Homeಮುಖಪುಟಕೇರಳ ಚುನಾವಣೆ : ಪಿಣರಾಯಿ ತೆಕ್ಕೆಗೆ ಮತ್ತೆ ಅಧಿಕಾರ ಎಂದ ಸಿ-ವೋಟರ್‌ ಸಮೀಕ್ಷೆಗಳು

ಕೇರಳ ಚುನಾವಣೆ : ಪಿಣರಾಯಿ ತೆಕ್ಕೆಗೆ ಮತ್ತೆ ಅಧಿಕಾರ ಎಂದ ಸಿ-ವೋಟರ್‌ ಸಮೀಕ್ಷೆಗಳು

- Advertisement -
- Advertisement -

ಪಂಚರಾಜ್ಯ ಚುನಾವಣೆಗೆ ದಿನಗಣನೇ ಶುರುವಾಗಿದೆ. ಚುನಾವಣಾ ಪೂರ್ವ ಸಮೀಕ್ಷೆಗಳು ಚುನಾವಣಾ ಫಲಿತಾಂಶಕ್ಕಿಂತ ಮೊದಲು ಜನರ ಮನಸಿನಲ್ಲಿರುವುದನ್ನು ತಿಳಿಯುವ ಪ್ರಯತ್ನ ಮಾಡುತ್ತಿವೆ. ಹಲವು ಸುದ್ದಿ ಸಂಸ್ಥೆಗಳು ಸಮಿಕ್ಷೆ ನಡೆಸುತ್ತಿದ್ದು, ಕೇರಳದಲ್ಲಿ ಪಿಣರಾಯಿ ವಿಜಯತ್ ಮತ್ತೆ ಅಧಿಕಾರಕ್ಕೆ ಬರುವ ಸೂಚನೆ ನೀಡಿವೆ.

ಟೈಮ್ಸ್ ನೌ ಸಿ-ವೋಟರ್ ಮತ್ತು ಮಾತೃಭೂಮಿ ಸಿ-ವೋಟರ್‌ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಎಲ್‌ಡಿಎಫ್ (Left Democratic Front) ಮತ್ತೆ ಅಧಿಕಾರಕ್ಕೆ ಬರುವುದು ಪಕ್ಕ ಎಂದಿದೆ.

ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (LDF) ಮತ್ತು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ನಡುವಿನ ಸ್ಪರ್ಧೆ ಹೆಚ್ಚು ತೀವ್ರವಾಗಿದ್ದು, 140 ಸದಸ್ಯರ ವಿಧಾನಸಭೆಯಲ್ಲಿ 77 ಸ್ಥಾನಗಳೊಂದಿಗೆ ಎಲ್‌ಡಿಎಫ್ ಕೇರಳವನ್ನು ಗೆಲ್ಲುತ್ತದೆ ಎಂದು ಟೈಮ್ಸ್ ನೌ ಸಿ-ವೋಟರ್ ಸಮೀಕ್ಷೆ ತಿಳಿಸಿದೆ.

ಇದನ್ನೂ ಓದಿ: ಕೇರಳದಲ್ಲಿ ಸಾಕ್ಷರತೆಯಿದೆ, ಜನ ಯೋಚಿಸುತ್ತಾರೆ ಹಾಗಾಗಿ ಪಕ್ಷ ಬೆಳೆದಿಲ್ಲ: ಬಿಜೆಪಿಯ ಏಕೈಕ ಶಾಸಕ

ಪ್ರಬಲ ಪ್ರತಿಪಕ್ಷವಾಗಿ ಹೊರಹೊಮ್ಮಲಿರುವ ಕಾಂಗ್ರೆಸ್ ನೇತೃತ್ವದ ಯುಡಿಎಫ್ 62 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಈ ಹಿಂದಿನ ಚುನಾವಣೆಗಳನ್ನು ಗಮನಿಸಿದರೇ, ಈ ಬಾರಿ ಎಲ್‌ಡಿಎಫ್ ಹಲವು ಸ್ಥಾನಗಳನ್ನು ಕಳೆದುಕೊಳ್ಳುತ್ತದೆ ಎನ್ನಲಾಗಿದೆ. ಈ ಮೂಲಕ ಯುಡಿಎಫ್ ಮತ್ತು ಎಲ್‌ಡಿಎಫ್ ನಡುವೆ ತೀವ್ರ ಹಣಾಹಣಿ ಉಂಟಾಗುತ್ತದೆ. ಬಿಜೆಪಿ ಒಂದು ಸ್ಥಾನ ಗೆಲ್ಲುವ ನಿರೀಕ್ಷೆ ಇದೆ. 2016 ರ ಚುಣಾವಣೆಯಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್ 91 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.

ಮಾತೃಭೂಮಿ ನಡೆಸಿರುವ ಸಮೀಕ್ಷೆಯಲ್ಲಿಯೂ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್‌ಗೆ ಕೇರಳದಲ್ಲಿ ವಿಜಯಮಾಲೆ ದೊರೆಯಲಿದೆ ಎಂದಿದೆ. ಮಾತೃಭೂಮಿ ಸಿ-ಮತದಾರರ ಸಮೀಕ್ಷೆಯ ಪ್ರಕಾರ, ಕೇರಳ ವಿಧಾನಸಭಾ ಚುನಾವಣೆ 2021 ರಲ್ಲಿ ಎಲ್‌ಡಿಎಫ್ 75 ರಿಂದ 83 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆಯ ಪೂರ್ವ ಫಲಿತಾಂಶಗಳು ತಿಳಿಸಿವೆ.

ಕಾಂಗ್ರೆಸ್ ನೇತೃತ್ವದ ಯುಡಿಎಫ್ 56 ರಿಂದ 64 ಸ್ಥಾನಗಳನ್ನು ಗೆಲ್ಲಲಿದ್ದು, ಎನ್‌ಡಿಎ 0 ರಿಂದ 2 ಸ್ಥಾನಗಳನ್ನು ಪಡೆಯಲಿದೆ ಎಂದಿದೆ. ಎಲ್‌ಡಿಎಫ್ ಶೇ 40.9 ರಷ್ಟು ಮತಗಳನ್ನು ಗಳಿಸಿದರೆ, ಯುಡಿಎಫ್ ಶೇ 37.9 ಮತ್ತು ಎನ್‌ಡಿಎ 16.6 ಮತಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ಹೇಳಿದೆ.

ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಮತದಾರರು ರಾಜ್ಯದಲ್ಲಿ ತಾವು ಎದುರಿಸಿದ ಅತಿದೊಡ್ಡ ಸಮಸ್ಯೆಗಳಲ್ಲಿ ಶೇಕಡಾ 41.8 ರಷ್ಟು ನಿರುದ್ಯೋಗ, ಶೇಕಡಾ 10.4 ರಷ್ಟು ಭ್ರಷ್ಟಾಚಾರ ಮತ್ತು ಶೇಕಡಾ 4.8  ಜನರು ಕಾನೂನು ಮತ್ತು ಸುವ್ಯವಸ್ಥೆ ಎಂದು ಹೇಳಿದ್ದಾರೆ.

ಕೇರಳದ ಚಿನ್ನದ ಕಳ್ಳಸಾಗಣೆ ಪ್ರಕರಣ ತಮ್ಮ ಮೇಲೆ ಮತದಾನದ ಮೇಲೆ ಪ್ರಭಾವ ಬೀರಲಿದೆ ಎಂದು ಶೇಕಡಾ 25.2 ರಷ್ಟು ಜನರು ಹೇಳಿದರೆ, ಶೇಕಡಾ 20.2 ಮಂದಿ ಶಬರಿಮಲೆ ವಿಷಯದ ಕುರಿತು ಮಾತನಾಡಿದ್ದಾರೆ ಎಂದು ಮಾತೃಭೂಮಿ ಸಮೀಕ್ಷೆ ಹೇಳಿದೆ.


ಇದನ್ನೂ ಓದಿ: ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆದ್ದರೆ ಕೇರಳದಲ್ಲಿ ‘NYAY’ ಪ್ರಯೋಗ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...