Homeಮುಖಪುಟದ್ವೇಷ ಅಭಿಯಾನದ ವಿರುದ್ದ 'ಸ್ನೇಹ' ನೆಟ್ಟು ಸೌಹಾರ್ದ ಪರಂಪರೆ ಎತ್ತಿಹಿಡಿದ ಕೇರಳ

ದ್ವೇಷ ಅಭಿಯಾನದ ವಿರುದ್ದ ‘ಸ್ನೇಹ’ ನೆಟ್ಟು ಸೌಹಾರ್ದ ಪರಂಪರೆ ಎತ್ತಿಹಿಡಿದ ಕೇರಳ

ಗರ್ಭಿಣಿ ಆನೆ ಸಾವಿಗೀಡಾದ ಘಟನೆಯನ್ನಿಟ್ಟುಕೊಂಡು ಕೇರಳದ ವಿರುದ್ದ ಬಲಪಂಥೀಯ ಸಂಘಟನೆಗಳು ದ್ವೇಷ ಅಭಿಯಾನವನ್ನು ನಡೆಸುತ್ತಿರುವುದಕ್ಕೆ ಪ್ರತಿಯಾಗಿ ಸೌಹಾರ್ದ ಹಾಗೂ ಸಹಿಷ್ಣುತೆಯ ಸಂದೇಶವನ್ನು ಕೇರಳ ನೀಡಿದೆ.

- Advertisement -
- Advertisement -

ಗರ್ಭಿಣಿ ಆನೆಯೊಂದು ಪಟಾಕಿ ತುಂಬಿದ ಅನಾನಾಸು ತಿಂದು ಸಾವಿಗೀಡಾದ ನಂತರ ಇದರ ಬಗ್ಗೆ ನಡೆಸಲಾಗುತ್ತಿರುವ ದ್ವೇಷ ಅಭಿಯಾನದ ವಿರುದ್ದವಾಗಿ ಕೇರಳ ವಿಭಿನ್ನವಾಗಿ ಪ್ರತಿಕ್ರಿಯಿಸಿದೆ. ವಿಶ್ವ ಪರಿಸರ ದಿನಾಚರಣೆಯಾದ ಇಂದು ಕೇರಳದ ಮಲಪ್ಪುರಂ ಜಿಲ್ಲೆಯ ದೇವಾಲಯದ ಆವರಣದಲ್ಲಿ ಕೋಮು ಸೌಹಾರ್ದತೆಯ ಭಾಗವಾಗಿ ‘ಮೈತ್ರಿ’ ಎಂಬ ಸಸಿಯನ್ನು ನೆಡಲಾಗಿದೆ.

ಮಲಪ್ಪುರಂನ ಕುನ್ನುಮ್ಮಲ್ ಶ್ರೀ ತ್ರಿಪುರಾಂತಕ ದೇವಸ್ಥಾನದ ಆವರಣದಲ್ಲಿ, ದೇವಾಲಯದ ಅರ್ಚಕ ಮಣಿಕಂಡನ್ ಎಂಬಾದಿರಿ ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮುಖಂಡ ಸಯ್ಯಿದ್ ಮುನವ್ವರ್ ಅಲಿ ಶಿಹಾಬ್ ತಂಙಲ್ ಸೇರಿಕೊಂಡು ಸಪೋಟಾ ಸಸಿಗಳನ್ನು ನೆಟ್ಟು, ಅದಕ್ಕೆ ‘ಮೈತ್ರಿ’ ಎಂದು ಹೆಸರಿಟ್ಟರು. ಮಲಯಾಳಂ ಭಾಷೆಯಲ್ಲಿ ‘ಮೈತ್ರಿ’ ಎಂದರೆ ‘ಸ್ನೇಹ’ ಎಂದರ್ಥ.

ಈ ಬಗ್ಗೆ ತಮ್ಮ ಫೇಸ್ಬುಕ್ ಪುಟದಲ್ಲಿ ಬರೆದಿರುವ ಮುಸ್ಲಿಂ ಲೀಗ್ ಮುಖಂಡ ಶಿಹಾಬ್ ತಂಙಲ್ “ಈ ಸಸಿ ಬೆಳೆದು ಮರವಾಗಿ, ಪ್ರಕೃತಿ ಪ್ರೇಮದೊಂದಿಗೆ, ಸಹಿಷ್ಣುತೆಯ ಗುರುತಾಗಿ, ನಮಗೆ ಎಂದೆಂದೂ ನೆರಳಾಗಲಿ” ಎಂದು ಬರೆದಿದ್ದಾರೆ.

മലപ്പുറം-കുന്നുമ്മൽ ശ്രീ ത്രിപുരാന്തക ക്ഷേത്ര-അങ്കണത്തിൽ ലോക പരിസ്ഥിതി ദിനമായ ഇന്ന് ക്ഷേത്ര പൂജാരി ശ്രീ മണികണ്ഠൻ…

Posted by Sayyid Munavvar Ali Shihab Thangal on Thursday, June 4, 2020

 

ಗರ್ಭಿಣಿ ಕಾಡು ಆನೆಯ ಸಾವಿನ ನಂತರ ಸಾಮಾಜಿಕ ಜಾಲತಾಣದಲ್ಲಿ ಮಲಪ್ಪುರಂ ಜಿಲ್ಲೆಯ ವಿರುದ್ಧದ ದ್ವೇಷ ಅಭಿಯಾನದ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಘಟನೆಯು ಹೆಚ್ಚು ಮಹತ್ವ ಪಡೆದಿದೆ.

ಕೇರಳದ ಪಾಲಕ್ಕಡ್‌ನಲ್ಲಿ ಆನೆ ಸಾವನಪ್ಪಿದ ಘಟನೆ ನಡೆದರೂ ಸಹ ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿಯಾಗಿರುವ ಮನೇಕಾ ಗಾಂಧಿ, ಘಟನೆ ನಡೆದ ಸ್ಥಳವನ್ನು ಮಲಪ್ಪುರಂ ಎಂದು ತಪ್ಪಾಗಿ ಉಲ್ಲೇಖಿಸಿದ್ದರು. ಇದಕ್ಕೆ ಪ್ರಮುಖ ಕಾರಣ ಮಲಪ್ಪುರಂ ಮುಸ್ಲಿಂ ಬಾಹುಳ್ಯ ಜಿಲ್ಲೆಯಾಗಿರುವುದು. ಹಾಗಾಗಿ ಇದನ್ನು ‘ಅತ್ಯಂತ ಹಿಂಸಾತ್ಮಕ ಜಿಲ್ಲೆ’ ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದರು.

ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್‌ ಸಹ ತನ್ನ ಟ್ವೀಟ್‌ನಲ್ಲಿ ಆನೆ ಹತ್ಯೆ ಸ್ಥಳವನ್ನು ಪಾಲಕ್ಕಾಡ್‌ ಬದಲಾಗಿ ಮಲಪ್ಪುರಂ ಎಂದೇ ನಮೂದಿಸಿದ್ದರು.

ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಮಲಪ್ಪುರಂನಲ್ಲಿ ಸ್ಥಳೀಯ ಜನರಿಂದ ಗರ್ಭಿಣಿ ಆನೆಗೆ ಪಟಾಕಿ ತುಂಬಿದ ಅನಾನಸು ಹಣ್ಣನ್ನು ನೀಡಲಾಗಿದೆ ಎಂದು ಮೊದಲು ವರದಿಯಾಗಿದ್ದರೂ, ನಂತರ ಘಟನೆಯೂ ಆನೆಯೂ ಸತ್ತು ಹೋಗಿರುವುದು ಮಲಪ್ಪುರಂನಲ್ಲಿ ಅಲ್ಲ ನೆರೆಯ ಪಾಲಕ್ಕಾಡ್ ಜಿಲ್ಲೆಯಲ್ಲಿ ಎಂದು ತಿಳಿದುಬಂದಿದೆ. ಅಲ್ಲದೆ ಇದಕ್ಕೆ ಯಾರೂ ಉದ್ದೇಶ ಪೂರ್ವಕವಾಗಿ ಹಣ್ಣನ್ನು ತಿನ್ನಿಸಿಲ್ಲ, ಕಾಡುಹಂದಿಗಳಿಗೆ ಇಟ್ಟಿದ್ದ ಹಣ್ಣನ್ನು ಆನೆ ಆಕಸ್ಮಿಕವಾಗಿ ತಿಂದಿದೆ ಎಂದು ತಿಳಿದುಬಂದಿದೆ.

ಆನೆಯ ಸಾವಿಗೆ ಕಾರಣವಾದ ಒಬ್ಬ ರೈತನನ್ನು ಕೇರಳ ಪೊಲೀಸರು ಇಂದು ಬಂಧಿಸಿದ್ದಾರೆ.

“ಮಲಪ್ಪುರಂ ಯಾವಾಗಲೂ ಧಾರ್ಮಿಕ ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂಪ್ರದಾಯವನ್ನು ಹೊಂದಿದೆ. ಆದ್ದರಿಂದ ರಾಷ್ಟ್ರಮಟ್ಟದಲ್ಲಿ ದೊಡ್ಡ ಪ್ರಮಾಣದ ದ್ವೇಷ ಅಭಿಯಾನ ನಡೆಯುತ್ತಿರುವಾಗ, ನಾವು ಅದನ್ನು ಅಂತಹದೇ ಮಾನವೀಯ ಭಾವನಾ ಸೂಚಕಗಳಿಂದ ಎದುರಿಸಬೇಕಾಗುತ್ತದೆ” ಎಂದು ಶಿಹಾಬ್ ತಂಙಲ್ ತಿಳಿಸಿದ್ದಾರೆ ಎಂದು ಒಮನೋರಮ ವರದಿ ಮಾಡಿದೆ.

ಇಂತಹ ಘಟನೆಯ ಭಾಗವಾಗಲು ತುಂಬಾ ಸಂತೋಷವಾಗಿದೆ ಎಂದು ದೇವಾಲಯದ ಅರ್ಚಕ ಮಣಿಕಂಡನ್ ಎಂಬಾದಿರಿ ಹೇಳಿದರು. “ನಾವು ಎಂದಿಗೂ ಇತರ ಸಮುದಾಯಗಳಿಂದ ಯಾವುದೇ ಸಮಸ್ಯೆಯನ್ನು ಎದುರಿಸಬೇಕಾಗಿ ಬಂದಿಲ್ಲ. ಇಲ್ಲಿ ನಾವು ಯಾವಾತ್ತೂ  ಸೌಹಾರ್ದಯುತವಾಗಿ ವಾಸಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಕೇರಳದ ಧಾರ್ಮಿಕ ಸಹಬಾಳ್ವೆಯ ಪರಂಪರೆಯನ್ನು ಜಗತ್ತಿಗೆ ಪ್ರದರ್ಶಿಸುವ ಒಂದು ಹೆಜ್ಜೆಯಾಗಿ ದೇವಾಲಯದ ಅಂಗಳದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಮುಸ್ಲಿಂ ಲೀಗ್ ಪಕ್ಷದ ಯುವಜನ ವಿಭಾಗವಾದ ‘ಯೂತ್ ಲೀಗ್’ ಆಯೋಜಿಸಿತ್ತು.


ಓದಿ:  3 ಶಂಕಿತರಿದ್ದಾರೆ: ಗರ್ಭಿಣಿ ಆನೆ ಹತ್ಯೆ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಹೇಳಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...