿತು.

ರಾಜ್ಯ ಚುನಾವಣಾ ಆಯೋಗದ ಪ್ರಕಾರ, ಎನ್‌ಡಿಎ ಕೇರಳದಾದ್ಯಂತ 1,402 ಗ್ರಾಮ ಪಂಚಾಯತ್ ವಾರ್ಡ್‌ಗಳನ್ನು ಮತ್ತು 53 ಬ್ಲಾಕ್ ಪಂಚಾಯತ್ ವಾರ್ಡ್‌ಗಳನ್ನು ಗೆದ್ದಿದೆ. ಅದರ ಗೆಲುವುಗಳು ಕೊಲ್ಲಂ ಕಾರ್ಪೊರೇಷನ್‌ನಲ್ಲಿ 11 ವಾರ್ಡ್‌ಗಳು, ಕೋಝಿಕ್ಕೋಡ್ ಕಾರ್ಪೊರೇಷನ್‌ನಲ್ಲಿ 13, ಕಣ್ಣೂರು ಕಾರ್ಪೊರೇಷನ್‌ನಲ್ಲಿ ನಾಲ್ಕು ಮತ್ತು ಕೊಚ್ಚಿ ಕಾರ್ಪೊರೇಷನ್‌ನಲ್ಲಿ ಆರು ವಾರ್ಡ್‌ಗಳನ್ನು ಒಳಗೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...