Homeಮುಖಪುಟಕೇರಳ ಚುನಾವಣೆ : ಪಿಣರಾಯಿ ತೆಕ್ಕೆಗೆ ಮತ್ತೆ ಅಧಿಕಾರ ಎಂದ ಸಿ-ವೋಟರ್‌ ಸಮೀಕ್ಷೆಗಳು

ಕೇರಳ ಚುನಾವಣೆ : ಪಿಣರಾಯಿ ತೆಕ್ಕೆಗೆ ಮತ್ತೆ ಅಧಿಕಾರ ಎಂದ ಸಿ-ವೋಟರ್‌ ಸಮೀಕ್ಷೆಗಳು

- Advertisement -
- Advertisement -

ಪಂಚರಾಜ್ಯ ಚುನಾವಣೆಗೆ ದಿನಗಣನೇ ಶುರುವಾಗಿದೆ. ಚುನಾವಣಾ ಪೂರ್ವ ಸಮೀಕ್ಷೆಗಳು ಚುನಾವಣಾ ಫಲಿತಾಂಶಕ್ಕಿಂತ ಮೊದಲು ಜನರ ಮನಸಿನಲ್ಲಿರುವುದನ್ನು ತಿಳಿಯುವ ಪ್ರಯತ್ನ ಮಾಡುತ್ತಿವೆ. ಹಲವು ಸುದ್ದಿ ಸಂಸ್ಥೆಗಳು ಸಮಿಕ್ಷೆ ನಡೆಸುತ್ತಿದ್ದು, ಕೇರಳದಲ್ಲಿ ಪಿಣರಾಯಿ ವಿಜಯತ್ ಮತ್ತೆ ಅಧಿಕಾರಕ್ಕೆ ಬರುವ ಸೂಚನೆ ನೀಡಿವೆ.

ಟೈಮ್ಸ್ ನೌ ಸಿ-ವೋಟರ್ ಮತ್ತು ಮಾತೃಭೂಮಿ ಸಿ-ವೋಟರ್‌ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಎಲ್‌ಡಿಎಫ್ (Left Democratic Front) ಮತ್ತೆ ಅಧಿಕಾರಕ್ಕೆ ಬರುವುದು ಪಕ್ಕ ಎಂದಿದೆ.

ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (LDF) ಮತ್ತು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ನಡುವಿನ ಸ್ಪರ್ಧೆ ಹೆಚ್ಚು ತೀವ್ರವಾಗಿದ್ದು, 140 ಸದಸ್ಯರ ವಿಧಾನಸಭೆಯಲ್ಲಿ 77 ಸ್ಥಾನಗಳೊಂದಿಗೆ ಎಲ್‌ಡಿಎಫ್ ಕೇರಳವನ್ನು ಗೆಲ್ಲುತ್ತದೆ ಎಂದು ಟೈಮ್ಸ್ ನೌ ಸಿ-ವೋಟರ್ ಸಮೀಕ್ಷೆ ತಿಳಿಸಿದೆ.

ಇದನ್ನೂ ಓದಿ: ಕೇರಳದಲ್ಲಿ ಸಾಕ್ಷರತೆಯಿದೆ, ಜನ ಯೋಚಿಸುತ್ತಾರೆ ಹಾಗಾಗಿ ಪಕ್ಷ ಬೆಳೆದಿಲ್ಲ: ಬಿಜೆಪಿಯ ಏಕೈಕ ಶಾಸಕ

ಪ್ರಬಲ ಪ್ರತಿಪಕ್ಷವಾಗಿ ಹೊರಹೊಮ್ಮಲಿರುವ ಕಾಂಗ್ರೆಸ್ ನೇತೃತ್ವದ ಯುಡಿಎಫ್ 62 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಈ ಹಿಂದಿನ ಚುನಾವಣೆಗಳನ್ನು ಗಮನಿಸಿದರೇ, ಈ ಬಾರಿ ಎಲ್‌ಡಿಎಫ್ ಹಲವು ಸ್ಥಾನಗಳನ್ನು ಕಳೆದುಕೊಳ್ಳುತ್ತದೆ ಎನ್ನಲಾಗಿದೆ. ಈ ಮೂಲಕ ಯುಡಿಎಫ್ ಮತ್ತು ಎಲ್‌ಡಿಎಫ್ ನಡುವೆ ತೀವ್ರ ಹಣಾಹಣಿ ಉಂಟಾಗುತ್ತದೆ. ಬಿಜೆಪಿ ಒಂದು ಸ್ಥಾನ ಗೆಲ್ಲುವ ನಿರೀಕ್ಷೆ ಇದೆ. 2016 ರ ಚುಣಾವಣೆಯಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್ 91 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.

ಮಾತೃಭೂಮಿ ನಡೆಸಿರುವ ಸಮೀಕ್ಷೆಯಲ್ಲಿಯೂ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್‌ಗೆ ಕೇರಳದಲ್ಲಿ ವಿಜಯಮಾಲೆ ದೊರೆಯಲಿದೆ ಎಂದಿದೆ. ಮಾತೃಭೂಮಿ ಸಿ-ಮತದಾರರ ಸಮೀಕ್ಷೆಯ ಪ್ರಕಾರ, ಕೇರಳ ವಿಧಾನಸಭಾ ಚುನಾವಣೆ 2021 ರಲ್ಲಿ ಎಲ್‌ಡಿಎಫ್ 75 ರಿಂದ 83 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆಯ ಪೂರ್ವ ಫಲಿತಾಂಶಗಳು ತಿಳಿಸಿವೆ.

ಕಾಂಗ್ರೆಸ್ ನೇತೃತ್ವದ ಯುಡಿಎಫ್ 56 ರಿಂದ 64 ಸ್ಥಾನಗಳನ್ನು ಗೆಲ್ಲಲಿದ್ದು, ಎನ್‌ಡಿಎ 0 ರಿಂದ 2 ಸ್ಥಾನಗಳನ್ನು ಪಡೆಯಲಿದೆ ಎಂದಿದೆ. ಎಲ್‌ಡಿಎಫ್ ಶೇ 40.9 ರಷ್ಟು ಮತಗಳನ್ನು ಗಳಿಸಿದರೆ, ಯುಡಿಎಫ್ ಶೇ 37.9 ಮತ್ತು ಎನ್‌ಡಿಎ 16.6 ಮತಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ಹೇಳಿದೆ.

ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಮತದಾರರು ರಾಜ್ಯದಲ್ಲಿ ತಾವು ಎದುರಿಸಿದ ಅತಿದೊಡ್ಡ ಸಮಸ್ಯೆಗಳಲ್ಲಿ ಶೇಕಡಾ 41.8 ರಷ್ಟು ನಿರುದ್ಯೋಗ, ಶೇಕಡಾ 10.4 ರಷ್ಟು ಭ್ರಷ್ಟಾಚಾರ ಮತ್ತು ಶೇಕಡಾ 4.8  ಜನರು ಕಾನೂನು ಮತ್ತು ಸುವ್ಯವಸ್ಥೆ ಎಂದು ಹೇಳಿದ್ದಾರೆ.

ಕೇರಳದ ಚಿನ್ನದ ಕಳ್ಳಸಾಗಣೆ ಪ್ರಕರಣ ತಮ್ಮ ಮೇಲೆ ಮತದಾನದ ಮೇಲೆ ಪ್ರಭಾವ ಬೀರಲಿದೆ ಎಂದು ಶೇಕಡಾ 25.2 ರಷ್ಟು ಜನರು ಹೇಳಿದರೆ, ಶೇಕಡಾ 20.2 ಮಂದಿ ಶಬರಿಮಲೆ ವಿಷಯದ ಕುರಿತು ಮಾತನಾಡಿದ್ದಾರೆ ಎಂದು ಮಾತೃಭೂಮಿ ಸಮೀಕ್ಷೆ ಹೇಳಿದೆ.


ಇದನ್ನೂ ಓದಿ: ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆದ್ದರೆ ಕೇರಳದಲ್ಲಿ ‘NYAY’ ಪ್ರಯೋಗ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....